Homeಕರ್ನಾಟಕಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ಪೆಟ್ರೋಲ್/ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾನ್ಯ ಜನರು ತೊಂದರೆಗೊಳಗಾಗುತ್ತಿದ್ದಾರೆ.

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಆರೋಪಿಸಿದೆ. ಈ ಕುರಿತು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ಪತ್ರಿಕಾ ಹೇಳಿಕೆ ನೀಡಿದ್ದು, ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಹೇಳಿಕೆಯಲ್ಲಿ “ಕರ್ನಾಟಕಕ್ಕೆ ಅನ್ಯಾಯದ ಸರಣಿ ಮುಂದುವರೆದಿದೆ, ಒಕ್ಕೂಟ ಸರ್ಕಾರದ 2021-22 ಬಜೆಟ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಮತ್ತಷ್ಟು ಅನುದಾನಗಳು ಕಡಿತಗೊಳ್ಳುವ ವರದಿಗಳಾಗಿದೆ. ಇದು ಕರ್ನಾಟಕ ಸರ್ಕಾರ ಮತ್ತು ಎಲ್ಲ 28 ಲೋಕಸಭಾ ಸದಸ್ಯರ ಸಾಮೂಹಿಕ ಸೋಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೈಕಮಾಂಡ್ ಗುಲಾಮಗಿರಿಗೆ ಒಗ್ಗಿಹೋಗಿರುವ ನಮ್ಮ ಸಂಸದರಿಗೆ, ಜನಪ್ರತಿನಿಧಿಗಳಿಗೆ ಇದು ಅವಮಾನ ಎನ್ನಿಸದಿರಬಹುದು. ಆದರೆ ವಿಶ್ವಾಸವಿಟ್ಟು ಮತ ಚಲಾಯಿಸಿದ ರಾಜ್ಯದ ಜನತೆಯ ಪಾಲಿಗೆ ಇದು ಘೋರ ಅಪಮಾನವಾಗಿದೆ. ಸದ್ಯದಲ್ಲೇ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹೆಚ್ಚು ಹೆಚ್ಚು ಅನುದಾನ ನೀಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಆದರೆ ಕರ್ನಾಟಕದಲ್ಲಿ ಚುನಾವಣೆ ಇದ್ದರೂ, ಇಲ್ಲದೇ ಇದ್ದರೂ ಅನುದಾನ ನೀಡುವುದಿಲ್ಲ. ಕನ್ನಡಿಗರೆಂದರೆ ಅಷ್ಟು ತಾತ್ಸಾರ ಒಕ್ಕೂಟ ಸರ್ಕಾರಕ್ಕೆ ಎಂದು ಕಿಡಿಕಾರಿದ್ದಾರೆ.

ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂನಂಥ ರಾಜ್ಯಗಳಿಗೆ ಪ್ರತ್ಯೇಕವಾಗಿ ಹೆದ್ದಾರಿಗಳಿಗೆ ಅನುದಾನ ಬಿಡುಗಡೆ ಮಾಡಿರುವ ಒಕ್ಕೂಟ ಸರ್ಕಾರ ಆಳುವ ಪಕ್ಷದ 25 ಲೋಕಸಭಾ ಸದಸ್ಯರನ್ನು ಆಯ್ಕೆ ಮಾಡಿರುವ ಕರ್ನಾಟಕವನ್ನು ಮರೆತಿರುವುದು ಕನ್ನಡಿಗರಿಗೆ ಎಸಗಿದ ದ್ರೋಹ.

ಮೀನುಗಾರಿಕೆ ಕೂಡ ಕರ್ನಾಟಕದ ಒಂದು ಬಹುಮುಖ್ಯವಾದ ಉದ್ಯಮ. ಬಜೆಟ್ ನಲ್ಲಿ ಮೀನುಗಾರಿಕೆಗೆ ಸಂಬಂಧಿಸಿದಂತೆ 5 ಮುಖ್ಯವಾದ ಮೀನುಗಾರಿಕೆಯ ಬಂದರುಗಳನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಲಾಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆಯ 2‌A ಮತ್ತು 2‌B ಯೋಜನೆಗಳಿಗೆ ಎಷ್ಟು ಅನುದಾನ ನೀಡಲಾಗುವುದು ಎನ್ನುವುದನ್ನು ಸ್ಪಷ್ಟವಾಗಿ ತಿಳಿಸಿಲ್ಲದಿರುವುದು ಎದ್ದುಕಾಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್/ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸಾಮಾನ್ಯ ಜನರು ತೊಂದರೆಗೊಳಗಾಗುತ್ತಿದ್ದಾರೆ. ಪೆಟ್ರೋಲ್/ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವ ಬಗ್ಗೆ ನಿರೀಕ್ಷೆ ಇರಿಸಿಕೊಳ್ಳಲಾಗಿತ್ತು. ಈ ನಿರೀಕ್ಷೆಯನ್ನೂ ಹುಸಿಗೊಳಿಸಲಾಗಿದೆ. ಒಟ್ಟಾರೆಯಾಗಿ ಈ ಬಾರಿಯ ಒಕ್ಕೂಟ ಸರ್ಕಾರದ ಬಜೆಟ್, ಕನ್ನಡಿಗರ ಪಾಲಿಗೆ ಖಾಲಿ ಸೊನ್ನೆಯನ್ನು ಸುತ್ತಿದೆ. ಜಾತಿ, ಧರ್ಮದ ಹೆಸರಿನಲ್ಲಿ ಕನ್ನಡಿಗರ ಮತ ಪಡೆಯಬಹುದು, ಅಭಿವೃದ್ಧಿ ಯಾಕೆ ಎಂಬುದು ಅವರ ಆಲೋಚನೆ. ಕನ್ನಡಿಗರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...