Homeಮುಖಪುಟಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು?

- Advertisement -
- Advertisement -

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಕಿಸಾನ್‌ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ ಸೇರಿ ಹಲವು ಪ್ರಮುಖ ಸಂಸ್ಥೆ, ಸಂಘಟನೆ ಹಾಗೂ ಸಾರ್ವಜನಿಕ ವ್ಯಕ್ತಿಗಳ ಟ್ವಿಟರ್‌ ಖಾತೆಯನ್ನು ಟ್ವಿಟರ್ ಇಂಡಿಯಾ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆಯಲಾಗಿದೆ.

ಮೇಲ್ನೋಟಕ್ಕೆ ಟ್ವಿಟರ್ ಯಾವ ಯಾವ ಖಾತೆಗಳನ್ನು ತಡೆಹಿಡಿದಿದೆಯೋ ಅವೆಲ್ಲವೂ ಸಹ ಪ್ರಸ್ತುತ ನಡೆಸುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿದ ಖಾತೆಗಳೇ ಆಗಿವೆ. ಹಾಗಾಗಿ ರೈತ ಹೋರಾಟವನ್ನು ಹಣಿಯುವ ಸಲುವಾಗಿಯೇ ಟ್ವಿಟರ್ ಈ ಕೆಲಸ ಮಾಡಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ರೈತ ಹೋರಾಟದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಯೋಜಿಸಿದ್ದ 250ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಟ್ವಿಟರ್ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಇದನ್ನು ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

#ModiPlanningFarmerGenocide ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಕ್ಕಾಗಿ ಅವು ನಕಲಿ, ಬೆದರಿಸುವ ಮತ್ತು ಪ್ರಚೋದನಕಾರಿ ಟ್ವೀಟ್‌ಗಳಾಗಿವೆ ಎಂದು ಟ್ವಿಟರ್ ಇಂಡಿಯಾ ಹೇಳಿದ್ದು, ಅರ್ಹ ಕಾರಣ ತಿಳಿಸಿದರೆ ಅವನ್ನು ಪರಿಶೀಲಿಸಲಾಗುವುದು ಎಂದಿದೆ. ಟ್ವಿಟರ್‌ನ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ
“ಆಘಾತಕಾರಿ! ಟ್ವಿಟರ್ ಇಂಡಿಯಾ ‘ಕಾನೂನು ಬೇಡಿಕೆ’ಗಳಿಗೆ ಪ್ರತಿಕ್ರಿಯೆಯಾಗಿ ರೈತರ ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡುವ ಹ್ಯಾಂಡಲ್‌ಗಳ ಹಲವಾರು ಖಾತೆಗಳನ್ನು ಅಮಾನತುಗೊಳಿಸುತ್ತದೆ! ಇದು ಯಾರ  ಆದೇಶ? ಸರ್ಕಾರದ್ದೆ? ಖಂಡಿತವಾಗಿಯೂ ಯಾವುದೇ ನ್ಯಾಯಾಲಯದಲ್ಲ. ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು ಎಂದು ಪ್ರಶ್ನಿಸಿದ್ದಾರೆ.

ಪನ್‌ಸ್ಟೆರ್ ಎಂಬುವವರು ಟ್ವಿಟರ್‌ನ ಕ್ರಮವನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆದಿದ್ದಾರೆ.

ಇಂದು ಬೆಳಿಗ್ಗೆ ಕಾರವಾನ್ ಪತ್ರಿಕೆಯು ನಟಿ ಅಕ್ಷಯ್ ಕುಮಾರ್ ಕುರಿತು ಆಕರ್ಷಕ ಮುಖಪುಟ ಪ್ರಕಟಿಸಿದೆ. ಮಧ್ಯಾಹ್ನವೇ ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ ಎಂದು ರಾಜಾ ಸೆನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ನಾವೀಗ ಫ್ಯಾಸಿಸ್ಟ್ ಎಂಬ ಪದವನ್ನು ಬಳಸಬಹುದೇ? ಎಂದು ಆಲ್ಟ್‌ ನ್ಯೂಸ್ ಸ್ಥಾಪಕ ಪ್ರತೀಕ್ ಸಿನ್ಹಾ ಪ್ರಶ್ನಿಸಿದ್ದಾರೆ.

ಕಿಸಾನ್ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ, ಟ್ರ್ಯಾಕ್ಟರ್ ಟು ಟ್ವಿಟರ್, ಜಾಟ್ ಜಂಕ್ಷನ್, ಸಿಪಿಐ(ಎಂ) ಮುಖಂಡ ಎಂ.ಡಿ ಸಲೀಂ, ಸಿಪಿಐ(ಎಂ) ಪಾಂಡಿಚೇರಿ, ಆಮ್ ಆದ್ಮಿ ಪಕ್ಷದ ಆರತಿ, ಪ್ರೀತಿ ಎಸ್‌ ಮೆನನ್, ಶಾಸಕ ಜರ್ನಲ್ ಸಿಂಗ್, ನಟ ಸುಶಾಂತ್, ಬಿಕೆಯು ಉಗ್ರಾಣ್ ಮುಂತಾದವರ ಖಾತೆಗಳನ್ನು ತಡೆಹಿಡಿಯಲಾಗಿದೆ. ಪ್ರಸಾರ್ ಭಾರಸಿ ಸಿಇಒ ಶಶಿ ಎಸ್‌ರವರ ಖಾತೆಯನ್ನು ಸಹ ಟ್ವಿಟರ್ ತಡೆಹಿಡಿದಿತ್ತು. ನಂತರ ಅದನ್ನು ತಪ್ಪು ಎಂದು ಪರಿಗಣಿಸಿ ಖಾತೆಯನ್ನು ಚಾಲ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


 

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...