Homeಮುಖಪುಟಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ಸರ್ಕಾರ ಮಾಡಿದ ಕುತಂತ್ರಗಳಿಂದಾಗಿ ಈಗ ನಮ್ಮ ಹೋರಾಟ ಸಾವು ಅಥವಾ ಗೆಲುವಿನ ಹೋರಾಟವಾಗಿದೆ. ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ.

- Advertisement -
- Advertisement -

ಹತ್ತನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದು, ಮಗಳನ್ನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಕಳಿಸಿರುವ 57 ವರ್ಷದ ರೈತರಾದ ಗುರ್ತೇಜ್ ಸಿಂಗ್ ಕಳೆದ ಐದು ತಿಂಗಳಿನಿಂದ ರೈತ ಹೋರಾಟದ ಪ್ರತಿನಿಧಿಯಾಗಿದ್ದಾರೆ. ಪಂಜಾಬ್ ರಾಜ್ಯದ ಮೊಗ್ಗಾ ಜಿಲ್ಲೆಯ ರತಿನ್ಯಾ ಗ್ರಾಮದ ಇವರ ಕುಟುಂಬದ ಮೂಲ ಕೆಲಸವೇ ಕೃಷಿಯಾಗಿದೆ.

ರೈತ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಗುರ್ತೇಜ್ ಸಿಂಗ್ ಅವರ ಕುಟುಂಬದ ಸದಸ್ಯರು 5 ಮಂದಿ. ತಂದೆ, ಹೆಂಡತಿ, ಒಬ್ಬ ಮಗ ಮತ್ತು ಮಗಳೊಡನೆ ತಮ್ಮ ಗ್ರಾಮದಲ್ಲಿ ಗೋದಿ, ಭತ್ತ ಬೆಳೆಯುತ್ತಾ ನೆಮ್ಮದಿಯ ಜೀವನ ಸಾಗಿಸುತ್ತಿದ್ದವರು, ಇಂದು ಸಿಂಘು ಗಡಿಯಲ್ಲಿ ಚಳಿ, ಮಳೆ, ಧೂಳಿನಲ್ಲಿ ಟ್ರ್ಯಾಲಿಯಲ್ಲಿ ವಾಸಿಸುತ್ತಿದ್ದಾರೆ.

“ಮನೆಯಲ್ಲಿ ಎಲ್ಲರೂ ವಿದ್ಯಾವಂತರಿದ್ದೇವೆ. ನಮಗೂ ಕಾನೂನುಗಳ ಅರಿವಿದೆ. ಮನೆಗೆ ಹೋಗಬೇಕು ಎಂದು ಅನ್ನಿಸುತ್ತದೆ. ಆದರೆ, ಹೋರಾಟಕ್ಕಿಂತ ಮನೆ ದೊಡ್ಡದಲ್ಲ. ಮೊದಲು ಈ ಮೂರು ಕರಾಳ ಕಾನೂನುಗಳ ವಿರುದ್ಧ ಹೋರಾಡಿ ಗೆಲ್ಲುತ್ತೇವೆ. ಇಷ್ಟು ದಿನಗಳ ಹೋರಾಟ ಬೇರೆ. ಈಗೀನ ಹೋರಾಟವೇ ಬೇರೆ. ಸರ್ಕಾರ ಮಾಡಿದ ಕುತಂತ್ರಗಳಿಂದಾಗಿ ಈಗ ನಮ್ಮ ಹೋರಾಟ ಸಾವು ಅಥವಾ ಗೆಲುವಿನ ಹೋರಾಟವಾಗಿದೆ. ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ನಾವ್ಯಾರೂ ಹೋಗುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರ್ತೇಜ್ ಸಿಂಗ್ ಮಗ ಪದವಿ ಪಡೆದು ಚಂಢಿಗಡದಲ್ಲಿ ಸೋಲಾರ್ ಪ್ಲಾಂಟ್ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಮಗಳು ಪಂಜಾಬಿನಲ್ಲಿಯೇ ದ್ವೀತಿಯ ಪಿಯುಸಿ ಮುಗಿಸಿ ಕೆನಡಾದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದಾರೆ. ಗುರ್ತೇಜ್ ಸಿಂಗ್ ಅವರ ತಮ್ಮ ಕೆನಡಾದಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದು ಅಲ್ಲಿಯೇ ತಮ್ಮ ಉದ್ಯಮ ಶುರು ಮಾಡಿದ್ದಾರೆ.

