Homeಕರ್ನಾಟಕಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ವೈರಲ್ ಆಗುತ್ತಿವೆ.

- Advertisement -
- Advertisement -

ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ 15 ವರ್ಷ ಬಾಲಕಿ ತನ್ನ ತಾಯಿ ನಿಧನರಾದ ನಂತರ ತನ್ನ ಚಿಕ್ಕಮ್ಮನೊಂದಿಗೆ ಇತ್ತೀಚೆಗೆ ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪದಲ್ಲಿರುವ ಗೋಚುವಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸಗಾರನೊಬ್ಬ ಬಾಲಕಿಯನ್ನು ಪುಸಲಾಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಆತನ ಸ್ನೇಹಿತರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯದ ವಿಷಯವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಪೊಟೊಗಳನ್ನು ವೈರಲ್ ಮಾಡುವುದಾಗಿ ಬಾಲಕಿಯನ್ನು ಹೆದರಿಸಿದ್ದಾರೆ. ನಂತರ ಈ ಬಾಲಕಿಯ ಮೇಲೆ ಕಳೆದ 1 ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಯುತ್ತಲೇ ಬಂದಿದೆ. ಇದನ್ನು ಬಾಲಕಿಯ ಚಿಕ್ಕಮ್ಮ ಗೀತಾ ಎಂಬುವವರು ದಂಧೆಯನ್ನಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು ಎಂದೂ ಸಹ ಹೇಳಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದ ಸ್ಮಾಲ್ ಅಭಿ, ಆನೆಗುಂದ ಗ್ರಾಮದ ರಾಜೇಶ್, ಅಮಿತ್, ಗಿರೀಶ್, ಹೊಳೆಕೊಪ್ಪ ಗ್ರಾಮದ ಮಣಿಕಂಠ, ವಿಕಾಸ್, ನೆಮ್ಮಾರ್ ಸಂಪತ್, ಶೃಂಗೇರಿಯ ನಾರಾಯಣ್ ಗೌಡ, ಅಶ್ವತ್‍ಗೌಡ, ಅಭಿಗೌಡ, ಕುರುಬಗೆರೆ ಸಂತೋಷ್, ಹೆಗ್ಗದ್ದೆಯ ಧೀಕ್ಷಿತ್, ಹೇರೂರಿನ ಸಂತೋಷ್, ಕಿಗ್ಗಾದ ನಿರಂಜನ್, ಬಸ್ ಚಾಲಕ ಖಾಂಡ್ಯ ಯೋಗೀಶ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ಚಿಕ್ಕಮ್ಮ ಗೀತಾಳನ್ನು 16ನೇ ಆರೋಪಿಯನ್ನಾಗಿಸಲಾಗಿದೆ. ಅಲ್ಲದೇ ಬಾಲ ಕಾರ್ಮಿಕರನ್ನು ಕ್ರಷರ್ ನಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಆರೋಪದಡಿಯಲ್ಲಿ ಕ್ರಷರ್ ಮಾಲಕನ್ನು 17ನೇ ಆರೋಪಿಯನ್ನಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಬಾಲಕಿಗೆ ಲೈಂಗಿಕ ದೌರ್ಜನ್ಯದ ಕಿರುಕುಳ ನೀಡಿರುವ ಆರೋಪಿಗಳ ಪೈಕಿ ಬಹುತೇಕ ಮಂದಿ ಸಂಘಪರಿವಾರದಲ್ಲಿ ಗುರುತಿಸಿಕೊಂಡವರಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸ್ಮಾಲ್ (ಸ್ಮಾಲ್ ಸಿಗರೇಟ್ ಸೇದುತ್ತಿದ್ದ) ಅಭಿ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದಾನೆ. ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಇನ್ನು ವಿಕಾಸ್ ಎಂಬಾತ ಬಿಜೆಪಿ ಪಕ್ಷದ ಜಿ.ಪಂ ಸದಸ್ಯರೊಬ್ಬರ ಹತ್ತಿರದ ಸಂಬಂಧಿ ಎನ್ನಲಾಗುತ್ತಿದೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಇವರು ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಸಂಪತ್ ಗಿಣಿಕಲ್ (ಬಜರಂಗದಳ ಕಾರ್ಯಕರ್ತ)

