Homeಅಂತರಾಷ್ಟ್ರೀಯಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

ಮಯನ್ಮಾರ್‌‌ ಮೇಲೆ ಹಿಡಿತ ಸಾಧಿಸಿದ ಸೇನೆ; ಆಂಗ್ ಸಾನ್ ಸೂಕಿ ಬಂಧನ

- Advertisement -
- Advertisement -

ಮಯಾನ್ಮಾರ್‌‌ನಲ್ಲಿ ಒಂದು ವರ್ಷದವರೆಗೆ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಸೈನ್ಯವು ದೇಶದ ಮೇಲೆ ಹಿಡಿತ ಸಾಧಿಸಿದೆ ಎಂದು ಮಯನ್ಮಾರ್ ಮಿಲಿಟರಿ ಟೆಲಿವಿಷನ್ ತಿಳಿಸಿದೆ. ಮಿಲಿಟರಿ ಒಡೆತನದ ಮೈವಾಡಿ ಟಿವಿಯಲ್ಲಿ ಸೋಮವಾರ ಬೆಳಿಗ್ಗೆ ಈ ಘೋಷಣೆ ಮಾಡಲಾಗಿದೆ. ಸ್ಟೇಟ್ ಕೌನ್ಸಿಲರ್ ಆಂಗ್ ಸಾನ್ ಸೂಕಿ ಅವರನ್ನು ಗೃಹ ಬಂಧನದಲ್ಲಿಡಲಾಗಿದೆ ಎಂದು ವರದಿಗಳು ತಿಳಿಸಿವೆ.

ದೇಶದ ರಾಜಧಾನಿ ನಾಯ್ಪಿಟಾವ್‌ನ ಫೋನ್ ಮತ್ತು ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿರುವುದರಿಂದ ಆಂಗ್ ಸಾನ್ ಸೂಕಿ ಅವರನ್ನು ಸಂಪರ್ಕಿಸಲಾಗುತ್ತಿಲ್ಲ ಎಂದು ಅವರ ಪಕ್ಷವಾದ ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ ಪಾರ್ಟಿ ಹೇಳಿದೆ.

ದೇಶದ ಸೈನ್ಯವು ಆಡಳಿತ ವಹಿಸಿಕೊಂಡಿರುವುದನ್ನು ಅಮೆರಿಕಾ, ಆಸ್ಟ್ರೇಲಿಯಾ ಸೇರಿದಂತೆ ಹಲವಾರು ದೇಶಗಳು ಕಳವಳ ವ್ಯಕ್ತಪಡಿಸಿದ್ದು, ಸೈನ್ಯಕ್ಕೆ ದೇಶದ ಕಾನೂನನ್ನು ಗೌರವಿಸುವಂತೆ ಒತ್ತಾಯಿಸಿವೆ.

ಇದನ್ನೂ ಓದಿ: ಇತ್ತೀಚಿನ ಭಾರತ-ಚೈನಾ ಗಡಿ ಘರ್ಷಣೆಗಳು: ಗಡಿ ನಿರ್ಧರಿಸಲು ಭಾರತವು ಚೌಕಾಶಿ ಮಾತುಕತೆಗೆ ತಯಾರಾಗಬೇಕು

“ಬರ್ಮಾದಲ್ಲಿ ರಾಜ್ಯ ಕೌನ್ಸಿಲರ್ ಆಂಗ್ ಸಾನ್ ಸೂಕಿ ಮತ್ತು ಇತರ ಅಧಿಕಾರಿಗಳ ಬಂಧನ ಸೇರಿದಂತೆ, ದೇಶವನ್ನು ಸೈನ್ಯವು ತೆಕ್ಕೆಗೆ ಪಡಿದುಕೊಂಡಿದೆ ಎಂಬ ಸುದ್ದಿಗಳಿಂದ ಅಮೆರಿಕ ಕಳವಳಗೊಂಡಿದೆ” ಎಂದು ಶ್ವೇತಭವನದ ವಕ್ತಾರ ಜೆನ್ ಸಾಕಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವರದಿಯಾದ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷ ಜೋ ಬಿಡನ್ ಅವರಿಗೆ ವಿವರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಚುನಾವಣಾ ಫಲಿತಾಂಶವನ್ನು ಬದಲಿಸುವ ಅಥವಾ ಮ್ಯಾನ್ಮಾರ್‌ನ ಪ್ರಜಾಪ್ರಭುತ್ವಕ್ಕೆ ಅಡ್ಡಿಯುಂಟುಮಾಡುವ ಯಾವುದೇ ಪ್ರಯತ್ನವನ್ನು ಅಮೆರಿಕ ವಿರೋಧಿಸುತ್ತದೆ ಮತ್ತು ಈ ಕ್ರಮಗಳನ್ನು ಹಿಂಪಡೆಯದಿದ್ದರೆ ಘಟನೆಗೆ ಜವಾಬ್ದಾರರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್ ಅವರು ಸೂಕಿ ಅವರನ್ನು ಬಿಡುಗಡೆ ಮಾಡಲು ಕರೆ ನೀಡಿದ್ದಾರೆ. “ನವೆಂಬರ್ 2020 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳಿಗೆ ಅನುಗುಣವಾಗಿ ರಾಷ್ಟ್ರೀಯ ಅಸೆಂಬ್ಲಿಯ ಶಾಂತಿಯುತ ಪುನರ್ನಿರ್ಮಾಣವನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೇಪಾಳ ಹಾಗೂ ಪಾಕಿಸ್ತಾನಕ್ಕಿಂತ ಭಾರತದ ಕನಿಷ್ಠ ವೇತನ ಕಡಿಮೆ: ವಿಶ್ವ ಸಂಸ್ಥೆ ವರದಿ

