Homeಕರ್ನಾಟಕಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ವೈರಲ್ ಆಗುತ್ತಿವೆ.

- Advertisement -
- Advertisement -

ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ 15 ವರ್ಷ ಬಾಲಕಿ ತನ್ನ ತಾಯಿ ನಿಧನರಾದ ನಂತರ ತನ್ನ ಚಿಕ್ಕಮ್ಮನೊಂದಿಗೆ ಇತ್ತೀಚೆಗೆ ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪದಲ್ಲಿರುವ ಗೋಚುವಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸಗಾರನೊಬ್ಬ ಬಾಲಕಿಯನ್ನು ಪುಸಲಾಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಆತನ ಸ್ನೇಹಿತರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯದ ವಿಷಯವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಪೊಟೊಗಳನ್ನು ವೈರಲ್ ಮಾಡುವುದಾಗಿ ಬಾಲಕಿಯನ್ನು ಹೆದರಿಸಿದ್ದಾರೆ. ನಂತರ ಈ ಬಾಲಕಿಯ ಮೇಲೆ ಕಳೆದ 1 ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಯುತ್ತಲೇ ಬಂದಿದೆ. ಇದನ್ನು ಬಾಲಕಿಯ ಚಿಕ್ಕಮ್ಮ ಗೀತಾ ಎಂಬುವವರು ದಂಧೆಯನ್ನಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು ಎಂದೂ ಸಹ ಹೇಳಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದ ಸ್ಮಾಲ್ ಅಭಿ, ಆನೆಗುಂದ ಗ್ರಾಮದ ರಾಜೇಶ್, ಅಮಿತ್, ಗಿರೀಶ್, ಹೊಳೆಕೊಪ್ಪ ಗ್ರಾಮದ ಮಣಿಕಂಠ, ವಿಕಾಸ್, ನೆಮ್ಮಾರ್ ಸಂಪತ್, ಶೃಂಗೇರಿಯ ನಾರಾಯಣ್ ಗೌಡ, ಅಶ್ವತ್‍ಗೌಡ, ಅಭಿಗೌಡ, ಕುರುಬಗೆರೆ ಸಂತೋಷ್, ಹೆಗ್ಗದ್ದೆಯ ಧೀಕ್ಷಿತ್, ಹೇರೂರಿನ ಸಂತೋಷ್, ಕಿಗ್ಗಾದ ನಿರಂಜನ್, ಬಸ್ ಚಾಲಕ ಖಾಂಡ್ಯ ಯೋಗೀಶ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ಚಿಕ್ಕಮ್ಮ ಗೀತಾಳನ್ನು 16ನೇ ಆರೋಪಿಯನ್ನಾಗಿಸಲಾಗಿದೆ. ಅಲ್ಲದೇ ಬಾಲ ಕಾರ್ಮಿಕರನ್ನು ಕ್ರಷರ್ ನಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಆರೋಪದಡಿಯಲ್ಲಿ ಕ್ರಷರ್ ಮಾಲಕನ್ನು 17ನೇ ಆರೋಪಿಯನ್ನಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಬಾಲಕಿಗೆ ಲೈಂಗಿಕ ದೌರ್ಜನ್ಯದ ಕಿರುಕುಳ ನೀಡಿರುವ ಆರೋಪಿಗಳ ಪೈಕಿ ಬಹುತೇಕ ಮಂದಿ ಸಂಘಪರಿವಾರದಲ್ಲಿ ಗುರುತಿಸಿಕೊಂಡವರಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸ್ಮಾಲ್ (ಸ್ಮಾಲ್ ಸಿಗರೇಟ್ ಸೇದುತ್ತಿದ್ದ) ಅಭಿ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದಾನೆ. ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಇನ್ನು ವಿಕಾಸ್ ಎಂಬಾತ ಬಿಜೆಪಿ ಪಕ್ಷದ ಜಿ.ಪಂ ಸದಸ್ಯರೊಬ್ಬರ ಹತ್ತಿರದ ಸಂಬಂಧಿ ಎನ್ನಲಾಗುತ್ತಿದೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಇವರು ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಸಂಪತ್ ಗಿಣಿಕಲ್ (ಬಜರಂಗದಳ ಕಾರ್ಯಕರ್ತ)

