Homeಮುಖಪುಟಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ...

ಮತ ಹಾಕದಿದ್ದರೆ ಒಬ್ಬರು ಶಾಪ ಕೊಡುತ್ತಾರೆ, ಇನ್ನೊಬ್ಬರು ‘ನೋಡಿಕೊಳ್ಳುತ್ತಾರೆ’. ಅಕಟಕಟಾ ಉತ್ತರ ಪ್ರದೇಶವೇ…

- Advertisement -
- Advertisement -

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಈ ಅಪಾಯಕಾರಿ ಬೆಳವಣಿಗೆಗಳ ಮೇಲೆ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡ ಸುದ್ದಿ ಇದುವರೆಗೂ ಬಂದಿಲ್ಲ. ಆದರೆ, ಈ ರೀತಿ ನಡೆದದ್ದು ನಿಜ ಎಂಬುದನ್ನು ಮಾಧ್ಯಮ ಸಂಸ್ಥೆಗಳು ವಿಡಿಯೋ ಪರಿಶೀಲಿಸಿ, ಸ್ಥಳೀಯ ವರದಿಗಾರರಿಂದಲೂ ಪರಿಶೀಲಿಸಿ ದೃಢಪಡಿಸಿವೆ. ಆ ಘಟನೆಗಳು ಏನು?

ಒಂದು,
ಭಾಜಪದ ಹಾಲಿ ಸಂಸತ್ಸದಸ್ಯ ಸಾಕ್ಷಿ ಮಹಾರಾಜ್ ತನ್ನ ಕ್ಷೇತ್ರದಲ್ಲಿ ಮತದಾರರಿಗೆ ಈ ರೀತಿ ಹೇಳುತ್ತಾರೆ. ‘ನಾನು ಸನ್ಯಾಸಿ. ನಾನು ನಿಮ್ಮ ಮನೆ ಬಾಗಿಲಿಗೆ ಭಿಕ್ಷೆ ಬೇಡಲು ಬಂದಿದ್ದೇನೆ. ಒಂದು ವೇಳೆ ನೀವು ಸನ್ಯಾಸಿಗೆ (ಭಿಕ್ಷೆ ನೀಡಲು) ನಿರಾಕರಿಸಿದರೆ, ನಿಮ್ಮ ಮನೆಯ ಎಲ್ಲಾ ಸಂತೋಷವನ್ನೂ ನಾನು ಕಸಿದುಕೊಂಡು ಬಿಡುತ್ತೇನೆ ಮತ್ತು ನಿಮಗೆ ಶಾಪ ಕೊಡುತ್ತೇನೆ’.
https://www.abplive.in/videos/im-a-sanyasi-will-curse-if-you-dont-vote-for-me-warns-bjp-mp-sakshi-maharaj-963543?fbclid=IwAR3m-tZPfMnrh_6rqP20P_f26181g9iijGAOxdcFcYVRB2IZIFeT4orSDt0

