Homeಮುಖಪುಟಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ಸರ್ಕಾರ ಮಾಡಿದ ಕುತಂತ್ರಗಳಿಂದಾಗಿ ಈಗ ನಮ್ಮ ಹೋರಾಟ ಸಾವು ಅಥವಾ ಗೆಲುವಿನ ಹೋರಾಟವಾಗಿದೆ. ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ.

- Advertisement -
- Advertisement -

ಹತ್ತನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದು, ಮಗಳನ್ನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಕಳಿಸಿರುವ 57 ವರ್ಷದ ರೈತರಾದ ಗುರ್ತೇಜ್ ಸಿಂಗ್ ಕಳೆದ ಐದು ತಿಂಗಳಿನಿಂದ ರೈತ ಹೋರಾಟದ ಪ್ರತಿನಿಧಿಯಾಗಿದ್ದಾರೆ. ಪಂಜಾಬ್ ರಾಜ್ಯದ ಮೊಗ್ಗಾ ಜಿಲ್ಲೆಯ ರತಿನ್ಯಾ ಗ್ರಾಮದ ಇವರ ಕುಟುಂಬದ ಮೂಲ ಕೆಲಸವೇ ಕೃಷಿಯಾಗಿದೆ.

ರೈತ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಗುರ್ತೇಜ್ ಸಿಂಗ್ ಅವರ ಕುಟುಂಬದ ಸದಸ್ಯರು 5 ಮಂದಿ. ತಂದೆ, ಹೆಂಡತಿ, ಒಬ್ಬ ಮಗ ಮತ್ತು ಮಗಳೊಡನೆ ತಮ್ಮ ಗ್ರಾಮದಲ್ಲಿ ಗೋದಿ, ಭತ್ತ ಬೆಳೆಯುತ್ತಾ ನೆಮ್ಮದಿಯ ಜೀವನ ಸಾಗಿಸುತ್ತಿದ್ದವರು, ಇಂದು ಸಿಂಘು ಗಡಿಯಲ್ಲಿ ಚಳಿ, ಮಳೆ, ಧೂಳಿನಲ್ಲಿ ಟ್ರ್ಯಾಲಿಯಲ್ಲಿ ವಾಸಿಸುತ್ತಿದ್ದಾರೆ.

“ಮನೆಯಲ್ಲಿ ಎಲ್ಲರೂ ವಿದ್ಯಾವಂತರಿದ್ದೇವೆ. ನಮಗೂ ಕಾನೂನುಗಳ ಅರಿವಿದೆ. ಮನೆಗೆ ಹೋಗಬೇಕು ಎಂದು ಅನ್ನಿಸುತ್ತದೆ. ಆದರೆ, ಹೋರಾಟಕ್ಕಿಂತ ಮನೆ ದೊಡ್ಡದಲ್ಲ. ಮೊದಲು ಈ ಮೂರು ಕರಾಳ ಕಾನೂನುಗಳ ವಿರುದ್ಧ ಹೋರಾಡಿ ಗೆಲ್ಲುತ್ತೇವೆ. ಇಷ್ಟು ದಿನಗಳ ಹೋರಾಟ ಬೇರೆ. ಈಗೀನ ಹೋರಾಟವೇ ಬೇರೆ. ಸರ್ಕಾರ ಮಾಡಿದ ಕುತಂತ್ರಗಳಿಂದಾಗಿ ಈಗ ನಮ್ಮ ಹೋರಾಟ ಸಾವು ಅಥವಾ ಗೆಲುವಿನ ಹೋರಾಟವಾಗಿದೆ. ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ನಾವ್ಯಾರೂ ಹೋಗುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರ್ತೇಜ್ ಸಿಂಗ್ ಮಗ ಪದವಿ ಪಡೆದು ಚಂಢಿಗಡದಲ್ಲಿ ಸೋಲಾರ್ ಪ್ಲಾಂಟ್ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಮಗಳು ಪಂಜಾಬಿನಲ್ಲಿಯೇ ದ್ವೀತಿಯ ಪಿಯುಸಿ ಮುಗಿಸಿ ಕೆನಡಾದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದಾರೆ. ಗುರ್ತೇಜ್ ಸಿಂಗ್ ಅವರ ತಮ್ಮ ಕೆನಡಾದಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದು ಅಲ್ಲಿಯೇ ತಮ್ಮ ಉದ್ಯಮ ಶುರು ಮಾಡಿದ್ದಾರೆ.

