Homeಅಂತರಾಷ್ಟ್ರೀಯರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ಹಾಗೂ ಖ್ಯಾತ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಬೆಂಬಲ ಸೂಚಿಸಿದ್ದಾರೆ.

ರೈತರ ಹೋರಾಟಕ ಕುರಿತು ಸಿಎನ್‌ಎನ್‌ ಲೇಖನವನ್ನು ಟ್ವೀಟ್ ಮಾಡಿರುವ ಪಾಪ್ ಗಾಯಕಿ ರಿಹಾನ್ನಾ, “ನಾವ್ಯಾಕೆ ಈ ವಿಷಯದ ಕುರಿತು ಚರ್ಚಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ಜನವರಿ 26 ರ ಗಣರಾಜ್ಯೋತ್ಸವದಂದು ರೈತರು ಟ್ರಾಕ್ಟ್‌‌ರ್‌ ಪರೇಡ್‌ ನಡೆಸಿದ ದಿನ ಅಹಿತಕರ ಘಟನೆ ನಡೆದಿತ್ತು. ಇದರ ನಂತರ ಹೋರಾಟದ ಸ್ಥಳದಲ್ಲಿ ಇಂಟರ್‌ನೆಟ್ ಸೇವೆಯನ್ನು ಸರ್ಕಾರ ತಡೆಹಿಡಿದಿತ್ತು. ಇದರ ಬಗ್ಗೆ ಸಿಎನ್‌ಎನ್ ವರದಿ ಮಾಡಿತ್ತು.

ರಿಹಾನ್ನಾ ಟ್ವೀಟ್ ಮಾಡಿದ ಬೆನ್ನಿಗೆ ಕಿರಿಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಕೂಡಾ ಅದೇ ಲೇಖನವನ್ನು ಟ್ವೀಟ್ ಮಾಡಿದ್ದು, “ಭಾರತೀಯ ರೈತರ ಹೋರಾಟಕ್ಕೆ ನಮ್ಮ ಬೆಂಬಲ” ಎಂದು ಬರೆದಿದ್ದಾರೆ.

ಜೊತೆಗೆ ಅಮೆರಿಕದ ನಟಿ ಅಮಂಡಾ ಸೆರ್ನಿ ಕೂಡಾ ಭಾರತೀಯ ರೈತರಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ರೈತ ಮಹಿಳೆಯರ ಮೂರ್ತಿಯೊಂದರ ಚಿತ್ರವೊಂದನ್ನು ತನ್ನ ಇನ್ಸ್ಟಾಗ್ರಾಮ್ ಮೂಲಕ ಪೋಸ್ಟ್‌ ಮಾಡಿರುವ ಅವರು, “ಜಗತ್ತೆ ನೋಡುತ್ತಿದೆ” ಎಂದು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ, “ಜಗತ್ತೆ ನೋಡುತ್ತಿದೆ. ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ನೀವು ಭಾರತೀಯ ಅಥವಾ ಪಂಜಾಬಿ ಅಥವಾ ದಕ್ಷಿಣ ಏಷ್ಯಾದವರೆ ಆಗಿರಬೇಕಾಗಿಲ್ಲ. ನಿಮಗೆ ಮಾನವೀಯತೆ ಬಗ್ಗೆ ಕಾಳಜಿ ಇದ್ದರೆ ಸಾಕು. ವಾಕ್ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಮಾನವ ಮತ್ತು ನಾಗರಿಕ ಹಕ್ಕುಗಳು, ಕಾರ್ಮಿಕರಿಗೆ ಸಮಾನತೆ ಮತ್ತು ಘನತೆಯನ್ನು ಯಾವಾಗಲೂ ಕೇಳುತ್ತಲೆ ಇರಿ” ಎಂದು ಬರೆದಿದ್ದಾರೆ.

