Homeಅಂಕಣಗಳುಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ಗೌರಿ ಕಾರ್ನರ್: ಸೌಹಾರ್ದ ಗಿರಿಯಲ್ಲಿ ನಿಸರ್ಗದ ’ನೀಲಿಗ್ಯಾನ’

ನೀಲಿಗಿರಿ ಬೆಟ್ಟಗಳಿಗೆ ಹೆಸರು ತಂದಿದ್ದು ಅಲ್ಲಿನ ನೀಲಗಿರಿ ಮರಗಳಲ್ಲ, ಬದಲಾಗಿ ತಮಿಳು ಮತ್ತು ಮಲಯಾಳಂನಲ್ಲಿ ’ನೀಲ ಕುರಿಂಜಿ’ ಎಂದೇ ಪ್ರಸಿದ್ಧವಾಗಿರುವ ಈ ಹೂಗಳು! ಹಿಂದೊಮ್ಮೆ ನೀಲಗಿರಿ ಶ್ರೇಣಿಯನ್ನೇ ಈ ಹೂಗಳು ನೀಲಿಮಯವಾಗಿಸುತ್ತಿದ್ದರಿಂದ ಅವುಗಳಿಗೆ ’ನೀಲಿ’ ಪದ ಅಂಟಿಕೊಂಡಿದ್ದು!

- Advertisement -
- Advertisement -

ಒಂದು ನಿಮಿಷ ನಿಮ್ಮ ಕಣ್ಣುಗಳನ್ನು ಮುಚ್ಚಿಕೊಂಡು ನಾನು ವಿವರಿಸಲಿರುವ ದೃಶ್ಯವನ್ನು ಕಲ್ಪಿಸಿಕೊಳ್ಳಿ….

ನೀವು ಒಂದು ಬೆಟ್ಟದ ಮೇಲಿದ್ದೀರಿ. ಅಲ್ಲಿನ ತಂಪು ವಾತಾವರಣ, ಕೈಗಳಿಗೆ ಎಟುಕದೆ ತೇಲಿಹೋಗುತ್ತಿರುವ ಮೋಡಗಳು, ನಿಮ್ಮ ಸುತ್ತ ಕಂಗೊಳಿಸುತ್ತಿರುವ ನೀಲಿ ಹೂಗಳು… ಹೌದು, ನೀವು ಕಣ್ಣು ಹಾಯಿಸಿದಷ್ಟೂ ದೂರ ಹರಡಿರುವ ಲಕ್ಷಾಂತರ ನೀಲಿ ಹೂಗಳು! ಎಲ್ಲಿ ನೋಡಿದರಲ್ಲಿ ಕಂಗೊಳಿಸುತ್ತಿರುವ ನೀಲಿ ಹೂಗಳು! ಹನ್ನೆರಡು ವರ್ಷಕ್ಕೊಮ್ಮೆ ಅರಳಿ ಕಂಗಳಿಗೆ ಆನಂದ ನೀಡುವ ನೀಲಿ ಹೂಗಳು!

ನಾನು ಈ ದೃಶ್ಯವನ್ನು ಕಲ್ಪಿಸಿಕೊಂಡು ಹೇಳುತ್ತಿಲ್ಲ; ಯಾವುದೋ ಪೇಂಟಿಂಗ್ ಅಥವಾ ಯೂರೋಪಿನಲ್ಲಿ ಕಂಡದ್ದನ್ನು ವಿವರಿಸುತ್ತಿಲ್ಲ. ಬದಲಾಗಿ ನಮ್ಮ ಕರ್ನಾಟಕದ ಚಿಕ್ಕಮಗಳೂರಿನಲ್ಲಿ ನೋಡಿದ್ದನ್ನು ನಿಮಗೆ ಹೇಳುತ್ತಿದ್ದೇನೆ….

