Homeಮುಖಪುಟ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತ? ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ -‘ಸಾಮ್ನಾ’

- Advertisement -
- Advertisement -

ಮಹಾರಾಷ್ಟ್ರವನ್ನು ಕಡೆಗಣಿಸಿದ್ದಕ್ಕಾಗಿ ಮತ್ತು ಚುನಾವಣೆ ಇರುವ ರಾಜ್ಯಗಳ ಮೇಲೆ ಮಾತ್ರ ಗಮನಹರಿಸಿದ್ದಕ್ಕಾಗಿ ಶಿವಸೇನೆ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್-2021 ವಿರುದ್ಧ ವಾಗ್ದಾಳಿ ನಡೆಸಿದೆ. ಹಣಕಾಸು ಸಚಿವರು ಡಿಜಿಟಲ್ ಕುದುರೆ ಸವಾರಿ ಮಾಡುತ್ತ, ಕನಸುಗಳ ಸಾರ್ವಜನಿಕ ಪ್ರವಾಸ’ ಕೈಗೊಂಡಿದ್ದಾರೆ ಎಂದು ಅದು ಲೇವಡಿ ಮಾಡಿದೆ.

ಅಸ್ಸಾಂ, ಕೇರಳ, ತಮಿಳುನಾಡು, ಮತ್ತು ಪಶ್ಚಿಮ ಬಂಗಾಳಗಳು ನಿರ್ಮಲಾ ಸೀತಾರಾಮನ್ ಅವರಿಂದ ಭಾರಿ ಮೂಲಸೌಕರ್ಯ ಯೋಜನೆಗಳನ್ನು ಪಡೆದಿವೆ ಎಂದು ಶಿವಸೇನೆಯ ಮುಖವಾಣಿ “ಸಾಮ್ನಾ’ ದ ಸಂಪಾದಕೀಯದಲ್ಲಿ ತಿಳಿಸಲಾಗಿದೆ. ಈ ರಾಜ್ಯಗಳಲ್ಲಿ ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

“ಚುನಾವಣೆಯನ್ನು ಗೆಲ್ಲಲು ಬಜೆಟ್ ಅನ್ನು ಆಯುಧವಾಗಿ ಬಳಸುವುದು ಎಷ್ಟು ಸೂಕ್ತವಾಗಿದೆ? ಈ ಮತದಾನದ ವ್ಯಾಪ್ತಿಯ ರಾಜ್ಯಗಳಿಗೆ ಸಾಕಷ್ಟು ಯೋಜನೆಗಳನ್ನು ವಿತರಿಸಿದ ಕೇಂದ್ರ ಸರ್ಕಾರವು, ದೇಶದಲ್ಲಿ ಹೆಚ್ಚು ತೆರಿಗೆ ಪಾವತಿಸುವ ಮಹಾರಾಷ್ಟ್ರವನ್ನು ನಿರ್ಲಕ್ಷಿಸಿದೆ” ಎಂದು ಸಂಪಾದಕೀಯದಲ್ಲಿ ಟೀಕಿಸಿದೆ.

ರಾಜ್ಯದ ಬಗ್ಗೆ ಬಜೆಟ್ ಪ್ರತೀಕಾರದ ಮನೋಭಾವವನ್ನು ತೋರಿಸಿದೆ ಎಂದು ಅದು ಆರೋಪಿಸಿದೆ. ಸೀತಾರಾಮನ್ ಕೆಲವು ರಾಜ್ಯಗಳಿಗಷ್ಟೇ ಅಲ್ಲ, ಇಡೀ ದೇಶದ ಹಣಕಾಸು ಸಚಿವರು ಎಂದು ಸಂಪಾದಕಿತದಲ್ಲಿ ನೆನಪಿಸಲಾಗಿದೆ. “ನಾಗ್ಪುರ ಮತ್ತು ನಾಸಿಕ್ ಮೆಟ್ರೋ ಯೋಜನೆಗಳ ಪ್ರಸ್ತಾಪ ಮಾಡಿದ್ದರ ಹೊರತುಪಡಿಸಿ, ಮುಂಬೈ ಮತ್ತು ಮಹಾರಾಷ್ಟ್ರಕ್ಕೆ ಏನನ್ನೂ ನೀಡಿಲ್ಲ” ಎಂದು ಅದು ಹೇಳಿದೆ. “ಈ ತಾರತಮ್ಯ ಏಕೆ? ದೇಶದ ಹಣಕಾಸು ಇಲಾಖೆ ಇಡೀ ದೇಶವನ್ನು ಪರಿಗಣಿಸಬೇಕು” ಎಂದು ಸಂಪಾದಕೀಯ ಆಗ್ರಹಿಸಿದೆ.

