Homeಮುಖಪುಟಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ...

ಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ…

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಈ ಅಪಾಯಕಾರಿ ಬೆಳವಣಿಗೆಗಳ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡ ಸುದ್ದಿ ಇದುವರೆಗೂ ಬಂದಿಲ್ಲ. ಆದರೆ, ಈ ರೀತಿ ನಡೆದದ್ದು ನಿಜ ಎಂಬುದನ್ನು ಮಾಧ್ಯಮ ಸಂಸ್ಥೆಗಳು ವಿಡಿಯೋ ಪರಿಶೀಲಿಸಿ, ಸ್ಥಳೀಯ ವರದಿಗಾರರಿಂದಲೂ ಪರಿಶೀಲಿಸಿ ದೃಢಪಡಿಸಿವೆ. ಆ ಘಟನೆಗಳು ಏನು?

ಒಂದು,
ಭಾಜಪದ ಹಾಲಿ ಸಂಸತ್ಸದಸ್ಯ ಸಾಕ್ಷಿ ಮಹಾರಾಜ್ ತನ್ನ ಕ್ಷೇತ್ರದಲ್ಲಿ ಮತದಾರರಿಗೆ ಈ ರೀತಿ ಹೇಳುತ್ತಾರೆ. ‘ನಾನು ಸನ್ಯಾಸಿ. ನಾನು ನಿಮ್ಮ ಮನೆ ಬಾಗಿಲಿಗೆ ಭಿಕ್ಷೆ ಬೇಡಲು ಬಂದಿದ್ದೇನೆ. ಒಂದು ವೇಳೆ ನೀವು ಸನ್ಯಾಸಿಗೆ (ಭಿಕ್ಷೆ ನೀಡಲು) ನಿರಾಕರಿಸಿದರೆ, ನಿಮ್ಮ ಮನೆಯ ಎಲ್ಲಾ ಸಂತೋಷವನ್ನೂ ನಾನು ಕಸಿದುಕೊಂಡು ಬಿಡುತ್ತೇನೆ ಮತ್ತು ನಿಮಗೆ ಶಾಪ ಕೊಡುತ್ತೇನೆ’.
https://www.abplive.in/videos/im-a-sanyasi-will-curse-if-you-dont-vote-for-me-warns-bjp-mp-sakshi-maharaj-963543?fbclid=IwAR3m-tZPfMnrh_6rqP20P_f26181g9iijGAOxdcFcYVRB2IZIFeT4orSDt0

