Homeಮುಖಪುಟಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಲಕ್ಷಾಂತರ ರೈತರು ಹೋರಾಡುತ್ತಿರುವುದು ನಿಮಗೆ ಗೊತ್ತೆ ಇದೆ. ಅದೇ ಮಾದರಿಯಲ್ಲಿ ಹರಿಯಾಣದ ಪಲ್ವಾಲ್ ಜಿಲ್ಲೆಯ ಬ್ರಿಸ್ಲಾ ಗ್ರಾಮದಲ್ಲಿಯೂ ಸಹ ಕಳೆದ 65 ದಿನಗಳಿಂದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಈ ಪ್ರತಿಭಟನಾ ಸ್ಥಳಕ್ಕೆ ಹೊರರಾಜ್ಯಗಳಿಂದಲೂ ಪ್ರತಿಭಟನಾಕಾರರು ಬಂದು ಭಾಗವಹಿಸಿ ಬೆಂಬಲ ನೀಡುತ್ತಿದ್ದಾರೆ.

ಬ್ರಿಸ್ಲಾ ಗ್ರಾಮದ ರಸ್ತೆಯಲ್ಲಿ ದೆಹಲಿ ಮಾದರಿಯಲ್ಲಿಯೇ ಟೆಂಟ್ ಒಂದನ್ನು ಹಾಕಲಾಗಿದೆ. ರಾಷ್ಟ್ರೀಯ ಕಿಸಾನ್ – ಮಜ್ದೂರ್ ಮಹಾಸಂಘವು ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಪ್ರತಿದಿನವೂ ಪ್ರತಿಭಟನೆ ನಡೆಯುತ್ತಿದ್ದು, ರಾತ್ರಿವೇಳೆ ಕೆಲವರು ಅಲ್ಲಿಯೇ ಉಳಿಯುತ್ತಿದ್ದಾರೆ.

ಗ್ರಾಮದ ಸರಪಂಚರು ಸಹ ಪ್ರತಿದಿನ ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ. ಅವರ ನೇತೃತ್ವದಲ್ಲಿಯೇ ಹೋರಾಟ ಆರಂಭವಾಗಿದೆ. ಅಲ್ಲದೆ ಪ್ರತಿದಿನ ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಗ್ರಾಮದ ಒಬ್ಬರು ಉಪವಾಸ ಸತ್ಯಾಗ್ರಹ ಆಚರಿಸಿತ್ತಾರೆ. ಈಗಾಗಲೇ 60ಕ್ಕು ಹೆಚ್ಚು ಜನರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ ಎಂದು ಅಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನು ಇಲ್ಲಿನ ಪ್ರತಿಭಟನೆಗೆ ಗುಜರಾತ್, ರಾಜಸ್ಥಾನದ ಜನರೂ ಸಹ ಬಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಪಲ್ವಾಲ್‌ನ ಹೈವೆಗಳಲ್ಲಿ ಇಂತಹ ಹಲವು ಪ್ರತಿಭಟನೆಗಳು ನಡೆಯುತ್ತಿವೆ. ಪಲ್ವಾಲ್‌ಗೆ ಭೇಟಿ ಕೊಟ್ಟವರೆಲ್ಲಾ ಇಲ್ಲಿಗೂ ಬರುತ್ತಾರೆ.

ಗುಜರಾತ್‌ನ ಸೂರತ್ ನಿಂದ ಬಂದಿರುವ ತಬ್ಸುಮ್ ಚೌಹಾಣ್‌ರವರು ಹೋರಾಟದ ಕುರಿತು ಮಾತನಾಡಿ “ನಾನು ಈ ಆಂದೋಲನವನ್ನು ಬೆಂಬಲಿಸಲು ಬಂದಿದ್ದೇನೆ, ಏಕೆಂದರೆ ನಾನು ರೈತನ ಮಗಳು. ನಮ್ಮ ದೇಶದಲ್ಲಿ ರೈತ ಮತ್ತು ಕೃಷಿ ಸುರಕ್ಷಿತವಾಗಿಲ್ಲದಿದ್ದರೆ ನಮ್ಮ ದೇಶ ಸುರಕ್ಷಿತವಾಗಿರುವುದು ಹೇಗೆ? ನಮ್ಮ ಪ್ರಧಾನಿ ಮೋದಿಯವರು ಅಂಬಾನಿ ಮತ್ತು ಅದಾನಿಯನ್ನು ಬೆಳೆಸುವುದಕ್ಕಾಗಿ ಈ ಕಾಯ್ದೆಗಳನ್ನು ತಂದಿದ್ದಾರೆ. ಇನ್ನು ಅಂಬಾನಿ ಅದಾನಿಯವರು ಸಿಮ್‌ ಕಾರ್ಡ್ ತರ ಆಹಾರ ತಯಾರಿಸುವ ಉಪಕರಣ ಕಂಡುಹಿಡಿಯಬಲ್ಲರೆ? ಕೃಷಿ ಮಾಡದೇ ಕೇವಲ ಹಣ ಹಾಕಿದರೆ ಆಹಾರ ಕೊಡುವಂತ ಉಪಕರಣ ತಯಾರಿಸುತ್ತಾರೆಯೇ?” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಇಲ್ಲದಿದ್ದರೆ ಸರ್ಕಾರ ಮಣ್ಣು ತಿನ್ನಬೇಕಾಗುತ್ತದೆ. ಇಂದು ರೈತರ ಕಷ್ಟ ಗೊತ್ತಿಲ್ಲದವರು ಕೃಷಿ ಮಂತ್ರಿಗಳಾಗಿದ್ದಾರೆ. ಇನ್ನು ಮೋದಿಯವರು ಮನ್ ಕಿ ಬಾತ್ ಆಡುತ್ತಾರೆಯೇ ಹೊರತು ಜನರ ಮಾತು ಕೇಳಿಸಿಕೊಳ್ಳುವುದಿಲ್ಲ. ನಾನು ಒಬ್ಬ ರೈತನ ಮಗಳು. ನನ್ನ ಮಾತನ್ನು ಅವರು ಕೇಳಿಸಿಕೊಳ್ಳಬೇಕು. ರೈತರು ಸಣ್ಣ ವ್ಯಕ್ತಿಗಳಲ್ಲ. ಅವರು ಬೆಳೆಯದೆ ಇದ್ದರೆ ನಾವು ಏನು ತಿನ್ನಲು ಸಾಧ್ಯವಿಲ್ಲ. ನೀವು ಆಹಾರವನ್ನು ಗೌರವಿಸುವುದಾದರೆ ರೈತರನ್ನು ಗೌರವಿಸಬೇಕು. ಕೇಂದ್ರ ಸರ್ಕಾರ ರೈತರೊಂದಿಗೆ ಮಾತನಾಡುತ್ತೇವೆ ಅನ್ನುತ್ತಾರೆ ಈ ಕಾನೂನುಗಳನ್ನು ತರುವ ಮುಂಚೆಯೇ ಮಾತನಾಡಬಹುದಿತ್ತಲ್ಲವೇ? ಈಗಲಾದರೂ ಅವರು ರೈತನ ಮಾತುಗಳನ್ನು ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ‌ ಹೋರಾಟವನ್ನು ಬೆಂಬಲಿಸಿ ಹರಿಯಾಣದ ಪಲ್ವಾಲ್‌ ಜಿಲ್ಲೆಯ ಹೈವೆಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ದೇಶವ್ಯಾಪಿ ‘ಸಂಚಾರ ಸ್ಥಗಿತ ಚಳವಳಿ’ಗೆ ಕರೆರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...