Homeಕರ್ನಾಟಕಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ವೈರಲ್ ಆಗುತ್ತಿವೆ.

- Advertisement -
- Advertisement -

ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ 15 ವರ್ಷ ಬಾಲಕಿ ತನ್ನ ತಾಯಿ ನಿಧನರಾದ ನಂತರ ತನ್ನ ಚಿಕ್ಕಮ್ಮನೊಂದಿಗೆ ಇತ್ತೀಚೆಗೆ ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪದಲ್ಲಿರುವ ಗೋಚುವಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸಗಾರನೊಬ್ಬ ಬಾಲಕಿಯನ್ನು ಪುಸಲಾಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಆತನ ಸ್ನೇಹಿತರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯದ ವಿಷಯವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಪೊಟೊಗಳನ್ನು ವೈರಲ್ ಮಾಡುವುದಾಗಿ ಬಾಲಕಿಯನ್ನು ಹೆದರಿಸಿದ್ದಾರೆ. ನಂತರ ಈ ಬಾಲಕಿಯ ಮೇಲೆ ಕಳೆದ 1 ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಯುತ್ತಲೇ ಬಂದಿದೆ. ಇದನ್ನು ಬಾಲಕಿಯ ಚಿಕ್ಕಮ್ಮ ಗೀತಾ ಎಂಬುವವರು ದಂಧೆಯನ್ನಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು ಎಂದೂ ಸಹ ಹೇಳಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದ ಸ್ಮಾಲ್ ಅಭಿ, ಆನೆಗುಂದ ಗ್ರಾಮದ ರಾಜೇಶ್, ಅಮಿತ್, ಗಿರೀಶ್, ಹೊಳೆಕೊಪ್ಪ ಗ್ರಾಮದ ಮಣಿಕಂಠ, ವಿಕಾಸ್, ನೆಮ್ಮಾರ್ ಸಂಪತ್, ಶೃಂಗೇರಿಯ ನಾರಾಯಣ್ ಗೌಡ, ಅಶ್ವತ್‍ಗೌಡ, ಅಭಿಗೌಡ, ಕುರುಬಗೆರೆ ಸಂತೋಷ್, ಹೆಗ್ಗದ್ದೆಯ ಧೀಕ್ಷಿತ್, ಹೇರೂರಿನ ಸಂತೋಷ್, ಕಿಗ್ಗಾದ ನಿರಂಜನ್, ಬಸ್ ಚಾಲಕ ಖಾಂಡ್ಯ ಯೋಗೀಶ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ಚಿಕ್ಕಮ್ಮ ಗೀತಾಳನ್ನು 16ನೇ ಆರೋಪಿಯನ್ನಾಗಿಸಲಾಗಿದೆ. ಅಲ್ಲದೇ ಬಾಲ ಕಾರ್ಮಿಕರನ್ನು ಕ್ರಷರ್ ನಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಆರೋಪದಡಿಯಲ್ಲಿ ಕ್ರಷರ್ ಮಾಲಕನ್ನು 17ನೇ ಆರೋಪಿಯನ್ನಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಬಾಲಕಿಗೆ ಲೈಂಗಿಕ ದೌರ್ಜನ್ಯದ ಕಿರುಕುಳ ನೀಡಿರುವ ಆರೋಪಿಗಳ ಪೈಕಿ ಬಹುತೇಕ ಮಂದಿ ಸಂಘಪರಿವಾರದಲ್ಲಿ ಗುರುತಿಸಿಕೊಂಡವರಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸ್ಮಾಲ್ (ಸ್ಮಾಲ್ ಸಿಗರೇಟ್ ಸೇದುತ್ತಿದ್ದ) ಅಭಿ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದಾನೆ. ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಇನ್ನು ವಿಕಾಸ್ ಎಂಬಾತ ಬಿಜೆಪಿ ಪಕ್ಷದ ಜಿ.ಪಂ ಸದಸ್ಯರೊಬ್ಬರ ಹತ್ತಿರದ ಸಂಬಂಧಿ ಎನ್ನಲಾಗುತ್ತಿದೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಇವರು ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಸಂಪತ್ ಗಿಣಿಕಲ್ (ಬಜರಂಗದಳ ಕಾರ್ಯಕರ್ತ)

