Homeಮುಖಪುಟಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ಸರ್ಕಾರ ಮಾಡಿದ ಕುತಂತ್ರಗಳಿಂದಾಗಿ ಈಗ ನಮ್ಮ ಹೋರಾಟ ಸಾವು ಅಥವಾ ಗೆಲುವಿನ ಹೋರಾಟವಾಗಿದೆ. ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ.

- Advertisement -
- Advertisement -

ಹತ್ತನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದು, ಮಗಳನ್ನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಕಳಿಸಿರುವ 57 ವರ್ಷದ ರೈತರಾದ ಗುರ್ತೇಜ್ ಸಿಂಗ್ ಕಳೆದ ಐದು ತಿಂಗಳಿನಿಂದ ರೈತ ಹೋರಾಟದ ಪ್ರತಿನಿಧಿಯಾಗಿದ್ದಾರೆ. ಪಂಜಾಬ್ ರಾಜ್ಯದ ಮೊಗ್ಗಾ ಜಿಲ್ಲೆಯ ರತಿನ್ಯಾ ಗ್ರಾಮದ ಇವರ ಕುಟುಂಬದ ಮೂಲ ಕೆಲಸವೇ ಕೃಷಿಯಾಗಿದೆ.

ರೈತ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಗುರ್ತೇಜ್ ಸಿಂಗ್ ಅವರ ಕುಟುಂಬದ ಸದಸ್ಯರು 5 ಮಂದಿ. ತಂದೆ, ಹೆಂಡತಿ, ಒಬ್ಬ ಮಗ ಮತ್ತು ಮಗಳೊಡನೆ ತಮ್ಮ ಗ್ರಾಮದಲ್ಲಿ ಗೋದಿ, ಭತ್ತ ಬೆಳೆಯುತ್ತಾ ನೆಮ್ಮದಿಯ ಜೀವನ ಸಾಗಿಸುತ್ತಿದ್ದವರು, ಇಂದು ಸಿಂಘು ಗಡಿಯಲ್ಲಿ ಚಳಿ, ಮಳೆ, ಧೂಳಿನಲ್ಲಿ ಟ್ರ್ಯಾಲಿಯಲ್ಲಿ ವಾಸಿಸುತ್ತಿದ್ದಾರೆ.

“ಮನೆಯಲ್ಲಿ ಎಲ್ಲರೂ ವಿದ್ಯಾವಂತರಿದ್ದೇವೆ. ನಮಗೂ ಕಾನೂನುಗಳ ಅರಿವಿದೆ. ಮನೆಗೆ ಹೋಗಬೇಕು ಎಂದು ಅನ್ನಿಸುತ್ತದೆ. ಆದರೆ, ಹೋರಾಟಕ್ಕಿಂತ ಮನೆ ದೊಡ್ಡದಲ್ಲ. ಮೊದಲು ಈ ಮೂರು ಕರಾಳ ಕಾನೂನುಗಳ ವಿರುದ್ಧ ಹೋರಾಡಿ ಗೆಲ್ಲುತ್ತೇವೆ. ಇಷ್ಟು ದಿನಗಳ ಹೋರಾಟ ಬೇರೆ. ಈಗೀನ ಹೋರಾಟವೇ ಬೇರೆ. ಸರ್ಕಾರ ಮಾಡಿದ ಕುತಂತ್ರಗಳಿಂದಾಗಿ ಈಗ ನಮ್ಮ ಹೋರಾಟ ಸಾವು ಅಥವಾ ಗೆಲುವಿನ ಹೋರಾಟವಾಗಿದೆ. ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ನಾವ್ಯಾರೂ ಹೋಗುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರ್ತೇಜ್ ಸಿಂಗ್ ಮಗ ಪದವಿ ಪಡೆದು ಚಂಢಿಗಡದಲ್ಲಿ ಸೋಲಾರ್ ಪ್ಲಾಂಟ್ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಮಗಳು ಪಂಜಾಬಿನಲ್ಲಿಯೇ ದ್ವೀತಿಯ ಪಿಯುಸಿ ಮುಗಿಸಿ ಕೆನಡಾದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದಾರೆ. ಗುರ್ತೇಜ್ ಸಿಂಗ್ ಅವರ ತಮ್ಮ ಕೆನಡಾದಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದು ಅಲ್ಲಿಯೇ ತಮ್ಮ ಉದ್ಯಮ ಶುರು ಮಾಡಿದ್ದಾರೆ.