ಪ್ರತಿ ವರ್ಷ ಚಿಕ್ಕಮಗಳೂರಿನಲ್ಲಿ ಸಂಘ ಪರಿವಾರದವರು ಸೃಷ್ಟಿಸುವ ರಾದ್ಧಾಂತದ ಬಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಲು ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ತಂಡದ ಸದಸ್ಯೆಯಾಗಿ ಹೋಗಿದ್ದಾಗ ಅಲ್ಲಿನ ಬಾಬಾಬುಡನ್ ಗಿರಿಯಲ್ಲಿ ಕಂಡ ಅದ್ಭುತ ದೃಶ್ಯದ ಬಗ್ಗೆ ಹೇಳಬೇಕೆನಿಸುತ್ತಿದೆ.

ಸುಮಾರು 1800 ಮೀಟರ್ ಎತ್ತರದಲ್ಲಿರುವ ಬಾಬಾಬುಡನ್ ದರ್ಗಾಗೆ ಹೋಗುತ್ತಿದ್ದಾಗ ನಮ್ಮೊಂದಿಗಿದ್ದ ಕಲ್ಕುಳಿ ವಿಠ್ಠಲ ಹೆಗ್ಡೆಯವರು ದೂರದ ಬೆಟ್ಟವೊಂದರಲ್ಲಿ ಅರಳಿದ್ದ ಈ ನೀಲಿ ಹೂಗಳ ಬಗ್ಗೆ ನಮ್ಮ ಗಮನ ಸೆಳೆದರು.

ಹನ್ನೆರಡು ವರ್ಷಕ್ಕೊಮ್ಮೆ ಅರಳುವ ಈ ನೀಲಿಗಳನ್ನು (ಅವುಗಳನ್ನು ’ಕುರಿಂಜಿ’ ಎಂದು ಕರೆಯುತ್ತಾರೆಂದು ಹೆಗ್ಡೆಯವರು ವಿವರಿಸಿದರು) ಮಾನವನೊಬ್ಬ ತನ್ನ ಜೀವಿತಾವಧಿಯಲ್ಲಿ ಮೂರು ಬಾರಿ ನೋಡಿ ಆನಂದಿಸಬಹುದಷ್ಟೇ. ಈ ’ನೀಲಿ ಕುರಿಂಜಿ’ ಬಗ್ಗೆ ಇಂಟರ್‌ನೆಟ್‌ನಲ್ಲಿ ಪಡೆದ ಮಾಹಿತಿಯನ್ನೂ ನೀಡುತ್ತಿದ್ದೇನೆ. ನಮ್ಮ ನಾಡಿನ ನಿಸರ್ಗದ ಈ ಅದ್ಭುತದ ಬಗ್ಗೆ ಪತ್ರಿಕೆಗಳು ಬರೆಯದೇ ಇರುವುದು (ಪ್ರಜಾವಾಣಿ ಹೊರತಾಗಿ) ಒಂದು ಅಚ್ಚರಿಯೇ ಸರಿ!

ಒಂದು ಅಂದಾಜಿನ ಪ್ರಕಾರ ಹಿಂದೊಮ್ಮೆ ಈ ಕುರಿಂಜಿ ಹೂಗಳು ಇಡೀ ಬಾಬಾಬುಡನ್‌ಗಿರಿಯನ್ನೇ ಹನ್ನೆರಡು ವರ್ಷಕ್ಕೊಮ್ಮೆ ಆವರಿಸುತ್ತಿದ್ದವಂತೆ. ಆದರೆ ಇವತ್ತು ಗಿರಿಯಲ್ಲಿ ಕಾಫಿ ಎಸ್ಟೇಟ್‌ಗಳು ತಲೆ ಎತ್ತಿರುವುದರಿಂದ, ಅಳಿದುಳಿದ ಜಾಗಗಳಲ್ಲಿ ಮಾತ್ರ ಇವತ್ತು ’ಕುರಿಂಜಿ’ ಕಾಣಿಸಿಕೊಂಡಿದೆ.

