Homeಮುಖಪುಟಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

ಉತ್ತರಪ್ರದೇಶದಲ್ಲಿ ಕಡಿಮೆ ಮತದಾನ: ಬಿಜೆಪಿಗೆ ಕಾದಿದೆಯ ಆಘಾತ?

- Advertisement -
- Advertisement -

ಮೊದಲ ಹಂತದ ಮತದಾನ ಮುಗಿದಿದ್ದು, ದಹಲಿಯಲ್ಲಿ ಗದ್ದುಗೆ ಹಿಡಿಯಲು ‘ಹೆಬ್ಬಾಗಿಲು’ ಎನಿಸಿರುವ ಉತ್ತರಪ್ರದೇಶದ ಪಶ್ಚಿಮ ಭಾಗದ ಎಂಟು ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು, ಅಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಇದು ಬಿಜೆಪಿ ಪಾಲಿಗೆ ಚಿಂತೆಯ ವಿಷಯವೇ ಆಗಿದೆ.

ಮತದಾನದ ಸಂಜೆ ಚುನಾವಣಾ ಆಯೋಗ ನೀಡಿರುವ ಮಾಹಿತಿ ಪ್ರಕಾರ, ಆ ಎಂಟು ಕ್ಷೇತ್ರಗಳಲ್ಲಿ ಈ ಬಾರಿ ಶೇ. 63.9 ಮತದಾನವಾಗಿದ್ದರೆ, ಕಳೆದ ಸಲ ಶೇ. 66ರಷ್ಟು ಮತದಾನವಾಗಿತ್ತು. ಇಲ್ಲಿ ವ್ಯತ್ಯಾಸ ಕೇವಲ ಶೇ. 2.1 ಇರಬಹುದು. ಆದರೆ ಇದು ನಿರ್ಲಕ್ಷಿಸುವ ವಿಷಯವಲ್ಲ ಬಿಜೆಪಿ ಪಾಲಿಗೆ! ಚುನಾವಣಾ ತಜ್ಞರ ಪ್ರಕಾರ, ಬಿಜೆಪಿಯ ಬೆಂಬಲಿಗರು ಕಳೆದ ಸಲದಷ್ಟು ಉತ್ಸಾಹದಿಂದ ಈ ಸಲ ಮತದಾನದಲ್ಲಿ ಪಾಲ್ಗೊಳ್ಳಲಿಲ್ಲ.

ಪರಂಪರಾಗತ ಬಿಜೆಪಿ ಬೆಂಬಲಿಗರು ತುಂಬ ಪ್ರಜ್ಞಾಪೂರ್ವಕವಾಗಿ ಮತದಾನ ಮಾಡುತ್ತಾರೆ. ಆದರೆ ಈ ಎಂಟು ಕ್ಷೇತ್ರಗಳಲ್ಲಿ 2014ರ ಉತ್ಸಾಹ ಕಂಡುಬಂದಿಲ್ಲ.
2014ರಲ್ಲಿ ಈ ಪಶ್ಚಿಮ ಯುಪಿಯಲ್ಲಿ ಎಲ್ಲ ಎಂಟೂ ಸ್ಥಾನಗಳನ್ನು ದೊಡ್ಡ ಲೀಡ್‍ನಿಂದ ಗೆದ್ದಿತ್ತು. ಆಗ ಮೋದಿಯ ಸೃಷ್ಟಿತ ಹವಾ ಅದರ ನೆರವಿಗೆ ಬಂದಿತ್ತು. ಅದಲ್ಲದೇ ವಿಪಕ್ಷಗಳಲ್ಲಿ ಯಾವುದೇ ಒಗ್ಗಟ್ಟಿರಲಿಲ್ಲ.

2014ರಲ್ಲಿ ಮೊದಲ ಹಂತದಲ್ಲಿ ಈ ಎಂಟು ಕ್ಷೇತ್ರಗಳಲ್ಲಿ –ಮೀರತ್, ಬಾಗಪಟ್, ಬಿಕ್ನೋರ್, ಘಾಜಿಯಾಬಾದ್, ಕೈರಾನ, ಗೌತಮ್ ಬುದ್ಧಿ ನಗರ, ಸಹ್ರಾನಪುರ್ ಮತ್ತು ಮುಜಾಫರ್ ನಗರ- ಬಿಜೆಪಿ ಶೇ. 49ರಷ್ಟು ಮತ ಪ್ರಮಾಣವನ್ನು ಪಡೆದಿತ್ತು. ಇಲ್ಲಿ ಮತದಾನಕ್ಕೆ ಕಂಡು ಬಂದ ಜೋಶ್ ಉಳಿದ ಹಂತಗಳಲ್ಲೂ ಮುಂದುವರೆದಿತ್ತು.