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ರಕ್ಷಿಸಿರುವ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಎಂಬವವರು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದು, “ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಮ್ಮ ಮತ್ತು ಕ್ರಷರ್‌ನ ಮಾಲಿಕ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ತನಿಖೆ ನಡೆಸುತ್ತಿದ್ದೇವೆ ಎಂದು ಶೃಂಗೇರಿ ಪೊಲೀಸ್ ಠಾಣೆಯ ಎಸ್‌ಐ ಪ್ರಮೋದ್ ಕುಮಾರ್ ನಾನುಗೌರಿ.ಕಾಂ ಗೆ ತಿಳಿಸಿದರು.

ಸ್ಮಾಲ್ ಅಭಿ

ಇದನ್ನೂ ಓದಿ: ರೈತ ಹೋರಾಟಕ್ಕೆ ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಬೆಂಬಲಿಸಿದ್ದು ನಿಜವೆ?

ಕ್ರಷರ್ ನಲ್ಲಿ ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಪರಿಶೀಲನೆ ನಡೆಸಿದಾಗ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ಗೋಚವಳ್ಳಿಯ ಕ್ರಷರ್ ನಿಂದ ರಕ್ಷಣೆ ಮಾಡಲಾಗಿದೆ. ನಂತರ ಕೌನ್ಸಲಿಂಗ್ ವೇಳೆ ತನ್ನ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಹೇಳಿಕೆ ನೀಡಿದ್ದಾಳೆ. ದೌರ್ಜನ್ಯ ಎಸಗಿದ ಸ್ಥಳೀಯ 15 ಮಂದಿಯ ಹೆಸರನ್ನು ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ತನ್ನ ಚಿಕ್ಕಮ್ಮ ಗೀತಾ ಎಂಬಾಕೆಯೂ ಸಹಕಾರ ನೀಡಿದ್ದಾಳೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಗಿರೀಶ್

ಕ್ರಷರ್‌ನಿಂದ ಬಾಲಕಿಯನ್ನು ರಕ್ಷಣೆ ಮಾಡಿರುವ ಮಕ್ಕಳ ಕಲ್ಯಾಣ ಸಮಿತಿ ಆಕೆಯನ್ನು ಸದ್ಯ ಸ್ವಾಧಾರ್ ಕೇಂದ್ರದಲ್ಲಿ ಇರಿಸಿದ್ದು, ಆಕೆಯ ಹೇಳಿಕೆ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳು ತಮ್ಮ ಪ್ರಭಾವ ಬಳಸಿ ಪಾರಾಗುವ ಸಾಧ್ಯತೆ ಇದ್ದು, ಪೊಲೀಸರು ಈ ಸಂಬಂಧ ಅಗತ್ಯ ಕ್ರಮವಹಿಸಬೇಕೆಂದು ಅಲ್ಲಿನ ಸ್ಥಳೀಯರೊಬ್ಬರು ಮಾಹಿತಿ ನೀಡಿದರು.

ಬಾಲಕಿಯ ಹಿನ್ನೆಲೆ:

ಬಾಲಕಿ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಆಗಲೇ ಈಕೆಯ ತಾಯಿ ನಿಧನರಾಗಿದ್ದರು. ನಂತರ ಬಾಲಕಿಯ ತಂದೆ ಮತ್ತೊಂದು ಮದುವೆಯಾಗಿ ಹಾವೇರಿಯಲ್ಲಿ ವಾಸವಿದ್ದಾನೆ. ಬಾಲಕಿ ತನ್ನ ತಾಯಿಯ ತಮ್ಮನ ಮನೆಯಲ್ಲಿ ಓದುತ್ತಿದ್ದಳು. ಲಾಕ್‍ಡೌನ್ ಸಂದರ್ಭದಲ್ಲಿ ಶೃಂಗೇರಿಯ ಚಿಕ್ಕಮ್ಮನ ಮನೆಗೆ ಬಂದಿದ್ದು, ಬಾಲಕಿ ಚಿಕ್ಕಮ್ಮ ಮನೆಯ ಸಮೀಪದಲ್ಲೇ ಇದ್ದ ಕ್ರಷರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಚಿಕ್ಕಮ್ಮನಿಗೆ ಆರೋಗ್ಯ ಸರಿಯಿಲ್ಲದ ಸಂದರ್ಭದಲ್ಲಿ ಬಾಲಕಿ ಕ್ರಷರ್‌ನಲ್ಲಿ ಕೆಲಸಕ್ಕೆ ಹೋಗಿದ್ದಾಳೆ. ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕೆಯನ್ನು ಮರುಳು ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ನಂತರ ತನ್ನ ಸ್ನೇಹಿತರೊಂದಿಗೂ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾನೆ.

