Homeಮುಖಪುಟರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

ರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ, ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಈ ಯುವಜನರನ್ನು ಕಾಡುತ್ತಿವೆ.

- Advertisement -
- Advertisement -

‘ಯುದ್ಧಭೂಮಿಯಲ್ಲಿ ಗುಂಡು ಬೀಳುತ್ತದೆ ಎಂದು ತಿಳಿದಿದೆ. ಆದರೂ ನಾನು ಹಿಂದೆ ಸರಿಯುವುದಿಲ್ಲ….’ ಈ ಬರಹವಿದ್ದ ಪ್ಲಕಾರ್ಡ್ ಹಿಡಿದಿದ್ದ ಪಂಜಾಬಿ ಯುವಕನನ್ನು ನೀವು ಸೋಶಿಯಲ್ ಮೀಡಿಯಾಗಳಲ್ಲಿ ನೋಡಿರಬಹುದು. ಇದು ಕೇವಲ ಆ ಯುವಕನೊಬ್ಬನ ಮಾತಲ್ಲ. ಕೃಷಿ ಕಾಯ್ದೆಗಳ ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾವಿರಾರು ಯುವಜನರು ಸಹ ಇದೇ ಕಿಚ್ಚು, ಹೋರಾಟದ ಉತ್ಸಾಹವನ್ನು ಹೊಂದಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನೆರೆದಿದ್ದಾರೆ. ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರು, ವಯಸ್ಸಾದ ರೈತರು ಹಾಗೂ ಯುವಜನರೂ ಇದ್ದರೆ. ಆದರೆ ಪಂಜಾಬ್-ಹರಿಯಾಣ ಭಾಗದ ಸಿಂಘು ಗಡಿಯಲ್ಲಿ ಯುವಜನರ ಸಂಖ್ಯೆ ಅತಿ ಹೆಚ್ಚಿದೆ.

ಸಾವಿರಾರು ಯುವಜನರು I love Kisan, I love Kethi, No Farmer No Food…. (ರೈತರನ್ನು ಪ್ರೀತಿಸುತ್ತೇನೆ, ಕೃಷಿಯನ್ನು ಪ್ರೀತಿಸುತ್ತೇನೆ, ರೈತರಿಲ್ಲದೆ ಆಹಾರವಿಲ್ಲ) ಹೀಗೆ ವಿವಿಧ ಘೋಷಣೆಯುಳ್ಳ ಪ್ಲಕಾರ್ಡ್ ಹಿಡಿದುಕೊಂಡು ಸಿಂಘು ಗಡಿಯಲ್ಲಿ ಟ್ಯ್ರಾಕ್ಟರ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ತಿರುಗುತ್ತಲೆ ಇರುತ್ತಾರೆ. ರೈತರು ಮಲಗಿದ ಮೇಲೂ ಅಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುಲು ಈ ಯುವಕಲು ಸ್ವಯಂ ಸೇವಕರಾಗಿ ಅಲ್ಲಿ ಗಸ್ತು ತಿರುಗುತ್ತ ರಕ್ಷಣೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ.

1984 ರ ಘಟನೆಯ ನಂತರ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಇದ್ದ ಪಂಜಾಬಿ ಯುವಜನರು ಇದೇ ಮೊದಲ ಬಾರಿಗೆ ಬೃಹತ್ ಸಂಖ್ಯೆಯಲ್ಲಿ ಈ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಮಾಧ್ಯಮಗಳು ಬಿತ್ತರಿಸಿದಂತೆ ಮಾದಕ ವ್ಯಸನಕ್ಕೆ ಯುವಜನರು ಒಳಗಾಗಿದ್ದಾರೆ ಎಂಬ ಮಾತನ್ನು ಸುಳ್ಳು ಮಾಡಿರುವ ಈ ಯುವಜನರು ಉಳಿದವರಿಗೆ ಸ್ಫೂರ್ತಿಯಾಗಿದ್ದಾರೆ‌ ಎಂದರೆ ತಪ್ಪಾಗಲಾರದು. ಉಡ್ತ ಪಂಜಾಬ್ ಬದಲಿಗೆ ಪಡ್ತ ಪಂಜಾಬ್ ಎಂದು ಬದಲಾಗಿದೆ ಎಂಬ ಪ್ಲಕಾರ್ಡ್‌ಗಳು ಎಲ್ಲೆಲ್ಲೂ ಕಾಣುತ್ತವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಪಂಜಾಬ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅರ್ಷ್‌ದೀಪ್‌‌ “ನನ್ನನ್ನು ಒಳಗೊಂಡಂತೆ ಪಂಜಾಬಿನ ಯುವ ಸಮೂಹ ಯಾವುದೇ ಹೋರಾಟದಲ್ಲಿ ಈ ಮಟ್ಟಕ್ಕೆ ತೊಡಗಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಮೂಹ ಈ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಹೋರಾಟವಲ್ಲ ಕ್ರಾಂತಿಯೂ ಹೌದು” ಎನ್ನುತ್ತಾರೆ.

ನಾನು ಅನ್ನ ತಿನ್ನುತ್ತೇನೆ. ಹಾಗಾಗಿ ಅನ್ನ ಬೆಳೆದವರ ಪರ ಹೋರಾಟ ಮಾಡುತ್ತೇನೆ. ರೈತರಿಲ್ಲದೇ ದೇಶವಿಲ್ಲ ಹಾಗಾಗಿ ನಾನು ರೈತ ಹೋರಾಟದಲ್ಲಿ ವಾಲಂಟೀಯರ್ ಆಗಿ ಕೆಲಸ ಮಾಡಲು ಮುಂದೆ ಬಂದಿದ್ದೇನೆ ಎನ್ನುವ ಅರ್ಷ್‌ದೀಪ್, ನಾನು ಇಲ್ಲಿಗೆ ಹೋರಾಟಕ್ಕೆ ಬಂದಿರುವುದಕ್ಕೆ ನಮಗೆ ತಂದೆಗೆ ಸ್ವಲ್ಪ ಭಯವಿದೆ. ಆದರೆ ನನ್ನ ತಾಯಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಅನ್ನುತ್ತಾರೆ.

ಶಾಂತಿಯುತವಾಗಿ ಹೋರಾಡುತ್ತಿರುವ ರೈತ ಹೋರಾಟಗಾರರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು ಎಂದು ಮಾಧ್ಯಮಗಳು ಮತ್ತು ಬಿಜೆಪಿಗರು ಕರೆದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಈ ಯುವಜನರನ್ನು ಕೆರಳಿಸಿದೆ. ರೈತ ಹೋರಾಟದ ವಿರುದ್ಧವಿರುವ ಮಾಧ್ಯಮಗಳನ್ನು ಗೋ ಮೀಡಿಯಾ ಎಂದು ಕರೆಯುವ ಈ ಯುವಜನರು ಯೂಟ್ಯೂಬ್, ಟ್ವಿಟ್ಟರ್, ಫೇಸ್‌ಬುಕ್‌ನಂತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುವುದಲ್ಲದೇ ರೈತರ ಹೋರಾಟವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ.

1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ ಇಂದಿನ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಬಹುಪಾಲು ಯುವಜನರನ್ನು ಕಾಡಿದ್ದು, ಈ ಹೋರಾಟದ ಬದ್ಧತೆಯ ಅರಿವು ಮೂಡಿಸಿದೆ ಎನ್ನಬಹುದು.‌


ಇದನ್ನೂ ಓದಿ: ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...