Homeಮುಖಪುಟಗಣರಾಜ್ಯ ಗಲಾಟೆ: ‘ಬಂಧಿಸಲ್ಪಟ್ಟ’ ಪ್ರತಿಭಟನಾಕಾರರ ಬಿಡುಗಡೆಗೆ ಹೈಕೋರ್ಟ್ ನಕಾರ

ಗಣರಾಜ್ಯ ಗಲಾಟೆ: ‘ಬಂಧಿಸಲ್ಪಟ್ಟ’ ಪ್ರತಿಭಟನಾಕಾರರ ಬಿಡುಗಡೆಗೆ ಹೈಕೋರ್ಟ್ ನಕಾರ

ಪ್ರತಿಭಟನಾಕಾರರ ವಿರುದ್ಧ ದಾಖಲಾದ ಎಫ್‌ಐಆರ್‌ಗಳ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿತು.

- Advertisement -
- Advertisement -

ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು  “ಬಂಧಿಸಲ್ಪಟ್ಟ” ಪ್ರತಿಭಟನಾಕಾರರನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಎಫ್‌ಐಆರ್ ಮತ್ತು ತನಿಖೆಯ ಅರ್ಹತೆ ಪರಿಶೀಲಿಸದೇ ಬಂಧಿತರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಅದು ಹೇಳಿದೆ.

ಪ್ರತಿಭಟನಾಕಾರರ ವಿರುದ್ಧ ದಾಖಲಾದ ಎಫ್‌ಐಆರ್‌ಗಳ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿತು.

ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ವಿಭಾಗೀಯ ಪೀಠ, “ಎಫ್‌ಐಆರ್ ಮತ್ತು ತನಿಖೆಯ ಅರ್ಹತೆಗಳನ್ನು ನಮೂದಿಸದೆ ಬಂಧಿತರನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಇದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಎಂದು ತೋರುತ್ತದೆ” ಎಂದು ಅರ್ಜಿಯನ್ನು ವಜಾಗೊಳಿಸುವ ಮುನ್ನ ಹೇಳಿದರು.

