Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಶನಿವಾರ ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಟ್ವೀಟ್ ಒಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ 18 ಸೆಕೆಂಡುಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಸರ್ ಅವರು ಕೃಷಿ ಕಾಯ್ದೆಯ ಅನುಕೂಲಗಳನ್ನು ತಿಳಿಸಿದ್ದಾರೆ ನೋಡಿ’ ಎಂದು ಶೀರ್ಷಿಕೆ ನೀಡಿದ್ದಾರೆ.

ಆ ವಿಡಿಯೋದಲ್ಲಿ ಕೇಜ್ರಿವಾಲ್, ‘ನಿಮ್ಮ ಭೂಮಿ, ಎಂಎಸ್ಪಿ ಮತ್ತು ಮಂಡಿಗಳಿಗೆ ಯಾವುದೇ ಧಕ್ಕೆ ಇಲ್ಲ. ರೈತರು ಈಗ ತಮ್ಮ ಬೆಳೆಗಳನ್ನು ದೇಶದ ಎಲ್ಲಿಯಾದರೂ ಮಾರಬಹುದು. ಇದರಿಂದ ರೈತ ಒಳ್ಳೆಯ ದರ ಪಡೆಯುತ್ತಾನೆ, ಮಂಡಿಯ ಹೊರಗೆ ಎಲ್ಲಿಯದರೂ ಮಾರಬಹುದು. ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ.

ಪಾತ್ರಾ ಟ್ವೀಟ್‌ಗೆ ಸಾವಿರಾರು ಲೈಕ್‌ಗಳು, ರಿಟ್ವೀಟ್‌ಗಳು ದೊರೆತಿವೆ. ಬಿಜೆಪಿ ಕಾರ್ಯಕರ್ತ ವಿಕಾಸ್ ಪ್ರೀತಂ ಸಿನ್ಹಾ ಇದೇ ವಿಡಿಯೋ ಟ್ವೀಟ್ ಮಾಡಿ, ‘ಸುಳ್ಳು, ಮೋಸ, ವಂಚನೆಗಳಿಗೆ ಮುಖ ಅಂತಾ ಇದ್ದರೆ ಅದು ಇದೆ’ ಎಂದು ಬರೆದಿದ್ದಾನೆ. ಇದನ್ನು ಡಿಡಿ ನ್ಯೂಸ್‌ನ ಅಶೋಕ್ ಶ್ರೀವಾತ್ಸವ್ ರಿಟ್ವೀಟ್ ಮಾಡಿದ್ದಾರೆ. ಇನ್ನು ಕೆಲ ಬಿಜೆಪಿಗರು ಕೇಜ್ರಿವಾಲ್ ಸತ್ಯ ಹೇಳಿದ್ದಾರೆ ಎಂದು, ಮತ್ತೆ ಕೆಲವರು ಕೇಜ್ರಿವಾಲ್ ವಂಚಕ ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್: ಅದು ತಿರುಚಿದ ವಿಡಿಯೋ

ಸಂಬೀತ್ ಪಾತ್ರಾ ಕೇಜ್ರಿವಾಲ್‌ರವರ ತಿರುಚಿದ ವಿಡಿಯೋ ಟ್ವೀಟ್ ಮಾಡಿದ್ದಾರೆ. ಮೂಲ ಕ್ಲಿಪ್‌ನಲ್ಲಿ ಕೇಜ್ರಿವಾಲ್ ಕೃಷಿ ಕಾಯ್ದೆ ವಿರುದ್ಧ ಮಾತನಾಡಿದ್ದಾರೆ, ಇದನ್ನು ಅನೇಕ ಸಾಮಾಜಿಕ ಜಾಲತಾಣಿಗರು ಗುರುತಿಸಿದ್ದಾರೆ.

ಜನವರಿ 15ರಂದು ಝೀ ಹರಿಯಾಣ ಹಿಮಾಚಲಪ್ರದೇಶ ಈ ವಿಡಿಯೋವನ್ನು ಸಂಪೂರ್ಣ ಅಪ್‌ಲೋಡ್ ಮಾಡಿತ್ತು. ಅದರ ಸಂಪಾದಕ ದಿಲೀಪ್ ತಿವಾರಿ ಮತ್ತು ಜಗದೀಪ್ ಸಂಧು ಕೇಂಜ್ರಿವಾಲ್‌ರನ್ನು ಸಂದರ್ಶಿಸಿದ ವಿಡಿಯೋ ಅದು.

