Homeಮುಖಪುಟಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ಫೆಬ್ರವರಿ 1 ರಂದು ಬಿಜ್ನೋರ್‌ನಲ್ಲಿ ಮಹಾಪಂಚಾಯತ್ ನಿಗದಿಯಾಗಿದ್ದರೆ, ಫೆಬ್ರವರಿ 3 ರಂದು ಜಿಂದ್‌ನಲ್ಲಿ ನಡೆಯಲಿದೆ ಎಂದು BKU ವಕ್ತಾರ ಧರ್ಮೇಂದ್ರ ಮಲಿಕ್ ತಿಳಿಸಿದ್ದಾರೆ.

- Advertisement -
- Advertisement -

ರಾಕೇಶ್ ಟಿಕಾಯತ್ ಕರೆಯ ಮೇರೆಗೆ ಮುಜಫರ್‌‌ ನಗರದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ 10 ಸಾವಿರಕ್ಕೂ ಹೆಚ್ಚು ಜನ ರೈತ ಬೆಂಬಲಿಗರು ಸೇರಿದ್ದರು. ಅದೇ ರೀತಿ ಮಥುರಾ ಮತ್ತು ಬಾಗ್‌ಪತ್‌ನಲ್ಲಿ ನಡೆದ ಮಹಾಪಂಚಾಯತ್‌ನಲ್ಲಿಯೂ ಸಾವಿರಾರು ಸಂಖ್ಯೆಯಲ್ಲಿ ರೈತರು ಮತ್ತು ರೈತ ಬೆಂಬಲಿಗರು ಸೇರಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 2 ತಿಂಗಳಿನಿಂದ ರೈತರು ಮಾಡುತ್ತಿರುವ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುತ್ತಿದೆ.

ಗುರುವಾರ ರಾಕೇಶ್ ಟಿಕಾಯತ್ ಭಾವನಾತ್ಮಕವಾಗಿ ಮಾತನಾಡಿದ್ದು ಉತ್ತರಪ್ರದೇಶದ ರೈತರನ್ನು ಕೆರಳಿಸಿತ್ತು. ಈಗ ಮಥುರಾ ಮತ್ತು ಬಾಗ್‌ಪತ್‌ನಲ್ಲಿ ನಡೆದ ಮಹಾಪಂಚಾಯತ್ ರೈತರಿಗೆ ಮತ್ತೊಂದು ಭರವಸೆಯನ್ನು ನೀಡಿದೆ. ಗಣರಾಜ್ಯೋತ್ಸವದಲ್ಲಿ ನಡೆದ ಅಹಿತಕರ ಘಟನೆಗಳು ರೈತ ಚಳವಳಿಗೆ ಹಿನ್ನಡೆಯನ್ನುಂಟು ಮಾಡಬಹುದು ಎಂದು ಸರ್ಕಾರ ಎಣಿಸಿತ್ತು. ಆದರೆ ಈಗ ಅದು ಸರ್ಕಾರಕ್ಕೇ ತಿರುಗು ಬಾಣವಾಗಿದೆ. ದೆಹಲಿಯ ಎಲ್ಲಾ ಗಡಿಗಳಲ್ಲಿಯೂ ಪ್ರತಿಭಟನೆಗೆ ಸೇರಿಕೊಳ್ಳುವವರ ಸಂಖ್ಯೆ ಏರುತ್ತಲೇ ಇದೆ. ದೆಹಲಿ-ಉತ್ತರಪ್ರದೇಶ ಗಡಿಯ ಗಾಜಿಪುರದಲ್ಲಂತೂ ಪ್ರತಿಭಟನಾಕಾರರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಯುವಜನತೆ- ವಿದ್ಯಾರ್ಥಿಗಳು ಅತಿ ಉತ್ಸಾಹದಲ್ಲಿದ್ದಾರೆ.

ಮಜಾಫರ್‌‌ ನಗರದ ಮಹಾಪಂಚಾಯತ್ ನಡೆದ ಒಂದು ದಿನದ ನಂತರ ಬಾಗ್‌ಪತ್‌ನಲ್ಲಿ ಮಹಾಪಂಚಾಯತ್ ಆಯೋಜಿಸಲಾಗಿದೆ. ಇದು ಜಾಟ್ ನಾಯಕ ಅಜಿತ್ ಸಿಂಗ್ ಮತ್ತು ಅವರ ಮಗ ಜಯಂತ್ ಅವರ ಭದ್ರಕೋಟೆ. ಉತ್ತರಪ್ರದೇಶ ಮತ್ತು ಹರಿಯಾಣದ ಮುಖ್ಯಮಂತ್ರಿಗಳು ಜಾಟ್ ಸಮುದಾಯಕ್ಕೆ ಸೇರಿದವರಲ್ಲವಾದ್ದರಿಂದ ಇದರ ಪರಿಣಾಮವನ್ನು ಬಿಜೆಪಿ ಸರ್ಕಾರ ಎದುರಿಸಲಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಸಂಜೀವ್ ಬಲ್ಯಾನ್ (ಈಗ ಕೇಂದ್ರ ಸಚಿವ) ಅವರನ್ನು ಬೆಂಬಲಿಸುವುದು ತಪ್ಪು ಎಂದು ಬಿಕೆಯು (ಟಿಕಾಯತ್) ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯ ಗಡಿಗಳಲ್ಲಿ ಈಗ ಎಷ್ಟು ರೈತರು ನೆರೆದಿದ್ದಾರೆ ಗೊತ್ತೆ? ಮೂರು ಗಡಿಗಳ ಪ್ರಸ್ತುತ ಪರಿಸ್ಥಿತಿಯ…

