Homeಮುಖಪುಟಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕೇಂದ್ರ ಬಜೆಟ್ ವಿರುದ್ದ ರಾಹುಲ್ ಗಾಂಧಿ ಟೀಕೆ

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆಯ ದಿನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ಜನರ ಕೈಗೆ ಹಣ ನೀಡುವುದನ್ನು ಮರೆತುಬಿಡಿ, ಮೋದಿ ಸರ್ಕಾರ ತನ್ನ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಇಡೀ ಭಾರತದ ಸಂಪತನ್ನು ಧಾರೆಯೆರೆಯಲು ಯೋಜಿಸುತ್ತಿದೆ” ಎಂದು ರಾಹುಲ್ ಕಿಡಿಕಾರಿದ್ದಾರೆ.

ಎಂಎಸ್‌ಎಂಇಗಳು, ರೈತರು ಮತ್ತು ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಬೆಂಬಲ ನೀಡಿ. ಜೀವ ಉಳಿಸಲು ಆರೋಗ್ಯ ವೆಚ್ಚವನ್ನು ಹೆಚ್ಚಿಸಿ. ಗಡಿಗಳನ್ನು ಕಾಪಾಡಲು ರಕ್ಷಣಾ ವೆಚ್ಚವನ್ನು ಹೆಚ್ಚಿಸಿ ಎಂದು ಇಂದು ಬೆಳಗ್ಗೆ ರಾಹುಲ್ ಗಾಂಧಿ ಒತ್ತಾಯಿಸಿದ್ದರು.

ರೈತರ ಆದಾಯವನ್ನು ಹೆಚ್ಚಿಸಲು ಬಜೆಟ್ ಗಮನಹರಿಸುತ್ತದೆ, ಈ ದಿಕ್ಕಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರೈತರಿಗೆ ಸುಲಭವಾಗಿ ಸಾಲ ಪಡೆಯಲು ಸಾಧ್ಯವಾಗುತ್ತದೆ. ಕೃಷಿ ಮೂಲಸೌಕರ್ಯ ನಿಧಿಯ ಸಹಾಯದಿಂದ ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪಿಎಂ ನರೇಂದ್ರ ಮೋದಿ ತಿಳಿಸಿದ್ದಾರೆ.

2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.

  • ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ  ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.
  • ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ
  • ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ
  • 75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ
  • ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್
  • ಒಂದೇ ದೇಶ, ಒಂದೇ ರೇಶನ್ ಕಾ‍ರ್ಡ್ ಪರಿಕಲ್ಪನೆ ಜಾರಿಗೆ
    69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.
  • ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.
  • ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ
    ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್
  • 2022 ರ  ಹಣಕಾಸು ವರ್ಷದಲ್ಲಿ 2 ಪಿಎಸ್‌ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್
  • 1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ
  • 1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ
  • ಮಾರ್ಚ್‌ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್‌, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್‌ನಲ್ಲಿ 1300. ಕಿ.ಮೀ.
  • 61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ
    17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.
  • ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ ಆಡಿಯಲ್ಲಿ ಕಾರ್ಯಚಟುವಟಿಕೆಗಳು
  • ಬಜೆಟ್‌ ಮೊದಲ ಭಾರತ ಆತ್ಮನಿರ್ಭರ ಭಾರತಕ್ಕೆ ಒತ್ತು,
  • ಇಲ್ಲಿಯವರೆಗೆ ಕೋವಿಡ್‌ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ
    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...