ಸಂದರ್ಶನದಲ್ಲಿ ಸಂಧು ಪ್ರಶ್ನೆ: (ವಿಡಿಯೊದಲ್ಲಿ 5,55 ಸೆಕೆಂಡ್‌ನಲ್ಲಿ) ಕೇಂದ್ರ ಈ ಕಾಯ್ದೆಯಿಂದ ರೈತರ ಆದಾಯ ದ್ವಿಗುಣ ಆಗುತ್ತದೆ ಎಂದು ಹೇಳುತ್ತಿದೆಯಲ್ಲ?

ಇದಕ್ಕೆ ಉತ್ತರಿಸುವಾಗ ಅರವಿಂದ್ ಕೇಜ್ರಿವಾಲ್, ಬಿಜೆಪಿ ನಾಯಕರು ಹೇಳುತ್ತಾರೆ: ಮಸೂದೆ ನಿಮ್ಮ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು. ಇದೇನೂ ಅನುಕೂಲವಲ್ಲ, ಭೂಮಿ ಅವರದೇ ಎನ್ನುತ್ತಾರೆ. ಎಂಎಸ್‌ಪಿ ತೆಗೆದುಹಾಕುವುದಿಲ್ಲ ಎನ್ನುತ್ತಾರೆ. ಇಲ್ಲಿ ಬೋಲ್ಡ್ ಮಾಡಿ ಇಟಾಲಿಯನ್‌ನಲ್ಲಿರುವ ವಾಕ್ಯಗಳನ್ನು ಮಾತ್ರ ತಿರುಚಿದ ವಿಡಿಯೋದಲ್ಲಿ ಬಳಸಲಾಗಿದೆ.

ಹೀಗೆ ‘ಕೇಜ್ರಿವಾಲ್ ಬಿಜೆಪಿ ನಾಯಕರು ಹೀಗೆ ಹೇಳುತ್ತಾರೆ’ ಎಂದಿದ್ದನ್ನು ಮಾತ್ರ ಎತ್ತಿಕೊಳ್ಳಲಾಗಿದೆ. ಆದರೆ ಬಿಜೆಪಿ ನಾಯಕರು ಹೇಳಿದ್ದೆಲ್ಲ ಸತ್ಯವಲ್ಲ ಎಂದು ಕೇಜ್ರಿವಾಲ್ ಹೇಳುವ ಮುಂದಿನ ಸಾಲುಗಳನ್ನು ಕೈ ಬಿಡಲಾಗಿದೆ.

ಕೊನೆಯಲ್ಲಿ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ, ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ. ಈ ಮಾತಿನ ಮೊದಲಿಗೆ ಹೇಳುವ ‘ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ’ ಎಂಬುದನ್ನು ತೆಗೆದು ಹಾಕಲಾಗಿದೆ.

ಹೀಗೆ ಒಂದು ಸುದೀರ್ಘ ವಿಡಿಯೋವನ್ನು ಎಡಿಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರು ಎಂದು ಬಿಜೆಪಿಯ ಸಂಬಿತ್ ಪಾತ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ಭಾನುವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಂಬೀತ್ ಪಾತ್ರಾ ಮತ್ತು ಬಿಜೆಪಿಯವರ ತಿರುಚಿದ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ರೈತ ಹೋರಾಟ ನೋಡಿ ಬಿಜೆಪಿ ಹತಾಶಗೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಐಟಿ ಸೆಲ್ ರೆಡಿ ಮಾಡಿಕೊಟ್ಟಿರಬಹುದಾದ ಈ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪಾತ್ರಾ ಮತ್ತೊಮ್ಮೆ ನಗೆಪಾಟಿಲಿಗೀಡಾಗಿದ್ದಾರೆ. ಇದೇನೂ ಅವರಿಗೆ ಹೊಸದಲ್ಲ ಬಿಡಿ. ಅದಕ್ಕಾಗಿಯೇ ಅವರಿನ್ನೂ ಆ ಟ್ವೀಟ್ ಅನ್ನು ಡಿಲೀಟ್ ಮಾಡಿಲ್ಲ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ; ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...