Homeಮುಖಪುಟಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ಫೆಬ್ರವರಿ 1 ರಂದು ಬಿಜ್ನೋರ್‌ನಲ್ಲಿ ಮಹಾಪಂಚಾಯತ್ ನಿಗದಿಯಾಗಿದ್ದರೆ, ಫೆಬ್ರವರಿ 3 ರಂದು ಜಿಂದ್‌ನಲ್ಲಿ ನಡೆಯಲಿದೆ ಎಂದು BKU ವಕ್ತಾರ ಧರ್ಮೇಂದ್ರ ಮಲಿಕ್ ತಿಳಿಸಿದ್ದಾರೆ.

- Advertisement -
- Advertisement -

ರಾಕೇಶ್ ಟಿಕಾಯತ್ ಕರೆಯ ಮೇರೆಗೆ ಮುಜಫರ್‌‌ ನಗರದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಜನ ರೈತ ಬೆಂಬಲಿಗರು ಸೇರಿದ್ದರು. ಅದೇ ರೀತಿ ಮಥುರಾ ಮತ್ತು ಬಾಗ್‌ಪತ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿಯೂ ಸಾವಿರಾರು ಸಂಖ್ಯೆಯಲ್ಲಿ ರೈತರು ಮತ್ತು ರೈತ ಬೆಂಬಲಿಗರು ಸೇರಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ರೈತರು ಮಾಡುತ್ತಿರುವ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುತ್ತಿದೆ.

ಗುರುವಾರ ರಾಕೇಶ್ ಟಿಕಾಯತ್ ಭಾವನಾತ್ಮಕವಾಗಿ ಮಾತನಾಡಿದ್ದು ಉತ್ತರಪ್ರದೇಶದ ರೈತರನ್ನು ಕೆರಳಿಸಿತ್ತು. ಈಗ ಮಥುರಾ ಮತ್ತು ಬಾಗ್‌ಪತ್‌ನಲ್ಲಿ ನಡೆದ ಮಹಾಪಂಚಾಯತ್ ರೈತರಿಗೆ ಮತ್ತೊಂದು ಭರವಸೆಯನ್ನು ನೀಡಿದೆ. ಗಣರಾಜ್ಯೋತ್ಸವದಲ್ಲಿ ನಡೆದ ಅಹಿತಕರ ಘಟನೆಗಳು ರೈತ ಚಳವಳಿಗೆ ಹಿನ್ನಡೆಯನ್ನುಂಟು ಮಾಡಬಹುದು ಎಂದು ಸರ್ಕಾರ ಎಣಿಸಿತ್ತು. ಆದರೆ ಈಗ ಅದು ಸರ್ಕಾರಕ್ಕೇ ತಿರುಗು ಬಾಣವಾಗಿದೆ. ದೆಹಲಿಯ ಎಲ್ಲಾ ಗಡಿಗಳಲ್ಲಿಯೂ ಪ್ರತಿಭಟನೆಗೆ ಸೇರಿಕೊಳ್ಳುವವರ ಸಂಖ್ಯೆ ಏರುತ್ತಲೇ ಇದೆ. ದೆಹಲಿ-ಉತ್ತರಪ್ರದೇಶ ಗಡಿಯ ಗಾಜಿಪುರದಲ್ಲಂತೂ ಪ್ರತಿಭಟನಾಕಾರರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಯುವಜನತೆ- ವಿದ್ಯಾರ್ಥಿಗಳು ಅತಿ ಉತ್ಸಾಹದಲ್ಲಿದ್ದಾರೆ.

ಮಜಾಫರ್‌‌ ನಗರದ ಮಹಾಪಂಚಾಯತ್ ನಡೆದ ಒಂದು ದಿನದ ನಂತರ ಬಾಗ್‌ಪತ್‌ನಲ್ಲಿ ಮಹಾಪಂಚಾಯತ್ ಆಯೋಜಿಸಲಾಗಿದೆ. ಇದು ಜಾಟ್ ನಾಯಕ ಅಜಿತ್ ಸಿಂಗ್ ಮತ್ತು ಅವರ ಮಗ ಜಯಂತ್ ಅವರ ಭದ್ರಕೋಟೆ. ಉತ್ತರಪ್ರದೇಶ ಮತ್ತು ಹರಿಯಾಣದ ಮುಖ್ಯಮಂತ್ರಿಗಳು ಜಾಟ್ ಸಮುದಾಯಕ್ಕೆ ಸೇರಿದವರಲ್ಲವಾದ್ದರಿಂದ ಇದರ ಪರಿಣಾಮವನ್ನು ಬಿಜೆಪಿ ಸರ್ಕಾರ ಎದುರಿಸಲಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಸಂಜೀವ್ ಬಲ್ಯಾನ್ (ಈಗ ಕೇಂದ್ರ ಸಚಿವ) ಅವರನ್ನು ಬೆಂಬಲಿಸುವುದು ತಪ್ಪು ಎಂದು ಬಿಕೆಯು (ಟಿಕಾಯತ್) ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಗಡಿಗಳಲ್ಲಿ ಈಗ ಎಷ್ಟು ರೈತರು ನೆರೆದಿದ್ದಾರೆ ಗೊತ್ತೆ? ಮೂರು ಗಡಿಗಳ ಪ್ರಸ್ತುತ ಪರಿಸ್ಥಿತಿಯ…

