Homeಕರ್ನಾಟಕಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ವೈರಲ್ ಆಗುತ್ತಿವೆ.

- Advertisement -
- Advertisement -

ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ 15 ವರ್ಷ ಬಾಲಕಿ ತನ್ನ ತಾಯಿ ನಿಧನರಾದ ನಂತರ ತನ್ನ ಚಿಕ್ಕಮ್ಮನೊಂದಿಗೆ ಇತ್ತೀಚೆಗೆ ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪದಲ್ಲಿರುವ ಗೋಚುವಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಅಲ್ಲಿನ ಕೆಲಸಗಾರನೊಬ್ಬ ಬಾಲಕಿಯನ್ನು ಪುಸಲಾಯಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಆತನ ಸ್ನೇಹಿತರೂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯದ ವಿಷಯವನ್ನು ಬಾಯಿ ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ಪೊಟೊಗಳನ್ನು ವೈರಲ್ ಮಾಡುವುದಾಗಿ ಬಾಲಕಿಯನ್ನು ಹೆದರಿಸಿದ್ದಾರೆ. ನಂತರ ಈ ಬಾಲಕಿಯ ಮೇಲೆ ಕಳೆದ 1 ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಯುತ್ತಲೇ ಬಂದಿದೆ. ಇದನ್ನು ಬಾಲಕಿಯ ಚಿಕ್ಕಮ್ಮ ಗೀತಾ ಎಂಬುವವರು ದಂಧೆಯನ್ನಾಗಿ ಮಾಡಿಕೊಂಡು ಹಣ ಸಂಪಾದಿಸುತ್ತಿದ್ದರು ಎಂದೂ ಸಹ ಹೇಳಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದ ಸ್ಮಾಲ್ ಅಭಿ, ಆನೆಗುಂದ ಗ್ರಾಮದ ರಾಜೇಶ್, ಅಮಿತ್, ಗಿರೀಶ್, ಹೊಳೆಕೊಪ್ಪ ಗ್ರಾಮದ ಮಣಿಕಂಠ, ವಿಕಾಸ್, ನೆಮ್ಮಾರ್ ಸಂಪತ್, ಶೃಂಗೇರಿಯ ನಾರಾಯಣ್ ಗೌಡ, ಅಶ್ವತ್‍ಗೌಡ, ಅಭಿಗೌಡ, ಕುರುಬಗೆರೆ ಸಂತೋಷ್, ಹೆಗ್ಗದ್ದೆಯ ಧೀಕ್ಷಿತ್, ಹೇರೂರಿನ ಸಂತೋಷ್, ಕಿಗ್ಗಾದ ನಿರಂಜನ್, ಬಸ್ ಚಾಲಕ ಖಾಂಡ್ಯ ಯೋಗೀಶ್ ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ಚಿಕ್ಕಮ್ಮ ಗೀತಾಳನ್ನು 16ನೇ ಆರೋಪಿಯನ್ನಾಗಿಸಲಾಗಿದೆ. ಅಲ್ಲದೇ ಬಾಲ ಕಾರ್ಮಿಕರನ್ನು ಕ್ರಷರ್ ನಲ್ಲಿ ಕೆಲಸಕ್ಕೆ ನೇಮಿಸಿಕೊಂಡ ಆರೋಪದಡಿಯಲ್ಲಿ ಕ್ರಷರ್ ಮಾಲಕನ್ನು 17ನೇ ಆರೋಪಿಯನ್ನಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

ಬಾಲಕಿಗೆ ಲೈಂಗಿಕ ದೌರ್ಜನ್ಯದ ಕಿರುಕುಳ ನೀಡಿರುವ ಆರೋಪಿಗಳ ಪೈಕಿ ಬಹುತೇಕ ಮಂದಿ ಸಂಘಪರಿವಾರದಲ್ಲಿ ಗುರುತಿಸಿಕೊಂಡವರಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಸ್ಮಾಲ್ (ಸ್ಮಾಲ್ ಸಿಗರೇಟ್ ಸೇದುತ್ತಿದ್ದ) ಅಭಿ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದಾನೆ. ಮಣಿಕಂಠ ಎಂಬಾತ ಶೃಂಗೇರಿ ತಾಲೂಕು ಬಿಜೆಪಿ ಯುವಮೋರ್ಚಾದ ಸದಸ್ಯನಾಗಿದ್ದಾನೆ. ಇನ್ನು ವಿಕಾಸ್ ಎಂಬಾತ ಬಿಜೆಪಿ ಪಕ್ಷದ ಜಿ.ಪಂ ಸದಸ್ಯರೊಬ್ಬರ ಹತ್ತಿರದ ಸಂಬಂಧಿ ಎನ್ನಲಾಗುತ್ತಿದೆ. ಸಂಪತ್ ಎಂಬಾತ ಸನಾತನ ಸಂಸ್ಥೆಯ ಸದಸ್ಯ ಎನ್ನಲಾಗುತ್ತಿದ್ದು, ಇವರು ಸಂಘಪರಿವಾರದೊಂದಿಗೆ ಗುರುತಿಸಿಕೊಂಡಿರುವ ಪೊಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಸಂಪತ್ ಗಿಣಿಕಲ್ (ಬಜರಂಗದಳ ಕಾರ್ಯಕರ್ತ)

