Homeಮುಖಪುಟರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ಕಳೆದ 3 ದಿನಗಳಿಂದ ಸಾವಿರಾರು ರೈತಾಪಿ ಮಹಿಳೆಯರು ಸಿಂಘು ರೈತ ಪ್ರತಿಭಟನೆಗೆ ಸೇರಿಕೊಂಡು ಹೊಸ ಸಂಚಲನ ಮೂಡಿಸಿದ್ದಾರೆ. ಅತ್ತ ಗಾಜಿಪುರ ಗಡಿಯಲ್ಲಿ ಯುವಕರ ದೊಡ್ಡ ದಂಡೇ ಜಮಾವಣೆಯಾಗುತ್ತಿದೆ.

- Advertisement -
- Advertisement -

ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಲ್ಲಿವರೆಗೂ ಪುರುಷರು ಮುಂಚೂಣಿಯಲ್ಲಿದ್ದರು. ಆದರೆ ತಮ್ಮ ಪ್ರೀತಿಪಾತ್ರರನ್ನು ಬಂಧಿಸಲಾಗುವುದು ಎಂಬ ಆತಂಕ, ಬೆಂಬಲವನ್ನು ತೋರಿಸುವ ದೃಢ ನಿಶ್ಚಯ ಮತ್ತು ಯುಪಿಯ ಗಾಜಿಪುರ ಗಡಿಯಿಂದ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿ-ಈ ಮೂರು ಕಾರಣಗಳಿಂದ ಕಳೆದ ಮೂರು ದಿನಗಳಲ್ಲಿ ನೂರಾರು ಮಹಿಳಾ ರೈತರು ಪ್ರತಿಭಟನೆಯನ್ನು ಸೇರಿಕೊಂಡಿದ್ದಾರೆ. ಬಹುಪಾಲು ಮಹಿಳೆಯರಿಗೆ ಇಂಥದ್ದು ಮೊದಲ ಅನುಭವ.

ರವಿವಾರ ಸಿಂಘು ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ರೈತಾಪಿ ಮಹಿಳೆಯರ ಗುಂಪೊಂದು ಪ್ರತಿಭಟನಾ ಸ್ಥಳದ ಸುತ್ತಲೂ ಮಿನಿರ‍್ಯಾಲಿಗಳನ್ನು ನಡೆಸಿತು. ಮುಖ್ಯ ವೇದಿಕೆಯ ಬಳಿ ಘೋಷಣೆಗಳನ್ನು ಕೂಗಿದರು. ಸ್ವಯಂಸೇವಕರಿಗೆ ಭದ್ರತೆಯಲ್ಲಿ ಸಹಾಯ ಮಾಡುವಾಗ ತಾವೇ ಕೈಗೆ ಲಾಠಿಗಳನ್ನು ತೆಗೆದುಕೊಂಡರು. ಊಟದ ಮನೆಯಲ್ಲಿ ಕುಳಿತು ತಮ್ಮ ಆತಂಕಗಳನ್ನು ಚರ್ಚಿಸಿದರು.

ಹಲವಾರು ಮಹಿಳಾ ಪ್ರತಿಭಟನಾಕಾರರು ಸಿಂಘು ತಲುಪಲು ತಾವು 10 ಕಿ.ಮೀ.ವರೆಗೆ ನಡೆಯಬೇಕಾಯಿತು ಎಂದು ಹೇಳಿದರು. ಚಳುವಳಿಯಲ್ಲಿ ಸೇರಲು ಹೊಲಗಳನ್ನು ಬಿಟ್ಟು ಬಂದಿದ್ದೇವೆ ಎಂದು ಕೆಲವರು ತಿಳಿಸಿದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನ ಮುಂದುವರಿಯುತ್ತದೆ ಎಂದು ಘೋಷಿಸುತ್ತ ಟಿಕಾಯತ್ ಅಳುವ ವೀಡಿಯೊವನ್ನು ನೋಡಿದ ನಂತರ ನಾನು ಮತ್ತು ನನ್ನ ಸ್ನೇಹಿತರು ಶನಿವಾರ ಸಿಂಘುಗೆ ಬಂದಿದ್ದೇವೆ ಎಂದು ಪಂಜಾಬ್‌ನ ಸಂಗ್ರೂರ್‌ನ ಕೃಷಿ ಕಾರ್ಮಿಕರಾದ ಬಬ್ಲಿ (40) ಹೇಳಿದ್ದಾರೆ.

“ಪೊಲೀಸರು ನಮ್ಮನ್ನು ಪ್ರಾಣಿಗಳಂತೆ ಪರಿಗಣಿಸಲು ಸಾಧ್ಯವಿಲ್ಲ. ನನ್ನ ಪತಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಮೆರವಣಿಗೆಯ ಭಾಗವಾಗಿದ್ದರು. ಸಿಂಘು ಗಡಿಯ ಹೊರಗೆ ಪೊಲೀಸರು ನನ್ನ ಪತಿಯನ್ನು ಥಳಿಸಿದರು. ಅವರು ದೆಹಲಿಗೆ ಹೋಗಲಾಗಲಿಲ್ಲ. ಅವರು ಧ್ವಜವನ್ನು ಹಾರಿಸಿದ ಗುಂಪಿನ ಭಾಗವಾಗಿರಲಿಲ್ಲ” ಎಂದು ಬಬ್ಲಿ ತಿಳಿಸಿದರು.

