Homeಚಳವಳಿರೈತ ಹೋರಾಟ: 80 ವರ್ಷದ ಮಾಜಿ ಸೈನಿಕನನ್ನು ಬಂಧಿಸಿದ ದೆಹಲಿ ಪೊಲೀಸರು

ರೈತ ಹೋರಾಟ: 80 ವರ್ಷದ ಮಾಜಿ ಸೈನಿಕನನ್ನು ಬಂಧಿಸಿದ ದೆಹಲಿ ಪೊಲೀಸರು

- Advertisement -
- Advertisement -

ಜನವರಿ 26 ರಂದು ರೈತರ ಗಣರಾಜ್ಯೋತ್ಸವ ಟ್ರಾಕ್ಟರ್‌ ಪರೇಡ್ ಸಮಯದಲ್ಲಿ ನಡೆದ ಅಹಿತಕರ ಘಟನೆ ಪ್ರಕರಣದಲ್ಲಿ ದೆಹಲಿ ಪೊಲೀಸರು 122 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ 80 ವರ್ಷದ ಗುರುಮುಖ್ ಸಿಂಗ್ ಅವರನ್ನೂ ಬಂಧಿಸಲಾಗಿದೆ.

ಗುರುಮುಖ್ ಸಿಂಗ್ ಬಂಧಿತರಲ್ಲಿ ಅತ್ಯಂತ ಹಿರಿಯ ವ್ಯಕ್ತಿಯಾಗಿದ್ದು, ಮಾಜಿ ಸೈನಿಕರಾಗಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ. ಗುರುಮುಖ್ ಅವರನ್ನು ಜನವರಿ 29 ರಂದು ಮುಖರ್ಜಿ ನಗರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾಜಿ ಸೈನಿಕರಾಗಿರುವ 80 ವರ್ಷದ ಗುರುಮುಖ್ ಸಿಂಗ್ ಮೂರು ದಶಕಗಳ ಹಿಂದೆ ಸೈನ್ಯದಿಂದ ನಿವೃತ್ತರಾಗಿದ್ದರು. ಫತೇಘಡ್ ಸಾಹಿಬ್ ಜಿಲ್ಲೆಯ ಶಮಾಸ್‌ಪುರ ಗ್ರಾಮದ ಸಣ್ಣ ಕೃಷಿಕರಾಗಿರುವ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಗೋಧಿ ಮತ್ತು ಭತ್ತವನ್ನು ಬೆಳೆಯುತ್ತಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

“ಅವರು ಮೊದಲ ದಿನದಿಂದ ಕೃಷಿ ಕಾನೂನುಗಳಿಗೆ ವಿರುದ್ಧವಾಗಿದ್ದರು ಹಾಗೂ ಅವುಗಳನ್ನು ರದ್ದು ಪಡಿಸಬೇಕೆಂದು ಅವರು ಬಯಸಿದ್ದರು. ಅದಕ್ಕಾಗಿ ಅವರು ದೆಹಲಿಯ ಸಿಂಘು ಗಡಿಯಲ್ಲಿ ಮೊದಲಿನಿಂದಲೂ ಹೋರಾಟ ನಿರತರಾಗಿದ್ದಾರೆ. ಅವರು ಮೂರು ದಶಕಗಳ ಹಿಂದೆ ಸೈನ್ಯದಿಂದ ಸುಬೇದಾರ್ ಆಗಿ ನಿವೃತ್ತರಾಗಿದ್ದು, ಶಿಸ್ತುಬದ್ಧ ಜೀವನವನ್ನು ನಡೆಸುತ್ತಾರೆ” ಎಂದು ಗ್ರಾಮದ ಸರ್ಪಂಚ್ ಹರ್ಪಿಂದರ್ ಸಿಂಗ್ ಹೇಳಿಕೆಯನ್ನು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಗಣರಾಜ್ಯೋತ್ಸವ
ರೈತ ಹೋರಾಟದ ಸಾಂದರ್ಭಿಕ ಚಿತ್ರ (PC: DH)

ಗುರುಮುಖ್ ಅವರ ಹಿರಿಯ ಮಗ ಜಸ್ಬೀರ್ ಸಿಂಗ್ ಇಟಲಿಯಲ್ಲಿ ವಾಸಿಸುತ್ತಿದ್ದು, ಅವರ ಕಿರಿಯ ಮಗ ಕುಲ್ಬೀರ್ ಸಿಂಗ್, ಗುರುಮುಖ್ ಅವರ ಹಳ್ಳಿಯಿಂದ 12 ಕಿ.ಮೀ ದೂರದಲ್ಲಿ ವಾಸಿಸುತ್ತಿದ್ದಾರೆ. ಗುರುಮುಖ್ ತಮ್ಮ ಪತ್ನಿ, ತಮ್ಮ ಹಿರಿಯ ಮಗನ ಪತ್ನಿ ಹಾಗೂ ಅವರ ಮಗನೊಂದಿಗೆ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ

“ಅವರ ವಯಸ್ಸನ್ನು ಪರಿಗಣನೆಗೆ ತೆಗೆದುಕೊಳ್ಳದೆ ಅವರನ್ನು ಬಂಧಿಸಲಾಗಿದೆ ಎಂಬುವುದು ನಮಗೆ ಆಶ್ಚರ್ಯವಾಗಿದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ. ಬಂಧಿತ ಗುರುಮುಖ್ ಅವರನ್ನು ಬೆಂಬಲಿಸಿ ಗ್ರಾಮಸ್ಥರು ದೆಹಲಿಗೆ ತೆರಳಲಿದ್ದು, “ಅಲ್ಲಿ ಅವರಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ, ಅವರು ಶೀಘ್ರದಲ್ಲೇ ಮನೆಗೆ ಬರಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗುರುಮುಖ್ ಅವರನ್ನು ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದೇವೆ, ಬಂಧನಕ್ಕೊಳಗಾದ ಅವರಿಗೆ ಕಾನೂನು ನೆರವು ನೀಡಲು ಈಗಾಗಲೆ ವಕೀಲರನ್ನು ನೇಮಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಮಧ್ಯೆ, ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ, ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಎಎಪಿ ಮತ್ತು ರೈತ ಸಂಘವಾದ ಎಸ್ಎಡಿ (ಮನ್) ಬಂಧಿತ ವ್ಯಕ್ತಿಗಳಿಗೆ ಉಚಿತ ಕಾನೂನು ನೆರವು ನೀಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಹರಿಯಾಣ: ರೈತ ಹೋರಾಟ ಬೆಂಬಲಿಸಿ ಜೆಜೆಪಿ ಪಕ್ಷ ತೊರೆದ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...