Homeಮುಖಪುಟರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

ರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ, ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಈ ಯುವಜನರನ್ನು ಕಾಡುತ್ತಿವೆ.

- Advertisement -
- Advertisement -

‘ಯುದ್ಧಭೂಮಿಯಲ್ಲಿ ಗುಂಡು ಬೀಳುತ್ತದೆ ಎಂದು ತಿಳಿದಿದೆ. ಆದರೂ ನಾನು ಹಿಂದೆ ಸರಿಯುವುದಿಲ್ಲ….’ ಈ ಬರಹವಿದ್ದ ಪ್ಲಕಾರ್ಡ್ ಹಿಡಿದಿದ್ದ ಪಂಜಾಬಿ ಯುವಕನನ್ನು ನೀವು ಸೋಶಿಯಲ್ ಮೀಡಿಯಾಗಳಲ್ಲಿ ನೋಡಿರಬಹುದು. ಇದು ಕೇವಲ ಆ ಯುವಕನೊಬ್ಬನ ಮಾತಲ್ಲ. ಕೃಷಿ ಕಾಯ್ದೆಗಳ ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾವಿರಾರು ಯುವಜನರು ಸಹ ಇದೇ ಕಿಚ್ಚು, ಹೋರಾಟದ ಉತ್ಸಾಹವನ್ನು ಹೊಂದಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನೆರೆದಿದ್ದಾರೆ. ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರು, ವಯಸ್ಸಾದ ರೈತರು ಹಾಗೂ ಯುವಜನರೂ ಇದ್ದರೆ. ಆದರೆ ಪಂಜಾಬ್-ಹರಿಯಾಣ ಭಾಗದ ಸಿಂಘು ಗಡಿಯಲ್ಲಿ ಯುವಜನರ ಸಂಖ್ಯೆ ಅತಿ ಹೆಚ್ಚಿದೆ.

ಸಾವಿರಾರು ಯುವಜನರು I love Kisan, I love Kethi, No Farmer No Food…. (ರೈತರನ್ನು ಪ್ರೀತಿಸುತ್ತೇನೆ, ಕೃಷಿಯನ್ನು ಪ್ರೀತಿಸುತ್ತೇನೆ, ರೈತರಿಲ್ಲದೆ ಆಹಾರವಿಲ್ಲ) ಹೀಗೆ ವಿವಿಧ ಘೋಷಣೆಯುಳ್ಳ ಪ್ಲಕಾರ್ಡ್ ಹಿಡಿದುಕೊಂಡು ಸಿಂಘು ಗಡಿಯಲ್ಲಿ ಟ್ಯ್ರಾಕ್ಟರ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ತಿರುಗುತ್ತಲೆ ಇರುತ್ತಾರೆ. ರೈತರು ಮಲಗಿದ ಮೇಲೂ ಅಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುಲು ಈ ಯುವಕಲು ಸ್ವಯಂ ಸೇವಕರಾಗಿ ಅಲ್ಲಿ ಗಸ್ತು ತಿರುಗುತ್ತ ರಕ್ಷಣೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ.

1984 ರ ಘಟನೆಯ ನಂತರ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಇದ್ದ ಪಂಜಾಬಿ ಯುವಜನರು ಇದೇ ಮೊದಲ ಬಾರಿಗೆ ಬೃಹತ್ ಸಂಖ್ಯೆಯಲ್ಲಿ ಈ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಮಾಧ್ಯಮಗಳು ಬಿತ್ತರಿಸಿದಂತೆ ಮಾದಕ ವ್ಯಸನಕ್ಕೆ ಯುವಜನರು ಒಳಗಾಗಿದ್ದಾರೆ ಎಂಬ ಮಾತನ್ನು ಸುಳ್ಳು ಮಾಡಿರುವ ಈ ಯುವಜನರು ಉಳಿದವರಿಗೆ ಸ್ಫೂರ್ತಿಯಾಗಿದ್ದಾರೆ‌ ಎಂದರೆ ತಪ್ಪಾಗಲಾರದು. ಉಡ್ತ ಪಂಜಾಬ್ ಬದಲಿಗೆ ಪಡ್ತ ಪಂಜಾಬ್ ಎಂದು ಬದಲಾಗಿದೆ ಎಂಬ ಪ್ಲಕಾರ್ಡ್‌ಗಳು ಎಲ್ಲೆಲ್ಲೂ ಕಾಣುತ್ತವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಪಂಜಾಬ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅರ್ಷ್‌ದೀಪ್‌‌ “ನನ್ನನ್ನು ಒಳಗೊಂಡಂತೆ ಪಂಜಾಬಿನ ಯುವ ಸಮೂಹ ಯಾವುದೇ ಹೋರಾಟದಲ್ಲಿ ಈ ಮಟ್ಟಕ್ಕೆ ತೊಡಗಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಮೂಹ ಈ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಹೋರಾಟವಲ್ಲ ಕ್ರಾಂತಿಯೂ ಹೌದು” ಎನ್ನುತ್ತಾರೆ.

ನಾನು ಅನ್ನ ತಿನ್ನುತ್ತೇನೆ. ಹಾಗಾಗಿ ಅನ್ನ ಬೆಳೆದವರ ಪರ ಹೋರಾಟ ಮಾಡುತ್ತೇನೆ. ರೈತರಿಲ್ಲದೇ ದೇಶವಿಲ್ಲ ಹಾಗಾಗಿ ನಾನು ರೈತ ಹೋರಾಟದಲ್ಲಿ ವಾಲಂಟೀಯರ್ ಆಗಿ ಕೆಲಸ ಮಾಡಲು ಮುಂದೆ ಬಂದಿದ್ದೇನೆ ಎನ್ನುವ ಅರ್ಷ್‌ದೀಪ್, ನಾನು ಇಲ್ಲಿಗೆ ಹೋರಾಟಕ್ಕೆ ಬಂದಿರುವುದಕ್ಕೆ ನಮಗೆ ತಂದೆಗೆ ಸ್ವಲ್ಪ ಭಯವಿದೆ. ಆದರೆ ನನ್ನ ತಾಯಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಅನ್ನುತ್ತಾರೆ.

ಶಾಂತಿಯುತವಾಗಿ ಹೋರಾಡುತ್ತಿರುವ ರೈತ ಹೋರಾಟಗಾರರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು ಎಂದು ಮಾಧ್ಯಮಗಳು ಮತ್ತು ಬಿಜೆಪಿಗರು ಕರೆದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಈ ಯುವಜನರನ್ನು ಕೆರಳಿಸಿದೆ. ರೈತ ಹೋರಾಟದ ವಿರುದ್ಧವಿರುವ ಮಾಧ್ಯಮಗಳನ್ನು ಗೋ ಮೀಡಿಯಾ ಎಂದು ಕರೆಯುವ ಈ ಯುವಜನರು ಯೂಟ್ಯೂಬ್, ಟ್ವಿಟ್ಟರ್, ಫೇಸ್‌ಬುಕ್‌ನಂತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುವುದಲ್ಲದೇ ರೈತರ ಹೋರಾಟವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ.

1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ ಇಂದಿನ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಬಹುಪಾಲು ಯುವಜನರನ್ನು ಕಾಡಿದ್ದು, ಈ ಹೋರಾಟದ ಬದ್ಧತೆಯ ಅರಿವು ಮೂಡಿಸಿದೆ ಎನ್ನಬಹುದು.‌


ಇದನ್ನೂ ಓದಿ: ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...