Homeಮುಖಪುಟಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

ಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ (ಇಂದು) 2021–22ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಎಂದಿನ ಸಂಪ್ರದಾಯವನ್ನು ಮುರಿದು ಈ ಬಾರಿ ಕಾಗದ ರಹಿತ ಬಜೆಟ್ ಮಂಡನೆ ಮಾಡಲಾಗಿದೆ. ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೂರನೆ ಬಜೆಟ್ ಇದಾಗಿದೆ. ಅಲ್ಲದೆ, ಹಣಕಾಸು ಸಚಿವೆಯಾಗಿ ಇದು ನಿರ್ಮಲಾ ಸೀತಾರಾಮ್ ಮಂಡಿಸುವ ಮೂರನೆ ಬಜೆಟ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಹಲವಾರು ಜನರು ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್ ಮಂಡಿಸುತ್ತಿದ್ದಂತೆ ಶೇರು ಸೂಚ್ಯಾಂಕ 5% ಹೆಚ್ಚಳವಾಗಿದೆ. ಈ ಹಿನ್ನಲೆಯಲ್ಲಿ ಈ ಬಜೆಟ್ ಯಾರಿಗೆ ಎಂದು ಸ್ಪಷ್ಟವಾಗುತ್ತಿದೆ, ಇದು ಬಂಡವಾಳಶಾಹಿಗಳಿಗೆ ಮತ್ತು ಶ್ರೀಮಂತರ ಪರವಿರುವ ಬಜೆಟ್ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದ ಶಶಿ ತರೂರ್‌, “ಬಿಜೆಪಿ ಸರ್ಕಾರವು ಕೆಲಸ ಮಾಡಲು ಗೊತ್ತಿಲ್ಲದ ಗ್ಯಾರೇಜ್ ಮೆಕ್ಯಾನಿಕ್‌ನನ್ನು ನೆನಪಿಸುತ್ತದೆ. ಅವನು ತನ್ನ ಗ್ರಾಹಕರಿಗೆ ’ನನಗೆ ನಿಮ್ಮ ಬ್ರೇಕ್‌ಗಳನ್ನು ಸರಿಪಡಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ನಿಮ್ಮ ಹಾರ್ನ್ ಸದ್ದನ್ನು ಜೋರಾಗಿ ಮಾಡಿದೆ’ ಎಂದು ಹೇಳಿದ್ದನ್ನು ನೆನಪಿಸುತ್ತದೆ” ಎಂದು ವ್ಯಂಗ್ಯವಾಡಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, “ಬಜೆಟ್ ದಿನದಂದು ಮೋದಿ ಸರ್ಕಾರವು ಭಾರತವನ್ನು ಬೆರಳೆಣಿಕೆಯಷ್ಟು ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೆ ಹಲವಾರು ರೈತ ಪರ, ಬಡವರ ಪರ, ಜಾತಿ ವಿರೋಧಿ ಧ್ವನಿಗಳನ್ನು ಟ್ವಿಟರ್‌ನಲ್ಲಿ ತಡೆಹಿಡಿದಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟಕ್ಕೆ ಬೆಂಬಲ ನೀಡುವ ಹಲವಾರು ಸಮಾಜಿಕ ಕಾರ್ಯಕರ್ತರ ಹಾಗೂ ಪತ್ರಿಕೆಗಳ ಟ್ವಿಟ್ಟರ್‌ ಅಕೌಂಟುಗಳಿಗೆ ಟ್ವಿಟ್ಟರ್‌ ಈಗಷ್ಟೇ ತಡೆ ಮಾಡಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ಬಿಹಾರ ವಿಧಾನ ಸಭೆಯ ವಿಪಕ್ಷ ನಾಯಕ ತೇಜಸ್ವಿ ಯಾದವ್‌, “ಇದು ದೇಶವನ್ನು ಮಾರಾಟ ಮಾಡುವ ಬಜೆಟ್. ಇದು ಸರ್ಕಾರಿ ಸಂಸ್ಥೆಗಳು ಮತ್ತು ಆಸ್ತಿಗಳನ್ನು ಮಾರಾಟ ಮಾಡುವ ಸೇಲ್ ಆಗಿದ್ದು, ಇದು ಬಜೆಟ್ ಅಲ್ಲ. ರೈಲು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಕೆಂಪು ಕೋಟೆ, ಬಿಎಸ್ಎನ್ಎಲ್, ಎಲ್ಐಸಿ ಮಾರಾಟ ಮಾಡಿದ ನಂತರ, ಬಿಜೆಪಿ ಈಗ ಬ್ಯಾಂಕುಗಳು, ಬಂದರುಗಳು, ವಿದ್ಯುತ್ ಮಾರ್ಗಗಳು , ರಾಷ್ಟ್ರೀಯ ರಸ್ತೆಗಳು, ಕ್ರೀಡಾಂಗಣ, ತೈಲ ಪೈಪ್‌ಲೈನ್‌ನಿಂದ ಗೋದಾಮಿನವರೆಗೆ ಬಿಜೆಪಿ ಮಾರಾಟ ಮಾಡಲು ನಿರ್ಧರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್, “2020-21 ರಲ್ಲಿ ಪಿಎಂ ಕಿಸಾನ್‌‌ ಯೋಜನೆಯು 75 ಸಾವಿರದಿಂದ 2021-22ರಲ್ಲಿ 65 ಸಾವಿರಕ್ಕೆ ಇಳಿದಿದೆ. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಮತ್ತು ಬೆಲೆ ಬೆಂಬಲ ಯೋಜನೆಗೆ (ಎಂಐಎಸ್-ಪಿಎಸ್ಎಸ್) ಬಜೆಟ್‌ನಲ್ಲಿ 2000 ಕೋಟಿಯಿಂದ 1501 ಕೋಟಿಗೆ ಇಳಿಸಲಾಗಿದೆ. ಇದು ಬಜೆಟ್ ಭಾಷಣವನ್ನು ಮೀರಿದ ನಿಜವಾದ ಬಜೆಟ್ ಸುದ್ದಿ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ಸಿಪಿಐಎಂ ಪಕ್ಷವು, “ಆತ್ಮನಿರ್ಭರ್ ಹೆಸರಿನಲ್ಲಿ, ಸರ್ಕಾರವು ಖಾಸಗೀಕರಣಕ್ಕೆ ಮುಂದಾಗಿದೆ. ವಿಮೆಯಲ್ಲಿ ಎಫ್‌ಡಿಐ, ರೈಲ್ವೆಯಲ್ಲಿ ಪಿಪಿಪಿ ಮಾದರಿ. ಈ ಬಜೆಟ್ ಕಾರ್ಪೋರೇಟ್‌ಗಳಿಗೆ ಮಾತ್ರ” ಎಂದು ಹೇಳಿದೆ.