ಕುಟಂಬದ ಮೂಲ ಕಾರ್ಯ ಕೃಷಿಯಾಗಿರುವುದರಿಂದ ಮನೆಯಲ್ಲಿ ಮೂರು ಎಮ್ಮೆ ಸೇರಿದಂತೆ ಒಂದು ಹಸುವನ್ನು ಗುರ್ತೇಜ್ ಸಿಂಗ್ ಸಾಕಿಕೊಂಡಿದ್ದಾರೆ. ಗೋದಿ, ಭತ್ತದ ಜೊತೆಗೆ ಎಮ್ಮೆಗೆ ಬೇಕಾದ ಹಸಿರು ಹುಲ್ಲು ಬೆಳೆಯುತ್ತಾರೆ. ಆದರೆ ಈ ಎಮ್ಮೆ ಹಾಲನ್ನು ಇವರು ಮಾರುವುದಿಲ್ಲ. ಮನೆಯವರ ಬಳಕೆಗೆ ಬಳಸಿಕೊಳ್ಳಲಾಗುತ್ತದೆ. ಅಕ್ಕ ಪಕ್ಕದಲ್ಲಿ ಎಮ್ಮೆ ಇಲ್ಲದವರಿಗೆ ಹಾಲು ನೀಡಲಾಗುತ್ತದೆ ಎಂದು ವಿವರಿಸುತ್ತಾರೆ.

ಮನೆಯ ಹಿರಿಯ ಸದಸ್ಯರಾಗಿರುವ ಗುರ್ತೇಜ್ ಸಿಂಗ್ ಅವರ ತಂದೆ 85 ವರ್ಷದವರಾಗಿದ್ದು, ಈಗಲೂ ಚಟುವಟಿಕೆಯಿಂದ ಹೊಲದ ಕೆಲಸ ನಿರ್ವಹಿಸುತ್ತಾರೆ. ಗುರ್ತೇಜ್ ಸಿಂಗ್ ಪ್ರತಿಭಟನೆಗೆ ಬಂದಾಗಿನಿಂದ ಮನೆಯ ಎಲ್ಲ ಕೆಲಸಗಳನ್ನೂ ಅವರೆ ನೋಡಿಕೊಳ್ಳುತ್ತಿದ್ದಾರೆ. ತಮ್ಮ ತಂದೆಗೆ ಪ್ರತಿದಿನ ಕನಿಷ್ಠ ಎರಡು ಲೀಟರ್ ಹಾಲು ಬೇಕಾಗುತ್ತದೆ. ಹಾಲಿನ ಉತ್ಪನ್ನಗಳಿಲ್ಲದೆ ಇವರಿಗೆ ಊಟ ಸೇರುವುದಿಲ್ಲ ಎಂದು ಗುರ್ತೇಜ್ ಸಿಂಗ್ ನಸುನಗುತ್ತಾರೆ. ಇದು ಅವರ ಆರೋಗ್ಯದ ಗುಟ್ಟು ಕೂಡ ಎನ್ನುತ್ತಾರೆ.

ಹೋರಾಟಕ್ಕೆ ಬಂದ ಗುರ್ತೇಜ್ ಸಿಂಗ್ ಅವರಿಗೆ ತಂದೆಯ ಬೆಂಬಲ ಹೆಚ್ಚಾಗಿದೆಯಂತೆ. ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಮನೆಗೆ ಬರಲು ತಿಳಿಸಿದ್ದಾರೆ. ನನ್ನ ಮಗ ಕೂಡ ಹಲವು ಬಾರಿ ರಜೆ ತೆಗೆದುಕೊಂಡು ಇಲ್ಲಿಗೆ ಬಂದು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ ಎಂದು ರೈತ ಗುರ್ತೇಜ್ ಸಿಂಗ್ ತಿಳಿಸುತ್ತಾರೆ.

