Homeಮುಖಪುಟರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ಕಳೆದ 3 ದಿನಗಳಿಂದ ಸಾವಿರಾರು ರೈತಾಪಿ ಮಹಿಳೆಯರು ಸಿಂಘು ರೈತ ಪ್ರತಿಭಟನೆಗೆ ಸೇರಿಕೊಂಡು ಹೊಸ ಸಂಚಲನ ಮೂಡಿಸಿದ್ದಾರೆ. ಅತ್ತ ಗಾಜಿಪುರ ಗಡಿಯಲ್ಲಿ ಯುವಕರ ದೊಡ್ಡ ದಂಡೇ ಜಮಾವಣೆಯಾಗುತ್ತಿದೆ.

- Advertisement -
- Advertisement -

ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಲ್ಲಿವರೆಗೂ ಪುರುಷರು ಮುಂಚೂಣಿಯಲ್ಲಿದ್ದರು. ಆದರೆ ತಮ್ಮ ಪ್ರೀತಿಪಾತ್ರರನ್ನು ಬಂಧಿಸಲಾಗುವುದು ಎಂಬ ಆತಂಕ, ಬೆಂಬಲವನ್ನು ತೋರಿಸುವ ದೃಢ ನಿಶ್ಚಯ ಮತ್ತು ಯುಪಿಯ ಗಾಜಿಪುರ ಗಡಿಯಿಂದ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿ-ಈ ಮೂರು ಕಾರಣಗಳಿಂದ ಕಳೆದ ಮೂರು ದಿನಗಳಲ್ಲಿ ನೂರಾರು ಮಹಿಳಾ ರೈತರು ಪ್ರತಿಭಟನೆಯನ್ನು ಸೇರಿಕೊಂಡಿದ್ದಾರೆ. ಬಹುಪಾಲು ಮಹಿಳೆಯರಿಗೆ ಇಂಥದ್ದು ಮೊದಲ ಅನುಭವ.

ರವಿವಾರ ಸಿಂಘು ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ರೈತಾಪಿ ಮಹಿಳೆಯರ ಗುಂಪೊಂದು ಪ್ರತಿಭಟನಾ ಸ್ಥಳದ ಸುತ್ತಲೂ ಮಿನಿರ‍್ಯಾಲಿಗಳನ್ನು ನಡೆಸಿತು. ಮುಖ್ಯ ವೇದಿಕೆಯ ಬಳಿ ಘೋಷಣೆಗಳನ್ನು ಕೂಗಿದರು. ಸ್ವಯಂಸೇವಕರಿಗೆ ಭದ್ರತೆಯಲ್ಲಿ ಸಹಾಯ ಮಾಡುವಾಗ ತಾವೇ ಕೈಗೆ ಲಾಠಿಗಳನ್ನು ತೆಗೆದುಕೊಂಡರು. ಊಟದ ಮನೆಯಲ್ಲಿ ಕುಳಿತು ತಮ್ಮ ಆತಂಕಗಳನ್ನು ಚರ್ಚಿಸಿದರು.

ಹಲವಾರು ಮಹಿಳಾ ಪ್ರತಿಭಟನಾಕಾರರು ಸಿಂಘು ತಲುಪಲು ತಾವು 10 ಕಿ.ಮೀ.ವರೆಗೆ ನಡೆಯಬೇಕಾಯಿತು ಎಂದು ಹೇಳಿದರು. ಚಳುವಳಿಯಲ್ಲಿ ಸೇರಲು ಹೊಲಗಳನ್ನು ಬಿಟ್ಟು ಬಂದಿದ್ದೇವೆ ಎಂದು ಕೆಲವರು ತಿಳಿಸಿದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನ ಮುಂದುವರಿಯುತ್ತದೆ ಎಂದು ಘೋಷಿಸುತ್ತ ಟಿಕಾಯತ್ ಅಳುವ ವೀಡಿಯೊವನ್ನು ನೋಡಿದ ನಂತರ ನಾನು ಮತ್ತು ನನ್ನ ಸ್ನೇಹಿತರು ಶನಿವಾರ ಸಿಂಘುಗೆ ಬಂದಿದ್ದೇವೆ ಎಂದು ಪಂಜಾಬ್‌ನ ಸಂಗ್ರೂರ್‌ನ ಕೃಷಿ ಕಾರ್ಮಿಕರಾದ ಬಬ್ಲಿ (40) ಹೇಳಿದ್ದಾರೆ.

“ಪೊಲೀಸರು ನಮ್ಮನ್ನು ಪ್ರಾಣಿಗಳಂತೆ ಪರಿಗಣಿಸಲು ಸಾಧ್ಯವಿಲ್ಲ. ನನ್ನ ಪತಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಮೆರವಣಿಗೆಯ ಭಾಗವಾಗಿದ್ದರು. ಸಿಂಘು ಗಡಿಯ ಹೊರಗೆ ಪೊಲೀಸರು ನನ್ನ ಪತಿಯನ್ನು ಥಳಿಸಿದರು. ಅವರು ದೆಹಲಿಗೆ ಹೋಗಲಾಗಲಿಲ್ಲ. ಅವರು ಧ್ವಜವನ್ನು ಹಾರಿಸಿದ ಗುಂಪಿನ ಭಾಗವಾಗಿರಲಿಲ್ಲ” ಎಂದು ಬಬ್ಲಿ ತಿಳಿಸಿದರು.

