Homeಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

- Advertisement -
- Advertisement -

2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.

  • ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ  ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.

  • ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ

  • ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ

  • 75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ

  • ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್

  • ಒಂದೇ ದೇಶ,ಒಂದೇ ರೇಶನ್ ಕಾ‍ರ್ಡ್ ಪರಿಕಲ್ಪನೆ ಜಾರಿಗೆ

  • 69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

  • ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.

  • ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ

  • ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್

  • 2022 ರ  ಹಣಕಾಸು ವರ್ಷದಲ್ಲಿ 2 ಪಿಎಸ್‌ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್

  • 1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ

ಇದನ್ನೂ ಓದಿ:ಮಿಯಾ ಮುಸ್ಲಿಮರು ನಮಗೆ ಮತ ಚಲಾಯಿಸಬೇಡಿ: ಅಸ್ಸಾಂ ಬಿಜೆಪಿ ಸಚಿವ

  • 1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ

  • ಮಾರ್ಚ್‌ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್‌, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್‌ನಲ್ಲಿ 1300. ಕಿ.ಮೀ.

  • 61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ

  • 17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.

  • ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ ಆಡಿಯಲ್ಲಿ ಕಾರ್ಯಚಟುವಟಿಕೆಗಳು

  • ಬಜೆಟ್‌ ಮೊದಲ ಭಾರತ ಆತ್ಮನಿರ್ಭ ರ ಭಾರತಕ್ಕೆ ಒತ್ತು,

  • ಇಲ್ಲಿಯವರೆಗೆ ಕೋವಿಡ್‌ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ

  • ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ


ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...