Homeಮುಖಪುಟಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು?

- Advertisement -
- Advertisement -

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಕಿಸಾನ್‌ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ ಸೇರಿ ಹಲವು ಪ್ರಮುಖ ಸಂಸ್ಥೆ, ಸಂಘಟನೆ ಹಾಗೂ ಸಾರ್ವಜನಿಕ ವ್ಯಕ್ತಿಗಳ ಟ್ವಿಟರ್‌ ಖಾತೆಯನ್ನು ಟ್ವಿಟರ್ ಇಂಡಿಯಾ ತಾತ್ಕಾಲಿಕವಾಗಿ ಅಮಾನತಿನಲ್ಲಿಟ್ಟಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಇದನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆಯಲಾಗಿದೆ.

ಮೇಲ್ನೋಟಕ್ಕೆ ಟ್ವಿಟರ್ ಯಾವ ಯಾವ ಖಾತೆಗಳನ್ನು ತಡೆಹಿಡಿದಿದೆಯೋ ಅವೆಲ್ಲವೂ ಸಹ ಪ್ರಸ್ತುತ ನಡೆಸುತ್ತಿರುವ ರೈತ ಹೋರಾಟವನ್ನು ಬೆಂಬಲಿಸಿದ ಖಾತೆಗಳೇ ಆಗಿವೆ. ಹಾಗಾಗಿ ರೈತ ಹೋರಾಟವನ್ನು ಹಣಿಯುವ ಸಲುವಾಗಿಯೇ ಟ್ವಿಟರ್ ಈ ಕೆಲಸ ಮಾಡಿದೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿದೆ.

ರೈತ ಹೋರಾಟದ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಯೋಜಿಸಿದ್ದ 250ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಟ್ವಿಟರ್ ಇಂಡಿಯಾ ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಇದನ್ನು ಜಾರಿಗೊಳಿಸಲಾಗಿದೆ ಎನ್ನಲಾಗಿದೆ.

#ModiPlanningFarmerGenocide ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಕ್ಕಾಗಿ ಅವು ನಕಲಿ, ಬೆದರಿಸುವ ಮತ್ತು ಪ್ರಚೋದನಕಾರಿ ಟ್ವೀಟ್‌ಗಳಾಗಿವೆ ಎಂದು ಟ್ವಿಟರ್ ಇಂಡಿಯಾ ಹೇಳಿದ್ದು, ಅರ್ಹ ಕಾರಣ ತಿಳಿಸಿದರೆ ಅವನ್ನು ಪರಿಶೀಲಿಸಲಾಗುವುದು ಎಂದಿದೆ. ಟ್ವಿಟರ್‌ನ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ
“ಆಘಾತಕಾರಿ! ಟ್ವಿಟರ್ ಇಂಡಿಯಾ ‘ಕಾನೂನು ಬೇಡಿಕೆ’ಗಳಿಗೆ ಪ್ರತಿಕ್ರಿಯೆಯಾಗಿ ರೈತರ ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡುವ ಹ್ಯಾಂಡಲ್‌ಗಳ ಹಲವಾರು ಖಾತೆಗಳನ್ನು ಅಮಾನತುಗೊಳಿಸುತ್ತದೆ! ಇದು ಯಾರ  ಆದೇಶ? ಸರ್ಕಾರದ್ದೆ? ಖಂಡಿತವಾಗಿಯೂ ಯಾವುದೇ ನ್ಯಾಯಾಲಯದಲ್ಲ. ಟ್ವಿಟರ್ ಸರ್ಕಾರದ ಬೇಡಿಕೆಯಂತೆ ಕಾರ್ಯನಿರ್ವಹಿಸಿದರೆ ಅದು ತನ್ನನ್ನು ತಾನು ಸ್ವತಂತ್ರ ವೇದಿಕೆ ಎಂದು ಹೇಗೆ ಕರೆದುಕೊಳ್ಳಬಹುದು ಎಂದು ಪ್ರಶ್ನಿಸಿದ್ದಾರೆ.

ಪನ್‌ಸ್ಟೆರ್ ಎಂಬುವವರು ಟ್ವಿಟರ್‌ನ ಕ್ರಮವನ್ನು ಅಘೋಷಿತ ತುರ್ತುಪರಿಸ್ಥಿತಿ ಎಂದು ಕರೆದಿದ್ದಾರೆ.

ಇಂದು ಬೆಳಿಗ್ಗೆ ಕಾರವಾನ್ ಪತ್ರಿಕೆಯು ನಟಿ ಅಕ್ಷಯ್ ಕುಮಾರ್ ಕುರಿತು ಆಕರ್ಷಕ ಮುಖಪುಟ ಪ್ರಕಟಿಸಿದೆ. ಮಧ್ಯಾಹ್ನವೇ ಅವರ ಟ್ವಿಟರ್ ಖಾತೆ ಬ್ಲಾಕ್ ಆಗಿದೆ ಎಂದು ರಾಜಾ ಸೆನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ನಾವೀಗ ಫ್ಯಾಸಿಸ್ಟ್ ಎಂಬ ಪದವನ್ನು ಬಳಸಬಹುದೇ? ಎಂದು ಆಲ್ಟ್‌ ನ್ಯೂಸ್ ಸ್ಥಾಪಕ ಪ್ರತೀಕ್ ಸಿನ್ಹಾ ಪ್ರಶ್ನಿಸಿದ್ದಾರೆ.

ಕಿಸಾನ್ ಏಕ್ತಾ ಮೋರ್ಚಾ, ಕಾರವಾನ್ ಇಂಡಿಯಾ, ಟ್ರ್ಯಾಕ್ಟರ್ ಟು ಟ್ವಿಟರ್, ಜಾಟ್ ಜಂಕ್ಷನ್, ಸಿಪಿಐ(ಎಂ) ಮುಖಂಡ ಎಂ.ಡಿ ಸಲೀಂ, ಸಿಪಿಐ(ಎಂ) ಪಾಂಡಿಚೇರಿ, ಆಮ್ ಆದ್ಮಿ ಪಕ್ಷದ ಆರತಿ, ಪ್ರೀತಿ ಎಸ್‌ ಮೆನನ್, ಶಾಸಕ ಜರ್ನಲ್ ಸಿಂಗ್, ನಟ ಸುಶಾಂತ್, ಬಿಕೆಯು ಉಗ್ರಾಣ್ ಮುಂತಾದವರ ಖಾತೆಗಳನ್ನು ತಡೆಹಿಡಿಯಲಾಗಿದೆ. ಪ್ರಸಾರ್ ಭಾರಸಿ ಸಿಇಒ ಶಶಿ ಎಸ್‌ರವರ ಖಾತೆಯನ್ನು ಸಹ ಟ್ವಿಟರ್ ತಡೆಹಿಡಿದಿತ್ತು. ನಂತರ ಅದನ್ನು ತಪ್ಪು ಎಂದು ಪರಿಗಣಿಸಿ ಖಾತೆಯನ್ನು ಚಾಲ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


 

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...