ಕುಟಂಬದ ಮೂಲ ಕಾರ್ಯ ಕೃಷಿಯಾಗಿರುವುದರಿಂದ ಮನೆಯಲ್ಲಿ ಮೂರು ಎಮ್ಮೆ ಸೇರಿದಂತೆ ಒಂದು ಹಸುವನ್ನು ಗುರ್ತೇಜ್ ಸಿಂಗ್ ಸಾಕಿಕೊಂಡಿದ್ದಾರೆ. ಗೋದಿ, ಭತ್ತದ ಜೊತೆಗೆ ಎಮ್ಮೆಗೆ ಬೇಕಾದ ಹಸಿರು ಹುಲ್ಲು ಬೆಳೆಯುತ್ತಾರೆ. ಆದರೆ ಈ ಎಮ್ಮೆ ಹಾಲನ್ನು ಇವರು ಮಾರುವುದಿಲ್ಲ. ಮನೆಯವರ ಬಳಕೆಗೆ ಬಳಸಿಕೊಳ್ಳಲಾಗುತ್ತದೆ. ಅಕ್ಕ ಪಕ್ಕದಲ್ಲಿ ಎಮ್ಮೆ ಇಲ್ಲದವರಿಗೆ ಹಾಲು ನೀಡಲಾಗುತ್ತದೆ ಎಂದು ವಿವರಿಸುತ್ತಾರೆ.

ಮನೆಯ ಹಿರಿಯ ಸದಸ್ಯರಾಗಿರುವ ಗುರ್ತೇಜ್ ಸಿಂಗ್ ಅವರ ತಂದೆ 85 ವರ್ಷದವರಾಗಿದ್ದು, ಈಗಲೂ ಚಟುವಟಿಕೆಯಿಂದ ಹೊಲದ ಕೆಲಸ ನಿರ್ವಹಿಸುತ್ತಾರೆ. ಗುರ್ತೇಜ್ ಸಿಂಗ್ ಪ್ರತಿಭಟನೆಗೆ ಬಂದಾಗಿನಿಂದ ಮನೆಯ ಎಲ್ಲ ಕೆಲಸಗಳನ್ನೂ ಅವರೆ ನೋಡಿಕೊಳ್ಳುತ್ತಿದ್ದಾರೆ. ತಮ್ಮ ತಂದೆಗೆ ಪ್ರತಿದಿನ ಕನಿಷ್ಠ ಎರಡು ಲೀಟರ್ ಹಾಲು ಬೇಕಾಗುತ್ತದೆ. ಹಾಲಿನ ಉತ್ಪನ್ನಗಳಿಲ್ಲದೆ ಇವರಿಗೆ ಊಟ ಸೇರುವುದಿಲ್ಲ ಎಂದು ಗುರ್ತೇಜ್ ಸಿಂಗ್ ನಸುನಗುತ್ತಾರೆ. ಇದು ಅವರ ಆರೋಗ್ಯದ ಗುಟ್ಟು ಕೂಡ ಎನ್ನುತ್ತಾರೆ.

ಹೋರಾಟಕ್ಕೆ ಬಂದ ಗುರ್ತೇಜ್ ಸಿಂಗ್ ಅವರಿಗೆ ತಂದೆಯ ಬೆಂಬಲ ಹೆಚ್ಚಾಗಿದೆಯಂತೆ. ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಮನೆಗೆ ಬರಲು ತಿಳಿಸಿದ್ದಾರೆ. ನನ್ನ ಮಗ ಕೂಡ ಹಲವು ಬಾರಿ ರಜೆ ತೆಗೆದುಕೊಂಡು ಇಲ್ಲಿಗೆ ಬಂದು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ ಎಂದು ರೈತ ಗುರ್ತೇಜ್ ಸಿಂಗ್ ತಿಳಿಸುತ್ತಾರೆ.

