Homeಮುಖಪುಟಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು - ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು – ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

"ಈ ವರ್ಷ ಕೊರೊನಾ ಸಂಕಷ್ಟ ಎದುರಾಗಿತ್ತು. ಆದರೆ, ಕಳೆದ ವರ್ಷ ಏನಾಗಿತ್ತು? - GDP ಕುಸಿತದ ಬಗ್ಗೆ ಸಿದ್ದರಾಮಯ್ಯ ವಾಗ್ದಾಳಿ"

- Advertisement -
- Advertisement -

ಕೇಂದ್ರ ಸರ್ಕಾರ 2021ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇದರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. “ಇಲ್ಲಿ ವಿವರಗಳನ್ನು ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ ‘ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್‌ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ ‘ಆತ್ಮ ಬರ್ಬಾದ್’ (ವಿನಾಶ) ಬಜೆಟ್ ಕೂಡಾ ಹೌದು. ಕೊರೊನಾದಿಂದಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗಿದೆ, ರೈತರ ಬೆಳೆಗೆ ಬೆಲೆ ಇಲ್ಲದೆ ದಿವಾಳಿ ಸ್ಥಿತಿಯಲ್ಲಿದ್ದಾರೆ, ಉದ್ಯಮಿಗಳು ಮಾರುಕಟ್ಟೆ ಇಲ್ಲದೆ ಕಷ್ಟದಲ್ಲಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಯಾವ ನಿರ್ದಿಷ್ಠ ಕ್ರಮಗಳು 2021-22ರ ಸಾಲಿನ ಬಜೆಟ್ ನಲ್ಲಿ ಇಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಈ ರಾಜ್ಯದಲ್ಲಿ ಸರ್ಕಾರಿ ಕಛೇರಿಗಳನ್ನು ಸ್ವಚ್ಚಗೊಳಿಸಲು ಇನ್ನುಮುಂದೆ ಗೋಮೂತ್ರ ಬಳಕೆ: ಆದೇಶ

ಕೊರೊನಾದಿಂದಾಗಿ ನೆಲಕಚ್ಚಿರುವ ಆರ್ಥಿಕತೆಯ ಚೇತರಿಕೆಗಾಗಿ ಜನರ ಕೈಗೆ ದುಡ್ಡು ಸೇರುವಂತೆ ಮಾಡಬೇಕೆಂಬುದು ನಮ್ಮ ದೇಶದ ಮತ್ತು ಅಂತರರಾಷ್ಟ್ರೀಯ ಆರ್ಥಿಕ ತಜ್ಞರೆಲ್ಲರೂ ಸೂಚಿಸಿದ್ದ ಸಾಮಾನ್ಯ ಪರಿಹಾರ. ನಿರ್ಮಲಾ ಸೀತಾರಾಮನ್ ಜನರಿಂದ ಇನ್ನಷ್ಟು ಹಣವನ್ನು ಕಿತ್ತುಕೊಳ್ಳಲು ಹೊರಟಿದ್ದಾರೆಯೇ ಹೊರತು ಅವರ ಜೇಬಿಗೆ ಏನನ್ನೂ ಹಾಕಿಲ್ಲ. ತೆರಿಗೆ ಎನ್ನುವುದು ಬಜೆಟ್‌ಗಳ ಸಾಮಾನ್ಯ ಭಾಗ. ಪ್ರಮುಖವಾಗಿ ತೆರಿಗೆಗಳ ಮೂಲಕವೇ ಸರ್ಕಾರ ತನ್ನ ವೆಚ್ಚಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಡೀಕರಿಸುತ್ತದೆ. ಆದರೆ ನಿರ್ಮಲಾ ಸೀತಾರಾಮನ್ ಅವರು ನೇರವಾಗಿ ಹೆಚ್ಚು ತೆರಿಗೆ ವಿಧಿಸದೆ, ಕೃಷಿ ಮೂಲಸೌಕರ್ಯ ಸೆಸ್ ಹೇರಿ ರೈತರ ಹೆಸರಲ್ಲಿ ಪರೋಕ್ಷವಾಗಿ ಸಂಪನ್ಮೂಲ ಕ್ರೋಡಿಕರಿಸಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

“ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಕಲ್ಲಿದ್ದಲು, ಪಾಮ್ ಆಯಿಲ್, ಕಡಲೆ, ಬಟಾಣಿ, ಹತ್ತಿಯಿಂದ ಹಿಡಿದು ಸೇಬು, ಮದ್ಯದ ವರೆಗೆ ಎಲ್ಲದರ ಮೇಲೂ ಶೇಕಡಾ 2.5 ರಿಂದ ಹಿಡಿದು ಶೇಕಡಾ 100 ರವರೆಗೆ ಕೃಷಿ ಸೆಸ್ ಹೇರಲಾಗಿದೆ. ಇದರಿಂದಾಗುವ ಬೆಲೆ ಏರಿಕೆಗೆ ರೈತರೂ ಸೇರಿದಂತೆ ಎಲ್ಲರೂ ತಲೆಕೊಡಬೇಕಾಗುತ್ತದೆ. ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಬೆಲೆ ಏರಿಕೆಯಾದಾಗ ಜನ ಸರ್ಕಾರವನ್ನಲ್ಲ; ರೈತರನ್ನು ದೂರತೊಡಗುತ್ತಾರೆ. ಈ ಮೂಲಕ ಬೆಲೆ ಏರಿಕೆಗೆ ಕೃಷಿ ಸೆಸ್ ಕಾರಣ ಎಂಬ ಜನಾಭಿಪ್ರಾಯವನ್ನು ಮೂಡಿಸಿ ಜನರನ್ನು ರೈತರ ವಿರುದ್ದ ಎತ್ತಿಕಟ್ಟುವ ಹೀನ ಕೃತ್ಯವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ತಡೆಯಲು ದಾರಿಯಲ್ಲಿ ಮುಳ್ಳುಕಂಬ ನೆಡುತ್ತಿರುವ ಕೇಂದ್ರ ಸರ್ಕಾರ!

“ಕೃಷಿ ಮೂಲಸೌಕರ್ಯ ಸೆಸ್‌ನಿಂದಾಗಿ ಸಂಗ್ರಹವಾಗುವ ಹಣ ಎಷ್ಟು? ಇದನ್ನು ಬಳಸಿಕೊಂಡು ಕೃಷಿಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಲಿರುವ ಮೂಲಸೌಕರ್ಯಗಳ ಯೋಜನೆಗಳೇನು ಎಂಬ ಬಗ್ಗೆ 65 ಪುಟಗಳ ಬಜೆಟ್ ಭಾಷಣದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ನೀರಾವರಿ, ಶೈತ್ಯಾಗಾರ, ದಾಸ್ತಾನು ಮಳಿಗೆ ಹೀಗೆ ಯಾವುದೇ ನಿರ್ದಿಷ್ಠ ಯೋಜನೆಗಳನ್ನು ಘೋಷಿಸಿಲ್ಲ. ನೀರಾವರಿ ಯೋಜನೆಗಳು, ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆ ರಕ್ಷಣೆಗೆ ಕ್ರಮಗಳು, ಕಡಿಮೆ ಬಡ್ಡಿದರದಲ್ಲಿ ಸಾಲ, ಕಡಿಮೆ ಬೆಲೆಯಲ್ಲಿ ಬೀಜ-ಗೊಬ್ಬರ ಸೇರಿದಂತೆ ರೈತರ ಅವಶ್ಯಕತೆಗಳನ್ನು ಪೂರೈಸುವ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ” ಎಂದು ಆರೋಪಿಸಿದ್ದಾರೆ.