ಬಂಧಿಸಲ್ಪಟ್ಟ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಾನೂನಿಗೆ ಅನುಸಾರವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನ್ಯಾಯಾಲಯ ಹೇಳಿದೆ. 24 ಗಂಟೆಗಳ ಒಳಗೆ ಬಂಧಿತ ವ್ಯಕ್ತಿಗಳನ್ನು ಹತ್ತಿರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ಇದಕ್ಕೂ ಮೊದಲು, ಅರ್ಜಿದಾರ ಹರ್ಮನ್ ಪ್ರೀತ್ ಸಿಂಗ್ ಅವರನ್ನು ಪ್ರತಿನಿಧಿಸಿದ ವಕೀಲ ಅಶಿಮಾ ಮಾಂಡ್ಲಾ, ದೆಹಲಿ ಪೊಲೀಸರು ಸೋಮವಾರ ನೀಡಿದ ಹೇಳಿಕೆಯ ಪ್ರಕಾರ, 122 ಜನರನ್ನು ಬಂಧಿಸಲಾಗಿದೆ ಮತ್ತು 44 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಅರ್ಜಿಯಲ್ಲಿ ಸಿಂಗ್, “ತುರ್ತು ಪರಿಸ್ಥಿತಿಗಳಲ್ಲಿಯೂ ಸ್ವಾತಂತ್ರ‍್ಯದ ಕಲ್ಪನೆಯನ್ನು ನಿರಾಕರಿಸಲು ಸಾಧ್ಯವಿಲ್ಲ” ಮತ್ತು ರೈತರ ಟ್ರಾಕ್ಟರ್ ರ‍್ಯಾಲಿ ಸಮಯದಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 200 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಆದರೆ, ಇದು ಅರ್ಜಿದಾರರಿಗೆ ಸಂಬಂಧಿಸಿದ ವಿಷಯವಲ್ಲ ಮತ್ತು ಪ್ರಕರಣದಲ್ಲಿ ನೋಟಿಸ್ ಕೂಡ ನೀಡುವುದಿಲ್ಲ ಎಂದು ನ್ಯಾಯಾಲಯ ಹೇಳಿತು. ಜನವರಿ 26 ರ ನಂತರ ಕಾಣೆಯಾದವರು ಎಂದು ಹೇಳಲಾದ ವ್ಯಕ್ತಿಗಳ ಬಗ್ಗೆ, ಅರ್ಜಿದಾರರು ಅವರ ಯಾವುದೇ ಸಂಬಂಧಿಕರನ್ನು ಸಂಪರ್ಕಿಸಿಲ್ಲ. ಅವರು “ತಮ್ಮ ವೈಯಕ್ತಿಕ ಕೆಲಸಕ್ಕಾಗಿ” ಹೊರಗೆ ಹೋಗಿರಬಹುದು. ರಿಟ್ ಅರ್ಜಿಯನ್ನು ಪುರಸ್ಕರಿಸಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಗಣರಾಜ್ಯೋತ್ಸವದಂದು ಕಿಸಾನ್ ಟ್ರ‍್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 70 ಮತ್ತು 80ರ ವಯಸ್ಸಿನ ವ್ಯಕ್ತಿಗಳು ಸೇರಿದಂತೆ 122 ಜನರನ್ನು ಬಂಧಿಸಿದ್ದಾರೆ. ಇನ್ನೂ ಆರು ಹೊಸ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಸೋಮವಾರ, ದೆಹಲಿ ಪೊಲೀಸ್ ವಕ್ತಾರ ಡಾ.ಈಶ್ ಸಿಂಘಾಲ್, ‘ಈವರೆಗೆ 44 ಎಫ್‌ಐಆರ್ ದಾಖಲಿಸಲಾಗಿದೆ ಮತ್ತು 122 ಜನರನ್ನು ಬಂಧಿಸಲಾಗಿದೆ. 54 ರೈತ ಮುಖಂಡರು ಮತ್ತು 200 ಟ್ರಾಕ್ಟರುಗಳ ಮಾಲೀಕರಿಗೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಟ್ರ‍್ಯಾಕ್ಟರ್ ಮಾಲೀಕರಿಗೆ ವಿಚಾರಣೆಗೆ ಬರಲು ಸಮನ್ಸ್ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

“ಸಂಬಂಧಪಟ್ಟ ಪ್ರಕರಣಗಳ ಮಾಹಿತಿಯನ್ನು ಅಧಿಕೃತ ದೆಹಲಿ ಪೊಲೀಸ್ ವೆಬ್‌ಸೈಟ್‌ನಲ್ಲಿ ನವೀಕರಿಸಲಾಗಿದೆ, ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ… ಬಂಧಿತರಾದವರ ರಕ್ತಸಂಬಂಧಿಗಳು ಕೂಡ ಪೊಲೀಸ್ ಠಾಣೆಗಳಿಂದ ಮಾಹಿತಿ ಪಡೆಯಬಹುದು. ವದಂತಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಿಗೆ ಮನವಿ ಮಾಡುತ್ತೇವೆ. ದೆಹಲಿ ಪೊಲೀಸರು ನಡೆಸಿದ ತನಿಖೆ ಪಾರದರ್ಶಕ ಮತ್ತು ನ್ಯಾಯಯುತವಾಗಿದೆ” ಎಂದು ಸಿಂಘಾಲ್ ಹೇಳಿದ್ದಾರೆ.


ಇದನ್ನೂ ಓದಿ; ರಾಕೇಶ್ ಟಿಕಾಯತ್ ಭೇಟಿಯಾಗಿ ಬೆಂಬಲ ಘೋಷಿಸಿದ ಶಿವಸೇನೆಯ ಸಂಜಯ್ ರಾವತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...