ಇನ್ನೊಂದು ಆಶ್ಚರ್ಯದ ವಿಷಯವೆಂದರೆ ಮೊಗ್ಗಾ ಜಿಲ್ಲೆಯ ರತಿನ್ಯಾ ಗ್ರಾಮದ ಸುಮಾರು 3 ಕಿಲೋ ಮೀಟರ್ ದೂರದಲ್ಲಿ ಅದಾನಿ ಕಂಪನಿಯ DAGURU ಸೈಲೋಸ್ (ಸಂಗ್ರಹಾಲಯ) ಐದು ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದು, ಇದೆ ರೈತರು ಅಲ್ಲಿಗೆ ತಮ್ಮ ಗೋದಿಯನ್ನು ಮಾರಾಟ ಮಾಡಿದ್ದಾರೆ.

ಗುರ್ತೇಜ್ ಸಿಂಗ್ ಹೇಳುವಂತೆ “ನಮಗೆ ಅದು ಅದಾನಿ ಕಂಪನಿ ಎಂದು ಗೊತ್ತಿರಲಿಲ್ಲ. ನಮ್ಮ ಗೋದಿಗೆ ಮೊದ ಮೊದಲು ಒಳ್ಳೆಯ ಬೆಲೆ ನೀಡಲಾಗುತ್ತಿತ್ತು. ಇತರ ರೈತರನ್ನು ಅಲ್ಲಿಗೆ ಕರೆತಂದವರಿಗೆ ಕಮಿಷನ್ ಕೂಡ ನೀಡಲಾಗುತ್ತಿತ್ತು. ಆದರೆ ಕೆಲ ತಿಂಗಳುಗಳ ನಂತರ ಸ್ಯಾಂಪಲ್ ನೋಡಿ ತೆಗೆದುಕೊಳ್ಳಲು ಶುರು ಮಾಡಿದರು. ಕೆಲವರನ್ನು ಗೋದಿ ಉತ್ತಮ ಕ್ವಾಲಿಟಿ ಹೊಂದಿಲ್ಲ ಎಂದು ವಾಪಸ್ ಕಳುಹಿಸುತ್ತಿದ್ದರು. ನಂತರ ಅದನ್ನು ಸರ್ಕಾರಿ ಮಂಡಿಯಲ್ಲಿ ಮಾರುತ್ತಿದ್ದೆವು” ಎಂದಿದ್ದಾರೆ.

“ದಾಸ್ತಾನಿನ ಒಳಗೆ ಸ್ಪೆಷಲ್ ಟ್ರೈನ್ ನಲ್ಲಿ ಗೋದಿಯನ್ನು ರಫ್ತು ಮಾಡುತ್ತಿದ್ದರು . ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಜಾರಿಗೆ ತಂದ ಮೇಲೆ ಅದು ಅದಾನಿ ಕಂಪನಿ ಎಂಬುದು ನಮಗೂ ತಿಳಿಯಿತು. 5 ತಿಂಗಳಿನಿಂದ DAGURU ಕಂಪನಿಯನ್ನು ರೈತರು ಬಂದ್ ಮಾಡಿದ್ದಾರೆ. ಇದರ ಪಕ್ಕದಲ್ಲಿಯೇ ಅದಾನಿಯವರ ರೈಸ್ ಕಂಪನಿಯ ತುಂಬಾ ದೊಡ್ಡ ಘಟಕ ಇದೆ. ಕಳೆದ ಐದು ತಿಂಗಳಿನಿಂದ ಈ ಕಂಪನಿಗಳನ್ನು ರೈತರು ಬಂದ್ ಮಾಡಿಸಿದ್ದಾರೆ” ಎಂದು ಗುರ್ತೇಜ್ ಸಿಂಗ್ ಮಾಹಿತಿ ನೀಡಿದ್ದಾರೆ.

