Homeಮುಖಪುಟರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಈಗ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನೇ ಕಡಿಮೆ ಮಾಡಿದ್ದಾರೆ.

- Advertisement -
- Advertisement -

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಒಂದು ಕಡೆ ರೈತರ ಪ್ರತಿಭಟನೆಯ ಆಕ್ರೋಶದ ಬಿಸಿ ತಟ್ಟತೊಡಗಿದ್ದರೆ, ಇನ್ನೊಂದು ಕಡೆ ಆಡಳಿತದ ಮಿತ್ರ ಪಕ್ಷ ಜನತಾ ಜನನಾಯಕ್ ಪಾರ್ಟಿ (ಜೆಜೆಪಿ) ರೈತರಿಗೆ ಬೆಂಬಲವಾಗಿ ಯಾವ ಕ್ಷಣದಲ್ಲಾದರೂ ಹೋಳಾಗಬಹದು ಅಥವಾ ಅದರ ಎಲ್ಲ 10 ಶಾಸಕರೂ ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಳ್ಳಬಹುದು ಎಂಬ ಭಯ ಕಾಡತೊಡಗಿದೆ.

ಪ್ರತಿವರ್ಷ ಎಲ್ಲ ಮುಖ್ಯಮಂತ್ರಿಗಳು ನಿರ್ದಿಷ್ಟ ಸ್ಥಳದಲ್ಲಿ ಗಣರಾಜ್ಯೋತ್ಸವ ಧ್ವಜ ಹಾರಿಸುತ್ತಾರೆ. ಆದರೆ, ಈ ಸಲ ಖಟ್ಟರ್ ಗಣರಾಜ್ಯೋತ್ಸವ ಕಾರ್ಯಕ್ರಮದ ಸ್ಥಳವನ್ನೇ ಶಿಫ್ಟ್ ಮಾಡಿಸಿದ್ದರು. ಪಾಣಿಪತ್‌ನಲ್ಲಿ ಧ್ವಜ ಹಾರಿಸಲು ಹಿಂದೇಟು ಹಾಕಿದ ಖಟ್ಟರ್, ಸ್ವಲ್ಪ ಸುರಕ್ಷಿತ ಸ್ಥಳವೆಂದು ಪಂಚಕುಲಾದಲ್ಲಿ ಕಾರ್ಯಕ್ರಮ ನಡೆಸಿ ತ್ರಿವರ್ಣ ಧ್ವಜ ಹಾರಿಸಿದರು!

ಅರೆ, ಯಾರ ಭಯ? ಉಗ್ರರ ಭಯವಾ? ಊಹೂಂ, ರೈತರು ಕಪ್ಪು ಬಟ್ಟೆ ಪ್ರದರ್ಶನ ಮಾಡಬಹುದು ಅಥವಾ ಘೇರಾವ್ ಹಾಕಬಹುದು ಎಂಬ ಆತಂಕ. ತನ್ನ ರಾಜ್ಯದಲ್ಲೇ ಇಷ್ಟು ಆತಂಕಿತನಾಗಿ ಆಡಳಿತ ಮಾಡಿದ ಸಿಎಂ ಇನ್ನೊಬ್ಬರಿರಲಿಕ್ಕಿಲ್ಲ.

ಪಾಣಿಪತ್ ಮನೋಹರಲಾಲ್ ಖಟ್ಟರ್ ಸ್ವಗ್ರಾಮ ಕರ್ನಾಲ್‌ನಿಂದ 16 ಕಿಮೀ ದೂರದಲ್ಲಿದೆ. 15 ದಿನಗಳ ಹಿಂದೆ ಖಟ್ಟರ್ ಕರ್ನಾಲ್‌ಗೆ ಹೋಗಲೂ ಆಗಲಿಲ್ಲ. ಏಕೆಂದರೆ, ರೈತರು ಅಲ್ಲಿನ ಹೆಲಿಪ್ಯಾಡ್ ಧ್ವಂಸಗೊಳಿಸಿದ್ದರು. ಕಾರ್ಯಕ್ರಮ ನಡೆಯಬೇಕಿದ್ದ ವೇದಿಕೆಗೆ ನುಗ್ಗು ಚೆಲ್ಲಾಪಿಲ್ಲಿ ಮಾಡಿದ್ದರು. ತಿಂಗಳ ಹಿಂದೆ ಅದೇ ಕರ್ನಾಲ್‌ನಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಕಾರ್ಯಕ್ರಮವನ್ನೇ ಖಟ್ಟರ್ ರದ್ದು ಮಾಡಬೇಕಾಯಿತು. ಕಾರಣ ರೈತರನ್ನು ಎದುರಿಸುವ ರಾಜಕೀಯ ದೃಢತೆಯೇ ಇಲ್ಲ.

