Homeಚಳವಳಿರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ದೇಶವ್ಯಾಪಿ 'ಸಂಚಾರ ಸ್ಥಗಿತ ಚಳವಳಿ'ಗೆ ಕರೆ

ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ದೇಶವ್ಯಾಪಿ ‘ಸಂಚಾರ ಸ್ಥಗಿತ ಚಳವಳಿ’ಗೆ ಕರೆ

ರೈತರ ಹೋರಾಟ ಇಂದಿಗೆ 70 ನೆ ದಿನಕ್ಕೆ ಕಾಲಿಟ್ಟಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟ 70 ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರವು ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದೆಯಾದರೂ ಎಲ್ಲವೂ ವಿಫಲಗೊಂಡಿದೆ. ಇದೀಗ ರೈತರು ಶನಿವಾರದಂದು ದೇಶಾದ್ಯಂತ ‘ಸಂಚಾರ ಸ್ಥಗಿತ ಚಳವಳಿ’ ನಡೆಸುವಂತೆ ಕರೆ ನೀಡಿದ್ದಾರೆ.

‘ಸಂಚಾರ ಸ್ಥಗಿತ ಚಳವಳಿ’ ಫೆಬ್ರವರಿ 6ರ ಶನಿವಾರ ಮಧ್ಯಾಹ್ನ 12 ರಿಂದ 3 ಗಂಟೆಯ ತನಕ ಅಂದರೆ ಒಟ್ಟು ಮೂರು ಗಂಟೆಗಳ ಕಾಲ ನಡೆಯಲಿದ್ದು, ಶಾಂತಿಯುವ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾದ ರೈತ ಮುಖಂಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

100ಕ್ಕೂ ಹೆಚ್ಚು ರೈತರು ಕಾಣೆಯಾಗಿರುವುದು, ರೈತರು ಮತ್ತು ಪತ್ರಕರ್ತರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು, ರೈತರು ಪ್ರತಿಭಟನೆ ನಡೆಸುತ್ತಿರುವ ಗಡಿಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಹೋರಾಟಗಾರರಿಗೆ ಕಿರುಕುಳ, ಪ್ರತಿಭಟನಾ ಸ್ಥಳಗಳ ವಿದ್ಯುತ್ ಮತ್ತು ನೀರು ಸರಬರಾಜನ್ನು ನಿಲ್ಲಿಸಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಲು ರೈತರು ಈ ‘ಸಂಚಾರ ಸ್ಥಗಿತ ಚಳವಳಿ’ ಕರೆ ನೀಡಿದ್ದಾರೆ.

ಪೊಲೀಸರು ರಸ್ತೆಗಳನ್ನು ಅಗೆಯುತ್ತಿದ್ದು, ದೊಡ್ಡ ದೊಡ್ಡ ಬ್ಯಾರಿಕೇಡ್‌ಗಳು, ಮುಳ್ಳು ತಂತಿಗಳನ್ನು ನೆಡುವ ಮೂಲಕ ರೈತರು ಪ್ರತಿಭಟನೆಗೆ ಬಾರದಂತೆ ತಡೆಯುತ್ತಿದೆ. ರೈಲುಗಳ ಮಾರ್ಗಗಳನ್ನೇ ಬದಲಿಸುತ್ತಿದೆ. ಬಿಜೆಪಿ-ಆರ್‌ಎಸ್‌ಎಸ್‌ ಗೂಂಡಾಗಳನ್ನು ಛೂ ಬಿಟ್ಟು ಶಾಂತಿಯುತ ರೈತ ಹೋರಾಟಕ್ಕೆ ಅಡ್ಡಿಪಡಿಸಲಾಗುತ್ತಿದೆ. ಇಂತಹ ಕೃತ್ಯಗಳನ್ನು ಕೇಂದ್ರ ಸರ್ಕಾರ ನಿಲ್ಲಿಸುವವರೆಗೂ ಸರ್ಕಾರದೊಂದಿಗೆ ಔಪಚಾರಿಕ ಮಾತುಕತೆ ಸಾಧ್ಯವಿಲ್ಲವೆಂದು ಸಂಯುಕ್ತ ಕಿಸಾನ್ ಮೋರ್ಚಾ ನಿರ್ಧರಿಸಿದೆ.

ಕೇಂದ್ರ ಸರ್ಕಾರವು ರೈತರ ಪ್ರತಿಭಟನೆಗೆ ಹೆದರುತ್ತಿದೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿದೆ. ಒಂದು ಕಡೆ ಪ್ರಧಾನಿ ಮೋದಿಯವರು ಮಾತುಕತೆಗೆ ಸಿದ್ದ ಎನ್ನುತ್ತಲೇ ಇನ್ನೊಂದು ಕಡೆ ರೈತರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿದೆ. ಈ ದ್ವಂದ್ವವನ್ನು ಕೇಂದ್ರ ಸರ್ಕಾರ ಬಿಡಬೇಕು ಎಂದು ರೈತ ಮುಖಂಡ ಡಾ.ದರ್ಶನ್ ಪಾಲ್ ಆಗ್ರಹಿಸಿದ್ದಾರೆ.

ಸೋಮವಾರ ಮಂಡನೆಯಾಗಿರುವ ಕೇಂದ್ರ ಬಜೆಟ್‌ನಲ್ಲಿ ರೈತರನ್ನು ಕಡೆಗಣಿಸಲಾಗಿದೆ ಎಂದು ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈತರು ಬಜೆಟ್ ದಿನದಂದು ಸಂಸತ್ತಿಗೆ ಪಾದಯಾತ್ರೆ ರ್‍ಯಾಲಿ ನಡೆಸಲು ಉದ್ದೇಶಿಸಿದ್ದರು. ಆದರೆ ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಯಿಂದಾಗಿ ಆ ರ್‍ಯಾಲಿಯನ್ನು ಮೂಂದೂಡಲಾಗಿದೆ.

ಇದನ್ನೂ ಓದಿ: ರೈತ ಹೋರಾಟ ತಡೆಯಲು ದಾರಿಯಲ್ಲಿ ಮುಳ್ಳುಕಂಬ ನೆಡುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...