ಅಂದಹಾಗೆ, ಈ ಕುರಿಂಜಿ ಹೂಗಳು ಪಶ್ಚಿಮಘಟ್ಟದ ಶೋಲಾ ಕಾಡುಗಳಿಗೆ ವಿಶೇಷವಾಗಿರುವುದರಿಂದ ಅವು ಕೇರಳದಿಂದ ಕರ್ನಾಟಕದವರೆಗೂ ಹಬ್ಬಿವೆ. ಆದರೆ ವ್ಯತ್ಯಾಸ ಯಾವುದೆಂದರೆ ಇವುಗಳ ಬಗ್ಗೆ ನಮ್ಮ ಜನರಲ್ಲಿ ಅಜ್ಞಾನ, ಸರ್ಕಾರದ ನಿರ್ಲಕ್ಷ್ಯ ಹೆಚ್ಚಾಗಿದ್ದರೂ, ನೆರೆಯ ಕೇರಳದಲ್ಲಿ ಈ ಕುರಿಂಜಿಗಳು ಅರಳುವ ಪ್ರದೇಶಗಳನ್ನು ಕಾಪಾಡಬೇಕೆಂದು ಕೆಲವು ದಶಕಗಳಿಂದ ಪರಿಸರವಾದಿಗಳು ಹೋರಾಡುತ್ತಿದ್ದಾರೆ.

ಕರ್ನಾಟಕಕ್ಕಿಂತಲೂ ತಮಿಳುನಾಡು ಮತ್ತು ಕೇರಳದಲ್ಲಿ ಟೀ ಮತ್ತು ಏಲಕ್ಕಿ ಎಸ್ಟೇಟ್‌ಗಳು ಹಾಗೂ ವಿದ್ಯುತ್ ಯೋಜನೆಗಳು ಈ ಕುರಿಂಜಿ ಬೆಳೆಯುವ ಪ್ರದೇಶಗಳನ್ನು ನಾಶ ಮಾಡಿವೆ. ಆದರೆ ಜಗತ್ತಿನ ಯಾವುದೇ ಭಾಗದಲ್ಲಿ ಅರಳದ ಈ ಹೂಗಳು ಭಾರತದ ಈ ಪ್ರದೇಶಗಳಲ್ಲಿ ಮಾತ್ರ, ಹೀಗೆ ಒಮ್ಮೆಲೆ ಅರಳುವುದರಿಂದ, ಅದನ್ನು ನೋಡಲೆಂದು ಪ್ರವಾಸಿಗರು ಬರುವುದರಿಂದ ಈಗ ಈ ಎರಡೂ ರಾಜ್ಯಗಳು ಎಚ್ಚೆತ್ತುಕೊಂಡು, ಕುರಿಂಜಿ ಹೂಗಳು ಅರಳುವ ಪ್ರದೇಶಗಳನ್ನು ಸುರಕ್ಷಿತ ತಾಣಗಳೆಂದು ಘೋಷಿಸಲು ಮುಂದಾಗಿವೆ.