ಮನೆ ಬಾಗಿಲಿಗೆ ಬಂದ ಸನ್ಯಾಸಿಗಳಿಗೆ ಒಂದಲ್ಲಾ ಒಂದು ಕಾರಣಕ್ಕೆ ಭಿಕ್ಷೆ ನೀಡುವುದು ತಡವಾದರೆ ಅಥವಾ ನೀಡದಿದ್ದರೆ ಶಾಪ ಕೊಡುವ ಕಥೆಗಳು ಪುರಾಣಗಳಲ್ಲಿದ್ದು, ಅವು ಜನರ ಧಾರ್ಮಿಕ ನಂಬಿಕೆಗಳ ಭಾಗವಾಗಿವೆ. ಆ ಕಥೆಗಳಲ್ಲೂ ಸಹಾ ಮನೆಯೊಳಗಿನ ತನ್ನ ಕರ್ತವ್ಯವನ್ನು ಮಾಡುವುದರಲ್ಲಿ ನಿರತವಾಗಿರುವ ಮಹಿಳೆಯು ಇಂತಹ ಶಾಪದ ಬೆದರಿಕೆಗೆ ಹೆದರುವುದಿಲ್ಲ. ‘ನೀವು ದುರುಗುಟ್ಟಿ ನೋಡಿದರೆ ಸುಟ್ಟು ಹೋಗಲು ನಾನೇನು ಬಲಾಕ ಪಕ್ಷಿಯಲ್ಲ’ ಎಂದು ಹೇಳಿ ಸನ್ಯಾಸಿಯ ಅಹಂಅನ್ನು ಇಳಿಸುವ ಕಥೆಯೂ ಪುರಾಣಲ್ಲಿದೆ.
ಆದರೂ, ಸನ್ಯಾಸಿಗಳ ಶಕ್ತಿಯ ಮೇಲೆ ಇರುವ ಭಯ ಮತ್ತು ನಂಬಿಕೆಗಳನ್ನು ಬಳಸಿಕೊಂಡು ಸಾಕ್ಷಿ ಮಹಾರಾಜ್ ಹೇಳಿರುವ ಮಾತು ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಎರಡು,
ಫಿಲಿಬಿಟ್‍ನ ಸಂಸದೆ ಮನೇಕಾ ಗಾಂಧಿ ಈ ಸಾರಿ ಸುಲ್ತಾನ್‍ಪುರದಿಂದ ಸ್ಪರ್ಧಿಸುತ್ತಿದ್ದು, ತನ್ನ ಬಹಿರಂಗ ಸಭೆಯಲ್ಲಿ ಮುಸ್ಲಿಮರಿಗೆ ಈ ರೀತಿ ಹೇಳುತ್ತಾರೆ. ಅವರು ಈ ಮಾತನ್ನು ಹೇಳುವಾಗ ವೇದಿಕೆಯ ಮೇಲೂ ಮುಸ್ಲಿಂ ವ್ಯಕ್ತಿಗಳು ಇರುತ್ತಾರೆ ‘ನಾನು ಗೆಲ್ಲುತ್ತೇನೆ. ಆದರೆ, ಮುಸ್ಲಿಮರ ಬೆಂಬಲವಿಲ್ಲದೇ ಗೆದ್ದರೆ ನನಗೆ ಅಷ್ಟು ಸರಿ ಬರುವುದಿಲ್ಲ. ಆಗ ಒಂದು ವೇಳೆ ಮುಸ್ಲಿಮರು ಬಂದು ನನಗೆ ಏನಾದರೂ ಕೆಲಸ ಮಾಡಿಕೊಡಿ ಎಂದು ಕೇಳಿದರೆ, ನಾನು ಅದನ್ನು ಮಾಡಿಕೊಡುವುದಿಲ್ಲ. ಏಕೆಂದರೆ, ಇದು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ. ನಾವೇನು ಮಹಾತ್ಮಾಗಾಂಧಿ ಮಕ್ಕಳಲ್ಲ. ನನಗೆ ನಿಮ್ಮ ಅಗತ್ಯವಿಲ್ಲ. ನಿಮಗೆ ನನ್ನ ಅಗತ್ಯವಿದೆ. ಫಲಿತಾಂಶ ಹೊರಬಂದ ಮೇಲೆ ಯಾವುದಾದರೂ ಬೂತ್‍ಗಳಲ್ಲಿ (ನನ್ನ ಪರವಾಗಿ) 50-100 ಮತಗಳಷ್ಟೇ ಬಂದಿದ್ದರೆ, ನನಗೆ ನೋವಾಗುತ್ತದೆ. ಇನ್ನು ನಿಮ್ಮಿಷ್ಟ’
https://www.thequint.com/news/politics/maneka-gandhi-mcc-threatens-muslims-to-vote-for-her?fbclid=IwAR2CH3FN61esmdrkjX0XrmIEt5_6rBNABtxSU9v5V6fik2gkW0jFgpfie8U

ತೆಲುಗು ಸಿನೆಮಾಗಳಲ್ಲಿನ ‘ಸೈಲೆಂಟ್ ವಿಲನ್’ ರೀತಿಯಲ್ಲಿ ನೀಡಿರುವ ಈ ಬೆದರಿಕೆಯನ್ನು ಮಿರರ್‍ನೌ ಪತ್ರಕರ್ತೆ ಫಾಯೇ ಡಿಸೌಜಾ, ನಟಿ ಸ್ವರಾ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ. ಚುನಾವಣಾ ಆಯೋಗವು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಆದರೆ, ಇಂತಹ ಸಾವಿರಾರು ಪ್ರಕರಣಗಳು ನಡೆಯುತ್ತಿದ್ದು, ಅವುಗಳಲ್ಲಿ ಶೇ.90ರಷ್ಟು ಪ್ರಕರಣಗಳು ಬಿಜೆಪಿ ನಾಯಕರಿಂದ ಆಗುತ್ತಿರುವುದು ವರದಿಯಾಗಿದೆ. ಅವುಗಳ ಮೇಲೆ ಗಂಭೀರ ಕ್ರಮವನ್ನು ಚುನಾವಣಾ ಆಯೋಗವು ತೆಗೆದುಕೊಳ್ಳುವ ಸಾಧ್ಯತೆ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...