Homeಅಂತರಾಷ್ಟ್ರೀಯಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

ಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

- Advertisement -
- Advertisement -

ಮಯಾನ್ಮಾರ್‌‌ನಲ್ಲಿ ಒಂದು ವರ್ಷದವರೆಗೆ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಸೈನ್ಯವು ದೇಶದ ಮೇಲೆ ಹಿಡಿತ ಸಾಧಿಸಿದೆ ಎಂದು ಮಯನ್ಮಾರ್ ಮಿಲಿಟರಿ ಟೆಲಿವಿಷನ್ ತಿಳಿಸಿದೆ. ಮಿಲಿಟರಿ ಒಡೆತನದ ಮೈವಾಡಿ ಟಿವಿಯಲ್ಲಿ ಸೋಮವಾರ ಬೆಳಿಗ್ಗೆ ಈ ಘೋಷಣೆ ಮಾಡಲಾಗಿದೆ. ಸ್ಟೇಟ್ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ ಎಂದು ವರದಿಗಳು ತಿಳಿಸಿವೆ.

ದೇಶದ ರಾಜಧಾನಿ ನಾಯ್ಪಿಟಾವ್‌ನ ಫೋನ್ ಮತ್ತು ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿರುವುದರಿಂದ ಆಂಗ್ ಸಾನ್ ಸೂಕಿ ಅವರನ್ನು ಸಂಪರ್ಕಿಸಲಾಗುತ್ತಿಲ್ಲ ಎಂದು ಅವರ ಪಕ್ಷವಾದ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಾರ್ಟಿ ಹೇಳಿದೆ.

ದೇಶದ ಸೈನ್ಯವು ಆಡಳಿತ ವಹಿಸಿಕೊಂಡಿರುವುದನ್ನು ಅಮೆರಿಕಾ, ಆಸ್ಟ್ರೇಲಿಯಾ ಸೇರಿದಂತೆ ಹಲವಾರು ದೇಶಗಳು ಕಳವಳ ವ್ಯಕ್ತಪಡಿಸಿದ್ದು, ಸೈನ್ಯಕ್ಕೆ ದೇಶದ ಕಾನೂನನ್ನು ಗೌರವಿಸುವಂತೆ ಒತ್ತಾಯಿಸಿವೆ.

ಇದನ್ನೂ ಓದಿ: ಇತ್ತೀಚಿನ ಭಾರತ-ಚೈನಾ ಗಡಿ ಘರ್ಷಣೆಗಳು: ಗಡಿ ನಿರ್ಧರಿಸಲು ಭಾರತವು ಚೌಕಾಶಿ ಮಾತುಕತೆಗೆ ತಯಾರಾಗಬೇಕು

“ಬರ್ಮಾದಲ್ಲಿ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಮತ್ತು ಇತರ ಅಧಿಕಾರಿಗಳ ಬಂಧನ ಸೇರಿದಂತೆ, ದೇಶವನ್ನು ಸೈನ್ಯವು ತೆಕ್ಕೆಗೆ ಪಡಿದುಕೊಂಡಿದೆ ಎಂಬ ಸುದ್ದಿಗಳಿಂದ ಅಮೆರಿಕ ಕಳವಳಗೊಂಡಿದೆ” ಎಂದು ಶ್ವೇತಭವನದ ವಕ್ತಾರ ಜೆನ್ ಸಾಕಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವರದಿಯಾದ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷ ಜೋ ಬಿಡನ್ ಅವರಿಗೆ ವಿವರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಚುನಾವಣಾ ಫಲಿತಾಂಶವನ್ನು ಬದಲಿಸುವ ಅಥವಾ ಮ್ಯಾನ್ಮಾರ್‌ನ ಪ್ರಜಾಪ್ರಭುತ್ವಕ್ಕೆ ಅಡ್ಡಿಯುಂಟುಮಾಡುವ ಯಾವುದೇ ಪ್ರಯತ್ನವನ್ನು ಅಮೆರಿಕ ವಿರೋಧಿಸುತ್ತದೆ ಮತ್ತು ಈ ಕ್ರಮಗಳನ್ನು ಹಿಂಪಡೆಯದಿದ್ದರೆ ಘಟನೆಗೆ ಜವಾಬ್ದಾರರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್ ಅವರು ಸೂಕಿ ಅವರನ್ನು ಬಿಡುಗಡೆ ಮಾಡಲು ಕರೆ ನೀಡಿದ್ದಾರೆ. “ನವೆಂಬರ್ 2020 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳಿಗೆ ಅನುಗುಣವಾಗಿ ರಾಷ್ಟ್ರೀಯ ಅಸೆಂಬ್ಲಿಯ ಶಾಂತಿಯುತ ಪುನರ್ನಿರ್ಮಾಣವನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೇಪಾಳ ಹಾಗೂ ಪಾಕಿಸ್ತಾನಕ್ಕಿಂತ ಭಾರತದ ಕನಿಷ್ಠ ವೇತನ ಕಡಿಮೆ: ವಿಶ್ವ ಸಂಸ್ಥೆ ವರದಿ