ಮ್ಯಾಯನ್ಮಾರ್‌‌‌ನಲ್ಲಿ ಕಳೆದ ವರ್ಷ ಚುನಾವಣೆ ನಡೆದಿದ್ದು, ಈ ಚುನಾವಣೆಯ ನಂತರ ಚುನಾಯಿತ ಸಂಸದರು ಸಂಸತ್ತಿನ ಮೊದಲ ಅಧಿವೇಶನಕ್ಕಾಗಿ ರಾಜಧಾನಿ ನಾಯ್ಪಿಟಾವ್‌ನಲ್ಲಿ ಸೋಮವಾರ ಒಟ್ಟುಗೂಡಬೇಕಿತ್ತು.

75 ವರ್ಷದ ಆಂಗ್ ಸಾನ್ ಸೂಕಿ ದೇಶದ ಅತ್ಯಂತ ಪ್ರಬಲ ರಾಜಕಾರಣಿಯಾಗಿದ್ದು, ದೇಶದ ಮಿಲಿಟರಿ ಆಡಳಿತದ ವಿರುದ್ಧ ದಶಕಗಳಿಂದ ಅಹಿಂಸಾತ್ಮಕ ಹೋರಾಟವನ್ನು ಮುನ್ನಡೆಸಿದ್ದರು. ನವೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಸಂಸತ್ತಿನ ಕೆಳ ಮತ್ತು ಮೇಲ್ಮನೆಗಳಲ್ಲಿ ಸೂಕಿ ಅವರ ಪಕ್ಷವು 476 ಸ್ಥಾನಗಳಲ್ಲಿ 396 ಸ್ಥಾನಗಳನ್ನು ಪಡೆದುಕೊಂಡಿತ್ತು.

ಆದರೆ 2008 ರ ಮಿಲಿಟರಿ ಕರಡು ಸಂವಿಧಾನದಡಿಯಲ್ಲಿ ಸೈನ್ಯವು ಒಟ್ಟು ಸ್ಥಾನಗಳಲ್ಲಿ 25% ಸ್ಥಾನಗಳಲ್ಲಿ ಹಿಡಿತ ಹೊಂದಿದೆ. ಅಲ್ಲದೆ ಹಲವಾರು ಪ್ರಮುಖ ಮಂತ್ರಿ ಸ್ಥಾನಗಳ ನೇಮಕಾತಿಯನ್ನು ಕೂಡಾ ಸೈನ್ಯಕ್ಕೆ ಮೀಸಲಿಡಲಾಗಿದೆ. ಟಾಟ್ಮಾಡಾವ್ ಎಂದು ಕರೆಯಲ್ಪಡುವ ಸೈನ್ಯವು, ಚುನಾವಣೆಯಲ್ಲಿ ಭಾರಿ ಮತದಾನದ ವಂಚನೆ ಕಂಡುಬಂದಿದೆ ಎಂದು ಆರೋಪಿಸಿದೆಯಾದರೂ, ಅದಕ್ಕೆ ಪುರಾವೆ ನೀಡಲು ವಿಫಲವಾಗಿದೆ ಎಂದು ವರದಿಯಾಗಿದೆ. ದೇಶದ ಕೇಂದ್ರ ಚುನಾವಣಾ ಆಯೋಗ ಕಳೆದ ವಾರ ಈ ಆರೋಪಗಳನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ: ಅಮಿತ್ ಶಾ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಪ್ರಯತ್ನಿಸುತ್ತಿದ್ದಾರೆ: ಟಿಎಂಸಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...