ಅಂಬಾಲಾದಲ್ಲಿ 13 ರೈತರ ಮೇಲೆ ಕೊಲೆ ಯತ್ನ, ದಂಗೆ ಪ್ರಕರಣ ದಾಖಲಿಸಲಾಗಿದೆ. ರೈತರು ಖಟ್ಟರ್‌ಗೆ ಕಪ್ಪು ದ್ವಜ ಪ್ರದರ್ಶನ ಮಾಡಿದ್ದರು. ಹಾಗೆಯೇ ರೈತರು ಖಟ್ಟರ್ ಬೆಂಗಾವಲು ವಾಹನವನ್ನು ತಡೆದು ವಾಪಸ್ ಕಳಿಸಿದ್ದರು.

ರಾಜ್ಯದಲ್ಲಿ ಅರಾಜಕತೆ ಉಂಟಾಗಬಹುದು ಎಂಬ ನೆಪ ನೀಡಿ, 22 ಜಿಲ್ಲೆಗಳ ಪೈಕಿ 17ರಲ್ಲಿ ಇಂಟರ್‌ನೆಟ್ ಸೇವೆಯನ್ನು ಖಟ್ಟರ್ ಸ್ಥಗಿತಗೊಳಿಸಿದ್ದಾರೆ. ರೈತ ಹೋರಾಟ ಎಲ್ಲೆಡೆ ಹರಡದಂತೆ ತಡೆಯುವ ಕುತಂತ್ರ ಇದಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರಿದು ರೈತರು ದೇವಸ್ಥಾನದ ಮೈಕ್‌ಗಳನ್ನು ಉಪಯೋಗಿಸಿ ರೈತ ಹೋರಾಟದ ಪರಿಸ್ಥಿತಿಯನ್ನು ವಿವರಿಸಿ, ಹೋರಾಟ ಸೇರಿಕೊಳ್ಳಲು ಕರೆ ನೀಡುತ್ತಿದ್ದಾರೆ.

ಸರ್ಕಾರ ಪತನದ ಭೀತಿ

ಇನ್ನೊಂದು ಕಡೆ ಖಟ್ಟರ್‌ಗೆ ಸರ್ಕಾರ ಬೀಳಬಹುದೆಂಬ ಆತಂಕ ಶುರುವಾಗಿದೆ. ಜನವರಿ 26ರ ಕೆಂಪುಕೋಟೆಯ ಅಹಿತಕರ ಘಟನೆ ನಂತರ ಸ್ವಲ್ಪ ನಿರಾಳರಾಗಿದ್ದ ಅವರಿಗೆ, ಟಿಕಾಯತ್ ಮನವಿ ನಂತರ ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ ಚಿಂತೆಗೀಡುಮಾಡಿದೆ.

90 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯಾಬಲ 40. 10 ಜೆಜೆಪಿ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚನೆಯಾಗಿದೆ. ಇಬ್ಬರು ಪಕ್ಷೇತರರು ರೈತರ ಬೆಂಬಲಾರ್ಥವಾಗಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದಾರೆ.