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ರಕ್ಷಿಸಿರುವ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಎಂಬವವರು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದು, “ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಮ್ಮ ಮತ್ತು ಕ್ರಷರ್‌ನ ಮಾಲಿಕ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ತನಿಖೆ ನಡೆಸುತ್ತಿದ್ದೇವೆ ಎಂದು ಶೃಂಗೇರಿ ಪೊಲೀಸ್ ಠಾಣೆಯ ಎಸ್‌ಐ ಪ್ರಮೋದ್ ಕುಮಾರ್ ನಾನುಗೌರಿ.ಕಾಂ ಗೆ ತಿಳಿಸಿದರು.

ಸ್ಮಾಲ್ ಅಭಿ

ಇದನ್ನೂ ಓದಿ: ರೈತ ಹೋರಾಟಕ್ಕೆ ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಬೆಂಬಲಿಸಿದ್ದು ನಿಜವೆ?

ಕ್ರಷರ್ ನಲ್ಲಿ ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಪರಿಶೀಲನೆ ನಡೆಸಿದಾಗ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ಗೋಚವಳ್ಳಿಯ ಕ್ರಷರ್ ನಿಂದ ರಕ್ಷಣೆ ಮಾಡಲಾಗಿದೆ. ನಂತರ ಕೌನ್ಸಲಿಂಗ್ ವೇಳೆ ತನ್ನ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಹೇಳಿಕೆ ನೀಡಿದ್ದಾಳೆ. ದೌರ್ಜನ್ಯ ಎಸಗಿದ ಸ್ಥಳೀಯ 15 ಮಂದಿಯ ಹೆಸರನ್ನು ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ತನ್ನ ಚಿಕ್ಕಮ್ಮ ಗೀತಾ ಎಂಬಾಕೆಯೂ ಸಹಕಾರ ನೀಡಿದ್ದಾಳೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಗಿರೀಶ್

ಕ್ರಷರ್‌ನಿಂದ ಬಾಲಕಿಯನ್ನು ರಕ್ಷಣೆ ಮಾಡಿರುವ ಮಕ್ಕಳ ಕಲ್ಯಾಣ ಸಮಿತಿ ಆಕೆಯನ್ನು ಸದ್ಯ ಸ್ವಾಧಾರ್ ಕೇಂದ್ರದಲ್ಲಿ ಇರಿಸಿದ್ದು, ಆಕೆಯ ಹೇಳಿಕೆ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳು ತಮ್ಮ ಪ್ರಭಾವ ಬಳಸಿ ಪಾರಾಗುವ ಸಾಧ್ಯತೆ ಇದ್ದು, ಪೊಲೀಸರು ಈ ಸಂಬಂಧ ಅಗತ್ಯ ಕ್ರಮವಹಿಸಬೇಕೆಂದು ಅಲ್ಲಿನ ಸ್ಥಳೀಯರೊಬ್ಬರು ಮಾಹಿತಿ ನೀಡಿದರು.

ಬಾಲಕಿಯ ಹಿನ್ನೆಲೆ:

ಬಾಲಕಿ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಆಗಲೇ ಈಕೆಯ ತಾಯಿ ನಿಧನರಾಗಿದ್ದರು. ನಂತರ ಬಾಲಕಿಯ ತಂದೆ ಮತ್ತೊಂದು ಮದುವೆಯಾಗಿ ಹಾವೇರಿಯಲ್ಲಿ ವಾಸವಿದ್ದಾನೆ. ಬಾಲಕಿ ತನ್ನ ತಾಯಿಯ ತಮ್ಮನ ಮನೆಯಲ್ಲಿ ಓದುತ್ತಿದ್ದಳು. ಲಾಕ್‍ಡೌನ್ ಸಂದರ್ಭದಲ್ಲಿ ಶೃಂಗೇರಿಯ ಚಿಕ್ಕಮ್ಮನ ಮನೆಗೆ ಬಂದಿದ್ದು, ಬಾಲಕಿ ಚಿಕ್ಕಮ್ಮ ಮನೆಯ ಸಮೀಪದಲ್ಲೇ ಇದ್ದ ಕ್ರಷರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಚಿಕ್ಕಮ್ಮನಿಗೆ ಆರೋಗ್ಯ ಸರಿಯಿಲ್ಲದ ಸಂದರ್ಭದಲ್ಲಿ ಬಾಲಕಿ ಕ್ರಷರ್‌ನಲ್ಲಿ ಕೆಲಸಕ್ಕೆ ಹೋಗಿದ್ದಾಳೆ. ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕೆಯನ್ನು ಮರುಳು ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ನಂತರ ತನ್ನ ಸ್ನೇಹಿತರೊಂದಿಗೂ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾನೆ.