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ರಕ್ಷಿಸಿರುವ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಎಂಬವವರು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದು, “ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಾಲಕಿಯ ಚಿಕ್ಕಮ್ಮ ಮತ್ತು ಕ್ರಷರ್‌ನ ಮಾಲಿಕ ಸೇರಿದಂತೆ 17 ಆರೋಪಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳನ್ನು ಬಂಧಿಸಲು ತನಿಖೆ ನಡೆಸುತ್ತಿದ್ದೇವೆ ಎಂದು ಶೃಂಗೇರಿ ಪೊಲೀಸ್ ಠಾಣೆಯ ಎಸ್‌ಐ ಪ್ರಮೋದ್ ಕುಮಾರ್ ನಾನುಗೌರಿ.ಕಾಂ ಗೆ ತಿಳಿಸಿದರು.

ಸ್ಮಾಲ್ ಅಭಿ

ಇದನ್ನೂ ಓದಿ: ರೈತ ಹೋರಾಟಕ್ಕೆ ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಬೆಂಬಲಿಸಿದ್ದು ನಿಜವೆ?

ಕ್ರಷರ್ ನಲ್ಲಿ ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಪರಿಶೀಲನೆ ನಡೆಸಿದಾಗ ದೌರ್ಜನ್ಯಕ್ಕೊಳಗಾದ ಬಾಲಕಿಯನ್ನು ಗೋಚವಳ್ಳಿಯ ಕ್ರಷರ್ ನಿಂದ ರಕ್ಷಣೆ ಮಾಡಲಾಗಿದೆ. ನಂತರ ಕೌನ್ಸಲಿಂಗ್ ವೇಳೆ ತನ್ನ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಹೇಳಿಕೆ ನೀಡಿದ್ದಾಳೆ. ದೌರ್ಜನ್ಯ ಎಸಗಿದ ಸ್ಥಳೀಯ 15 ಮಂದಿಯ ಹೆಸರನ್ನು ಬಾಲಕಿ ಹೇಳಿಕೆಯಲ್ಲಿ ತಿಳಿಸಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ತನ್ನ ಚಿಕ್ಕಮ್ಮ ಗೀತಾ ಎಂಬಾಕೆಯೂ ಸಹಕಾರ ನೀಡಿದ್ದಾಳೆಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಗಿರೀಶ್

ಕ್ರಷರ್‌ನಿಂದ ಬಾಲಕಿಯನ್ನು ರಕ್ಷಣೆ ಮಾಡಿರುವ ಮಕ್ಕಳ ಕಲ್ಯಾಣ ಸಮಿತಿ ಆಕೆಯನ್ನು ಸದ್ಯ ಸ್ವಾಧಾರ್ ಕೇಂದ್ರದಲ್ಲಿ ಇರಿಸಿದ್ದು, ಆಕೆಯ ಹೇಳಿಕೆ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪ್ರತಿಭಟನೆಯೊಂದರಲ್ಲಿ ಭಾರತದ ಬಾವುಟವನ್ನು ಬಳಸಲಾಗಿದೆಯೇ?

ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳು ತಮ್ಮ ಪ್ರಭಾವ ಬಳಸಿ ಪಾರಾಗುವ ಸಾಧ್ಯತೆ ಇದ್ದು, ಪೊಲೀಸರು ಈ ಸಂಬಂಧ ಅಗತ್ಯ ಕ್ರಮವಹಿಸಬೇಕೆಂದು ಅಲ್ಲಿನ ಸ್ಥಳೀಯರೊಬ್ಬರು ಮಾಹಿತಿ ನೀಡಿದರು.

