Homeಮುಖಪುಟರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

- Advertisement -
- Advertisement -

ಕಾಂಗ್ರೆಸ್ ಸಂಸದ ಆನಂದ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ಗೃಹ ಸಚಿವಾಲಯವನ್ನು ಪ್ರಶ್ನಿಸಿತ್ತು.
ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ, ದೇಶಾದ್ಯಂತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಇನ್ನೂ ನಿರ್ಧಾರಕ್ಕೆ ಬಂದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.

ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ನವೀಕರಣದ ಬಗೆಗಿನ ಸಮಿತಿಯ ಆತಂಕಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವಾಲಯ (ಎಂಎಚ್‌ಎ), “ಜನಗಣತಿಯಲ್ಲಿ ಸಂಗ್ರಹಿಸಲಾದ ಎಲ್ಲಾ ವೈಯಕ್ತಿಕ ಮಟ್ಟದ ಮಾಹಿತಿಯು ಗೌಪ್ಯವಾಗಿರುತ್ತದೆ. ಜನಗಣತಿಯಲ್ಲಿ, ಆಡಳಿತಾತ್ಮಕ ಹಂತಗಳಲ್ಲಿ ಒಟ್ಟು ಡೇಟಾವನ್ನು ಮಾತ್ರ ಬಿಡುಗಡೆ ಮಾಡಲಾಗುತ್ತದೆ. ಹಿಂದಿನ ಜನಗಣತಿಗಳಂತೆ, ಜನಗಣತಿ 2021 ಅನ್ನು ಯಶಸ್ವಿಯಾಗಿ ನಡೆಸಲು ಮತ್ತು ಪೂರ್ಣಗೊಳಿಸಲು ಸಾರ್ವಜನಿಕರಲ್ಲಿ ಸರಿಯಾದ ಜಾಗೃತಿ ಮೂಡಿಸಲು ವ್ಯಾಪಕ ಪ್ರಚಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ದೇಶಾದ್ಯಂತ ಯಶಸ್ವಿಯಾಗಿ ನಡೆಸಿದ ಪೂರ್ವ ಪರೀಕ್ಷೆಯಲ್ಲಿ ಎನ್‌ಪಿಆರ್ ಜೊತೆಗೆ ಜನಗಣತಿಯ ಪ್ರಶ್ನಾವಳಿಗಳನ್ನು ಪರೀಕ್ಷಿಸಲಾಗಿದೆ. ಎನ್‌ಆರ್‌ಸಿ ರಚಿಸಲು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಸರ್ಕಾರ ಕಾಲಕಾಲಕ್ಕೆ ಸ್ಪಷ್ಟಪಡಿಸಿದೆ” ಎಂದು ಎಂಎಚ್‌ಎ ವಿವರಿಸಿದೆ.

ಇದನ್ನೂ ಓದಿ: ಜನವರಿಯಿಂದಲೆ ಸಿಎಎ ಜಾರಿಯಾಗುವ ಸಾಧ್ಯತೆ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಎಂಎಚ್‌ಎಯನ್ನು ಪ್ರಶ್ನಿಸಿತ್ತು. ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳನ್ನು ನೀಡುತ್ತಿರುವುದರಿಂದ ಎನ್‌ಪಿಆರ್ ಮತ್ತು ಜನಗಣತಿಗೆ ಸಂಬಂಧಿಸಿದಂತೆ ಸಾಕಷ್ಟು ಅಸಮಾಧಾನ ಮತ್ತು ಭಯವಿದೆ ಎಂದು ಸಮಿತಿ ಹೇಳಿತು.

ಎನ್‌ಪಿಆರ್ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಕ್ಷಿಪ್ತವಾಗಿ ತಿಳಿಸಬೇಕು ಮತ್ತು ಸರಿಯಾಗಿ ಮಾತನಾಡಬೇಕು ಎಂದು ಸಮಿತಿ ಹೇಳಿದೆ.

ವಿರೋಧಪಕ್ಷಗಳ ಆಡಳಿತವಿರುವ ಹಲವಾರು ರಾಜ್ಯಗಳು ಈ ಹಿಂದೆ ಎನ್‌ಪಿಆರ್ ಅನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ಹೇಳಿದ್ದವು. “ಇದನ್ನು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಕಾರ್ಯಗತಗೊಳಿಸಲು ಬಳಸಲಾಗುವುದು ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯೊಂದಿಗೆ ಅದನ್ನು ಸೇರಿಸಿ, ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಲು ಬಳಸಲಾಗುತ್ತದೆ” ಎಂಬ ಆತಂಕವನ್ನು ಆ ರಾಜ್ಯಗಳು ವ್ಯಕ್ತಪಡಿಸಿದ್ದನ್ನು ಸಮಿತಿ ಉಲ್ಲೇಖಿಸಿತು.

ಇದನ್ನೂ ಓದಿ: ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

2019 ರ ಕೊನೆಯಲ್ಲಿ ಮತ್ತು 2020 ರ ಆರಂಭದಲ್ಲಿ ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಾಗ, ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಪ್ರಕ್ರಿಯೆಯ ಪೂರ್ವ ತಯ್ಯಾರಿ ಆಗಲೇ ಆರಂಭಗೊಂಡಿದೆ ಎಂದು ಒಮ್ಮೆ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಹಿಂದಕ್ಕೆ ಹೆಜ್ಜೆ ಇಡಬೇಕಾಯಿತು. ನಂತರ ಸರ್ಕಾರವು ಎನ್‌ಆರ್‌ಸಿ ಯೋಜನೆಗೆ ಎಂದಿಗೂ ಅಂತಿಮ ಅನುಮತಿ ನೀಡಿಲ್ಲ ಎಂದು ಹೇಳಿಕೊಂಡಿತ್ತು. ಅದು ಇನ್ನೂ ಚರ್ಚೆಯಲ್ಲಿದೆ (ಈಗ ಎಂಎಚ್‌ಎ ಹೇಳಿರುವಂತೆ) ಎಂದು ಸರ್ಕಾರ ಹೇಳಿತ್ತು.

ಅದಕ್ಕೂ ಮೊದಲು, ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

ರಾಜಕೀಯ ರ್‍ಯಾಲಿಗಳು, ಪತ್ರಿಕಾಗೋಷ್ಠಿಗಳು ಮತ್ತು ಸಂದರ್ಶನಗಳಲ್ಲಿ ತಮ್ಮ ಸಾರ್ವಜನಿಕ ಘೋಷಣೆಗಳ ಹೊರತಾಗಿ, ರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ರಾಜ್ಯಗಳಲ್ಲೂ (ಅಸ್ಸಾಂನಲ್ಲಿ ಎರಡನೇ ಬಾರಿ) ಎನ್‌ಆರ್‌ಸಿ ಪ್ರಕ್ರಿಯೆ ನಡೆಸುವ ಸರ್ಕಾರದ ನಿರ್ಧಾರವನ್ನು 2019 ರ ನವೆಂಬರ್ 20 ರಂದು ರಾಜ್ಯಸಭೆಗೆ ಕೇಂದ್ರ ಗೃಹ ಸಚಿವರು ತಿಳಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...