ಜೆಜೆಪಿ ನಾಯಕ, ಉಪ ಮುಖ್ಯಮಂತ್ರಿ ದುಷ್ಯಂತ್ ಸಿಂಗ್ ಚೌತಾಲರ ಮೇಲೆ ಅವರ ಪಕ್ಷದ ಶಾಸಕರೆ ಒತ್ತಡ ಹೇರುತ್ತಿದ್ದು, ರೈತರ ಪರ ನಿಲ್ಲೋಣ, ಸರ್ಕಾರಕ್ಕೆ ಬೆಂಬಲ ಹಿಂಪಡೆಯೋಣ ಎನ್ನುತ್ತಿದ್ದಾರೆ. ಕೆಲವರು ಜೆಜೆಪಿ ಬಿಡಲೂ ತಯಾರಾಗಿದ್ದಾರೆ. ಐಎನ್‌ಎಲ್‌ಡಿ ಶಾಸಕ ಅಭಯ ಸಿಂಗ್ ಚೌತಾಲ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ, ದುಷ್ಯಂತ್ ರಾಜಿನಾಮೆಗೆ ಒತ್ತಡ ಹೆಚ್ಚುತ್ತಿದೆ.

ಕೃಷಿ ಕಾಯ್ದೆ ಪರ ಮೋದಿಯವರನ್ನು ಬೆಂಬಲಿಸಿ, ಪ್ರಧಾನಿಗೆ ಶಕ್ತಿ ತುಂಬಬೇಕಿದ್ದ ಖಟ್ಟರ್, ಕಳೆದ ವಾರ ಡಿಸಿಎಂ ದುಷ್ಯಂತರನ್ನು ದೆಹಲಿಗೆ ಕರೆದುಕೊಂಡು ಹೋಗಿ, ಮೋದಿ-ಶಾ ಎದುರು ನಿಲ್ಲಿಸಿ, ನೀವೇ ನನ್ನ ಸರ್ಕಾರ ಉಳಿಸಿ ಎಂದು ಮನವಿ ಮಾಡಿದ್ದರು.

ರಾಜ್ಯವೊಂದರ ಪ್ರಬಲ ಸಮುದಾಯಕ್ಕೆ ಮುಖ್ಯಮಂತ್ರಿ ಪದವಿ ನೀಡದೇ, ಸಣ್ಣ ಸಮುದಾಯಕ್ಕೆ ನೀಡುವ ಮುಲಕ ಮುಖ್ಯಮಂತ್ರಿಯನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಮೋದಿ-ಶಾ ತಂತ್ರದ ಭಾಗವಾಗಿ ಖಟ್ಟರ್‌ರನ್ನು ಹರಿಯಾಣ ಸಿಎಂ ಮಾಡಲಾಗಿದೆ. ಪ್ರಬಲ ಜಾಟ್ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನಿರಾಕರಿಸಿ, ಪಂಜಾಬಿ ಖತ್ರಿ ಸಮುದಾಯಕ್ಕೆ ಸೇರಿದ ಖಟ್ಟರ್‌ಗೆ ಕಿರೀಟ ತೊಡಿಸಲಾಗಿತ್ತು. ಐದು ವರ್ಷಗಳ ಅಡಳಿತದಲ್ಲಿ ಅಂಥದ್ದೇನೂ ಮಾಡದ ಪರಿಣಾಮ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ 40 ಸೀಟು ಸಿಕ್ಕವು. ಕಾಂಗ್ರೆಸ್‌ನ ಭೂಪಿಂದರ್ ಹೂಡಾ ಮತ್ತು ಐಎನ್‌ಎಲ್‌ಡಿಯ ಓಂಪ್ರಕಾಶ್ ಚೌತಾಲರ (ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜೈಲು ಪಾಲಾಗಿದ್ದಾರೆ) ಭ್ರಷ್ಟಾಚಾರ ಪ್ರಕರಣಗಳ ಲಾಭ ಪಡೆದೂ ಬಿಜೆಪಿಗೆ ಸಿಕ್ಕಿದ್ದು 40 ಸೀಟು ಮಾತ್ರ.
ಈಗ ಜೆಜೆಪಿ ಕೈ ಕೊಟ್ಟರೆ ಖಟ್ಟರ್ ಸರ್ಕಾರ ಬೀಳುವುದು ಖಚಿತ. ಅದಕ್ಕೆ ನೇರ ಕಾರಣ ಎಂಬುದರಲ್ಲಿ ಸಂಶಯವಿಲ್ಲ.

  • ಪಿ.ಕೆ ಮಲ್ಲನಗೌಡರ್, (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...