ಈಗ ಕುಸ್ತಿ ಅಖಾಡವೇ ಬೇರೆ!
2014ರ ಪರಿಸ್ಥಿತಿ ಈಗಿಲ್ಲ. ಮಾಯಾವತಿಯ ಬಿಎಸ್‍ಪಿ, ಅಖಲೇಶ ಯಾದವರ ಸಮಾಜವಾದಿ ಪಾರ್ಟಿ ಮತ್ತು ಅಜಿತ್‍ಸಿಂಗ್‍ರ ರಾಷ್ಟ್ರೀಯ ಲೋಕದಳ ಘಟಬಂಧನ ರಚಿಸಿಕೊಂಡಿವೆ. ಪಶ್ಚಿಮ ಉತ್ತರಪ್ರದೇಶದಲ್ಲಿ ಪ್ರಬಲ ಜಾಟರು ಎಂದಿಗೂ ಆರ್‍ಎಲ್‍ಡಿ ಪರವೇ ಇದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ದ್ವೇಷಪೂರಿತ ಆಡಳಿತದಿಂದ ತತ್ತರಿಸಿರುವ ದಲಿತರು ಮತ್ತೆ ಬಿಎಸ್ಪಿ ಕಡೆ ಮುಖ ಮಾಡಿದ್ದಾರೆ. ಎಂದಿನಂತೆ ಈ ಸಲ ಮುಸ್ಲಿಮರು ಎಸ್ಪಿಯ ಪರವಿದ್ದಾರೆ. ಹೀಗಾಗಿ ಈ ಭಾಗದಲ್ಲಿ ನಿರ್ಣಾಯಕ ಎನಿಸಿರುವ ದಲಿತರು ಮತ್ತು ಮುಸ್ಲಿಮರು ಈಗ ಒಂದಾಗಿದ್ದು, ಬಿಜೆಪಿಗೆ ತಲೆನೋವು ತಂದಿದ್ದಾರೆ. ಜಾಟರು, ದಲಿತರು ಮತ್ತು ಮುಸ್ಲಿಮರ ಈ ಘಟಬಂಧನ ಈ ಎಂಟು ಕ್ಷೇತ್ರಗಳಲ್ಲಿ ಫಲಿತಾಂಶ ನಿರ್ಧರಿಸಲಿದೆ.

ಆದರೆ, ಇಲ್ಲಿರುವ ಒಂದು ಸಣ್ಣ ತೊಡಕೆಂದರೆ, ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿರುವುದು ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಜಯಕ್ಕೆ ನೆರವಾಗಬಹುದು ಎನ್ನಲಾಗುತ್ತಿದೆ. ಕಾಂಗ್ರೆಸ್‍ನ ಸಹ್ರಾನಪುರ್ ಅಭ್ಯರ್ಥಿ ಇಮ್ರಾನ್ ಮಸೂದ್ ಮತ್ತು ಬಜ್ನೋರ್‍ನ ಅಭ್ಯರ್ಥಿ ನಾಸಿರುದ್ದೀನ್ ಸಿದ್ದಿಕಿ ಮುಸ್ಲಿಮರ ಮತಗಳನ್ನು ವಿಭಜಿಸುವ ಮೂಲಕ ಬಿಜೆಪಿಗೆ ನೆರವಾಗುವ ಸಾಧ್ಯತೆ ಇವೆ ಎನ್ನಲಾಗಿದೆ.