ಕುಟಂಬದ ಮೂಲ ಕಾರ್ಯ ಕೃಷಿಯಾಗಿರುವುದರಿಂದ ಮನೆಯಲ್ಲಿ ಮೂರು ಎಮ್ಮೆ ಸೇರಿದಂತೆ ಒಂದು ಹಸುವನ್ನು ಗುರ್ತೇಜ್ ಸಿಂಗ್ ಸಾಕಿಕೊಂಡಿದ್ದಾರೆ. ಗೋದಿ, ಭತ್ತದ ಜೊತೆಗೆ ಎಮ್ಮೆಗೆ ಬೇಕಾದ ಹಸಿರು ಹುಲ್ಲು ಬೆಳೆಯುತ್ತಾರೆ. ಆದರೆ ಈ ಎಮ್ಮೆ ಹಾಲನ್ನು ಇವರು ಮಾರುವುದಿಲ್ಲ. ಮನೆಯವರ ಬಳಕೆಗೆ ಬಳಸಿಕೊಳ್ಳಲಾಗುತ್ತದೆ. ಅಕ್ಕ ಪಕ್ಕದಲ್ಲಿ ಎಮ್ಮೆ ಇಲ್ಲದವರಿಗೆ ಹಾಲು ನೀಡಲಾಗುತ್ತದೆ ಎಂದು ವಿವರಿಸುತ್ತಾರೆ.

ಮನೆಯ ಹಿರಿಯ ಸದಸ್ಯರಾಗಿರುವ ಗುರ್ತೇಜ್ ಸಿಂಗ್ ಅವರ ತಂದೆ 85 ವರ್ಷದವರಾಗಿದ್ದು, ಈಗಲೂ ಚಟುವಟಿಕೆಯಿಂದ ಹೊಲದ ಕೆಲಸ ನಿರ್ವಹಿಸುತ್ತಾರೆ. ಗುರ್ತೇಜ್ ಸಿಂಗ್ ಪ್ರತಿಭಟನೆಗೆ ಬಂದಾಗಿನಿಂದ ಮನೆಯ ಎಲ್ಲ ಕೆಲಸಗಳನ್ನೂ ಅವರೆ ನೋಡಿಕೊಳ್ಳುತ್ತಿದ್ದಾರೆ. ತಮ್ಮ ತಂದೆಗೆ ಪ್ರತಿದಿನ ಕನಿಷ್ಠ ಎರಡು ಲೀಟರ್ ಹಾಲು ಬೇಕಾಗುತ್ತದೆ. ಹಾಲಿನ ಉತ್ಪನ್ನಗಳಿಲ್ಲದೆ ಇವರಿಗೆ ಊಟ ಸೇರುವುದಿಲ್ಲ ಎಂದು ಗುರ್ತೇಜ್ ಸಿಂಗ್ ನಸುನಗುತ್ತಾರೆ. ಇದು ಅವರ ಆರೋಗ್ಯದ ಗುಟ್ಟು ಕೂಡ ಎನ್ನುತ್ತಾರೆ.

ಹೋರಾಟಕ್ಕೆ ಬಂದ ಗುರ್ತೇಜ್ ಸಿಂಗ್ ಅವರಿಗೆ ತಂದೆಯ ಬೆಂಬಲ ಹೆಚ್ಚಾಗಿದೆಯಂತೆ. ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಮನೆಗೆ ಬರಲು ತಿಳಿಸಿದ್ದಾರೆ. ನನ್ನ ಮಗ ಕೂಡ ಹಲವು ಬಾರಿ ರಜೆ ತೆಗೆದುಕೊಂಡು ಇಲ್ಲಿಗೆ ಬಂದು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ ಎಂದು ರೈತ ಗುರ್ತೇಜ್ ಸಿಂಗ್ ತಿಳಿಸುತ್ತಾರೆ.

