Homeಮುಖಪುಟರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ಕಳೆದ 3 ದಿನಗಳಿಂದ ಸಾವಿರಾರು ರೈತಾಪಿ ಮಹಿಳೆಯರು ಸಿಂಘು ರೈತ ಪ್ರತಿಭಟನೆಗೆ ಸೇರಿಕೊಂಡು ಹೊಸ ಸಂಚಲನ ಮೂಡಿಸಿದ್ದಾರೆ. ಅತ್ತ ಗಾಜಿಪುರ ಗಡಿಯಲ್ಲಿ ಯುವಕರ ದೊಡ್ಡ ದಂಡೇ ಜಮಾವಣೆಯಾಗುತ್ತಿದೆ.

- Advertisement -
- Advertisement -

ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಲ್ಲಿವರೆಗೂ ಪುರುಷರು ಮುಂಚೂಣಿಯಲ್ಲಿದ್ದರು. ಆದರೆ ತಮ್ಮ ಪ್ರೀತಿಪಾತ್ರರನ್ನು ಬಂಧಿಸಲಾಗುವುದು ಎಂಬ ಆತಂಕ, ಬೆಂಬಲವನ್ನು ತೋರಿಸುವ ದೃಢ ನಿಶ್ಚಯ ಮತ್ತು ಯುಪಿಯ ಗಾಜಿಪುರ ಗಡಿಯಿಂದ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿ-ಈ ಮೂರು ಕಾರಣಗಳಿಂದ ಕಳೆದ ಮೂರು ದಿನಗಳಲ್ಲಿ ನೂರಾರು ಮಹಿಳಾ ರೈತರು ಪ್ರತಿಭಟನೆಯನ್ನು ಸೇರಿಕೊಂಡಿದ್ದಾರೆ. ಬಹುಪಾಲು ಮಹಿಳೆಯರಿಗೆ ಇಂಥದ್ದು ಮೊದಲ ಅನುಭವ.

ರವಿವಾರ ಸಿಂಘು ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ರೈತಾಪಿ ಮಹಿಳೆಯರ ಗುಂಪೊಂದು ಪ್ರತಿಭಟನಾ ಸ್ಥಳದ ಸುತ್ತಲೂ ಮಿನಿರ‍್ಯಾಲಿಗಳನ್ನು ನಡೆಸಿತು. ಮುಖ್ಯ ವೇದಿಕೆಯ ಬಳಿ ಘೋಷಣೆಗಳನ್ನು ಕೂಗಿದರು. ಸ್ವಯಂಸೇವಕರಿಗೆ ಭದ್ರತೆಯಲ್ಲಿ ಸಹಾಯ ಮಾಡುವಾಗ ತಾವೇ ಕೈಗೆ ಲಾಠಿಗಳನ್ನು ತೆಗೆದುಕೊಂಡರು. ಊಟದ ಮನೆಯಲ್ಲಿ ಕುಳಿತು ತಮ್ಮ ಆತಂಕಗಳನ್ನು ಚರ್ಚಿಸಿದರು.

ಹಲವಾರು ಮಹಿಳಾ ಪ್ರತಿಭಟನಾಕಾರರು ಸಿಂಘು ತಲುಪಲು ತಾವು 10 ಕಿ.ಮೀ.ವರೆಗೆ ನಡೆಯಬೇಕಾಯಿತು ಎಂದು ಹೇಳಿದರು. ಚಳುವಳಿಯಲ್ಲಿ ಸೇರಲು ಹೊಲಗಳನ್ನು ಬಿಟ್ಟು ಬಂದಿದ್ದೇವೆ ಎಂದು ಕೆಲವರು ತಿಳಿಸಿದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನ ಮುಂದುವರಿಯುತ್ತದೆ ಎಂದು ಘೋಷಿಸುತ್ತ ಟಿಕಾಯತ್ ಅಳುವ ವೀಡಿಯೊವನ್ನು ನೋಡಿದ ನಂತರ ನಾನು ಮತ್ತು ನನ್ನ ಸ್ನೇಹಿತರು ಶನಿವಾರ ಸಿಂಘುಗೆ ಬಂದಿದ್ದೇವೆ ಎಂದು ಪಂಜಾಬ್‌ನ ಸಂಗ್ರೂರ್‌ನ ಕೃಷಿ ಕಾರ್ಮಿಕರಾದ ಬಬ್ಲಿ (40) ಹೇಳಿದ್ದಾರೆ.

“ಪೊಲೀಸರು ನಮ್ಮನ್ನು ಪ್ರಾಣಿಗಳಂತೆ ಪರಿಗಣಿಸಲು ಸಾಧ್ಯವಿಲ್ಲ. ನನ್ನ ಪತಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಮೆರವಣಿಗೆಯ ಭಾಗವಾಗಿದ್ದರು. ಸಿಂಘು ಗಡಿಯ ಹೊರಗೆ ಪೊಲೀಸರು ನನ್ನ ಪತಿಯನ್ನು ಥಳಿಸಿದರು. ಅವರು ದೆಹಲಿಗೆ ಹೋಗಲಾಗಲಿಲ್ಲ. ಅವರು ಧ್ವಜವನ್ನು ಹಾರಿಸಿದ ಗುಂಪಿನ ಭಾಗವಾಗಿರಲಿಲ್ಲ” ಎಂದು ಬಬ್ಲಿ ತಿಳಿಸಿದರು.