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ರಕ್ಷಿಸಿರುವ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಎಂಬವವರು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದು, “ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಮ್ಮ ಮತ್ತು ಕ್ರಷರ್‌ನ ಮಾಲಿಕ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ತನಿಖೆ ನಡೆಸುತ್ತಿದ್ದೇವೆ ಎಂದು ಶೃಂಗೇರಿ ಪೊಲೀಸ್ ಠಾಣೆಯ ಎಸ್‌ಐ ಪ್ರಮೋದ್ ಕುಮಾರ್ ನಾನುಗೌರಿ.ಕಾಂ ಗೆ ತಿಳಿಸಿದರು.

ಸ್ಮಾಲ್ ಅಭಿ

ಇದನ್ನೂ ಓದಿ: ರೈತ ಹೋರಾಟಕ್ಕೆ ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಬೆಂಬಲಿಸಿದ್ದು ನಿಜವೆ?

ಕ್ರಷರ್ ನಲ್ಲಿ ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಪರಿಶೀಲನೆ ನಡೆಸಿದಾಗ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ಗೋಚವಳ್ಳಿಯ ಕ್ರಷರ್ ನಿಂದ ರಕ್ಷಣೆ ಮಾಡಲಾಗಿದೆ. ನಂತರ ಕೌನ್ಸಲಿಂಗ್ ವೇಳೆ ತನ್ನ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಹೇಳಿಕೆ ನೀಡಿದ್ದಾಳೆ. ದೌರ್ಜನ್ಯ ಎಸಗಿದ ಸ್ಥಳೀಯ 15 ಮಂದಿಯ ಹೆಸರನ್ನು ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ತನ್ನ ಚಿಕ್ಕಮ್ಮ ಗೀತಾ ಎಂಬಾಕೆಯೂ ಸಹಕಾರ ನೀಡಿದ್ದಾಳೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಗಿರೀಶ್

ಕ್ರಷರ್‌ನಿಂದ ಬಾಲಕಿಯನ್ನು ರಕ್ಷಣೆ ಮಾಡಿರುವ ಮಕ್ಕಳ ಕಲ್ಯಾಣ ಸಮಿತಿ ಆಕೆಯನ್ನು ಸದ್ಯ ಸ್ವಾಧಾರ್ ಕೇಂದ್ರದಲ್ಲಿ ಇರಿಸಿದ್ದು, ಆಕೆಯ ಹೇಳಿಕೆ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳು ತಮ್ಮ ಪ್ರಭಾವ ಬಳಸಿ ಪಾರಾಗುವ ಸಾಧ್ಯತೆ ಇದ್ದು, ಪೊಲೀಸರು ಈ ಸಂಬಂಧ ಅಗತ್ಯ ಕ್ರಮವಹಿಸಬೇಕೆಂದು ಅಲ್ಲಿನ ಸ್ಥಳೀಯರೊಬ್ಬರು ಮಾಹಿತಿ ನೀಡಿದರು.

ಬಾಲಕಿಯ ಹಿನ್ನೆಲೆ:

ಬಾಲಕಿ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಆಗಲೇ ಈಕೆಯ ತಾಯಿ ನಿಧನರಾಗಿದ್ದರು. ನಂತರ ಬಾಲಕಿಯ ತಂದೆ ಮತ್ತೊಂದು ಮದುವೆಯಾಗಿ ಹಾವೇರಿಯಲ್ಲಿ ವಾಸವಿದ್ದಾನೆ. ಬಾಲಕಿ ತನ್ನ ತಾಯಿಯ ತಮ್ಮನ ಮನೆಯಲ್ಲಿ ಓದುತ್ತಿದ್ದಳು. ಲಾಕ್‍ಡೌನ್ ಸಂದರ್ಭದಲ್ಲಿ ಶೃಂಗೇರಿಯ ಚಿಕ್ಕಮ್ಮನ ಮನೆಗೆ ಬಂದಿದ್ದು, ಬಾಲಕಿ ಚಿಕ್ಕಮ್ಮ ಮನೆಯ ಸಮೀಪದಲ್ಲೇ ಇದ್ದ ಕ್ರಷರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಚಿಕ್ಕಮ್ಮನಿಗೆ ಆರೋಗ್ಯ ಸರಿಯಿಲ್ಲದ ಸಂದರ್ಭದಲ್ಲಿ ಬಾಲಕಿ ಕ್ರಷರ್‌ನಲ್ಲಿ ಕೆಲಸಕ್ಕೆ ಹೋಗಿದ್ದಾಳೆ. ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕೆಯನ್ನು ಮರುಳು ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ನಂತರ ತನ್ನ ಸ್ನೇಹಿತರೊಂದಿಗೂ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾನೆ.

