Homeಮುಖಪುಟರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ಕಳೆದ 3 ದಿನಗಳಿಂದ ಸಾವಿರಾರು ರೈತಾಪಿ ಮಹಿಳೆಯರು ಸಿಂಘು ರೈತ ಪ್ರತಿಭಟನೆಗೆ ಸೇರಿಕೊಂಡು ಹೊಸ ಸಂಚಲನ ಮೂಡಿಸಿದ್ದಾರೆ. ಅತ್ತ ಗಾಜಿಪುರ ಗಡಿಯಲ್ಲಿ ಯುವಕರ ದೊಡ್ಡ ದಂಡೇ ಜಮಾವಣೆಯಾಗುತ್ತಿದೆ.

- Advertisement -
- Advertisement -

ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಲ್ಲಿವರೆಗೂ ಪುರುಷರು ಮುಂಚೂಣಿಯಲ್ಲಿದ್ದರು. ಆದರೆ ತಮ್ಮ ಪ್ರೀತಿಪಾತ್ರರನ್ನು ಬಂಧಿಸಲಾಗುವುದು ಎಂಬ ಆತಂಕ, ಬೆಂಬಲವನ್ನು ತೋರಿಸುವ ದೃಢ ನಿಶ್ಚಯ ಮತ್ತು ಯುಪಿಯ ಗಾಜಿಪುರ ಗಡಿಯಿಂದ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿ-ಈ ಮೂರು ಕಾರಣಗಳಿಂದ ಕಳೆದ ಮೂರು ದಿನಗಳಲ್ಲಿ ನೂರಾರು ಮಹಿಳಾ ರೈತರು ಪ್ರತಿಭಟನೆಯನ್ನು ಸೇರಿಕೊಂಡಿದ್ದಾರೆ. ಬಹುಪಾಲು ಮಹಿಳೆಯರಿಗೆ ಇಂಥದ್ದು ಮೊದಲ ಅನುಭವ.

ರವಿವಾರ ಸಿಂಘು ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ರೈತಾಪಿ ಮಹಿಳೆಯರ ಗುಂಪೊಂದು ಪ್ರತಿಭಟನಾ ಸ್ಥಳದ ಸುತ್ತಲೂ ಮಿನಿರ‍್ಯಾಲಿಗಳನ್ನು ನಡೆಸಿತು. ಮುಖ್ಯ ವೇದಿಕೆಯ ಬಳಿ ಘೋಷಣೆಗಳನ್ನು ಕೂಗಿದರು. ಸ್ವಯಂಸೇವಕರಿಗೆ ಭದ್ರತೆಯಲ್ಲಿ ಸಹಾಯ ಮಾಡುವಾಗ ತಾವೇ ಕೈಗೆ ಲಾಠಿಗಳನ್ನು ತೆಗೆದುಕೊಂಡರು. ಊಟದ ಮನೆಯಲ್ಲಿ ಕುಳಿತು ತಮ್ಮ ಆತಂಕಗಳನ್ನು ಚರ್ಚಿಸಿದರು.

ಹಲವಾರು ಮಹಿಳಾ ಪ್ರತಿಭಟನಾಕಾರರು ಸಿಂಘು ತಲುಪಲು ತಾವು 10 ಕಿ.ಮೀ.ವರೆಗೆ ನಡೆಯಬೇಕಾಯಿತು ಎಂದು ಹೇಳಿದರು. ಚಳುವಳಿಯಲ್ಲಿ ಸೇರಲು ಹೊಲಗಳನ್ನು ಬಿಟ್ಟು ಬಂದಿದ್ದೇವೆ ಎಂದು ಕೆಲವರು ತಿಳಿಸಿದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನ ಮುಂದುವರಿಯುತ್ತದೆ ಎಂದು ಘೋಷಿಸುತ್ತ ಟಿಕಾಯತ್ ಅಳುವ ವೀಡಿಯೊವನ್ನು ನೋಡಿದ ನಂತರ ನಾನು ಮತ್ತು ನನ್ನ ಸ್ನೇಹಿತರು ಶನಿವಾರ ಸಿಂಘುಗೆ ಬಂದಿದ್ದೇವೆ ಎಂದು ಪಂಜಾಬ್‌ನ ಸಂಗ್ರೂರ್‌ನ ಕೃಷಿ ಕಾರ್ಮಿಕರಾದ ಬಬ್ಲಿ (40) ಹೇಳಿದ್ದಾರೆ.

“ಪೊಲೀಸರು ನಮ್ಮನ್ನು ಪ್ರಾಣಿಗಳಂತೆ ಪರಿಗಣಿಸಲು ಸಾಧ್ಯವಿಲ್ಲ. ನನ್ನ ಪತಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಮೆರವಣಿಗೆಯ ಭಾಗವಾಗಿದ್ದರು. ಸಿಂಘು ಗಡಿಯ ಹೊರಗೆ ಪೊಲೀಸರು ನನ್ನ ಪತಿಯನ್ನು ಥಳಿಸಿದರು. ಅವರು ದೆಹಲಿಗೆ ಹೋಗಲಾಗಲಿಲ್ಲ. ಅವರು ಧ್ವಜವನ್ನು ಹಾರಿಸಿದ ಗುಂಪಿನ ಭಾಗವಾಗಿರಲಿಲ್ಲ” ಎಂದು ಬಬ್ಲಿ ತಿಳಿಸಿದರು.

