Homeಮುಖಪುಟರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ: ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ ಏನಾಯ್ತು?

- Advertisement -
- Advertisement -

ಎರಡು ದಶಕದ ರಾಮ ಮಂದಿರ-ಬಾಬ್ರಿ ಮಸೀದಿ ವಿವಾದಕ್ಕೆ ಕಳೆದ ವರ್ಷ ತೆರೆ ಬಿದ್ದು ಈಗ ರಾಮ ಮಂದಿರ ನಿರ್ಮಾಣ ಕಾರ್ಯ ಹುರುಪು ಪಡೆದುಕೊಂಡಿದೆ. ಕೆಲಸಗಳು ಭರದಿಂದ ಸಾಗಿವೆ. ರಾಮ ಮಂದಿರ ನಿರ್ಮಾಣಕ್ಕೆಂದೇ ದೇಶದಾದ್ಯಂತ ದೇಣಿಗೆ ಸಂಗ್ರಹ ನಡೆಯುತ್ತಿದ್ದು, ಬಹತೇಕರು ಹಣ ನೀಡುತ್ತಿದ್ದಾರೆ. ಆದರೆ ಇನ್ನು ಕೆಲವರು ಮತ್ತೆ ಕೋಟ್ಯಾಂತರ ಹಣ ಸಂಗ್ರಹಿಸುವುದಾದರೆ ಅಡ್ವಾಣಿ ನೇತೃತ್ವದಲ್ಲಿ ಸಂಗ್ರಹವಾಗಿದ್ದ ಕೋಟ್ಯಂತರ ರೂ.ಗಳು ಏನಾಯ್ತು? ಎಂದು ಪ್ರಸ್ತಾಪಿಸಿ ಚರ್ಚೆ ಹುಟ್ಟುಹಾಕಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ಬಿಜೆಪಿ ಹಿರಿಯ ಮುಖಂಡ ಎಲ್‌ ಕೆ ಅಡ್ವಾಣಿ 1990 ರ ದಶಕದಲ್ಲಿ ದೇಶದಾದ್ಯಂತ ರಥಯಾತ್ರೆ ಆರಂಭಿಸಿ ಪ್ರತಿ ಮನೆಯಿಂದಲೂ ಇಟ್ಟಿಗೆ ಮತ್ತು ಹಣ ಸಂಗ್ರಹ ಮಾಡಿದ್ದರು. ಆದರೆ ಈ ರಾಮ ಜನ್ಮಭೂಮಿ ವಿವಾದ ಅಂದಿನಿಂದಲೂ ಇತ್ಯರ್ಥವಾಗಲೇ ಇಲ್ಲ. ಕೊನೆಗೆ 2014 ರಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ರಾಮ ಮಂದಿರ ನಿರ್ಮಾಣ’ವನ್ನು ಒಂದು ಆದ್ಯತೆಯ ಅಂಶವಾಗಿ ಸೇರಿಸಿತ್ತು. ಜೊತೆಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿತ್ತು. ಆದರೆ 2014-2019 ರವರೆಗಿನ ಬಿಜೆಪಿ ಆಡಳಿತದಲ್ಲಿ ರಾಮ ಜನ್ಮಭೂಮಿ ವಿವಾದ ತಾರ್ಕಿಕ ಅಂತ್ಯ ಕಾಣಲಿಲ್ಲ. ಹಾಗಾಗಿ 2019 ರಲ್ಲಿಯೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ರಾಮ ಮಂದಿರ ನಿರ್ಮಾಣದ ಅಂಶವನ್ನು ಪ್ರಸ್ತಾಪಿಸಿತ್ತು. ಕೊನೆಗೂ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ 2020 ರಲ್ಲಿ ಇದಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪನ್ನು ಹೊರಹಾಕಿತ್ತು. ಅದು ವಿವಾದಿತ ಜಾಗದಲ್ಲಿ ಮಂದಿರ ಕಟ್ಟಬೇಕೆಂದು ಹೇಳಿತು.

ಈಗ ಮುಖ್ಯ ಪ್ರಶ್ನೆಯಿರುವುದು 20 ವರ್ಷಗಳ ಹಿಂದೆ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹ ಮಾಡಿದ ಹಣದ ಲೆಕ್ಕ ಏನಾಯ್ತು? ಎನ್ನುವುದಾಗಿದೆ.

ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ 500 ಕೋಟಿ ರೂ ದೇಣಿಗೆ ಕೊಟ್ಟರೆ ಮುಖೇಶ್‌ ಅಂಬಾನಿ? ಸತ್ಯ ಇಲ್ಲಿದೆ…

ರಾಮ ಜನ್ಮಭೂಮಿಯ ವಿವಾದವನ್ನು ಮೊಟ್ಟ ಮೊದಲು ಆರಂಭಿಸಿದ್ದ ನಿರ್ಮೋಹಿ ಅಖಾಡ “ಬಿಜೆಪಿಯು ರಾಮ ಮಂದಿರದ ಹೆಸರಲ್ಲಿ ಸಂಗ್ರಹಿಸಿರುವ ಸುಮಾರು 1,400 ಕೋಟಿ ಹಣವನ್ನು ಗುಳುಂ ಮಾಡಿದೆ. ತನ್ನ ಸ್ವಂತ ಹಿತಾಸಕ್ತಿಗೆ ಬಳಸಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿ ಸಾಕ್ಷ್ಯವೂ ಇದೆ. ಅಯೋಧ್ಯೆ ಆಂದೋಲನದಲ್ಲಿ ಭಾಗಿಯಾಗಿದ್ದವರ ಅನೇಕ ಕೊಲೆಗಳೂ ನಿಗೂಢವಾಗಿ ನಡೆದಿವೆ. ಹಾಗಾಗಿ ಇದರ ತನಿಖೆಯಾಗಬೇಕು. ಯಾಕೆಂದರೆ ನಾವು ಬಿಜೆಪಿಯಂತೆ ಹಣಕ್ಕಾಗಿ ರಾಮನನ್ನು ಪ್ರೀತಿಸಲಿಲ್ಲ” ಎಂದು ಪ್ರಬಲವಾದ ಆರೋಪವೊಂದನ್ನು ಮಾಡಿದ್ದರು. ಆದರೆ ನಂತರ ದಿನಗಳಲ್ಲಿ ಈ ವಿಷಯ ಏನಾಯಿತು ಎಂಬುದೂ ನಿಗೂಢ! ಅದರ ವಿಡಿಯೋ ಈ ಕೆಳಗಿನ ಟ್ವೀಟ್ ನಲ್ಲಿದೆ.

ಇತ್ತೀಚೆಗೆ ರಾಮ ಜನ್ಮಭೂಮಿ ಟ್ರಸ್ಟ್‌ನಲ್ಲಿ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಟ್ರಸ್ಟ್‌ನ 4 ಜನರನ್ನು ಬಂಧಿಸಲಾಗಿತ್ತು.

ಇರಲಿ, ಈಗ ಪ್ರಸ್ತುತ ವಿಷಯಕ್ಕೆ ಬರೋಣ. ಈಗ ರಾಮ ಮಂದಿರ ನಿರ್ಮಾಣಕ್ಕೆಂದು ಬಿಜೆಪಿ ಮತ್ತು ಸಂಘಪರಿವಾರದಿಂದ ಮತ್ತೆ ದೇಣಿಗೆ ಸಂಗ್ರಹ ಕಾರ್ಯ ಆರಂಭವಾಗಿದೆ. ಇದು ಫೆಬ್ರವರಿ 17 ರವರೆಗೂ ನಡೆಯಲಿದೆ. ಹಾಗಾಗಿ ದೇಶದಾದ್ಯಂತ ಈ ಕಾರ್ಯ ನಡೆಯುತ್ತಿದೆ. ಆದರೆ ಈ ಮೇಲೆ ಹೇಳಿದಂತೆ ಕೆಲವರು ಮಾತ್ರ ಈ ಹಿಂದೆ ರಾಮ ಮಂದಿರಕ್ಕೆಂದು ಸಂಗ್ರಹವಾಗಿದ್ದ ಹಣದ ಬಗ್ಗೆ ಈಗ ಲೆಕ್ಕ ಕೇಳುತ್ತಿದ್ದಾರೆ.

ಇದನ್ನೂ ಓದಿ: ರಾಮಮಂದಿರ ನಿರ್ಮಾಣದ ಜವಾಬ್ದಾರಿಯನ್ನು ನಮಗೆ ಕೊಡಿ: ಮೂರು ಟ್ರಸ್ಟ್‌ಗಳ ನಡುವೆ ಪೈಪೋಟಿ

ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಕಾಂತಿಲಾಲ್ ಭೂರಿಯಾ ಎಂಬುವವರು ಜನವರಿ 1 ರಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಅದರಂತೆ, “ಬಿಜೆಪಿ ನಾಯಕರು ರಾಮ ಮಂದಿರ ನಿರ್ಮಾಣಕ್ಕೆಂದು ಇಷ್ಟು ವರ್ಷಗಳಲ್ಲಿ ಸಂಗ್ರಹಿಸಿದ ಹಣ ಎಲ್ಲಿ ಹೋಯಿತು. ಹಗಲಿನಲ್ಲಿ ಹಣ ಸಂಗ್ರಹ ಮಾಡಿ, ರಾತ್ರಿಯಲ್ಲಿ ಮದ್ಯಪಾನ ಮಾಡುತ್ತಾರೆ” ಎಂದು ಆರೋಪಿಸಿದ್ದರು. ಇದು ವ್ಯಾಪಕ ಚರ್ಚೆಗೆ ಗುರಿಯಾಗಿತ್ತು.