ಸಾಂಕ್ರಾಮಿಕ ಪೀಡಿತ ಕೈಗಾರಿಕೆಗಳಿಗೆ ಬಜೆಟ್‌ನಲ್ಲಿ ಏನೂ ಇಲ್ಲ ಎಂದು ಸಂಪಾದಕೀಯವು ಹೇಳಿದೆ. “ಕೋವಿಡ್ -19 ಕಾರಣಕ್ಕೆ ಸಾವಿರಾರು ಕೈಗಾರಿಕೆಗಳಿಗೆ ನಷ್ಟವಾಗಿದೆ. ಅನೇಕ ಜನರು ಉದ್ಯೋಗ ಕಳೆದುಕೊಂಡರು, ನಿರುದ್ಯೋಗ ಹೆಚ್ಚಾಗಿದೆ. ಆದರೆ ಹಣಕಾಸು ಸಚಿವರು ಈ ವಿಷಯದಲ್ಲಿ ಏನನ್ನೂ ಹೇಳಿಲ್ಲ” ಎಂದು ಅದು ಟೀಕಿಸಿದೆ.

ಸಾಮಾನ್ಯ ಜನರು, ತಮ್ಮ ಜೇಬುಗಳಿಗೆ ಎಷ್ಟು ಬಂದಿತು ಎಂದು ಕಾಳಜಿ ವಹಿಸುತ್ತಾರೆ. “ಸ್ವಾವಲಂಬಿ ಭಾರತ” ಮತ್ತು ‘ಸ್ಟಾರ್ಟ್-ಅಪ್’ನಂತಹ “ಹಳೆಯ-ಶೈಲಿಯ ಗುಳ್ಳೆಗಳು” ಮತ್ತು “ಮೂಲಸೌಕರ್ಯ ಮತ್ತು ಕೃಷಿ ಅಭಿವೃದ್ಧಿ”ಯಂತಹ ಕೆಲವು ಹೊಸ “ಟ್ರಿಕ್ ಪದಗಳನ್ನು” ಹೊರತುಪಡಿಸಿ, ಈ ಬಜೆಟ್‌ನಲ್ಲಿ ಸಾರ್ವಜನಿಕರಿಗೆ ಏನೂ ಸಿಕ್ಕಿಲ್ಲ ಎಂದು ಸಾಮ್ನಾ ವರದಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಶಿವಸೇನೆಯ ಪ್ರಕಾರ, ಬಜೆಟ್‌ನ “ಕಾಗದದ ಕುದುರೆಗಳು” ಕೇವಲ “ಡಿಜಿಟಲ್ ಕುದುರೆಗಳು” ಆಗಲಿವೆ. ಬಾವಿಯಲ್ಲಿ ಒಂದು ಹನಿ ನೀರು ಕೂಡ ಇಲ್ಲದಿದ್ದರೂ, ಜನರಿಗೆ ಸಾಕಷ್ಟು ನೀರು ಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ಎಎನ್‌ಐ ವರದಿ ತಿಳಿಸಿದೆ.


ಇದನ್ನೂ ಓದಿ: ಟಿಆರ್‌ಎಸ್ ಶಾಸಕನ ಮನೆಗೆ ದಾಳಿ: 39 ಬಿಜೆಪಿ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...