‘ಗಾಜಿಪುರದಲ್ಲಿ ಪೊಲೀಸರು ಟಿಕಾಯತ್ ಅವರಿಗೆ ಕಿರುಕುಳ ನೀಡಿದರು. ನಮಗೆ ಅವಮಾನವಾಗಿದೆ. ನಮ್ಮನ್ನು ಗುರಿಯಾಗಿಸಲಾಗಿದೆ. ನಾನು ನನ್ನ ಸ್ನೇಹಿತರೊಂದಿಗೆ ಇಲ್ಲಿಯೇ ಇರುತ್ತೇನೆ. ನನ್ನ ತಾಯಿ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ನಾವು ಪ್ರತಿಭಟನಾಕಾರರಿಗೆ ಅಡುಗೆ ಸಿದ್ಧ ಮಾಡಿ ಕೊಡುತ್ತಲೇ ಪ್ರತಿಭಟನೆಯಲ್ಲಿ ಹಾಜರಾಗುತ್ತೇವೆ ಎಂದು ಬಬ್ಲಿ ಮತ್ತು ಗೆಳತಿಯರು ತಿಳಿಸಿದರು.

ಪಟಿಯಾಲ ಮೂಲದ ರೈತ ಮಹಿಳೆ ದಲ್ಬೀರ್ ಕೌರ್ (47) ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಶನಿವಾರ ಸಂಜೆ ಸಿಂಘು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದಾರೆ. ‘ಬಿಕೆಯುನ ರೈತ ಮುಖಂಡರು ಮತ್ತು ಇತರ ಒಕ್ಕೂಟಗಳ ಮುಖಂಡರ ಭಾಷಣಗಳನ್ನು ಕೇಳಿದ ನಂತರ ಸಿಂಘುಗೆ ಬಂದೆವು. ನನ್ನ ಪತಿ ಸುಮಾರು ಎರಡು ತಿಂಗಳಿಂದ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ’ ಎನ್ನುತ್ತಾರೆ ದಲ್ಬೀರ್ ಕೌರ್.

‘ನಮ್ಮದು ಕಬ್ಬಿನ ಗದ್ದೆ ಇದೆ ಮತ್ತು ತರಕಾರಿಗಳನ್ನು ಸಹ ಬೆಳೆಯುತ್ತೇವೆ. ನಿನ್ನೆ, ನಾನು ನನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಇಲ್ಲಿಗೆ ಬಂದೆ. ಭಿತ್ತಿಪತ್ರಗಳನ್ನು ಹಿಡಿದು ವೇದಿಕೆಯ ಬಳಿ ಮೆರವಣಿಗೆ ನಡೆಸಿದೆವು. ನಾನು ನಾಳೆ ಹೊರಡಬೇಕಾಗುತ್ತದೆ, ಆದರೆ ನನ್ನನ್ನು ಲೆಕ್ಕಿಸಬೇಡಿ. ಈ ಆಂದೋಲನಕ್ಕಾಗಿ ನನ್ನ ಪ್ರಾಣ ತ್ಯಾಗ ಮಾಡಲು ನಾನು ಸಿದ್ಧ. ಪೊಲೀಸರು ಮತ್ತು ಸರ್ಕಾರವು ನಮಗೆ ಕಿರುಕುಳ ನೀಡಬಹುದು, ಆದರೆ ನಾವು ಜಯ ಸಿಗುವವರೆಗೂ ವಿಶ್ರಮಿಸುವುದಿಲ್ಲ”ಎಂದು ದಲ್ಬೀರ್ ಹೇಳಿದರು.

ದಲ್ಬೀರ್ ಕೌರ್ ಮತ್ತು 8-10 ಮಹಿಳೆಯರ ಗುಂಪು ಪೊಲೀಸ್ ದೌರ್ಜನ್ಯ ಮತ್ತು ಹೊಸ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗಿತು.

ಗಣರಾಜ್ಯೋತ್ಸವದ ಘರ್ಷಣೆಯಲ್ಲಿ ಗಾಯಗೊಂಡ ರೈತರಿಗೆ ಸಹಾಯ ಮಾಡಲು ತಾನು ಬಂದಿದ್ದೇನೆ ಎಂದು ಮತ್ತೊಬ್ಬ ರೈತ ಮಹಿಳೆ ಮಂದೀಪ್ (50) ಹೇಳಿದ್ದಾರೆ. “ನಾನು ಎರಡು ಪಾತ್ರೆಗಳು ಮತ್ತು ಒಣ ಹಣ್ಣುಗಳನ್ನು ಖರೀದಿಸಿದ್ದೇನೆ. ಕಪುರ್ಥಾಲಾದ ನನ್ನ ಅನೇಕ ರೈತ ಸಹೋದರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದಾಗ ನನಗೆ ಆಘಾತವಾಯಿತು. ನಾವಿಬ್ಬರೂ ರೈತರಿಗೆ ಸಹಾಯ ಮಾಡಲು ಬಯಸಿದ್ದರಿಂದ ನಾನು ನನ್ನ ಗಂಡನೊಂದಿಗೆ ಬಂದಿದ್ದೇನೆ. ನಾವು ಟಿಕಾಯತ್‌ಜಿ ಅವರನ್ನು ಗೌರವಿಸುತ್ತೇವೆ. ಹೊಸ ಕಾನೂನುಗಳನ್ನು ರದ್ದುಗೊಳಿಸುವವರೆಗೆ ಇಲ್ಲಿ ಪ್ರತಿಭಟಿಸುತ್ತೇವೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಬಹುದು ಮತ್ತು ನಮ್ಮನ್ನು ಭಯೋತ್ಪಾದಕರು ಎಂದು ಕರೆಯಬಹುದು. ನಾವು ಅವರೊಂದಿಗೆ ಹೋರಾಡುತ್ತೇವೆ. ನಾವು ಬಿಡುವುದಿಲ್ಲ” ಎಂದು ಅವರು ಹೇಳಿದರು.


ಇದನ್ನೂ ಓದಿ; ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...