ಮನೆ ಬಾಗಿಲಿಗೆ ಬಂದ ಸನ್ಯಾಸಿಗಳಿಗೆ ಒಂದಲ್ಲಾ ಒಂದು ಕಾರಣಕ್ಕೆ ಭಿಕ್ಷೆ ನೀಡುವುದು ತಡವಾದರೆ ಅಥವಾ ನೀಡದಿದ್ದರೆ ಶಾಪ ಕೊಡುವ ಕಥೆಗಳು ಪುರಾಣಗಳಲ್ಲಿದ್ದು, ಅವು ಜನರ ಧಾರ್ಮಿಕ ನಂಬಿಕೆಗಳ ಭಾಗವಾಗಿವೆ. ಆ ಕಥೆಗಳಲ್ಲೂ ಸಹಾ ಮನೆಯೊಳಗಿನ ತನ್ನ ಕರ್ತವ್ಯವನ್ನು ಮಾಡುವುದರಲ್ಲಿ ನಿರತವಾಗಿರುವ ಮಹಿಳೆಯು ಇಂತಹ ಶಾಪದ ಬೆದರಿಕೆಗೆ ಹೆದರುವುದಿಲ್ಲ. ‘ನೀವು ದುರುಗುಟ್ಟಿ ನೋಡಿದರೆ ಸುಟ್ಟು ಹೋಗಲು ನಾನೇನು ಬಲಾಕ ಪಕ್ಷಿಯಲ್ಲ’ ಎಂದು ಹೇಳಿ ಸನ್ಯಾಸಿಯ ಅಹಂಅನ್ನು ಇಳಿಸುವ ಕಥೆಯೂ ಪುರಾಣಲ್ಲಿದೆ.
ಆದರೂ, ಸನ್ಯಾಸಿಗಳ ಶಕ್ತಿಯ ಮೇಲೆ ಇರುವ ಭಯ ಮತ್ತು ನಂಬಿಕೆಗಳನ್ನು ಬಳಸಿಕೊಂಡು ಸಾಕ್ಷಿ ಮಹಾರಾಜ್ ಹೇಳಿರುವ ಮಾತು ವ್ಯಾಪಕ ಖಂಡನೆಗೆ ಗುರಿಯಾಗಿದೆ.
ಎರಡು,
ಫಿಲಿಬಿಟ್‍ನ ಸಂಸದೆ ಮನೇಕಾ ಗಾಂಧಿ ಈ ಸಾರಿ ಸುಲ್ತಾನ್‍ಪುರದಿಂದ ಸ್ಪರ್ಧಿಸುತ್ತಿದ್ದು, ತನ್ನ ಬಹಿರಂಗ ಸಭೆಯಲ್ಲಿ ಮುಸ್ಲಿಮರಿಗೆ ಈ ರೀತಿ ಹೇಳುತ್ತಾರೆ. ಅವರು ಈ ಮಾತನ್ನು ಹೇಳುವಾಗ ವೇದಿಕೆಯ ಮೇಲೂ ಮುಸ್ಲಿಂ ವ್ಯಕ್ತಿಗಳು ಇರುತ್ತಾರೆ ‘ನಾನು ಗೆಲ್ಲುತ್ತೇನೆ. ಆದರೆ, ಮುಸ್ಲಿಮರ ಬೆಂಬಲವಿಲ್ಲದೇ ಗೆದ್ದರೆ ನನಗೆ ಅಷ್ಟು ಸರಿ ಬರುವುದಿಲ್ಲ. ಆಗ ಒಂದು ವೇಳೆ ಮುಸ್ಲಿಮರು ಬಂದು ನನಗೆ ಏನಾದರೂ ಕೆಲಸ ಮಾಡಿಕೊಡಿ ಎಂದು ಕೇಳಿದರೆ, ನಾನು ಅದನ್ನು ಮಾಡಿಕೊಡುವುದಿಲ್ಲ. ಏಕೆಂದರೆ, ಇದು ಕೊಟ್ಟು ತೆಗೆದುಕೊಳ್ಳುವ ವ್ಯವಹಾರ. ನಾವೇನು ಮಹಾತ್ಮಾಗಾಂಧಿ ಮಕ್ಕಳಲ್ಲ. ನನಗೆ ನಿಮ್ಮ ಅಗತ್ಯವಿಲ್ಲ. ನಿಮಗೆ ನನ್ನ ಅಗತ್ಯವಿದೆ. ಫಲಿತಾಂಶ ಹೊರಬಂದ ಮೇಲೆ ಯಾವುದಾದರೂ ಬೂತ್‍ಗಳಲ್ಲಿ (ನನ್ನ ಪರವಾಗಿ) 50-100 ಮತಗಳಷ್ಟೇ ಬಂದಿದ್ದರೆ, ನನಗೆ ನೋವಾಗುತ್ತದೆ. ಇನ್ನು ನಿಮ್ಮಿಷ್ಟ’
https://www.thequint.com/news/politics/maneka-gandhi-mcc-threatens-muslims-to-vote-for-her?fbclid=IwAR2CH3FN61esmdrkjX0XrmIEt5_6rBNABtxSU9v5V6fik2gkW0jFgpfie8U

ತೆಲುಗು ಸಿನೆಮಾಗಳಲ್ಲಿನ ‘ಸೈಲೆಂಟ್ ವಿಲನ್’ ರೀತಿಯಲ್ಲಿ ನೀಡಿರುವ ಈ ಬೆದರಿಕೆಯನ್ನು ಮಿರರ್‍ನೌ ಪತ್ರಕರ್ತೆ ಫಾಯೇ ಡಿಸೌಜಾ, ನಟಿ ಸ್ವರಾ ಭಾಸ್ಕರ್ ಸೇರಿದಂತೆ ಹಲವರು ಟೀಕಿಸಿದ್ದಾರೆ. ಚುನಾವಣಾ ಆಯೋಗವು ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಆದರೆ, ಇಂತಹ ಸಾವಿರಾರು ಪ್ರಕರಣಗಳು ನಡೆಯುತ್ತಿದ್ದು, ಅವುಗಳಲ್ಲಿ ಶೇ.90ರಷ್ಟು ಪ್ರಕರಣಗಳು ಬಿಜೆಪಿ ನಾಯಕರಿಂದ ಆಗುತ್ತಿರುವುದು ವರದಿಯಾಗಿದೆ. ಅವುಗಳ ಮೇಲೆ ಗಂಭೀರ ಕ್ರಮವನ್ನು ಚುನಾವಣಾ ಆಯೋಗವು ತೆಗೆದುಕೊಳ್ಳುವ ಸಾಧ್ಯತೆ ಇದ್ದಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...