“ಸದ್ಯ ಊರಿನಲ್ಲಿ ಗೋದಿ ಹಾಕಿದ್ದೇವೆ. ಎಲ್ಲವನ್ನು ತಂದೆ ನೋಡಿಕೊಳ್ಳುತ್ತಿದ್ದಾರೆ. ಏಪ್ರಿಲ್ ತಿಂಗಳವರೆಗೆ ಏನು ಕೆಲಸವಿಲ್ಲ. ಏನಾದರೂ ಬೇರೆ ಇದ್ದರೆ ಅಕ್ಕಪಕ್ಕದವರು ನೋಡಿಕೊಳ್ಳುತ್ತಾರೆ. ಒಂದೆರೆಡು ಸಲಿ ಆದರೂ ಮನೆಗೆ ಬಂದು ಹೋಗಿ ಎಂದು ಹೆಂಡತಿ, ಮಗ ಕರೆಯುತ್ತಾರೆ. ನನ್ನ ಹೆಂಡತಿಯ ಸಂಬಂಧಿಯ ಎಂಗೇಜ್ಮೆಂಟ್ ಇತ್ತು. ನಾನು ಹೋಗಲಿಲ್ಲ, ಮದುವೆಗೂ ಹೋಗಲಿಲ್ಲ, ಕಾಲಿನ ಗಾಯದ ಸಬೂಬು ಹೇಳಿ ತಪ್ಪಿಸಿಕೊಂಡೆ. ಆದರೆ ತಂದೆ ಮಾತ್ರ ಇಲ್ಲಿಯೇ ಇದ್ದು ಗೆದ್ದು ಬರಲು ಹೇಳುತ್ತಾರೆ” ಎಂದು ತಿಳಿಸಿದ್ದಾರೆ.

“ನನ್ನ ತಮ್ಮ ಕೆನಡಾದಲ್ಲಿ ಕೆಲಸ ಮಾಡುತ್ತಾರೆ. ಹೋರಾಟದಲ್ಲಿ ತೊಡಗಿಸಿಕೊಂಡು ಚಳಿಯಲ್ಲಿ ಕುಳಿತಿರುವ ರೈತರಿಗಾಗ ಬೆಚ್ಚಗಿನ ಶಾಲುಗಳನ್ನು ಹಂಚಲು ಕಳಿಸಿದ್ದರು. ಇನ್ನೂ ನಮ್ಮ ಊರಿನಿಂದ ಪ್ರತಿಭಟನೆ ಬೆಂಬಲಿಸಲು ಬರುವವರಿಗೆ ಅವರ ಬೈಕ್, ಟ್ರ್ಯಾಕ್ಟರ್‌ಗಳಿಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಹಣ ನೀಡುತ್ತಿದ್ದಾರೆ. ಊರಿನಿಂದ ಎಲ್ಲರೂ ಸಿಂಘುಗೆ ಬರಲು ಪ್ರೋತ್ಸಾಹ ನೀಡುತ್ತಿದ್ದಾರೆ” ಎಂದು ಗುರ್ತೇಜ್ ಸಿಂಗ್ ಹೇಳಿದ್ದಾರೆ.

ದೆಹಲಿಯ ಸಿಂಘು ಗಡಿಯಲ್ಲಿ ನವೆಂಬರ್ 26 ರಿಂದ ಟ್ರ್ಯಾಲಿಯಲ್ಲಿ ವಾಸ ಮಾಡುತ್ತಾ, ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಗುರ್ತೇಜ್ ಸಿಂಗ್, ಹೊರ ರಾಜ್ಯಗಳಿಂದ ಬರುವ ಜನರಿಗೆ ತಮ್ಮ ಟ್ರ್ಯಾಲಿಗಳಲ್ಲಿ ಉಳಿಯಲು ವ್ಯವಸ್ಥೆ ಮಾಡುತ್ತಾರೆ. ಟೆಂಟ್‌ಗಳಿಲ್ಲದಿದ್ದರೇ ಅವರಿಗೆ ಟೆಂಟ್, ವಿದ್ಯುತ್ ವ್ಯವಸ್ಥೆ ಮಾಡುತ್ತಾರೆ. ಕರ್ನಾಟಕದಿಂದ ಟ್ರ್ಯಾಕ್ಟರ್ ಪೆರೇಡ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಜನರಿಗೆ ಸ್ನಾನದ ವ್ಯವಸ್ಥೆ, ಉಳಿಯಲು ವ್ಯವಸ್ಥೆಯನ್ನು ಗುರ್ತೇಜ್ ಸಿಂಗ್ ನೋಡಿಕೊಂಡಿದ್ದರು.

– ಮಮತ ಎಂ


ಇದನ್ನೂ ಓದಿ: ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...