ರಿಹಾನ್ನಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಪರ ವಿರೋಧ ಚರ್ಚೆಗೂ ಕಾರಣವಾಗಿದೆ. ಕೆಲವರು ಇದು ಭಾತರದ ಆಂತರಿಕ ವಿಷಯ ಎಂದು ಹೇಳಿದರೆ, ಇನ್ನೂ ಕೆಲವರು ಇದು ಅಂತರಾಷ್ಟ್ರೀಯ ವಿಷಯ ಎಂದು ಸಮರ್ಥನೆ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಪ್ರಣವ್ ಮಹಾಜನ ಎಂಬ ಪೊಲೀಸ್ ಅಧಿಕಾರಿ, “ಭಾರತೀಯರಿಗೆ ಇದರ ಬಗ್ಗೆ ಮಾತನಾಡಲು ಹಕ್ಕಿದೆ ಯಾಕೆಂದರೆ ಅದು ನಮ್ಮ ವಿಷಯ, ನಮ್ಮ ರಾಷ್ಟ್ರದ ವಿಷಯ. ಸರ್ಕಾರವನ್ನು ಟೀಕಿಸಲು ಭಾರತೀಯರಿಗೆ ಎಲ್ಲ ಹಕ್ಕಿದೆ ಏಕೆಂದರೆ ಅದು ನಮ್ಮ ಸರ್ಕಾರ. ಆದರೆ ಎಂಎಸ್ಪಿಯ ಪೂರ್ಣ ರೂಪವನ್ನು ಸಹ ತಿಳಿದಿಲ್ಲದ ಜನರಿಗೆ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವ ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಪ್ರಣವ್ ಟ್ವೀಟ್‌ಗೆ ಉತ್ತರಿಸಿರುವ ಸುಪ್ರೀಂಕೋರ್ಟ್ ವಕೀಲೆ ಕರುಣಾ ನಂದಿ, “ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ಪತ್ರಕರ್ತರ ವಿರುದ್ದ ಕಾನೂನು ಕ್ರಮಗಳು ಎಂಎಸ್‌ಪಿ ಕುರಿತ ಚರ್ಚೆಗಳನ್ನೂ ಮೀರಿವೆ. ಕೇಂದ್ರ ಸರ್ಕಾರವು ಜಾಗತಿಕ ಘೋಷಣೆಯಾದ ಮಾನವ ಹಕ್ಕುಗಳನ್ನು ಮತ್ತು ಐಸಿಸಿಪಿಆರ್‌‌ನ 19 ನೇ ವಿಧಿಯನ್ನು ಉಲ್ಲಂಘಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಡಿಜಿಟಲ್ ಕುದುರೆಯ ಮೇಲೆ ಕನಸಿನ ಪ್ರವಾಸ’ ಬಜೆಟ್ ಟೀಕಿಸಿದ ಶಿವಸೇನೆ

ಮತ್ತೊಬ್ಬ ಐಪಿಎಸ್ ಅಧಿಕಾರಿಯಾದ ರೂಪಿನ್ ಶರ್ಮಾ, “ಈ ವಿಷಯದಲ್ಲಿ ವಿದೇಶಿಯರ ಹಸ್ತಕ್ಷೇಪ ಅಗತ್ಯವಿಲ್ಲ. ಭಾರತ ಮತ್ತು ಅದರ ರೈತರು ನಿಮ್ಮ ಬೆಂಬಲವಿಲ್ಲದೆ ಇವುಗಳನ್ನು ಮಾಡಬಹುದು. ನೀವು ಪರಿಸರ ಹೋರಾಟದಲ್ಲಷ್ಟೇ ನಿಮ್ಮ ಗಮನ ಕೇಂದ್ರೀಕರಿಸಿ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್‌ಗೆ ಹೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ಇಶಾನ್ ಎಂಬ ಟ್ವಿಟ್ಟರ್‌ ಹ್ಯಾಂಡಲ್, “ವಿದೇಶಿಯರು ನಮ್ಮ ಆಂತರಿಕ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಾರದು ಆದರೆ ನಮ್ಮ ಗೌರವಾನ್ವಿತ ಪ್ರಧಾನಮಂತ್ರಿಯವರ ‘ಅಬ್ ಕಿ ಬಾರ್ ಟ್ರಂಪ್ ಸರ್ಕಾರ್’ ಘೋಷಣೆಗೆ ಏನಾಯಿತು?. ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲವೇ? ಅಲ್ಲದೆ ಸರ್ಕಾರವು ಮುಳ್ಳುಬೇಲಿಗಳನ್ನು ಸ್ಥಾಪಿಸುವ ಮೂಲಕ ಸಿಂಘು ಗಡಿಯನ್ನು ಯುದ್ಧ ವಲಯವನ್ನಾಗಿ ಯಾಕೆ ಮಾಡಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ಭಾರತದ ಆಂತರಿಕ ವಿಷಯದ ಬಗ್ಗೆ ವಿದೇಶಿಗರು ಪ್ರತಿಕ್ರಿಯಿಸುವುದು ನಿಮಗೆ ಒಪ್ಪಿಗೆಯೆ, ಭಾರತದ ಆಂತರಿಕ ವಿಷಯಗಳಲ್ಲಿ ಬಾಹ್ಯ ಶಕ್ತಿಗಳು ಹಸ್ತಕ್ಷೇಪ ಮಾಡುವುದು ಸರಿಯಾಗಿದೆಯೆ, ಒಬ್ಬ ವಕೀಲೆ ಆಗಿ ಇದನ್ನು ನೀವು ಒಪ್ಪುತೀರಾ ಎಂಬ ಪ್ರಶ್ನೆಗೆ ಕರುಣಾ ಅವರು, “ವಕೀಲೆಯಾಗಿ ಮತ್ತು ಒಬ್ಬ ಮನುಷ್ಯಳಾಗಿ, ಕೆಲವು ಹಕ್ಕುಗಳು ಸಾರ್ವತ್ರಿಕವೆಂದು ನಾನು ನಂಬುತ್ತೇನೆ. ಅಮೆರಿಕಾದಲ್ಲಿ ಒಬ್ಬ ಕಪ್ಪು ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗುತ್ತಿದ್ದರೆ ಅಥವಾ ರುವಾಂಡಾದಲ್ಲಿ ನರಮೇಧ ನಡೆದರೆ ಖಂಡಿಸಬಾರದೆ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...