‘ಗಾಜಿಪುರದಲ್ಲಿ ಪೊಲೀಸರು ಟಿಕಾಯತ್ ಅವರಿಗೆ ಕಿರುಕುಳ ನೀಡಿದರು. ನಮಗೆ ಅವಮಾನವಾಗಿದೆ. ನಮ್ಮನ್ನು ಗುರಿಯಾಗಿಸಲಾಗಿದೆ. ನಾನು ನನ್ನ ಸ್ನೇಹಿತರೊಂದಿಗೆ ಇಲ್ಲಿಯೇ ಇರುತ್ತೇನೆ. ನನ್ನ ತಾಯಿ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ನಾವು ಪ್ರತಿಭಟನಾಕಾರರಿಗೆ ಅಡುಗೆ ಸಿದ್ಧ ಮಾಡಿ ಕೊಡುತ್ತಲೇ ಪ್ರತಿಭಟನೆಯಲ್ಲಿ ಹಾಜರಾಗುತ್ತೇವೆ ಎಂದು ಬಬ್ಲಿ ಮತ್ತು ಗೆಳತಿಯರು ತಿಳಿಸಿದರು.

ಪಟಿಯಾಲ ಮೂಲದ ರೈತ ಮಹಿಳೆ ದಲ್ಬೀರ್ ಕೌರ್ (47) ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಶನಿವಾರ ಸಂಜೆ ಸಿಂಘು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದಾರೆ. ‘ಬಿಕೆಯುನ ರೈತ ಮುಖಂಡರು ಮತ್ತು ಇತರ ಒಕ್ಕೂಟಗಳ ಮುಖಂಡರ ಭಾಷಣಗಳನ್ನು ಕೇಳಿದ ನಂತರ ಸಿಂಘುಗೆ ಬಂದೆವು. ನನ್ನ ಪತಿ ಸುಮಾರು ಎರಡು ತಿಂಗಳಿಂದ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ’ ಎನ್ನುತ್ತಾರೆ ದಲ್ಬೀರ್ ಕೌರ್.

‘ನಮ್ಮದು ಕಬ್ಬಿನ ಗದ್ದೆ ಇದೆ ಮತ್ತು ತರಕಾರಿಗಳನ್ನು ಸಹ ಬೆಳೆಯುತ್ತೇವೆ. ನಿನ್ನೆ, ನಾನು ನನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಇಲ್ಲಿಗೆ ಬಂದೆ. ಭಿತ್ತಿಪತ್ರಗಳನ್ನು ಹಿಡಿದು ವೇದಿಕೆಯ ಬಳಿ ಮೆರವಣಿಗೆ ನಡೆಸಿದೆವು. ನಾನು ನಾಳೆ ಹೊರಡಬೇಕಾಗುತ್ತದೆ, ಆದರೆ ನನ್ನನ್ನು ಲೆಕ್ಕಿಸಬೇಡಿ. ಈ ಆಂದೋಲನಕ್ಕಾಗಿ ನನ್ನ ಪ್ರಾಣ ತ್ಯಾಗ ಮಾಡಲು ನಾನು ಸಿದ್ಧ. ಪೊಲೀಸರು ಮತ್ತು ಸರ್ಕಾರವು ನಮಗೆ ಕಿರುಕುಳ ನೀಡಬಹುದು, ಆದರೆ ನಾವು ಜಯ ಸಿಗುವವರೆಗೂ ವಿಶ್ರಮಿಸುವುದಿಲ್ಲ”ಎಂದು ದಲ್ಬೀರ್ ಹೇಳಿದರು.

ದಲ್ಬೀರ್ ಕೌರ್ ಮತ್ತು 8-10 ಮಹಿಳೆಯರ ಗುಂಪು ಪೊಲೀಸ್ ದೌರ್ಜನ್ಯ ಮತ್ತು ಹೊಸ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗಿತು.

ಗಣರಾಜ್ಯೋತ್ಸವದ ಘರ್ಷಣೆಯಲ್ಲಿ ಗಾಯಗೊಂಡ ರೈತರಿಗೆ ಸಹಾಯ ಮಾಡಲು ತಾನು ಬಂದಿದ್ದೇನೆ ಎಂದು ಮತ್ತೊಬ್ಬ ರೈತ ಮಹಿಳೆ ಮಂದೀಪ್ (50) ಹೇಳಿದ್ದಾರೆ. “ನಾನು ಎರಡು ಪಾತ್ರೆಗಳು ಮತ್ತು ಒಣ ಹಣ್ಣುಗಳನ್ನು ಖರೀದಿಸಿದ್ದೇನೆ. ಕಪುರ್ಥಾಲಾದ ನನ್ನ ಅನೇಕ ರೈತ ಸಹೋದರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದಾಗ ನನಗೆ ಆಘಾತವಾಯಿತು. ನಾವಿಬ್ಬರೂ ರೈತರಿಗೆ ಸಹಾಯ ಮಾಡಲು ಬಯಸಿದ್ದರಿಂದ ನಾನು ನನ್ನ ಗಂಡನೊಂದಿಗೆ ಬಂದಿದ್ದೇನೆ. ನಾವು ಟಿಕಾಯತ್‌ಜಿ ಅವರನ್ನು ಗೌರವಿಸುತ್ತೇವೆ. ಹೊಸ ಕಾನೂನುಗಳನ್ನು ರದ್ದುಗೊಳಿಸುವವರೆಗೆ ಇಲ್ಲಿ ಪ್ರತಿಭಟಿಸುತ್ತೇವೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಬಹುದು ಮತ್ತು ನಮ್ಮನ್ನು ಭಯೋತ್ಪಾದಕರು ಎಂದು ಕರೆಯಬಹುದು. ನಾವು ಅವರೊಂದಿಗೆ ಹೋರಾಡುತ್ತೇವೆ. ನಾವು ಬಿಡುವುದಿಲ್ಲ” ಎಂದು ಅವರು ಹೇಳಿದರು.


ಇದನ್ನೂ ಓದಿ; ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...