ಇನ್ನೊಂದು ಆಶ್ಚರ್ಯದ ವಿಷಯವೆಂದರೆ ಮೊಗ್ಗಾ ಜಿಲ್ಲೆಯ ರತಿನ್ಯಾ ಗ್ರಾಮದ ಸುಮಾರು 3 ಕಿಲೋ ಮೀಟರ್ ದೂರದಲ್ಲಿ ಅದಾನಿ ಕಂಪನಿಯ DAGURU ಸೈಲೋಸ್ (ಸಂಗ್ರಹಾಲಯ) ಐದು ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದು, ಇದೆ ರೈತರು ಅಲ್ಲಿಗೆ ತಮ್ಮ ಗೋದಿಯನ್ನು ಮಾರಾಟ ಮಾಡಿದ್ದಾರೆ.

ಗುರ್ತೇಜ್ ಸಿಂಗ್ ಹೇಳುವಂತೆ “ನಮಗೆ ಅದು ಅದಾನಿ ಕಂಪನಿ ಎಂದು ಗೊತ್ತಿರಲಿಲ್ಲ. ನಮ್ಮ ಗೋದಿಗೆ ಮೊದ ಮೊದಲು ಒಳ್ಳೆಯ ಬೆಲೆ ನೀಡಲಾಗುತ್ತಿತ್ತು. ಇತರ ರೈತರನ್ನು ಅಲ್ಲಿಗೆ ಕರೆತಂದವರಿಗೆ ಕಮಿಷನ್ ಕೂಡ ನೀಡಲಾಗುತ್ತಿತ್ತು. ಆದರೆ ಕೆಲ ತಿಂಗಳುಗಳ ನಂತರ ಸ್ಯಾಂಪಲ್ ನೋಡಿ ತೆಗೆದುಕೊಳ್ಳಲು ಶುರು ಮಾಡಿದರು. ಕೆಲವರನ್ನು ಗೋದಿ ಉತ್ತಮ ಕ್ವಾಲಿಟಿ ಹೊಂದಿಲ್ಲ ಎಂದು ವಾಪಸ್ ಕಳುಹಿಸುತ್ತಿದ್ದರು. ನಂತರ ಅದನ್ನು ಸರ್ಕಾರಿ ಮಂಡಿಯಲ್ಲಿ ಮಾರುತ್ತಿದ್ದೆವು” ಎಂದಿದ್ದಾರೆ.

“ದಾಸ್ತಾನಿನ ಒಳಗೆ ಸ್ಪೆಷಲ್ ಟ್ರೈನ್ ನಲ್ಲಿ ಗೋದಿಯನ್ನು ರಫ್ತು ಮಾಡುತ್ತಿದ್ದರು . ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಜಾರಿಗೆ ತಂದ ಮೇಲೆ ಅದು ಅದಾನಿ ಕಂಪನಿ ಎಂಬುದು ನಮಗೂ ತಿಳಿಯಿತು. 5 ತಿಂಗಳಿನಿಂದ DAGURU ಕಂಪನಿಯನ್ನು ರೈತರು ಬಂದ್ ಮಾಡಿದ್ದಾರೆ. ಇದರ ಪಕ್ಕದಲ್ಲಿಯೇ ಅದಾನಿಯವರ ರೈಸ್ ಕಂಪನಿಯ ತುಂಬಾ ದೊಡ್ಡ ಘಟಕ ಇದೆ. ಕಳೆದ ಐದು ತಿಂಗಳಿನಿಂದ ಈ ಕಂಪನಿಗಳನ್ನು ರೈತರು ಬಂದ್ ಮಾಡಿಸಿದ್ದಾರೆ” ಎಂದು ಗುರ್ತೇಜ್ ಸಿಂಗ್ ಮಾಹಿತಿ ನೀಡಿದ್ದಾರೆ.

