Homeಕರ್ನಾಟಕಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

ಇಂದಿನ ಹೈಕೋರ್ಟ್ ತೀರ್ಪಿನ ನಂತರ ತೇಜಸ್ವಿ ಸೂರ್ಯ ಅವರ ಹಗರಣಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದು

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ನೀಡಿದ್ದ ತೀರ್ಪಿನನ್ವಯ ಇದ್ದ ನಿರ್ಬಂಧವನ್ನು ರಾಜ್ಯ ಹೈಕೋರ್ಟ್ ತೆರವು ಮಾಡಿದೆ.
ತೇಜಸ್ವಿ ಅವರು ಅಭ್ಯರ್ಥಿ ಎಂದು ಘೋಷಣೆಯಾದ ತಕ್ಷಣ ಕೆಲವರು ಅವರನ್ನು ಟ್ವಿಟ್ಟರ್‍ನಲ್ಲಿ ಅಭಿನಂದಿಸಿದ್ದರು. ಆಗ ಮಹಿಳಾ ಉದ್ಯಮಿಯೊಬ್ಬರು ಅವರಿಗೆ, ಈ ವ್ಯಕ್ತಿಯ ಚಾರಿತ್ರ್ಯ ಸರಿ ಇಲ್ಲ, ಧರ್ಮದ ಕುರಿತು ಮಾತನಾಡುವವರೆಲ್ಲರೂ ಒಳ್ಳೆಯವರೇನೂ ಆಗಿರುವುದಿಲ್ಲ. ಬೇಕಾದರೆ ನಿಮಗೆ ಸಾಕ್ಷಿ ಒದಗಿಸುತ್ತೇನೆ ಎಂದು ಟ್ವಿಟ್ಟರ್‍ನಲ್ಲೇ ಹೇಳಿದ್ದರು. ಆ ನಂತರ ತನಗೇ ಆತನಿಂದ ಆದ ಮೋಸದ ಬಗ್ಗೆ ಟ್ವೀಟ್ ಮಾಡಿದ್ದರು.

ಇದು ವೈರಲ್ ಆಗಿತ್ತು. ಅಷ್ಟೇ ಅಲ್ಲದೇ, ಬಿಜೆಪಿಯ ವಲಯಗಳಿಂದಲೇ ತೇಜಸ್ವಿಯ ಇನ್ನೂ ಹಲವು ಹಗರಣಗಳ ಕುರಿತ ವಿವರಗಳು ಮತ್ತು ಸ್ಕ್ರೀನ್‍ಷಾಟ್‍ಗಳು, ವಿಡಿಯೋಗಳು ಮಾಧ್ಯಮ ಸಂಸ್ಥೆಗಳಿಗೆ ತಲುಪಿದ್ದವು. ಆದರೆ ಅಷ್ಟರಲ್ಲಿ ತೇಜಸ್ವಿಯವರು ನಗರದ ಸಿವಿಲ್ ಕೋರ್ಟಿನಲ್ಲಿ ತಮ್ಮ ವಿರುದ್ಧ ಈ ಪ್ರಕರಣ ಅಥವಾ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸಬಾರದೆಂದು ನಿರ್ಬಂಧ ಆದೇಶ ತಂದಿದ್ದರು.
ಈ ನಿರ್ಬಂಧ ಆದೇಶ ಸಹಾ ಟೀಕೆಗೊಳಗಾಗಿತ್ತು. ಇಂಡಿಯನ್ ಎಕ್ಸ್‍ಪ್ರೆಸ್ ಮತ್ತು ನಂತರ ಡೆಕ್ಕನ್ ಹೆರಾಲ್ಡ್ ಪ್ರಜಾವಾಣಿಗಳು ಅದರ ಬಗ್ಗೆ ಸಂಪಾದಕೀಯಗಳನ್ನೂ ಬರೆದಿದ್ದವು.

ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆಯ ತ್ರಿಲೋಚನ ಶಾಸ್ತ್ರಿಯವರು ಹಾಕಿದ ಮೊಕದ್ದಮೆಯ ಕುರಿತು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಏನು ಹೇಳಲಾಗಿದೆ?
ಅರ್ಜಿದಾರರ ವಾದದ ಅಂಶಗಳು ಸರಿಯಾಗಿವೆ

ಮತದಾರರು ಸ್ಪರ್ಧಿಸಿರುವ ಅಭ್ಯರ್ಥಿ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕುಳ್ಳವರಾಗಿದ್ದಾರೆ.

ಸಂವಿಧಾನದ 19(1)ಎ ಕಲಂ ನಮಗೆ ‘ಅಭಿವ್ಯಕ್ತಿ ಸ್ವಾತಂತ್ರ್ಯ’ವನ್ನು ಕೊಟ್ಟಿದೆ.

ಮಾನಹಾನಿ ಸುದ್ದಿ ಪ್ರಕಟವಾದ ನಂತರವೇ ಅದು ಹೌದೇ ಅಲ್ಲವೇ ಎಂಬುದನ್ನು ನಿರ್ಧರಿಸಲು ಸಾಧ್ಯ.

ಆ ರೀತಿ ಮಾನಹಾನಿ ಆಗಿದೆ ಎಂದು, ಅಂತಹ ಕ್ರಿಯೆ ನಡೆದ ನಂತರ ಸಂಬಂಧಪಟ್ಟವರಿಗೆ ಅನಿಸಿದರೆ ಅವರು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಬಹುದು.

ಈ ಹಂತದಲ್ಲಿ ಪ್ರತಿವಾದಿಗೆ ಮಾನಹಾನಿ ಸುದ್ದಿ ಪ್ರಕಟವಾಗಿದೆ ಎಂದರೆ ಅದನ್ನು ಚುನಾವಣಾ ಆಯೋಗದ ಮುಂದೆ ತೆಗೆದುಕೊಂಡು ಹೋಗಿ ಪರಿಹಾರ ಪಡೆಯಬಹುದು.

ಈ ತೀರ್ಪಿನ ಮುಖಾಂತರ ತೇಜಸ್ವಿಯವರ ಕುರಿತ ಇತರ ವರದಿಗಳನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಬಹುದಾಗಿದೆ. ಸ್ವತಃ ವಕೀಲರಾಗಿರುವ ತೇಜಸ್ವಿ ವಾಟ್ಸಾಪ್, ಗೂಗಲ್, ಫೇಸ್‍ಬುಕ್ ಮತ್ತು ಯಾಹೂ ಸಂಸ್ಥೆಗಳ ಮೇಲೂ ಇಂತಹ ಮೊಕದ್ದಮೆಯನ್ನು ಹೂಡಿ ಗೇಲಿಗೊಳಗಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಂತೂ ಇದು ಬಹಳ ತಮಾಷೆಯ ಸಂಗತಿಯಾಗಿತ್ತು.
ಅಂತಿಮವಾಗಿ ತ್ರಿಲೋಚನಾ ಶಾಸ್ತ್ರಿಯವರು ಹೂಡಿದ ಮೊಕದ್ದಮೆಯ ಕಾರಣದಿಂದ ಸದರಿ ಆದೇಶವು ರದ್ದಾಗಿದೆ. ಈಗ ತೇಜಸ್ವಿಯವರ ಮುಂದಿನ ನಡೆಯೇನು ಎಂದು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...