ಮಣಿಕಂಠ ಹೊಳೆಕೊಪ್ಪ (ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ)

ಆರೋಪಿ ಗೀತಾಳ ಹಿನ್ನೆಲೆ:

ಈಕೆ ಬ್ರಾಹ್ಮಣ ಕುಟುಂಬಕ್ಕೆ ಸೇರಿದವಳಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯವಳು. ಶೃಂಗೇರಿಯಲ್ಲಿ ಬ್ರಾಹ್ಮಣ ಯುವಕರಿಗೆ ಹೆಣ್ಣು ಸಿಗದ ಕಾರಣಕ್ಕೆ ಈಕೆಯನ್ನು ಸುರೇಶ್ ಎಂಬುವವರು ಮದುವೆಯಾಗಿ ಶೃಂಗೇರಿಗೆ ಕರೆದುಕೊಂಡುಬಂದಿದ್ದರು. ಇಲ್ಲಿ ಈಕೆ ಮೊದಲಿನಿಂದಲೂ ಇಂತಹ ದಂಧೆಯಲ್ಲಿ ತೊಡಗಿದ್ದಳು. ನಂತರ ತನ್ನ ಅಕ್ಕನ ಮಗಳನ್ನು ಹಾವೇರಿಯಿಂದ ಕರೆದುಕಂಡು ಬಂದು ಆಕೆಯನ್ನೂ ಇದೇ ದಂಧೆಗೆ ಬಳಸಿಕೊಂಡು ಹಣ ಸಂಪಾದಿಸುತ್ತಿದ್ದಳು. ಇದನ್ನು ಸಹಿಸದ ಸುರೇಶ್ ವಿಚ್ಚೇದನ ಪಡೆಯಲು ನಿರ್ಧರಿಸಿದ. ಆದರೆ ಕಾನೂನು ಪ್ರಕಾರ ಗಂಡನೇ ವಿಚ್ಚೇದನ ನೀಡಿದರೆ ಜೀವನಾಂಶ ಕೊಡಬೆಕಾಗುತ್ತದೆ. ಆದರೆ ಆತನ ಬಳಿ ಅಷ್ಟು ಹಣ ಇಲ್ಲವಾದ್ದರಿಂದ ಗ್ರಾಮಸ್ಥರ ಸಹಕಾರದೊಟ್ಟಿಗೆ ಸೇರಿ, ಈ ದಂಧೆಯನ್ನ ಕಾರಣವಾಗಿಟ್ಟುಕೊಂಡು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಈ ದೂರನ್ನು ತೆಗೆದುಕೊಂಡಿರಲಿಲ್ಲ . ನಂತರ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ಆದೇಶ ಬಂದ ನಂತರ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಗ್ರಾಮಸ್ಥರೊಬ್ಬರು ಹೇಳಿದರು.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಎಫ್‌ಐಆರ್ ದಾಖಲಾಗಿರುವ ಆರೋಪಿಗಳು ಮತ್ತು ಅವರ ಹಿನ್ನೆಲೆ:

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಜೊತೆ ಆರೋಪಿ ವಿಕಾಸ್

ಇನ್ನೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಶೇಖಡ 90 ರಷ್ಟು ಆರೋಪಿಗಳು ಬಿಜೆಪಿ ಮತ್ತು ಸಂಘಪರಿವಾರದವರೆಂದು ಗ್ರಾಮಸ್ಥರು ಖಚಿತಪಡಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...