ಇನ್ನೊಂದು ಆಶ್ಚರ್ಯದ ವಿಷಯವೆಂದರೆ ಮೊಗ್ಗಾ ಜಿಲ್ಲೆಯ ರತಿನ್ಯಾ ಗ್ರಾಮದ ಸುಮಾರು 3 ಕಿಲೋ ಮೀಟರ್ ದೂರದಲ್ಲಿ ಅದಾನಿ ಕಂಪನಿಯ DAGURU ಸೈಲೋಸ್ (ಸಂಗ್ರಹಾಲಯ) ಐದು ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದು, ಇದೆ ರೈತರು ಅಲ್ಲಿಗೆ ತಮ್ಮ ಗೋದಿಯನ್ನು ಮಾರಾಟ ಮಾಡಿದ್ದಾರೆ.

ಗುರ್ತೇಜ್ ಸಿಂಗ್ ಹೇಳುವಂತೆ “ನಮಗೆ ಅದು ಅದಾನಿ ಕಂಪನಿ ಎಂದು ಗೊತ್ತಿರಲಿಲ್ಲ. ನಮ್ಮ ಗೋದಿಗೆ ಮೊದ ಮೊದಲು ಒಳ್ಳೆಯ ಬೆಲೆ ನೀಡಲಾಗುತ್ತಿತ್ತು. ಇತರ ರೈತರನ್ನು ಅಲ್ಲಿಗೆ ಕರೆತಂದವರಿಗೆ ಕಮಿಷನ್ ಕೂಡ ನೀಡಲಾಗುತ್ತಿತ್ತು. ಆದರೆ ಕೆಲ ತಿಂಗಳುಗಳ ನಂತರ ಸ್ಯಾಂಪಲ್ ನೋಡಿ ತೆಗೆದುಕೊಳ್ಳಲು ಶುರು ಮಾಡಿದರು. ಕೆಲವರನ್ನು ಗೋದಿ ಉತ್ತಮ ಕ್ವಾಲಿಟಿ ಹೊಂದಿಲ್ಲ ಎಂದು ವಾಪಸ್ ಕಳುಹಿಸುತ್ತಿದ್ದರು. ನಂತರ ಅದನ್ನು ಸರ್ಕಾರಿ ಮಂಡಿಯಲ್ಲಿ ಮಾರುತ್ತಿದ್ದೆವು” ಎಂದಿದ್ದಾರೆ.

“ದಾಸ್ತಾನಿನ ಒಳಗೆ ಸ್ಪೆಷಲ್ ಟ್ರೈನ್ ನಲ್ಲಿ ಗೋದಿಯನ್ನು ರಫ್ತು ಮಾಡುತ್ತಿದ್ದರು . ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಜಾರಿಗೆ ತಂದ ಮೇಲೆ ಅದು ಅದಾನಿ ಕಂಪನಿ ಎಂಬುದು ನಮಗೂ ತಿಳಿಯಿತು. 5 ತಿಂಗಳಿನಿಂದ DAGURU ಕಂಪನಿಯನ್ನು ರೈತರು ಬಂದ್ ಮಾಡಿದ್ದಾರೆ. ಇದರ ಪಕ್ಕದಲ್ಲಿಯೇ ಅದಾನಿಯವರ ರೈಸ್ ಕಂಪನಿಯ ತುಂಬಾ ದೊಡ್ಡ ಘಟಕ ಇದೆ. ಕಳೆದ ಐದು ತಿಂಗಳಿನಿಂದ ಈ ಕಂಪನಿಗಳನ್ನು ರೈತರು ಬಂದ್ ಮಾಡಿಸಿದ್ದಾರೆ” ಎಂದು ಗುರ್ತೇಜ್ ಸಿಂಗ್ ಮಾಹಿತಿ ನೀಡಿದ್ದಾರೆ.