ಮಣಿಕಂಠ ಹೊಳೆಕೊಪ್ಪ (ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ)

ಆರೋಪಿ ಗೀತಾಳ ಹಿನ್ನೆಲೆ:

ಈಕೆ ಬ್ರಾಹ್ಮಣ ಕುಟುಂಬಕ್ಕೆ ಸೇರಿದವಳಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯವಳು. ಶೃಂಗೇರಿಯಲ್ಲಿ ಬ್ರಾಹ್ಮಣ ಯುವಕರಿಗೆ ಹೆಣ್ಣು ಸಿಗದ ಕಾರಣಕ್ಕೆ ಈಕೆಯನ್ನು ಸುರೇಶ್ ಎಂಬುವವರು ಮದುವೆಯಾಗಿ ಶೃಂಗೇರಿಗೆ ಕರೆದುಕೊಂಡುಬಂದಿದ್ದರು. ಇಲ್ಲಿ ಈಕೆ ಮೊದಲಿನಿಂದಲೂ ಇಂತಹ ದಂಧೆಯಲ್ಲಿ ತೊಡಗಿದ್ದಳು. ನಂತರ ತನ್ನ ಅಕ್ಕನ ಮಗಳನ್ನು ಹಾವೇರಿಯಿಂದ ಕರೆದುಕಂಡು ಬಂದು ಆಕೆಯನ್ನೂ ಇದೇ ದಂಧೆಗೆ ಬಳಸಿಕೊಂಡು ಹಣ ಸಂಪಾದಿಸುತ್ತಿದ್ದಳು. ಇದನ್ನು ಸಹಿಸದ ಸುರೇಶ್ ವಿಚ್ಚೇದನ ಪಡೆಯಲು ನಿರ್ಧರಿಸಿದ. ಆದರೆ ಕಾನೂನು ಪ್ರಕಾರ ಗಂಡನೇ ವಿಚ್ಚೇದನ ನೀಡಿದರೆ ಜೀವನಾಂಶ ಕೊಡಬೆಕಾಗುತ್ತದೆ. ಆದರೆ ಆತನ ಬಳಿ ಅಷ್ಟು ಹಣ ಇಲ್ಲವಾದ್ದರಿಂದ ಗ್ರಾಮಸ್ಥರ ಸಹಕಾರದೊಟ್ಟಿಗೆ ಸೇರಿ, ಈ ದಂಧೆಯನ್ನ ಕಾರಣವಾಗಿಟ್ಟುಕೊಂಡು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಈ ದೂರನ್ನು ತೆಗೆದುಕೊಂಡಿರಲಿಲ್ಲ . ನಂತರ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ಆದೇಶ ಬಂದ ನಂತರ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಗ್ರಾಮಸ್ಥರೊಬ್ಬರು ಹೇಳಿದರು.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಎಫ್‌ಐಆರ್ ದಾಖಲಾಗಿರುವ ಆರೋಪಿಗಳು ಮತ್ತು ಅವರ ಹಿನ್ನೆಲೆ:

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಜೊತೆ ಆರೋಪಿ ವಿಕಾಸ್

ಇನ್ನೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಶೇಖಡ 90 ರಷ್ಟು ಆರೋಪಿಗಳು ಬಿಜೆಪಿ ಮತ್ತು ಸಂಘಪರಿವಾರದವರೆಂದು ಗ್ರಾಮಸ್ಥರು ಖಚಿತಪಡಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...