ಆವಿ ಎಂಬ ಟ್ವಿಟ್ಟರ್‌ ಅಕೌಂಟ್, “ಶೇರುಪೇಟೆ ಶೂಚ್ಯಂಕ 5% ಹೆಚ್ಚಾಗಿದೆ. ಈ ಬಜೆಟ್‌‌ನಿಂದ ಯಾರಿಗೆ ಖುಷಿಯಾಗಿದೆ ಎಂದು ತಿಳಿಯುತ್ತದೆ. ಶ್ರೀಮಂತರು ಮತ್ತು ಬಂಡವಾಳಶಾಹಿಗಳು ಮಾತ್ರ ಎಂದು ಹೇಳಿದೆ.

ಇದನ್ನೂ ಓದಿ: ಕೇಂದ್ರ ಮಿನಿ ಬಜೆಟ್‌ 2021: ಇಲ್ಲಿವೆ ಪ್ರಮುಖಾಂಶಗಳು

 

ಇದನ್ನೂ ಓದಿ: ವಿದೇಶಿ ಕಂಪನಿಗಳು ಈ ನೆಲದ ಕಾನೂನನ್ನು ಗೌರವಿಸಲಿ: ಟೊಯೊಟಾ ಕಾರ್ಮಿಕರ ಹೊರಾಟದಲ್ಲಿ ಸಿದ್ದರಾಮಯ್ಯ

ವಿಧಾನಸಭಾ ಅಧಿವೇಶನದ ಲೈವ್‌ ವಿಡಿಯೋ►►

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...