ದೇಶಾದ್ಯಂತ ರೈತರು ಕಡಿಮೆ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುವ ಯೋಜನೆಯ ಬಗ್ಗೆ ಒತ್ತಾಯಿಸುತ್ತಾ ಬಂದಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿಯಾಗಬೇಕಾದರೆ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ ಸಿಗಬೇಕು. ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ ಇಲ್ಲ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಕಳೆದ 7 ವರ್ಷಗಳಿಂದ ರೈತರು ಮಾಡುತ್ತಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಸರ್ಕಾರ ಮಾಡಿದ್ದ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾವೇ ಕೊನೆ. ಈ ಸಾಲಮನ್ನಾ ಮಾಡಿದ್ದರೆ ಸಂಕಷ್ಟದಲ್ಲಿರುವ ರೈತರು ಸ್ವಲ್ಪ ನಿರಾಳವಾಗುತ್ತಿದ್ದರು ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಚಾಲನೆ ನೀಡಿರುವುದು ರೈತರು ಸೇರಿದಂತೆ ಎಲ್ಲ ವರ್ಗದ ಜನಗಳ ಮೇಲೆ ಇನ್ನೊಂದು ಹೊಡೆತ. ಖಾಸಗೀಕರಣಗೊಂಡರೆ ರೈತರಿಗೆ ಈಗ ಲಭ್ಯ ಇರುವ ಉಚಿತ ವಿದ್ಯುತ್ ಖಂಡಿತ ಕಡಿತ ಆಗಲಿದೆ. ಇದರ ಜೊತೆಗೆ ಸಾಮಾನ್ಯ ಜನರ ಮನೆ ಬಳಕೆಯ ವಿದ್ಯುತ್ ಕೂಡಾ ದುಬಾರಿಯಾಗಲಿದೆ. ಉದ್ಯಮಿಗಳ ಮೇಲೆಯೂ ಹೆಚ್ಚಿನ ಹೊರೆ ಬೀಳಲಿದೆ. ವಿಮಾ ಕ್ಷೇತ್ರದಲ್ಲಿ 74% ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ಅಪಾಯಕಾರಿಯಾದ ಬೆಳವಣಿಗೆ. ನಮ್ಮಲ್ಲಿ ಬಹಳ ದುರ್ಬಲವಾದ ಸಾಮಾಜಿಕ ಭದ್ರತಾ ವ್ಯವಸ್ಥೆಯಿದೆ. ವಯಸ್ಸಾದವರು ಮತ್ತು ನಿವೃತ್ತರು ತಮ್ಮ ಆರೋಗ್ಯ ಭದ್ರತೆಗಾಗಿ ವಿಮೆಯನ್ನು ನಂಬಿದ್ದಾರೆ. ಈ ಕ್ಷೇತ್ರದ ಖಾಸಗೀಕರಣದಿಂದಾಗಿ ವಿಮೆಯಿಂದಲೂ ಭದ್ರತೆ ಇಲ್ಲದಂತಾಗುವ ದಿನ ದೂರ ಇಲ್ಲ ಎಂದು ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯ ವಿರುದ್ಧ ಹರಿಹಾಯ್ದಿದ್ದಾರೆ.

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಸಂಸದರಾಗಿದ್ದರೂ ಬಜೆಟ್‌ನಲ್ಲಿ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಮೆಟ್ರೋ ಮತ್ತು ಬೆಂಗಳೂರು-ಚೆನ್ನೈ ಕಾರಿಡಾರ್‌ಗೆ ನೀಡಿರುವ ಅನುದಾನ ಹೊಸದೇನಲ್ಲ. ಉಳಿದಂತೆ ಹಣಕಾಸು ಸಚಿವರು ಒಮ್ಮೆಯೂ ಕರ್ನಾಟಕದ ಹೆಸರನ್ನೂ ಕೂಡಾ ಎತ್ತಿಲ್ಲ. ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಯಾವುದೇ ಪರಿಹಾರ ಬಜೆಟ್‌ನಿಂದ ಸಿಕ್ಕಿಲ್ಲ. ಚುನಾವಣೆ ನಡೆಯುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಿಗೆ ಹೆಚ್ಚು ಹಣ ನೀಡಲಾಗಿದೆ. ಪ್ರತಿ ವರ್ಷ ಚುನಾವಣೆ ನಡೆಸಿದರೆ ನಮಗೂ ಹೆಚ್ಚಿನ ಅನುದಾನ ನೀಡಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