ಮಣಿಕಂಠ ಹೊಳೆಕೊಪ್ಪ (ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ)

ಆರೋಪಿ ಗೀತಾಳ ಹಿನ್ನೆಲೆ:

ಈಕೆ ಬ್ರಾಹ್ಮಣ ಕುಟುಂಬಕ್ಕೆ ಸೇರಿದವಳಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯವಳು. ಶೃಂಗೇರಿಯಲ್ಲಿ ಬ್ರಾಹ್ಮಣ ಯುವಕರಿಗೆ ಹೆಣ್ಣು ಸಿಗದ ಕಾರಣಕ್ಕೆ ಈಕೆಯನ್ನು ಸುರೇಶ್ ಎಂಬುವವರು ಮದುವೆಯಾಗಿ ಶೃಂಗೇರಿಗೆ ಕರೆದುಕೊಂಡುಬಂದಿದ್ದರು. ಇಲ್ಲಿ ಈಕೆ ಮೊದಲಿನಿಂದಲೂ ಇಂತಹ ದಂಧೆಯಲ್ಲಿ ತೊಡಗಿದ್ದಳು. ನಂತರ ತನ್ನ ಅಕ್ಕನ ಮಗಳನ್ನು ಹಾವೇರಿಯಿಂದ ಕರೆದುಕಂಡು ಬಂದು ಆಕೆಯನ್ನೂ ಇದೇ ದಂಧೆಗೆ ಬಳಸಿಕೊಂಡು ಹಣ ಸಂಪಾದಿಸುತ್ತಿದ್ದಳು. ಇದನ್ನು ಸಹಿಸದ ಸುರೇಶ್ ವಿಚ್ಚೇದನ ಪಡೆಯಲು ನಿರ್ಧರಿಸಿದ. ಆದರೆ ಕಾನೂನು ಪ್ರಕಾರ ಗಂಡನೇ ವಿಚ್ಚೇದನ ನೀಡಿದರೆ ಜೀವನಾಂಶ ಕೊಡಬೆಕಾಗುತ್ತದೆ. ಆದರೆ ಆತನ ಬಳಿ ಅಷ್ಟು ಹಣ ಇಲ್ಲವಾದ್ದರಿಂದ ಗ್ರಾಮಸ್ಥರ ಸಹಕಾರದೊಟ್ಟಿಗೆ ಸೇರಿ, ಈ ದಂಧೆಯನ್ನ ಕಾರಣವಾಗಿಟ್ಟುಕೊಂಡು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಈ ದೂರನ್ನು ತೆಗೆದುಕೊಂಡಿರಲಿಲ್ಲ . ನಂತರ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ಆದೇಶ ಬಂದ ನಂತರ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಗ್ರಾಮಸ್ಥರೊಬ್ಬರು ಹೇಳಿದರು.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಎಫ್‌ಐಆರ್ ದಾಖಲಾಗಿರುವ ಆರೋಪಿಗಳು ಮತ್ತು ಅವರ ಹಿನ್ನೆಲೆ:

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಜೊತೆ ಆರೋಪಿ ವಿಕಾಸ್

ಇನ್ನೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಶೇಖಡ 90 ರಷ್ಟು ಆರೋಪಿಗಳು ಬಿಜೆಪಿ ಮತ್ತು ಸಂಘಪರಿವಾರದವರೆಂದು ಗ್ರಾಮಸ್ಥರು ಖಚಿತಪಡಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...