ಚಿಂತಕರು ಮತ್ತು ಸಾಮಾಜಿಕ ಕಾರ್ಯಕರ್ತರಾದ ಸಿ ಎಸ್ ದ್ವಾರಕಾನಾಥ್ ಅವರು ಕೂಡ ದೇಣಿಗೆ ಸಂಗ್ರಹಕ್ಕೆ ಬಂದ ಹಿಂದೂ ಕಾರ್ಯಕರ್ತರನ್ನು, ರಾಮ ಮಂದಿರಕ್ಕೆಂದು ಈ ಹಿಂದೆ ಸಂಗ್ರಹಿಸಿದ್ದ ಹಣದ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ಪಾಪ ಅವರ ಬಳಿಯೂ ಲೆಕ್ಕ ಮತ್ತು ಉತ್ತರ ಎರಡೂ ಇರಲಿಲ್ಲ. ಇದು ಇವರ ಪ್ರಶ್ನೆ ಮಾತ್ರವಲ್ಲ, ಹಲವಾರು ಪ್ರಜ್ಞಾವಂತರ ಪ್ರಶ್ನೆಯೂ ಆಗಿದೆ.

ಜನವರಿ 17 ರವರೆಗೆ ರಾಮಮಂದಿರಕ್ಕಾಗಿ ಸುಮಾರು 100 ಕೋಟಿ ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಇನ್ನು ಕೆಲವರು ರಾಮ ಮಂದಿರಕ್ಕೆಂದು ದೇಣಿಗೆ ಸಂಗ್ರಹ ಮಾಡುವುದಕ್ಕೆ ಬರುವವರು ರಶೀದಿಯನ್ನೂ ಸಹ ಕೊಡುವುದಿಲ್ಲ ಎಂದು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೇ ದೇಣಿಗೆ ಸಂಗ್ರಹ ಆರಂಭವಾದ ಕೆಲವೇ ದಿನದಲ್ಲಿ ಲಕ್ಷಗಟ್ಟಲೆ ಹಣ ವಂಚನೆ ಮಾಡಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ಮೌನ ಮುರಿಯುವ ಹೊತ್ತಿದು; ಮಂದಿರದ ಹೆಸರಿನಲ್ಲಿ ಮನುಷ್ಯ ಸಂಬಂಧಗಳನ್ನು ಹದಗೆಡಿಸಲು ಬಿಡದಿರೋಣ

ಇನ್ನು ದೇಣಿಗೆ ಸಂಗ್ರಹಕ್ಕಾಗಿ ಮನೆಯ ಬಳಿ ಬಂದಾಗ ಒತ್ತಾಯಪೂರ್ವಕವಾಗಿ ಹಣಕ್ಕೆ ಬೇಡಿಕೆಯಿಟ್ಟಿರುವ ಹಲವು ಉದಾಹರಣೆಗಳು ಕಂಡು ಬಂದಿವೆ. ಹಣ ನೀಡದಿದ್ದರೆ ರಸ್ತೆಯಲ್ಲಿ ನಿಂತು, ‘ನೀವು ದೇಶದ್ರೋಹಿಗಳು’ ಎಂದು ಕೂಗಾಡುತ್ತಾ ಹೋಗುತ್ತಾರೆ. ಇನ್ನು ಮನೆಯ ಬಳಿ ಬಂದವರನ್ನು ಹಾಗೇ ಕಳುಹಿಸಬಾರದೆಂದು ಹಲವರು ಪೇಚಾಟಕ್ಕೆ ಸಿಲುಕಿ ಹಣ ನೀಡಿರುವ ಸಂಭವವೂ ಇದೆ. ಹಾಗೆಯೇ ಸ್ಥಳೀಯ ಯುವಕರನ್ನು ಜೊತೆಯಾಗಿಸಿಕೊಂಡು ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಬಿಜೆಪಿ ಪರ ಪ್ರಚಾರವನ್ನೂ ಮಾಡಲಾಗುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ಇನ್ನು ಕೆಲವರು ನಮ್ಮೂರಿನ ಶಾಲೆ-ಆಸ್ಪತ್ರೆ ಕಟ್ಟಲು ದೇಣಿಗೆ ಸಂಗ್ರಹಿಸೋಣ. ಅಯೋಧ್ಯೆಯ ರಾಮ ದೇವಾಲಯವೊಂದಕ್ಕೆ ಸಾವಿರಾರು ಕೋಟಿ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ


ಇದನ್ನೂ ಓದಿ: ಬಿಜೆಪಿಯ ರಾಮನ ಹೆಸರಿನಲ್ಲಿ ನಡೆಸುವ ರಾಜಕೀಯವನ್ನು ಕೊನೆಗೊಳಿಸುವ ಸಮಯ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...