“ಸದ್ಯ ಊರಿನಲ್ಲಿ ಗೋದಿ ಹಾಕಿದ್ದೇವೆ. ಎಲ್ಲವನ್ನು ತಂದೆ ನೋಡಿಕೊಳ್ಳುತ್ತಿದ್ದಾರೆ. ಏಪ್ರಿಲ್ ತಿಂಗಳವರೆಗೆ ಏನು ಕೆಲಸವಿಲ್ಲ. ಏನಾದರೂ ಬೇರೆ ಇದ್ದರೆ ಅಕ್ಕಪಕ್ಕದವರು ನೋಡಿಕೊಳ್ಳುತ್ತಾರೆ. ಒಂದೆರೆಡು ಸಲಿ ಆದರೂ ಮನೆಗೆ ಬಂದು ಹೋಗಿ ಎಂದು ಹೆಂಡತಿ, ಮಗ ಕರೆಯುತ್ತಾರೆ. ನನ್ನ ಹೆಂಡತಿಯ ಸಂಬಂಧಿಯ ಎಂಗೇಜ್ಮೆಂಟ್ ಇತ್ತು. ನಾನು ಹೋಗಲಿಲ್ಲ, ಮದುವೆಗೂ ಹೋಗಲಿಲ್ಲ, ಕಾಲಿನ ಗಾಯದ ಸಬೂಬು ಹೇಳಿ ತಪ್ಪಿಸಿಕೊಂಡೆ. ಆದರೆ ತಂದೆ ಮಾತ್ರ ಇಲ್ಲಿಯೇ ಇದ್ದು ಗೆದ್ದು ಬರಲು ಹೇಳುತ್ತಾರೆ” ಎಂದು ತಿಳಿಸಿದ್ದಾರೆ.

“ನನ್ನ ತಮ್ಮ ಕೆನಡಾದಲ್ಲಿ ಕೆಲಸ ಮಾಡುತ್ತಾರೆ. ಹೋರಾಟದಲ್ಲಿ ತೊಡಗಿಸಿಕೊಂಡು ಚಳಿಯಲ್ಲಿ ಕುಳಿತಿರುವ ರೈತರಿಗಾಗ ಬೆಚ್ಚಗಿನ ಶಾಲುಗಳನ್ನು ಹಂಚಲು ಕಳಿಸಿದ್ದರು. ಇನ್ನೂ ನಮ್ಮ ಊರಿನಿಂದ ಪ್ರತಿಭಟನೆ ಬೆಂಬಲಿಸಲು ಬರುವವರಿಗೆ ಅವರ ಬೈಕ್, ಟ್ರ್ಯಾಕ್ಟರ್‌ಗಳಿಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಹಣ ನೀಡುತ್ತಿದ್ದಾರೆ. ಊರಿನಿಂದ ಎಲ್ಲರೂ ಸಿಂಘುಗೆ ಬರಲು ಪ್ರೋತ್ಸಾಹ ನೀಡುತ್ತಿದ್ದಾರೆ” ಎಂದು ಗುರ್ತೇಜ್ ಸಿಂಗ್ ಹೇಳಿದ್ದಾರೆ.

ದೆಹಲಿಯ ಸಿಂಘು ಗಡಿಯಲ್ಲಿ ನವೆಂಬರ್ 26 ರಿಂದ ಟ್ರ್ಯಾಲಿಯಲ್ಲಿ ವಾಸ ಮಾಡುತ್ತಾ, ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಗುರ್ತೇಜ್ ಸಿಂಗ್, ಹೊರ ರಾಜ್ಯಗಳಿಂದ ಬರುವ ಜನರಿಗೆ ತಮ್ಮ ಟ್ರ್ಯಾಲಿಗಳಲ್ಲಿ ಉಳಿಯಲು ವ್ಯವಸ್ಥೆ ಮಾಡುತ್ತಾರೆ. ಟೆಂಟ್‌ಗಳಿಲ್ಲದಿದ್ದರೇ ಅವರಿಗೆ ಟೆಂಟ್, ವಿದ್ಯುತ್ ವ್ಯವಸ್ಥೆ ಮಾಡುತ್ತಾರೆ. ಕರ್ನಾಟಕದಿಂದ ಟ್ರ್ಯಾಕ್ಟರ್ ಪೆರೇಡ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಜನರಿಗೆ ಸ್ನಾನದ ವ್ಯವಸ್ಥೆ, ಉಳಿಯಲು ವ್ಯವಸ್ಥೆಯನ್ನು ಗುರ್ತೇಜ್ ಸಿಂಗ್ ನೋಡಿಕೊಂಡಿದ್ದರು.

– ಮಮತ ಎಂ


ಇದನ್ನೂ ಓದಿ: ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...