Homeಮುಖಪುಟಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

- Advertisement -
- Advertisement -

ಹೋರಾಟ ನಿರತ ಹಲವಾರು ರೈತರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ರೈತರಿಗೆ ತ್ವರಿತ ಕಾನೂನು ನೆರವು ನೀಡಲು ಪಂಜಾಬ್ ಸರ್ಕಾರ ದೆಹಲಿಯಲ್ಲಿ 70 ವಕೀಲರನ್ನು ನೇಮಿಸಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಟ್ರಾಕ್ಟರ್ ಮೆರವಣಿಗೆಯ ನಂತರ “ಕಾಣೆಯಾದ ವ್ಯಕ್ತಿಗಳ” ಬಗ್ಗೆ ದೂರು ನೀಡಲು ಸಹಾಯವಾಣಿ ಸಂಖ್ಯೆಯಾಗಿ 112 ಅನ್ನು ತಮ್ಮ ಸರ್ಕಾರ ಘೋಷಿಸಿದೆ ಎಂದು ಅವರು ಹೇಳಿದ್ದಾರೆ.

ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌, “ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ ರೈತರಿಗೆ ತ್ವರಿತ ಕಾನೂನು ನೆರವು ನೀಡುವಂತೆ ಪಂಜಾಬ್ ಸರ್ಕಾರ ಈಗಾಗಲೇ 70 ವಕೀಲರ ತಂಡವನ್ನು ದೆಹಲಿಯಲ್ಲಿ ಏರ್ಪಡಿಸಿದೆ. ಅಲ್ಲದೆ ಕಾಣೆಯಾದ ರೈತರ ಸಮಸ್ಯೆ ಬಗ್ಗೆ ನಾನು ವೈಯಕ್ತಿಕವಾಗಿ ಕೇಂದ್ರ ಗೃಹ ಸಚಿವಾಲಯದೊಂದಿಗೆ ಮಾತನಾಡುತ್ತೇನೆ. ಆ ವ್ಯಕ್ತಿಗಳು ಸುರಕ್ಷಿತವಾಗಿ ಮನೆಗೆ ತಲುಪುವಂತೆ ನೋಡಿಕೊಳ್ಳುತ್ತೇನೆ. ಸಹಾಯಕ್ಕಾಗಿ 112 ಗೆ ಕರೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ರಾಜ್ಯದಲ್ಲಿ ಸರ್ಕಾರಿ ಕಛೇರಿಗಳನ್ನು ಸ್ವಚ್ಚಗೊಳಿಸಲು ಇನ್ನುಮುಂದೆ ಗೋಮೂತ್ರ ಬಳಕೆ: ಆದೇಶ

 

ಈ ವಿಷಯದ ಬಗ್ಗೆ ಪಂಜಾಬ್ ಕ್ಯಾಬಿನೆಟ್ ಸಹೋದ್ಯೋಗಿಗಳು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವರನ್ನು ಸೋಮವಾರ ಭೇಟಿಯಾದರು ಎಂದು ಮುಖ್ಯಮಂತ್ರಿಯ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜೊತೆಗೆ ವರದಿಯಲ್ಲಿ ಕಾಂಗ್ರೆಸ್‌ನ ಎರಡು ತಂಡಗಳು ಈ ವಿಷಯವಾಗಿ ಗೃಹ ಸಚಿವರನ್ನು ಭೇಟಿಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

ಇವರ ಮನವಿಗೆ ಸ್ಪಂದಿಸಿರುವ ಅಮಿತ್‌ ಷಾ, ಕೇಳಿದ ಕೂಡಲೇ ಪೊಲೀಸರು ವಶಕ್ಕೆ ಪಡೆದ ಎಲ್ಲರ ಪಟ್ಟಿಯನ್ನು ಸಿದ್ಧಪಡಿಸಿ ಅದನ್ನು ಪೊಲೀಸ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ಪಂಜಾಬ್ ಸಚಿವ ಸುಖೀಂದರ್‌ ಸಿಂಗ್ ರಾಂಧವ ತಿಳಿಸಿದ್ದಾರೆ. “ನಾವು ಹಿಂದಿರುಗುವ ಹೊತ್ತಿಗೆ, 119 ರ ಪಟ್ಟಿಯನ್ನು ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪಂಜಾಬ್ ಸರ್ಕಾರದಿಂದ ನೇಮಕಗೊಂಡ ವಕೀಲರು ಬಂಧಿತ ವ್ಯಕ್ತಿಗಳು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡುತ್ತಾರೆ ಮತ್ತು ಈ ವ್ಯಕ್ತಿಗಳಿಗೆ ಉಚಿತವಾಗಿ ನ್ಯಾಯ ಒದಗಿಸಿ ಕಾನೂನು ಹೋರಾಟ ನಡೆಸುತ್ತಾರೆ. ಬಂಧಿತ ವ್ಯಕ್ತಿಗಳ ಬಗ್ಗೆ ಮೃದುವಾಗಿ ನಡೆದುಕೊಳ್ಳಬೇಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾಗಿ ಎಂದು ರಾಂಧವ ಹೇಳಿದ್ದಾರೆ.

119 ಪಟ್ಟಿ

119 ಜನರ ಪಟ್ಟಿಯಲ್ಲಿ ಇರುವ ಎಫ್‌ಐಆರ್ ಸಂಖ್ಯೆ 31/21 ಅಡಿಯಲ್ಲಿ 9 ಮಂದಿಯನ್ನು ದೆಹಲಿ ಪೊಲೀಸರು ಮುಖರ್ಜಿ ನಗರದಲ್ಲಿ ಬಂಧಿಸಿದ್ದಾರೆ. ಬಂಧಿತರಾದವರು ಹರಿಯಾಣದ ಪಟಿಯಾಲ, ಫಿರೋಜ್‌ಪುರ, ಮಾನ್ಸಾ, ಹೋಶಿಯಾರ್‌ಪುರ್, ಖಮ್ನೋ, ಬರ್ನಾಲಾ ಮತ್ತು ಯಮುನಾ ನಗರ ಮೂಲದವರು. ಏಳು ಮಂದಿ ನಂಗ್ಲೋಯಿ ಪೊಲೀಸ್ ಠಾಣೆ ಬಂಧನದಲ್ಲಿದ್ದು, ಈ ಬಂಧಿತರೆಲ್ಲರೂ ಹರಿಯಾಣ ಮೂಲದವರು. ಹರಿಯಾಣ ಮತ್ತು ಪಂಜಾಬ್‌ನ 31 ವ್ಯಕ್ತಿಗಳ ಮತ್ತೊಂದು ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದ್ದು, ಅವರನ್ನು ನಂಗ್ಲೋಯಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

ವಿಧಾನ ಸಭಾ ಅಧಿವೇಶನದ ಫೇಸ್‌ಬುಕ್ ಲೈವ್ ನೋಡಿ►► 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...