“ಸದ್ಯ ಊರಿನಲ್ಲಿ ಗೋದಿ ಹಾಕಿದ್ದೇವೆ. ಎಲ್ಲವನ್ನು ತಂದೆ ನೋಡಿಕೊಳ್ಳುತ್ತಿದ್ದಾರೆ. ಏಪ್ರಿಲ್ ತಿಂಗಳವರೆಗೆ ಏನು ಕೆಲಸವಿಲ್ಲ. ಏನಾದರೂ ಬೇರೆ ಇದ್ದರೆ ಅಕ್ಕಪಕ್ಕದವರು ನೋಡಿಕೊಳ್ಳುತ್ತಾರೆ. ಒಂದೆರೆಡು ಸಲಿ ಆದರೂ ಮನೆಗೆ ಬಂದು ಹೋಗಿ ಎಂದು ಹೆಂಡತಿ, ಮಗ ಕರೆಯುತ್ತಾರೆ. ನನ್ನ ಹೆಂಡತಿಯ ಸಂಬಂಧಿಯ ಎಂಗೇಜ್ಮೆಂಟ್ ಇತ್ತು. ನಾನು ಹೋಗಲಿಲ್ಲ, ಮದುವೆಗೂ ಹೋಗಲಿಲ್ಲ, ಕಾಲಿನ ಗಾಯದ ಸಬೂಬು ಹೇಳಿ ತಪ್ಪಿಸಿಕೊಂಡೆ. ಆದರೆ ತಂದೆ ಮಾತ್ರ ಇಲ್ಲಿಯೇ ಇದ್ದು ಗೆದ್ದು ಬರಲು ಹೇಳುತ್ತಾರೆ” ಎಂದು ತಿಳಿಸಿದ್ದಾರೆ.

“ನನ್ನ ತಮ್ಮ ಕೆನಡಾದಲ್ಲಿ ಕೆಲಸ ಮಾಡುತ್ತಾರೆ. ಹೋರಾಟದಲ್ಲಿ ತೊಡಗಿಸಿಕೊಂಡು ಚಳಿಯಲ್ಲಿ ಕುಳಿತಿರುವ ರೈತರಿಗಾಗ ಬೆಚ್ಚಗಿನ ಶಾಲುಗಳನ್ನು ಹಂಚಲು ಕಳಿಸಿದ್ದರು. ಇನ್ನೂ ನಮ್ಮ ಊರಿನಿಂದ ಪ್ರತಿಭಟನೆ ಬೆಂಬಲಿಸಲು ಬರುವವರಿಗೆ ಅವರ ಬೈಕ್, ಟ್ರ್ಯಾಕ್ಟರ್‌ಗಳಿಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಹಣ ನೀಡುತ್ತಿದ್ದಾರೆ. ಊರಿನಿಂದ ಎಲ್ಲರೂ ಸಿಂಘುಗೆ ಬರಲು ಪ್ರೋತ್ಸಾಹ ನೀಡುತ್ತಿದ್ದಾರೆ” ಎಂದು ಗುರ್ತೇಜ್ ಸಿಂಗ್ ಹೇಳಿದ್ದಾರೆ.

ದೆಹಲಿಯ ಸಿಂಘು ಗಡಿಯಲ್ಲಿ ನವೆಂಬರ್ 26 ರಿಂದ ಟ್ರ್ಯಾಲಿಯಲ್ಲಿ ವಾಸ ಮಾಡುತ್ತಾ, ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಗುರ್ತೇಜ್ ಸಿಂಗ್, ಹೊರ ರಾಜ್ಯಗಳಿಂದ ಬರುವ ಜನರಿಗೆ ತಮ್ಮ ಟ್ರ್ಯಾಲಿಗಳಲ್ಲಿ ಉಳಿಯಲು ವ್ಯವಸ್ಥೆ ಮಾಡುತ್ತಾರೆ. ಟೆಂಟ್‌ಗಳಿಲ್ಲದಿದ್ದರೇ ಅವರಿಗೆ ಟೆಂಟ್, ವಿದ್ಯುತ್ ವ್ಯವಸ್ಥೆ ಮಾಡುತ್ತಾರೆ. ಕರ್ನಾಟಕದಿಂದ ಟ್ರ್ಯಾಕ್ಟರ್ ಪೆರೇಡ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಜನರಿಗೆ ಸ್ನಾನದ ವ್ಯವಸ್ಥೆ, ಉಳಿಯಲು ವ್ಯವಸ್ಥೆಯನ್ನು ಗುರ್ತೇಜ್ ಸಿಂಗ್ ನೋಡಿಕೊಂಡಿದ್ದರು.

– ಮಮತ ಎಂ


ಇದನ್ನೂ ಓದಿ: ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...