ಇನ್ನು ಮಥುರಾದಲ್ಲಿಯೂ ಉತ್ತರಪ್ರದೇಶದ ಸಾವಿರಾರು ಜನರು ಸೇರಿ ಬೃಹತ್ ಮಹಾಪಂಚಾಯತ್ ಅನ್ನು ನಡೆಸಲಾಗಿತ್ತು. ಭಾರತೀಯ ಕಿಸಾನ್ ಯೂನಿಯನ್ (BKU) ಆಯೋಜಿಸಿದ್ದ ಈ ಸಭೆಯಲ್ಲಿ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಲುವಾಗಿ 10 ಸಾವಿರಕ್ಕೂ ಹೆಚ್ಚು ರೈತರು ಸೇರಿ ದೆಹಲಿ-ಆಗ್ರಾ ಯಮುನಾ ಹೆದ್ದಾರಿಯನ್ನು ನಿರ್ಬಂಧಿಸಲು ಯೋಜಿಸಲಾಗಿದೆ. ಈ ಕುರಿತು ಮುಂದಿನವಾರ ನಿಗದಿಪಡಿಸಲಾಗಿರುವ ಮತ್ತೊಂದು ಮಹಾಪಂಚಾಯತ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಈ ಕುರಿತು ಮಾತನಾಡಿದ BKU ಜಿಲ್ಲಾಧ್ಯಕ್ಷ ರಾಜ್ ಕುಮಾರ್ ತೋಮರ್ “2 ತಿಂಗಳ ಆಂದೋಲನದ ನಂತರವೂ ಸರ್ಕಾರ ನಮ್ಮ ಬೇಡಿಕೆಗಳನ್ನು ಆಲಿಸದ ಕಾರಣ, ಈಗ ಸರ್ಕಾರ ಮೇಲೆ ಹೆಚ್ಚಿನ ಒತ್ತಡ ಹೇರಬೇಕಿದೆ. ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿ ರೈತ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರೂ ಸೇರಬೇಕು ಎಂದು ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ನಾಯಕ ಜಯಂತ್ ಚೌಧರಿ ನೀಡಿದ ಪ್ರಸ್ತಾವನೆಯನ್ನು ಮಹಾಪಂಚಾಯತ್ ಸ್ವಾಗತಿಸಿದೆ. ಈ ಕುರಿತು ಅಂತಿಮ ತೀರ್ಮಾನವನ್ನು ಮುಂದಿನ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

“ರಾಕೇಶ್ ಟಿಕಾಯತ್ ಅವರ ಹಿಂದೆ ಎಲ್ಲಾ ರೈತರು ಇದ್ದಾರೆ. ದೆಹಲಿಯ ಹಿಂಸಾಚಾರಕ್ಕೆ ಸರ್ಕಾರ ರೈತರನ್ನು ಹೊಣೆಗಾರರನ್ನಾಗಿ ಮಾಡಬಾರದು. ಅಪರಾಧಿಗಳನ್ನ ಶಿಕ್ಷಿಸಬೇಕೇ ಹೊರತು ರೈತ ಸಮುದಾಯವನ್ನು ಗುರಿಯಾಗಿಸಿಕೊಳ್ಳಬಾರದು. ಸಾಮಾಜಿಕವಾಗಿ ಬಿಜೆಪಿ ನಾಯಕರನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ” ಎಂದು BKU ನಾಯಕರು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಜಯಂತ್ ಚೌಧರಿ ತಮ್ಮ ಭಾಷಣದಲ್ಲಿ, “ನಾನು ಮಥುರಾದಲ್ಲಿ ಒಂದು ವಾರ ಪ್ರಚಾರ ಮಾಡಿ ಗಾಜಿಪುರ ಗಡಿ ಮತ್ತು ಪಾಲ್ವಾಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸೇರಿಕೊಳ್ಳುವಂತೆ ರೈತರನ್ನು ಪ್ರೇರೇಪಿಸುತ್ತೇನೆ” ಎಂದು ಹೇಳಿದರು.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನಕ್ಕೆ ಬೆಂಬಲವನ್ನು ನೀಡಲು ಯುಪಿಯ ಬಿಜ್ನೋರ್ ಮತ್ತು ಹರಿಯಾಣದ ಜಿಂದ್ ಜಿಲ್ಲೆಗಳಲ್ಲಿ ಇನ್ನೂ ಎರಡು ಮಹಾಪಂಚಾಯತ್‌ಗಳನ್ನು ಯೋಜಿಸಲಾಗಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಫೆಬ್ರವರಿ 1 ರಂದು ಬಿಜ್ನೋರ್‌ನಲ್ಲಿ ಮಹಾಪಂಚಾಯತ್ ನಿಗದಿಯಾಗಿದ್ದರೆ, ಫೆಬ್ರವರಿ 3 ರಂದು ಜಿಂದ್‌ನಲ್ಲಿ ನಡೆಯಲಿದೆ ಎಂದು BKU ವಕ್ತಾರ ಧರ್ಮೇಂದ್ರ ಮಲಿಕ್ ಭಾನುವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಶಾಸಕ ಚೌಟಾಲ ನೇತೃತ್ವದಲ್ಲಿ ಗಾಜಿಪುರ್‌ ಗಡಿಯತ್ತ ನುಗ್ಗಿ ಬರುತ್ತಿರುವ ರೈತರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...