ಇನ್ನು ಮಥುರಾದಲ್ಲಿಯೂ ಉತ್ತರಪ್ರದೇಶದ ಸಾವಿರಾರು ಜನರು ಸೇರಿ ಬೃಹತ್ ಮಹಾಪಂಚಾಯತ್ ಅನ್ನು ನಡೆಸಲಾಗಿತ್ತು. ಭಾರತೀಯ ಕಿಸಾನ್ ಯೂನಿಯನ್ (BKU) ಆಯೋಜಿಸಿದ್ದ ಈ ಸಭೆಯಲ್ಲಿ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಲುವಾಗಿ 10 ಸಾವಿರಕ್ಕೂ ಹೆಚ್ಚು ರೈತರು ಸೇರಿ ದೆಹಲಿ-ಆಗ್ರಾ ಯಮುನಾ ಹೆದ್ದಾರಿಯನ್ನು ನಿರ್ಬಂಧಿಸಲು ಯೋಜಿಸಲಾಗಿದೆ. ಈ ಕುರಿತು ಮುಂದಿನವಾರ ನಿಗದಿಪಡಿಸಲಾಗಿರುವ ಮತ್ತೊಂದು ಮಹಾಪಂಚಾಯತ್ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

ಈ ಕುರಿತು ಮಾತನಾಡಿದ BKU ಜಿಲ್ಲಾಧ್ಯಕ್ಷ ರಾಜ್ ಕುಮಾರ್ ತೋಮರ್ “2 ತಿಂಗಳ ಆಂದೋಲನದ ನಂತರವೂ ಸರ್ಕಾರ ನಮ್ಮ ಬೇಡಿಕೆಗಳನ್ನು ಆಲಿಸದ ಕಾರಣ, ಈಗ ಸರ್ಕಾರ ಮೇಲೆ ಹೆಚ್ಚಿನ ಒತ್ತಡ ಹೇರಬೇಕಿದೆ. ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪ್ರತಿ ರೈತ ಕುಟುಂಬದ ಕನಿಷ್ಠ ಒಬ್ಬ ಸದಸ್ಯರಾದರೂ ಸೇರಬೇಕು ಎಂದು ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ನಾಯಕ ಜಯಂತ್ ಚೌಧರಿ ನೀಡಿದ ಪ್ರಸ್ತಾವನೆಯನ್ನು ಮಹಾಪಂಚಾಯತ್ ಸ್ವಾಗತಿಸಿದೆ. ಈ ಕುರಿತು ಅಂತಿಮ ತೀರ್ಮಾನವನ್ನು ಮುಂದಿನ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

“ರಾಕೇಶ್ ಟಿಕಾಯತ್ ಅವರ ಹಿಂದೆ ಎಲ್ಲಾ ರೈತರು ಇದ್ದಾರೆ. ದೆಹಲಿಯ ಹಿಂಸಾಚಾರಕ್ಕೆ ಸರ್ಕಾರ ರೈತರನ್ನು ಹೊಣೆಗಾರರನ್ನಾಗಿ ಮಾಡಬಾರದು. ಅಪರಾಧಿಗಳನ್ನ ಶಿಕ್ಷಿಸಬೇಕೇ ಹೊರತು ರೈತ ಸಮುದಾಯವನ್ನು ಗುರಿಯಾಗಿಸಿಕೊಳ್ಳಬಾರದು. ಸಾಮಾಜಿಕವಾಗಿ ಬಿಜೆಪಿ ನಾಯಕರನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ” ಎಂದು BKU ನಾಯಕರು ಹೇಳಿದರು.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಜಯಂತ್ ಚೌಧರಿ ತಮ್ಮ ಭಾಷಣದಲ್ಲಿ, “ನಾನು ಮಥುರಾದಲ್ಲಿ ಒಂದು ವಾರ ಪ್ರಚಾರ ಮಾಡಿ ಗಾಜಿಪುರ ಗಡಿ ಮತ್ತು ಪಾಲ್ವಾಲ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸೇರಿಕೊಳ್ಳುವಂತೆ ರೈತರನ್ನು ಪ್ರೇರೇಪಿಸುತ್ತೇನೆ” ಎಂದು ಹೇಳಿದರು.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನಕ್ಕೆ ಬೆಂಬಲವನ್ನು ನೀಡಲು ಯುಪಿಯ ಬಿಜ್ನೋರ್ ಮತ್ತು ಹರಿಯಾಣದ ಜಿಂದ್ ಜಿಲ್ಲೆಗಳಲ್ಲಿ ಇನ್ನೂ ಎರಡು ಮಹಾಪಂಚಾಯತ್‌ಗಳನ್ನು ಯೋಜಿಸಲಾಗಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಫೆಬ್ರವರಿ 1 ರಂದು ಬಿಜ್ನೋರ್‌ನಲ್ಲಿ ಮಹಾಪಂಚಾಯತ್ ನಿಗದಿಯಾಗಿದ್ದರೆ, ಫೆಬ್ರವರಿ 3 ರಂದು ಜಿಂದ್‌ನಲ್ಲಿ ನಡೆಯಲಿದೆ ಎಂದು BKU ವಕ್ತಾರ ಧರ್ಮೇಂದ್ರ ಮಲಿಕ್ ಭಾನುವಾರ ತಿಳಿಸಿದ್ದಾರೆ.


ಇದನ್ನೂ ಓದಿ: ಶಾಸಕ ಚೌಟಾಲ ನೇತೃತ್ವದಲ್ಲಿ ಗಾಜಿಪುರ್‌ ಗಡಿಯತ್ತ ನುಗ್ಗಿ ಬರುತ್ತಿರುವ ರೈತರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...