Homeಮುಖಪುಟಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

ಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ (ಇಂದು) 2021–22ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಎಂದಿನ ಸಂಪ್ರದಾಯವನ್ನು ಮುರಿದು ಈ ಬಾರಿ ಕಾಗದ ರಹಿತ ಬಜೆಟ್ ಮಂಡನೆ ಮಾಡಲಾಗಿದೆ. ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೂರನೆ ಬಜೆಟ್ ಇದಾಗಿದೆ. ಅಲ್ಲದೆ, ಹಣಕಾಸು ಸಚಿವೆಯಾಗಿ ಇದು ನಿರ್ಮಲಾ ಸೀತಾರಾಮ್ ಮಂಡಿಸುವ ಮೂರನೆ ಬಜೆಟ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಹಲವಾರು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್ ಮಂಡಿಸುತ್ತಿದ್ದಂತೆ ಶೇರು ಸೂಚ್ಯಾಂಕ 5% ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಈ ಬಜೆಟ್ ಯಾರಿಗೆ ಎಂದು ಸ್ಪಷ್ಟವಾಗುತ್ತಿದೆ, ಇದು ಬಂಡವಾಳಶಾಹಿಗಳಿಗೆ ಮತ್ತು ಶ್ರೀಮಂತರ ಪರವಿರುವ ಬಜೆಟ್ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದ ಶಶಿ ತರೂರ್‌, “ಬಿಜೆಪಿ ಸರ್ಕಾರವು ಕೆಲಸ ಮಾಡಲು ಗೊತ್ತಿಲ್ಲದ ಗ್ಯಾರೇಜ್ ಮೆಕ್ಯಾನಿಕ್‌ನನ್ನು ನೆನಪಿಸುತ್ತದೆ. ಅವನು ತನ್ನ ಗ್ರಾಹಕರಿಗೆ ’ನನಗೆ ನಿಮ್ಮ ಬ್ರೇಕ್‌ಗಳನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ನಿಮ್ಮ ಹಾರ್ನ್ ಸದ್ದನ್ನು ಜೋರಾಗಿ ಮಾಡಿದೆ’ ಎಂದು ಹೇಳಿದ್ದನ್ನು ನೆನಪಿಸುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಬಜೆಟ್ ದಿನದಂದು ಮೋದಿ ಸರ್ಕಾರವು ಭಾರತವನ್ನು ಬೆರಳೆಣಿಕೆಯಷ್ಟು ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೆ ಹಲವಾರು ರೈತ ಪರ, ಬಡವರ ಪರ, ಜಾತಿ ವಿರೋಧಿ ಧ್ವನಿಗಳನ್ನು ಟ್ವಿಟರ್‌ನಲ್ಲಿ ತಡೆಹಿಡಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟಕ್ಕೆ ಬೆಂಬಲ ನೀಡುವ ಹಲವಾರು ಸಮಾಜಿಕ ಕಾರ್ಯಕರ್ತರ ಹಾಗೂ ಪತ್ರಿಕೆಗಳ ಟ್ವಿಟ್ಟರ್‌ ಅಕೌಂಟುಗಳಿಗೆ ಟ್ವಿಟ್ಟರ್‌ ಈಗಷ್ಟೇ ತಡೆ ಮಾಡಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ಬಿಹಾರ ವಿಧಾನ ಸಭೆಯ ವಿಪಕ್ಷ ನಾಯಕ ತೇಜಸ್ವಿ ಯಾದವ್‌, “ಇದು ದೇಶವನ್ನು ಮಾರಾಟ ಮಾಡುವ ಬಜೆಟ್. ಇದು ಸರ್ಕಾರಿ ಸಂಸ್ಥೆಗಳು ಮತ್ತು ಆಸ್ತಿಗಳನ್ನು ಮಾರಾಟ ಮಾಡುವ ಸೇಲ್ ಆಗಿದ್ದು, ಇದು ಬಜೆಟ್ ಅಲ್ಲ. ರೈಲು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಕೆಂಪು ಕೋಟೆ, ಬಿಎಸ್ಎನ್ಎಲ್, ಎಲ್ಐಸಿ ಮಾರಾಟ ಮಾಡಿದ ನಂತರ, ಬಿಜೆಪಿ ಈಗ ಬ್ಯಾಂಕುಗಳು, ಬಂದರುಗಳು, ವಿದ್ಯುತ್ ಮಾರ್ಗಗಳು , ರಾಷ್ಟ್ರೀಯ ರಸ್ತೆಗಳು, ಕ್ರೀಡಾಂಗಣ, ತೈಲ ಪೈಪ್‌ಲೈನ್‌ನಿಂದ ಗೋದಾಮಿನವರೆಗೆ ಬಿಜೆಪಿ ಮಾರಾಟ ಮಾಡಲು ನಿರ್ಧರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್, “2020-21 ರಲ್ಲಿ ಪಿಎಂ ಕಿಸಾನ್‌‌ ಯೋಜನೆಯು 75 ಸಾವಿರದಿಂದ 2021-22ರಲ್ಲಿ 65 ಸಾವಿರಕ್ಕೆ ಇಳಿದಿದೆ. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಮತ್ತು ಬೆಲೆ ಬೆಂಬಲ ಯೋಜನೆಗೆ (ಎಂಐಎಸ್-ಪಿಎಸ್ಎಸ್) ಬಜೆಟ್‌ನಲ್ಲಿ 2000 ಕೋಟಿಯಿಂದ 1501 ಕೋಟಿಗೆ ಇಳಿಸಲಾಗಿದೆ. ಇದು ಬಜೆಟ್ ಭಾಷಣವನ್ನು ಮೀರಿದ ನಿಜವಾದ ಬಜೆಟ್ ಸುದ್ದಿ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ಸಿಪಿಐಎಂ ಪಕ್ಷವು, “ಆತ್ಮನಿರ್ಭರ್ ಹೆಸರಿನಲ್ಲಿ, ಸರ್ಕಾರವು ಖಾಸಗೀಕರಣಕ್ಕೆ ಮುಂದಾಗಿದೆ. ವಿಮೆಯಲ್ಲಿ ಎಫ್‌ಡಿಐ, ರೈಲ್ವೆಯಲ್ಲಿ ಪಿಪಿಪಿ ಮಾದರಿ. ಈ ಬಜೆಟ್ ಕಾರ್ಪೋರೇಟ್‌ಗಳಿಗೆ ಮಾತ್ರ” ಎಂದು ಹೇಳಿದೆ.

ಆವಿ ಎಂಬ ಟ್ವಿಟ್ಟರ್‌ ಅಕೌಂಟ್, “ಶೇರುಪೇಟೆ ಶೂಚ್ಯಂಕ 5% ಹೆಚ್ಚಾಗಿದೆ. ಈ ಬಜೆಟ್‌‌ನಿಂದ ಯಾರಿಗೆ ಖುಷಿಯಾಗಿದೆ ಎಂದು ತಿಳಿಯುತ್ತದೆ. ಶ್ರೀಮಂತರು ಮತ್ತು ಬಂಡವಾಳಶಾಹಿಗಳು ಮಾತ್ರ ಎಂದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

 

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ವಿಧಾನಸಭಾ ಅಧಿವೇಶನದ ಲೈವ್‌ ವಿಡಿಯೋ►►

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...