ಜಾಟರ ‘ಪವರ್‍ಪ್ಲೇ’!
ಈ ಸಲದ ಚುನಾವಣೆಯಲ್ಲಿ ಜಾಟರ ಶಕ್ತಿ ಒಂಥರಾ ‘ಎಕ್ಸ್’ ಫ್ಯಾಕ್ಟರ್ ತರಹ ಕೆಲಸ ಮಾಡಲಿದೆ. ಮೊದಲಿಂದಲೂ ಜಾಟರು ಆರ್‍ಎಲ್‍ಡಿ (ಈಗ ಘಟಬಂಧನದ ಭಾಗ) ಪಕ್ಷಕ್ಕೆ ನಿಷ್ಟೇ ವ್ಯಕ್ತಪಡಿಸುತ್ತ ಬಂದಿದ್ದರು. ಆದರೆ, 2013ರಲ್ಲಿ ನಡೆದ ಮುಜಾಫರ್‍ನಗರ ಕೋಮು ಗಲಭೆಯಯ ನಂತರ ಬಿಜೆಪಿ ಅವರನ್ನು ಹಿಂದೂತ್ವದ ಬ್ಯಾನರಿನಡಿ ಸೆಳೆದುಕೊಂಡು 2014ರ ಚುನಾವಣೆಯಲ್ಲಿ ಲಾಭ ಮಾಡಿಕೊಂಡಿತ್ತು. ಅಲ್ಲಿ ಮೊದಲಿಂದ ಇದ್ದ ಜಾಟರು-ಮುಸ್ಲಿಮರ ನಡುವಿನ ಸೌಹಾರ್ದ ಬದುಕನ್ನು ಜಾತಿ-ಧರ್ಮಗಳ ಹೆಸರಲ್ಲಿ ಬಿಜೆಪಿ ಒಡೆದಿತ್ತು. ಆದರೆ ಈಗ ಜಾಟರು ಮತ್ತು ,ಮುಸ್ಲಿಮರು ಎಚ್ಚೆತ್ತುಕೊಂಡಿದ್ದಾರೆ. ಗೋ ಮಾರಾಟ ನಿಷೇಧದ ಪರಿಣಾಮವಾಗಿ ಹೆಚ್ಚಿರುವ ಬಿಡಾಡಿ ದನಗಳು ಒಕ್ಕಲು ಮಕ್ಕಳು ಜಾಟರ ಬೆಳೆಗಳನ್ನು ನಾಶ ಮಾಡುತ್ತಿವೆ. ಕಬ್ಬಿಗೆ ನ್ಯಾಯಯುತ ಬೆಲೆ ಕೊಡುವಲ್ಲಿ ಉತ್ತರಪ್ರದೇಶ ಸರ್ಕಾರ ವಿಫಲವಾಗಿದೆ. ಹಾಗೆಯೇ ಅವರ ನಿಷ್ಟೇಯ ಪಕ್ಷ ಆರ್‍ಎಲ್‍ಡಿ ಈಗ ಘಟಬಂಧನದ ಮೂಲಕ ಜಾಟರನ್ನು ಮತ್ತೆ ತನ್ನಲ್ಲಿ ಉಳಿಸಿಕೊಂಡಿದೆ.

ಹೀಗಾಗಿ ಉತ್ತರ ಪ್ರದೇಶದಲ್ಲಿ ಈ ಸಲ ಮೋದಿ ಹೆಅಸರು, ರಾಷ್ಟ್ರೀಯ ಸುರಕ್ಷತೆ ಜಪ ಬಿಟ್ಟರೆ ಬಿಜೆಪಿಗೆ ಇಶ್ಯೂಗಳೇ ಇಲ್ಲ. 2014ರ ಮೋದಿ ಹವಾ ಠುಸ್ ಆಗಿದೆ. ಪುಲ್ವಾಮಾ ಘಟನೆ ಮತ್ತು ಬಾರಾಕೋಟ್ ವಾಯುದಾಳಿಯ ಮೇಲೆಯೇ ನಿಜೆಪಿ ಕ್ಯಾಂಪೇನ್ ಮಾಡುತ್ತಿದೆ.
ಮೊದಲ ಹಂತದಲ್ಲಿ ಇಷ್ಟೆಲ್ಲ ‘ದೇಶಭಕ್ತಿಯ’ ಪ್ರಚಾರದ ನಂತರವೂ ಎಂಟು ಕ್ಷೇತ್ರಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಬಿಜೆಪಿ ಪಾಲಿಗೆ ಇದು ‘ಅವಲಕ್ಷಣ’ವೇ ಅಲ್ಲವೇ? ಅಂದರೆ ರಾಜಕೀಯ ಅವಲಕ್ಷಣ!

ಕೃಪೆ: ದಿ ಕ್ವಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...