ಮ್ಯಾಯನ್ಮಾರ್‌‌‌ನಲ್ಲಿ ಕಳೆದ ವರ್ಷ ಚುನಾವಣೆ ನಡೆದಿದ್ದು, ಈ ಚುನಾವಣೆಯ ನಂತರ ಚುನಾಯಿತ ಸಂಸದರು ಸಂಸತ್ತಿನ ಮೊದಲ ಅಧಿವೇಶನಕ್ಕಾಗಿ ರಾಜಧಾನಿ ನಾಯ್ಪಿಟಾವ್‌ನಲ್ಲಿ ಸೋಮವಾರ ಒಟ್ಟುಗೂಡಬೇಕಿತ್ತು.

75 ವರ್ಷದ ಆಂಗ್ ಸಾನ್ ಸೂಕಿ ದೇಶದ ಅತ್ಯಂತ ಪ್ರಬಲ ರಾಜಕಾರಣಿಯಾಗಿದ್ದು, ದೇಶದ ಮಿಲಿಟರಿ ಆಡಳಿತದ ವಿರುದ್ಧ ದಶಕಗಳಿಂದ ಅಹಿಂಸಾತ್ಮಕ ಹೋರಾಟವನ್ನು ಮುನ್ನಡೆಸಿದ್ದರು. ನವೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಸಂಸತ್ತಿನ ಕೆಳ ಮತ್ತು ಮೇಲ್ಮನೆಗಳಲ್ಲಿ ಸೂಕಿ ಅವರ ಪಕ್ಷವು 476 ಸ್ಥಾನಗಳಲ್ಲಿ 396 ಸ್ಥಾನಗಳನ್ನು ಪಡೆದುಕೊಂಡಿತ್ತು.

ಆದರೆ 2008 ರ ಮಿಲಿಟರಿ ಕರಡು ಸಂವಿಧಾನದಡಿಯಲ್ಲಿ ಸೈನ್ಯವು ಒಟ್ಟು ಸ್ಥಾನಗಳಲ್ಲಿ 25% ಸ್ಥಾನಗಳಲ್ಲಿ ಹಿಡಿತ ಹೊಂದಿದೆ. ಅಲ್ಲದೆ ಹಲವಾರು ಪ್ರಮುಖ ಮಂತ್ರಿ ಸ್ಥಾನಗಳ ನೇಮಕಾತಿಯನ್ನು ಕೂಡಾ ಸೈನ್ಯಕ್ಕೆ ಮೀಸಲಿಡಲಾಗಿದೆ. ಟಾಟ್ಮಾಡಾವ್ ಎಂದು ಕರೆಯಲ್ಪಡುವ ಸೈನ್ಯವು, ಚುನಾವಣೆಯಲ್ಲಿ ಭಾರಿ ಮತದಾನದ ವಂಚನೆ ಕಂಡುಬಂದಿದೆ ಎಂದು ಆರೋಪಿಸಿದೆಯಾದರೂ, ಅದಕ್ಕೆ ಪುರಾವೆ ನೀಡಲು ವಿಫಲವಾಗಿದೆ ಎಂದು ವರದಿಯಾಗಿದೆ. ದೇಶದ ಕೇಂದ್ರ ಚುನಾವಣಾ ಆಯೋಗ ಕಳೆದ ವಾರ ಈ ಆರೋಪಗಳನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ: ಅಮಿತ್ ಶಾ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ: ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...