‘ಗಾಜಿಪುರದಲ್ಲಿ ಪೊಲೀಸರು ಟಿಕಾಯತ್ ಅವರಿಗೆ ಕಿರುಕುಳ ನೀಡಿದರು. ನಮಗೆ ಅವಮಾನವಾಗಿದೆ. ನಮ್ಮನ್ನು ಗುರಿಯಾಗಿಸಲಾಗಿದೆ. ನಾನು ನನ್ನ ಸ್ನೇಹಿತರೊಂದಿಗೆ ಇಲ್ಲಿಯೇ ಇರುತ್ತೇನೆ. ನನ್ನ ತಾಯಿ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ನಾವು ಪ್ರತಿಭಟನಾಕಾರರಿಗೆ ಅಡುಗೆ ಸಿದ್ಧ ಮಾಡಿ ಕೊಡುತ್ತಲೇ ಪ್ರತಿಭಟನೆಯಲ್ಲಿ ಹಾಜರಾಗುತ್ತೇವೆ ಎಂದು ಬಬ್ಲಿ ಮತ್ತು ಗೆಳತಿಯರು ತಿಳಿಸಿದರು.

ಪಟಿಯಾಲ ಮೂಲದ ರೈತ ಮಹಿಳೆ ದಲ್ಬೀರ್ ಕೌರ್ (47) ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಶನಿವಾರ ಸಂಜೆ ಸಿಂಘು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದಾರೆ. ‘ಬಿಕೆಯುನ ರೈತ ಮುಖಂಡರು ಮತ್ತು ಇತರ ಒಕ್ಕೂಟಗಳ ಮುಖಂಡರ ಭಾಷಣಗಳನ್ನು ಕೇಳಿದ ನಂತರ ಸಿಂಘುಗೆ ಬಂದೆವು. ನನ್ನ ಪತಿ ಸುಮಾರು ಎರಡು ತಿಂಗಳಿಂದ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ’ ಎನ್ನುತ್ತಾರೆ ದಲ್ಬೀರ್ ಕೌರ್.

‘ನಮ್ಮದು ಕಬ್ಬಿನ ಗದ್ದೆ ಇದೆ ಮತ್ತು ತರಕಾರಿಗಳನ್ನು ಸಹ ಬೆಳೆಯುತ್ತೇವೆ. ನಿನ್ನೆ, ನಾನು ನನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಇಲ್ಲಿಗೆ ಬಂದೆ. ಭಿತ್ತಿಪತ್ರಗಳನ್ನು ಹಿಡಿದು ವೇದಿಕೆಯ ಬಳಿ ಮೆರವಣಿಗೆ ನಡೆಸಿದೆವು. ನಾನು ನಾಳೆ ಹೊರಡಬೇಕಾಗುತ್ತದೆ, ಆದರೆ ನನ್ನನ್ನು ಲೆಕ್ಕಿಸಬೇಡಿ. ಈ ಆಂದೋಲನಕ್ಕಾಗಿ ನನ್ನ ಪ್ರಾಣ ತ್ಯಾಗ ಮಾಡಲು ನಾನು ಸಿದ್ಧ. ಪೊಲೀಸರು ಮತ್ತು ಸರ್ಕಾರವು ನಮಗೆ ಕಿರುಕುಳ ನೀಡಬಹುದು, ಆದರೆ ನಾವು ಜಯ ಸಿಗುವವರೆಗೂ ವಿಶ್ರಮಿಸುವುದಿಲ್ಲ”ಎಂದು ದಲ್ಬೀರ್ ಹೇಳಿದರು.

ದಲ್ಬೀರ್ ಕೌರ್ ಮತ್ತು 8-10 ಮಹಿಳೆಯರ ಗುಂಪು ಪೊಲೀಸ್ ದೌರ್ಜನ್ಯ ಮತ್ತು ಹೊಸ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗಿತು.

ಗಣರಾಜ್ಯೋತ್ಸವದ ಘರ್ಷಣೆಯಲ್ಲಿ ಗಾಯಗೊಂಡ ರೈತರಿಗೆ ಸಹಾಯ ಮಾಡಲು ತಾನು ಬಂದಿದ್ದೇನೆ ಎಂದು ಮತ್ತೊಬ್ಬ ರೈತ ಮಹಿಳೆ ಮಂದೀಪ್ (50) ಹೇಳಿದ್ದಾರೆ. “ನಾನು ಎರಡು ಪಾತ್ರೆಗಳು ಮತ್ತು ಒಣ ಹಣ್ಣುಗಳನ್ನು ಖರೀದಿಸಿದ್ದೇನೆ. ಕಪುರ್ಥಾಲಾದ ನನ್ನ ಅನೇಕ ರೈತ ಸಹೋದರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದಾಗ ನನಗೆ ಆಘಾತವಾಯಿತು. ನಾವಿಬ್ಬರೂ ರೈತರಿಗೆ ಸಹಾಯ ಮಾಡಲು ಬಯಸಿದ್ದರಿಂದ ನಾನು ನನ್ನ ಗಂಡನೊಂದಿಗೆ ಬಂದಿದ್ದೇನೆ. ನಾವು ಟಿಕಾಯತ್‌ಜಿ ಅವರನ್ನು ಗೌರವಿಸುತ್ತೇವೆ. ಹೊಸ ಕಾನೂನುಗಳನ್ನು ರದ್ದುಗೊಳಿಸುವವರೆಗೆ ಇಲ್ಲಿ ಪ್ರತಿಭಟಿಸುತ್ತೇವೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಬಹುದು ಮತ್ತು ನಮ್ಮನ್ನು ಭಯೋತ್ಪಾದಕರು ಎಂದು ಕರೆಯಬಹುದು. ನಾವು ಅವರೊಂದಿಗೆ ಹೋರಾಡುತ್ತೇವೆ. ನಾವು ಬಿಡುವುದಿಲ್ಲ” ಎಂದು ಅವರು ಹೇಳಿದರು.


ಇದನ್ನೂ ಓದಿ; ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...