‘ಗಾಜಿಪುರದಲ್ಲಿ ಪೊಲೀಸರು ಟಿಕಾಯತ್ ಅವರಿಗೆ ಕಿರುಕುಳ ನೀಡಿದರು. ನಮಗೆ ಅವಮಾನವಾಗಿದೆ. ನಮ್ಮನ್ನು ಗುರಿಯಾಗಿಸಲಾಗಿದೆ. ನಾನು ನನ್ನ ಸ್ನೇಹಿತರೊಂದಿಗೆ ಇಲ್ಲಿಯೇ ಇರುತ್ತೇನೆ. ನನ್ನ ತಾಯಿ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ನಾವು ಪ್ರತಿಭಟನಾಕಾರರಿಗೆ ಅಡುಗೆ ಸಿದ್ಧ ಮಾಡಿ ಕೊಡುತ್ತಲೇ ಪ್ರತಿಭಟನೆಯಲ್ಲಿ ಹಾಜರಾಗುತ್ತೇವೆ ಎಂದು ಬಬ್ಲಿ ಮತ್ತು ಗೆಳತಿಯರು ತಿಳಿಸಿದರು.

ಪಟಿಯಾಲ ಮೂಲದ ರೈತ ಮಹಿಳೆ ದಲ್ಬೀರ್ ಕೌರ್ (47) ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಶನಿವಾರ ಸಂಜೆ ಸಿಂಘು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದಾರೆ. ‘ಬಿಕೆಯುನ ರೈತ ಮುಖಂಡರು ಮತ್ತು ಇತರ ಒಕ್ಕೂಟಗಳ ಮುಖಂಡರ ಭಾಷಣಗಳನ್ನು ಕೇಳಿದ ನಂತರ ಸಿಂಘುಗೆ ಬಂದೆವು. ನನ್ನ ಪತಿ ಸುಮಾರು ಎರಡು ತಿಂಗಳಿಂದ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ’ ಎನ್ನುತ್ತಾರೆ ದಲ್ಬೀರ್ ಕೌರ್.

‘ನಮ್ಮದು ಕಬ್ಬಿನ ಗದ್ದೆ ಇದೆ ಮತ್ತು ತರಕಾರಿಗಳನ್ನು ಸಹ ಬೆಳೆಯುತ್ತೇವೆ. ನಿನ್ನೆ, ನಾನು ನನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಇಲ್ಲಿಗೆ ಬಂದೆ. ಭಿತ್ತಿಪತ್ರಗಳನ್ನು ಹಿಡಿದು ವೇದಿಕೆಯ ಬಳಿ ಮೆರವಣಿಗೆ ನಡೆಸಿದೆವು. ನಾನು ನಾಳೆ ಹೊರಡಬೇಕಾಗುತ್ತದೆ, ಆದರೆ ನನ್ನನ್ನು ಲೆಕ್ಕಿಸಬೇಡಿ. ಈ ಆಂದೋಲನಕ್ಕಾಗಿ ನನ್ನ ಪ್ರಾಣ ತ್ಯಾಗ ಮಾಡಲು ನಾನು ಸಿದ್ಧ. ಪೊಲೀಸರು ಮತ್ತು ಸರ್ಕಾರವು ನಮಗೆ ಕಿರುಕುಳ ನೀಡಬಹುದು, ಆದರೆ ನಾವು ಜಯ ಸಿಗುವವರೆಗೂ ವಿಶ್ರಮಿಸುವುದಿಲ್ಲ”ಎಂದು ದಲ್ಬೀರ್ ಹೇಳಿದರು.

ದಲ್ಬೀರ್ ಕೌರ್ ಮತ್ತು 8-10 ಮಹಿಳೆಯರ ಗುಂಪು ಪೊಲೀಸ್ ದೌರ್ಜನ್ಯ ಮತ್ತು ಹೊಸ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗಿತು.

ಗಣರಾಜ್ಯೋತ್ಸವದ ಘರ್ಷಣೆಯಲ್ಲಿ ಗಾಯಗೊಂಡ ರೈತರಿಗೆ ಸಹಾಯ ಮಾಡಲು ತಾನು ಬಂದಿದ್ದೇನೆ ಎಂದು ಮತ್ತೊಬ್ಬ ರೈತ ಮಹಿಳೆ ಮಂದೀಪ್ (50) ಹೇಳಿದ್ದಾರೆ. “ನಾನು ಎರಡು ಪಾತ್ರೆಗಳು ಮತ್ತು ಒಣ ಹಣ್ಣುಗಳನ್ನು ಖರೀದಿಸಿದ್ದೇನೆ. ಕಪುರ್ಥಾಲಾದ ನನ್ನ ಅನೇಕ ರೈತ ಸಹೋದರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದಾಗ ನನಗೆ ಆಘಾತವಾಯಿತು. ನಾವಿಬ್ಬರೂ ರೈತರಿಗೆ ಸಹಾಯ ಮಾಡಲು ಬಯಸಿದ್ದರಿಂದ ನಾನು ನನ್ನ ಗಂಡನೊಂದಿಗೆ ಬಂದಿದ್ದೇನೆ. ನಾವು ಟಿಕಾಯತ್‌ಜಿ ಅವರನ್ನು ಗೌರವಿಸುತ್ತೇವೆ. ಹೊಸ ಕಾನೂನುಗಳನ್ನು ರದ್ದುಗೊಳಿಸುವವರೆಗೆ ಇಲ್ಲಿ ಪ್ರತಿಭಟಿಸುತ್ತೇವೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಬಹುದು ಮತ್ತು ನಮ್ಮನ್ನು ಭಯೋತ್ಪಾದಕರು ಎಂದು ಕರೆಯಬಹುದು. ನಾವು ಅವರೊಂದಿಗೆ ಹೋರಾಡುತ್ತೇವೆ. ನಾವು ಬಿಡುವುದಿಲ್ಲ” ಎಂದು ಅವರು ಹೇಳಿದರು.


ಇದನ್ನೂ ಓದಿ; ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...