Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಶನಿವಾರ ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಟ್ವೀಟ್ ಒಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ 18 ಸೆಕೆಂಡುಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಸರ್ ಅವರು ಕೃಷಿ ಕಾಯ್ದೆಯ ಅನುಕೂಲಗಳನ್ನು ತಿಳಿಸಿದ್ದಾರೆ ನೋಡಿ’ ಎಂದು ಶೀರ್ಷಿಕೆ ನೀಡಿದ್ದಾರೆ.

ಆ ವಿಡಿಯೋದಲ್ಲಿ ಕೇಜ್ರಿವಾಲ್, ‘ನಿಮ್ಮ ಭೂಮಿ, ಎಂಎಸ್ಪಿ ಮತ್ತು ಮಂಡಿಗಳಿಗೆ ಯಾವುದೇ ಧಕ್ಕೆ ಇಲ್ಲ. ರೈತರು ಈಗ ತಮ್ಮ ಬೆಳೆಗಳನ್ನು ದೇಶದ ಎಲ್ಲಿಯಾದರೂ ಮಾರಬಹುದು. ಇದರಿಂದ ರೈತ ಒಳ್ಳೆಯ ದರ ಪಡೆಯುತ್ತಾನೆ, ಮಂಡಿಯ ಹೊರಗೆ ಎಲ್ಲಿಯದರೂ ಮಾರಬಹುದು. ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ.

ಪಾತ್ರಾ ಟ್ವೀಟ್‌ಗೆ ಸಾವಿರಾರು ಲೈಕ್‌ಗಳು, ರಿಟ್ವೀಟ್‌ಗಳು ದೊರೆತಿವೆ. ಬಿಜೆಪಿ ಕಾರ್ಯಕರ್ತ ವಿಕಾಸ್ ಪ್ರೀತಂ ಸಿನ್ಹಾ ಇದೇ ವಿಡಿಯೋ ಟ್ವೀಟ್ ಮಾಡಿ, ‘ಸುಳ್ಳು, ಮೋಸ, ವಂಚನೆಗಳಿಗೆ ಮುಖ ಅಂತಾ ಇದ್ದರೆ ಅದು ಇದೆ’ ಎಂದು ಬರೆದಿದ್ದಾನೆ. ಇದನ್ನು ಡಿಡಿ ನ್ಯೂಸ್‌ನ ಅಶೋಕ್ ಶ್ರೀವಾತ್ಸವ್ ರಿಟ್ವೀಟ್ ಮಾಡಿದ್ದಾರೆ. ಇನ್ನು ಕೆಲ ಬಿಜೆಪಿಗರು ಕೇಜ್ರಿವಾಲ್ ಸತ್ಯ ಹೇಳಿದ್ದಾರೆ ಎಂದು, ಮತ್ತೆ ಕೆಲವರು ಕೇಜ್ರಿವಾಲ್ ವಂಚಕ ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್: ಅದು ತಿರುಚಿದ ವಿಡಿಯೋ

ಸಂಬೀತ್ ಪಾತ್ರಾ ಕೇಜ್ರಿವಾಲ್‌ರವರ ತಿರುಚಿದ ವಿಡಿಯೋ ಟ್ವೀಟ್ ಮಾಡಿದ್ದಾರೆ. ಮೂಲ ಕ್ಲಿಪ್‌ನಲ್ಲಿ ಕೇಜ್ರಿವಾಲ್ ಕೃಷಿ ಕಾಯ್ದೆ ವಿರುದ್ಧ ಮಾತನಾಡಿದ್ದಾರೆ, ಇದನ್ನು ಅನೇಕ ಸಾಮಾಜಿಕ ಜಾಲತಾಣಿಗರು ಗುರುತಿಸಿದ್ದಾರೆ.

ಜನವರಿ 15ರಂದು ಝೀ ಹರಿಯಾಣ ಹಿಮಾಚಲಪ್ರದೇಶ ಈ ವಿಡಿಯೋವನ್ನು ಸಂಪೂರ್ಣ ಅಪ್‌ಲೋಡ್ ಮಾಡಿತ್ತು. ಅದರ ಸಂಪಾದಕ ದಿಲೀಪ್ ತಿವಾರಿ ಮತ್ತು ಜಗದೀಪ್ ಸಂಧು ಕೇಂಜ್ರಿವಾಲ್‌ರನ್ನು ಸಂದರ್ಶಿಸಿದ ವಿಡಿಯೋ ಅದು.

