Homeಮುಖಪುಟರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

ರೈತ ಹೋರಾಟದ ಕಣದಲ್ಲಿ ಪುಟಿಯುತ್ತಿರುವ ಭಗತ್ ಸಿಂಗ್‌ ನಾಡಿನ ಮಕ್ಕಳು

1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ, ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಈ ಯುವಜನರನ್ನು ಕಾಡುತ್ತಿವೆ.

- Advertisement -
- Advertisement -

‘ಯುದ್ಧಭೂಮಿಯಲ್ಲಿ ಗುಂಡು ಬೀಳುತ್ತದೆ ಎಂದು ತಿಳಿದಿದೆ. ಆದರೂ ನಾನು ಹಿಂದೆ ಸರಿಯುವುದಿಲ್ಲ….’ ಈ ಬರಹವಿದ್ದ ಪ್ಲಕಾರ್ಡ್ ಹಿಡಿದಿದ್ದ ಪಂಜಾಬಿ ಯುವಕನನ್ನು ನೀವು ಸೋಶಿಯಲ್ ಮೀಡಿಯಾಗಳಲ್ಲಿ ನೋಡಿರಬಹುದು. ಇದು ಕೇವಲ ಆ ಯುವಕನೊಬ್ಬನ ಮಾತಲ್ಲ. ಕೃಷಿ ಕಾಯ್ದೆಗಳ ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಾವಿರಾರು ಯುವಜನರು ಸಹ ಇದೇ ಕಿಚ್ಚು, ಹೋರಾಟದ ಉತ್ಸಾಹವನ್ನು ಹೊಂದಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ರೈತರು ನೆರೆದಿದ್ದಾರೆ. ಟಿಕ್ರಿ ಗಡಿಯಲ್ಲಿ ರೈತ ಮಹಿಳೆಯರು, ವಯಸ್ಸಾದ ರೈತರು ಹಾಗೂ ಯುವಜನರೂ ಇದ್ದರೆ. ಆದರೆ ಪಂಜಾಬ್-ಹರಿಯಾಣ ಭಾಗದ ಸಿಂಘು ಗಡಿಯಲ್ಲಿ ಯುವಜನರ ಸಂಖ್ಯೆ ಅತಿ ಹೆಚ್ಚಿದೆ.

ಸಾವಿರಾರು ಯುವಜನರು I love Kisan, I love Kethi, No Farmer No Food…. (ರೈತರನ್ನು ಪ್ರೀತಿಸುತ್ತೇನೆ, ಕೃಷಿಯನ್ನು ಪ್ರೀತಿಸುತ್ತೇನೆ, ರೈತರಿಲ್ಲದೆ ಆಹಾರವಿಲ್ಲ) ಹೀಗೆ ವಿವಿಧ ಘೋಷಣೆಯುಳ್ಳ ಪ್ಲಕಾರ್ಡ್ ಹಿಡಿದುಕೊಂಡು ಸಿಂಘು ಗಡಿಯಲ್ಲಿ ಟ್ಯ್ರಾಕ್ಟರ್ ಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ತಿರುಗುತ್ತಲೆ ಇರುತ್ತಾರೆ. ರೈತರು ಮಲಗಿದ ಮೇಲೂ ಅಲ್ಲಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುಲು ಈ ಯುವಕಲು ಸ್ವಯಂ ಸೇವಕರಾಗಿ ಅಲ್ಲಿ ಗಸ್ತು ತಿರುಗುತ್ತ ರಕ್ಷಣೆಯ ಜವಾಬ್ದಾರಿ ನೋಡಿಕೊಳ್ಳುತ್ತಾರೆ.