ಬಾಲಕಿಯ ಹಿನ್ನೆಲೆ:

ಬಾಲಕಿ 7ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, ಆಗಲೇ ಈಕೆಯ ತಾಯಿ ನಿಧನರಾಗಿದ್ದರು. ನಂತರ ಬಾಲಕಿಯ ತಂದೆ ಮತ್ತೊಂದು ಮದುವೆಯಾಗಿ ಹಾವೇರಿಯಲ್ಲಿ ವಾಸವಿದ್ದಾನೆ. ಬಾಲಕಿ ತನ್ನ ತಾಯಿಯ ತಮ್ಮನ ಮನೆಯಲ್ಲಿ ಓದುತ್ತಿದ್ದಳು. ಲಾಕ್‍ಡೌನ್ ಸಂದರ್ಭದಲ್ಲಿ ಶೃಂಗೇರಿಯ ಚಿಕ್ಕಮ್ಮನ ಮನೆಗೆ ಬಂದಿದ್ದು, ಬಾಲಕಿ ಚಿಕ್ಕಮ್ಮ ಮನೆಯ ಸಮೀಪದಲ್ಲೇ ಇದ್ದ ಕ್ರಷರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಚಿಕ್ಕಮ್ಮನಿಗೆ ಆರೋಗ್ಯ ಸರಿಯಿಲ್ಲದ ಸಂದರ್ಭದಲ್ಲಿ ಬಾಲಕಿ ಕ್ರಷರ್‌ನಲ್ಲಿ ಕೆಲಸಕ್ಕೆ ಹೋಗಿದ್ದಾಳೆ. ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕೆಯನ್ನು ಮರುಳು ಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ನಂತರ ತನ್ನ ಸ್ನೇಹಿತರೊಂದಿಗೂ ಲೈಂಗಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದಾನೆ.

ಮಣಿಕಂಠ ಹೊಳೆಕೊಪ್ಪ (ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ)

ಆರೋಪಿ ಗೀತಾಳ ಹಿನ್ನೆಲೆ:

ಈಕೆ ಬ್ರಾಹ್ಮಣ ಕುಟುಂಬಕ್ಕೆ ಸೇರಿದವಳಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯವಳು. ಶೃಂಗೇರಿಯಲ್ಲಿ ಬ್ರಾಹ್ಮಣ ಯುವಕರಿಗೆ ಹೆಣ್ಣು ಸಿಗದ ಕಾರಣಕ್ಕೆ ಈಕೆಯನ್ನು ಸುರೇಶ್ ಎಂಬುವವರು ಮದುವೆಯಾಗಿ ಶೃಂಗೇರಿಗೆ ಕರೆದುಕೊಂಡುಬಂದಿದ್ದರು. ಇಲ್ಲಿ ಈಕೆ ಮೊದಲಿನಿಂದಲೂ ಇಂತಹ ದಂಧೆಯಲ್ಲಿ ತೊಡಗಿದ್ದಳು. ನಂತರ ತನ್ನ ಅಕ್ಕನ ಮಗಳನ್ನು ಹಾವೇರಿಯಿಂದ ಕರೆದುಕಂಡು ಬಂದು ಆಕೆಯನ್ನೂ ಇದೇ ದಂಧೆಗೆ ಬಳಸಿಕೊಂಡು ಹಣ ಸಂಪಾದಿಸುತ್ತಿದ್ದಳು. ಇದನ್ನು ಸಹಿಸದ ಸುರೇಶ್ ವಿಚ್ಚೇದನ ಪಡೆಯಲು ನಿರ್ಧರಿಸಿದ. ಆದರೆ ಕಾನೂನು ಪ್ರಕಾರ ಗಂಡನೇ ವಿಚ್ಚೇದನ ನೀಡಿದರೆ ಜೀವನಾಂಶ ಕೊಡಬೆಕಾಗುತ್ತದೆ. ಆದರೆ ಆತನ ಬಳಿ ಅಷ್ಟು ಹಣ ಇಲ್ಲವಾದ್ದರಿಂದ ಗ್ರಾಮಸ್ಥರ ಸಹಕಾರದೊಟ್ಟಿಗೆ ಸೇರಿ, ಈ ದಂಧೆಯನ್ನ ಕಾರಣವಾಗಿಟ್ಟುಕೊಂಡು ಶೃಂಗೇರಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಈ ದೂರನ್ನು ತೆಗೆದುಕೊಂಡಿರಲಿಲ್ಲ . ನಂತರ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ಆದೇಶ ಬಂದ ನಂತರ ತನಿಖೆ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಗ್ರಾಮಸ್ಥರೊಬ್ಬರು ಹೇಳಿದರು.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಎಫ್‌ಐಆರ್ ದಾಖಲಾಗಿರುವ ಆರೋಪಿಗಳು ಮತ್ತು ಅವರ ಹಿನ್ನೆಲೆ:

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಜೊತೆ ಆರೋಪಿ ವಿಕಾಸ್

ಇನ್ನೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಶೇಖಡ 90 ರಷ್ಟು ಆರೋಪಿಗಳು ಬಿಜೆಪಿ ಮತ್ತು ಸಂಘಪರಿವಾರದವರೆಂದು ಗ್ರಾಮಸ್ಥರು ಖಚಿತಪಡಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...