“ವಿತ್ತೀಯ ಕೊರತೆ ಶೇ. 3.5ಕ್ಕೆ ತರುವುದಾಗಿ ಹೇಳಿದ್ದರು. ಈಗ ಶೇ. 9.7ಕ್ಕೆ ಏರಿದೆ. ಇದರಿಂದ ಹೆಚ್ಚು ಸಾಲ ಮಾಡಬೇಕಾಗುತ್ತದೆ. ನನ್ನ ಪ್ರಕಾರ ವಿತ್ತೀಯ ಕೊರತೆ ಶೇ.14-15 ಇದೆ. ನರೇಂದ್ರ ಮೋದಿಯವರು ಅವರು ಪ್ರಧಾನಿಯಾದ ಬಳಿಕ ಜಿಡಿಪಿ ಬೆಳವಣಿಗೆ ಕುಸಿಯುತ್ತಲೇ ಇದೆ. ಡಾ. ಮನಮೋಹನಸಿಂಗ್ ಅವರ ಅವಧಿಯಲ್ಲಿ ಇದ್ದಿದ್ದಕ್ಕಿಂತ ಕಡಿಮೆಯಾಗುತ್ತಿದೆ. ಈ ವರ್ಷ ಕೊರೊನಾ ಸಂಕಷ್ಟ ಎದುರಾಗಿತ್ತು. ಆದರೆ, ಕಳೆದ ವರ್ಷ ಏನಾಗಿತ್ತು? ನಿರುದ್ಯೋಗ ಪ್ರಮಾಣ ನಗರದಲ್ಲಿ ಶೇ.9.2 ಇತ್ತು. ಇದರಿಂದ ಯುವಕರಿಗೆ ಉದ್ಯೋಗ ಎಲ್ಲಿ ಸಿಗುತ್ತದೆ. ಅವರು ಪಕೋಡಾ ಮಾರಲು ಹೋಗಬೇಕಾಗುತ್ತದೆ. ಈ ವರ್ಷ ಜಿಡಿಪಿ ಬೆಳವಣಿಗೆ -7.7% ಆಗಿದೆ” ಎಂದು ಹೇಳಿದ್ದಾರೆ.

“2020-2021ನೇ ಸಾಲಿಗೆ ಜಿಡಿಪಿ ಬೆಳವಣಿಗೆಯನ್ನು ಶೇ.11ಕ್ಕೆ ಏರಿಸುವುದಾಗಿ ಕೇಂದ್ರ ಘೋಷಣೆ ಮಾಡಿದೆ. ಇದು ನಂಬಲು ಸಾಧ್ಯವೇ? ಇದು ಸುಳ್ಳಿನ ಕಂತೆ. ಅಂಕಿ-ಅಂಶಗಳನ್ನು ನೀಡದೆ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಇದಾಗಿದೆ. ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ವಿವರಗಳನ್ನು ಬಿಚ್ಚಿಟ್ಟದ್ದಕ್ಕಿಂತ ಮುಚ್ಚಿಟ್ಟದ್ದೇ ಹೆಚ್ಚು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಅಬಕಾರಿ ಸುಂಕ ಹೆಚ್ಚಿಸಲಾಗಿದೆ. 80 ಕೋಟಿ ಮಂದಿಗೆ ಅಂದರೆ ಶೇ. 80ರಷ್ಟು ಮಂದಿಗೆ ಪಡಿತರ ಚೀಟಿ ಮೂಲಕ ಆಹಾರ ಧಾನ್ಯ ನೀಡಲಾಗುತ್ತಿದೆ. ಶಾಂತಕುಮಾರ್ ಅವರ ಸಮಿತಿ ವರದಿ ಜಾರಿಗೆ ತಂದರೆ ಶೇ.20ರಷ್ಟು ಮಂದಿ ಮಾತ್ರ ಪಡಿತರ ಮೂಲಕ ಆಹಾರ ಧಾನ್ಯ ಪಡೆಯಲು ಅರ್ಹರಾಗುತ್ತಾರೆ. ರೈಲ್ವೆ ನಿಲ್ದಾಣ, ಬಂದರು, ವಿಮಾನ ನಿಲ್ದಾಣಗಳನ್ನು ಅಂಬಾನಿ, ಅಂದಾನಿ ಮೊದಲಾದ ಉದ್ಯಮಿಗಳಿಗೆ ಮಾರಲು ಪ್ರಧಾನಿ ಮೋದಿ ಹೊರಟಿದ್ದಾರೆ. ಇದರಿಂದ ದೇಶ ತನ್ನ ಆಸ್ತಿ ಕಳೆದುಕೊಳ್ಳುವುದಲ್ಲದೆ, ತಳಸಮುದಾಯಗಳು ಮೀಸಲಾತಿ ಸೌಲಭ್ಯವನ್ನೂ ಕಳೆದುಕೊಳ್ಳಲಿವೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...