1984 ರ ಘಟನೆಯ ನಂತರ ಯಾವುದೇ ಹೋರಾಟದಲ್ಲಿ ಭಾಗವಹಿಸದೇ ಇದ್ದ ಪಂಜಾಬಿ ಯುವಜನರು ಇದೇ ಮೊದಲ ಬಾರಿಗೆ ಬೃಹತ್ ಸಂಖ್ಯೆಯಲ್ಲಿ ಈ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಮಾಧ್ಯಮಗಳು ಬಿತ್ತರಿಸಿದಂತೆ ಮಾದಕ ವ್ಯಸನಕ್ಕೆ ಯುವಜನರು ಒಳಗಾಗಿದ್ದಾರೆ ಎಂಬ ಮಾತನ್ನು ಸುಳ್ಳು ಮಾಡಿರುವ ಈ ಯುವಜನರು ಉಳಿದವರಿಗೆ ಸ್ಫೂರ್ತಿಯಾಗಿದ್ದಾರೆ‌ ಎಂದರೆ ತಪ್ಪಾಗಲಾರದು. ಉಡ್ತ ಪಂಜಾಬ್ ಬದಲಿಗೆ ಪಡ್ತ ಪಂಜಾಬ್ ಎಂದು ಬದಲಾಗಿದೆ ಎಂಬ ಪ್ಲಕಾರ್ಡ್‌ಗಳು ಎಲ್ಲೆಲ್ಲೂ ಕಾಣುತ್ತವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿ ಪಂಜಾಬ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಅರ್ಷ್‌ದೀಪ್‌‌ “ನನ್ನನ್ನು ಒಳಗೊಂಡಂತೆ ಪಂಜಾಬಿನ ಯುವ ಸಮೂಹ ಯಾವುದೇ ಹೋರಾಟದಲ್ಲಿ ಈ ಮಟ್ಟಕ್ಕೆ ತೊಡಗಿಸಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ಯುವ ಸಮೂಹ ಈ ರೈತ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಹೋರಾಟವಲ್ಲ ಕ್ರಾಂತಿಯೂ ಹೌದು” ಎನ್ನುತ್ತಾರೆ.

ನಾನು ಅನ್ನ ತಿನ್ನುತ್ತೇನೆ. ಹಾಗಾಗಿ ಅನ್ನ ಬೆಳೆದವರ ಪರ ಹೋರಾಟ ಮಾಡುತ್ತೇನೆ. ರೈತರಿಲ್ಲದೇ ದೇಶವಿಲ್ಲ ಹಾಗಾಗಿ ನಾನು ರೈತ ಹೋರಾಟದಲ್ಲಿ ವಾಲಂಟೀಯರ್ ಆಗಿ ಕೆಲಸ ಮಾಡಲು ಮುಂದೆ ಬಂದಿದ್ದೇನೆ ಎನ್ನುವ ಅರ್ಷ್‌ದೀಪ್, ನಾನು ಇಲ್ಲಿಗೆ ಹೋರಾಟಕ್ಕೆ ಬಂದಿರುವುದಕ್ಕೆ ನಮಗೆ ತಂದೆಗೆ ಸ್ವಲ್ಪ ಭಯವಿದೆ. ಆದರೆ ನನ್ನ ತಾಯಿ ಸಂಪೂರ್ಣ ಬೆಂಬಲ ನೀಡಿದ್ದಾರೆ ಅನ್ನುತ್ತಾರೆ.

ಶಾಂತಿಯುತವಾಗಿ ಹೋರಾಡುತ್ತಿರುವ ರೈತ ಹೋರಾಟಗಾರರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು ಎಂದು ಮಾಧ್ಯಮಗಳು ಮತ್ತು ಬಿಜೆಪಿಗರು ಕರೆದಿರುವುದು ಎಲ್ಲಕ್ಕಿಂತ ಹೆಚ್ಚಾಗಿ ಈ ಯುವಜನರನ್ನು ಕೆರಳಿಸಿದೆ. ರೈತ ಹೋರಾಟದ ವಿರುದ್ಧವಿರುವ ಮಾಧ್ಯಮಗಳನ್ನು ಗೋ ಮೀಡಿಯಾ ಎಂದು ಕರೆಯುವ ಈ ಯುವಜನರು ಯೂಟ್ಯೂಬ್, ಟ್ವಿಟ್ಟರ್, ಫೇಸ್‌ಬುಕ್‌ನಂತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುವುದಲ್ಲದೇ ರೈತರ ಹೋರಾಟವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ.

1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್ ರನ್ನು ಕಾಡಿದಂತೆ ಇಂದಿನ ಸರ್ಕಾರ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳು ಬಹುಪಾಲು ಯುವಜನರನ್ನು ಕಾಡಿದ್ದು, ಈ ಹೋರಾಟದ ಬದ್ಧತೆಯ ಅರಿವು ಮೂಡಿಸಿದೆ ಎನ್ನಬಹುದು.‌


ಇದನ್ನೂ ಓದಿ: ಹೋರಾಟನಿರತ ರೈತರ ದೇಹ, ಮನಸ್ಸಿಗೆ ಶಕ್ತಿ ತುಂಬುತ್ತಿರುವ ವಿಭಿನ್ನ ಲಂಗರ್‌ಗಳು…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...