ಸಂದರ್ಶನದಲ್ಲಿ ಸಂಧು ಪ್ರಶ್ನೆ: (ವಿಡಿಯೊದಲ್ಲಿ 5,55 ಸೆಕೆಂಡ್‌ನಲ್ಲಿ) ಕೇಂದ್ರ ಈ ಕಾಯ್ದೆಯಿಂದ ರೈತರ ಆದಾಯ ದ್ವಿಗುಣ ಆಗುತ್ತದೆ ಎಂದು ಹೇಳುತ್ತಿದೆಯಲ್ಲ?

ಇದಕ್ಕೆ ಉತ್ತರಿಸುವಾಗ ಅರವಿಂದ್ ಕೇಜ್ರಿವಾಲ್, ಬಿಜೆಪಿ ನಾಯಕರು ಹೇಳುತ್ತಾರೆ: ಮಸೂದೆ ನಿಮ್ಮ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು. ಇದೇನೂ ಅನುಕೂಲವಲ್ಲ, ಭೂಮಿ ಅವರದೇ ಎನ್ನುತ್ತಾರೆ. ಎಂಎಸ್‌ಪಿ ತೆಗೆದುಹಾಕುವುದಿಲ್ಲ ಎನ್ನುತ್ತಾರೆ. ಇಲ್ಲಿ ಬೋಲ್ಡ್ ಮಾಡಿ ಇಟಾಲಿಯನ್‌ನಲ್ಲಿರುವ ವಾಕ್ಯಗಳನ್ನು ಮಾತ್ರ ತಿರುಚಿದ ವಿಡಿಯೋದಲ್ಲಿ ಬಳಸಲಾಗಿದೆ.

ಹೀಗೆ ‘ಕೇಜ್ರಿವಾಲ್ ಬಿಜೆಪಿ ನಾಯಕರು ಹೀಗೆ ಹೇಳುತ್ತಾರೆ’ ಎಂದಿದ್ದನ್ನು ಮಾತ್ರ ಎತ್ತಿಕೊಳ್ಳಲಾಗಿದೆ. ಆದರೆ ಬಿಜೆಪಿ ನಾಯಕರು ಹೇಳಿದ್ದೆಲ್ಲ ಸತ್ಯವಲ್ಲ ಎಂದು ಕೇಜ್ರಿವಾಲ್ ಹೇಳುವ ಮುಂದಿನ ಸಾಲುಗಳನ್ನು ಕೈ ಬಿಡಲಾಗಿದೆ.

ಕೊನೆಯಲ್ಲಿ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ, ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ. ಈ ಮಾತಿನ ಮೊದಲಿಗೆ ಹೇಳುವ ‘ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ’ ಎಂಬುದನ್ನು ತೆಗೆದು ಹಾಕಲಾಗಿದೆ.

ಹೀಗೆ ಒಂದು ಸುದೀರ್ಘ ವಿಡಿಯೋವನ್ನು ಎಡಿಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರು ಎಂದು ಬಿಜೆಪಿಯ ಸಂಬಿತ್ ಪಾತ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ಭಾನುವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಂಬೀತ್ ಪಾತ್ರಾ ಮತ್ತು ಬಿಜೆಪಿಯವರ ತಿರುಚಿದ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ರೈತ ಹೋರಾಟ ನೋಡಿ ಬಿಜೆಪಿ ಹತಾಶಗೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಐಟಿ ಸೆಲ್ ರೆಡಿ ಮಾಡಿಕೊಟ್ಟಿರಬಹುದಾದ ಈ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪಾತ್ರಾ ಮತ್ತೊಮ್ಮೆ ನಗೆಪಾಟಿಲಿಗೀಡಾಗಿದ್ದಾರೆ. ಇದೇನೂ ಅವರಿಗೆ ಹೊಸದಲ್ಲ ಬಿಡಿ. ಅದಕ್ಕಾಗಿಯೇ ಅವರಿನ್ನೂ ಆ ಟ್ವೀಟ್ ಅನ್ನು ಡಿಲೀಟ್ ಮಾಡಿಲ್ಲ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ; ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...