ಇಲ್ಲೊಂದು ವಿಸ್ಮಯಕಾರಿ ವಿಷಯವನ್ನು ಹೇಳಲೇಬೇಕು. ನೀಲಿಗಿರಿ ಬೆಟ್ಟಗಳಿಗೆ ಹೆಸರು ತಂದಿದ್ದು ಅಲ್ಲಿನ ನೀಲಗಿರಿ ಮರಗಳಲ್ಲ, ಬದಲಾಗಿ ತಮಿಳು ಮತ್ತು ಮಲಯಾಳಂನಲ್ಲಿ ’ನೀಲ ಕುರಿಂಜಿ’ ಎಂದೇ ಪ್ರಸಿದ್ಧವಾಗಿರುವ ಈ ಹೂಗಳು! ಹಿಂದೊಮ್ಮೆ ನೀಲಗಿರಿ ಶ್ರೇಣಿಯನ್ನೇ ಈ ಹೂಗಳು ನೀಲಿಮಯವಾಗಿಸುತ್ತಿದ್ದರಿಂದ ಅವುಗಳಿಗೆ ’ನೀಲಿ’ ಪದ ಅಂಟಿಕೊಂಡಿದ್ದು! ಇವತ್ತು ಬಾಬಾಬುಡನ್‌ಗಿರಿಯಲ್ಲಿ ಹೇಗೆ ಈ ಕುರಿಂಜಿಗಳು ಅರಳಿದ್ದಾವೋ, ಹಾಗೆಯೇ ತಮಿಳುನಾಡಿನ ಕೊಡೈಕೆನಾಲ್ ಮತ್ತು ಕೇರಳದ ಮುನ್ನಾರ್‌ನಲ್ಲೂ ಕುರಿಂಜಿಗಳು ಅರಳಿ ಅವುಗಳನ್ನು ನೋಡಿ ಆನಂದಿಸಲು ಲಕ್ಷಾಂತರ ಪ್ರವಾಸಿಗಳು ಸೇರುತ್ತಿದ್ದಾರೆ. 1994ರಿಂದ ಈ ಹೂಗಳನ್ನು ನೋಡಲು ಕಾಯುತ್ತಿದ್ದ ಲಕ್ಷಾಂತರ ಜನ ಈಗ ಇವುಗಳನ್ನು ಕಂಡು ಆನಂದಿಸಲು ಬರುತ್ತಿರುವುದರಿಂದ ಅಲ್ಲಿನ ಹೋಟೆಲ್‌ಗಳು ಕಿಕ್ಕಿರಿದಿವೆ. ಅಷ್ಟೇ ಅಲ್ಲ, ಇದೇ ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ’ಕುರಿಂಜಿ ಹಬ್ಬ’ವನ್ನು ಕೇರಳ ಸರ್ಕಾರ ಆಚರಿಸುತ್ತಿದೆ. ಆ ಎರಡೂ ರಾಜ್ಯಗಳ ಪರಿಸರವಾದಿಗಳ ಹೋರಾಟ ಮತ್ತು ಅಲ್ಲಿನ ಸರ್ಕಾರಗಳ ಒತ್ತಡದಿಂದಾಗಿಯೇ ಇದೇ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರ ಕುರಿಂಜಿ ಹೂಗಳ ಒಂದು ಅಂಚೆ ಸ್ಟಾಂಪ್‌ಅನ್ನೂ ಬಿಡುಗಡೆಗೊಳಿಸಿತ್ತು.

ತಮಿಳುನಾಡಿನ ಜನರಿಗೂ, ಈ ನೀಲ ಕುರಿಂಜಿ ಹೂಗಳಿಗೂ ಭಾವನಾತ್ಮಕವಾದ ಸಂಬಂಧವಿರುವುದಕ್ಕೆ ಕಾರಣವೂ ಇದೆ. ಪ್ರಾಚೀನ ತಮಿಳು ಸಾಹಿತ್ಯದಲ್ಲಿ ಮುರುಗನ್ ದೇವನು ವಾಲಿ ಎಂಬ ದೇವತೆಯನ್ನು ಮದುವೆ ಆದಾಗ ಅವಳಿಗೆ ಈ ಕುರಿಂಜಿಗಳಿಂದ ಮಾಡಿದ್ದ ಹಾರವನ್ನು ಹಾಕಿದ್ದನಂತೆ. ಈ ಪುರಾಣ ಅಲ್ಲಿನ ಜನರ ಮೇಲೆ ಎಂಥ ಪ್ರಭಾವ ಬೀರಿದೆ ಎಂದರೆ, ಕುರಿಂಜಿ ಹೂಗಳು ಬಾಡಿ, ಅವುಗಳ ಬೀಜ ಎಲ್ಲೆಡೆ ಹರಡುವವರೆಗೂ ಜನ ಅವುಗಳನ್ನು ಮುಟ್ಟುವುದಿಲ್ಲ! ಅಷ್ಟೇ ಅಲ್ಲ, ಆ ಎರಡು ರಾಜ್ಯಗಳ ಹಲವು ಬುಡಕಟ್ಟು ಜನಾಂಗಗಳು ತಮ್ಮ ಜೀವಿತಾವಧಿಯನ್ನು ಲೆಕ್ಕ ಹಾಕುವುದೇ ಈ ಕುರಿಂಜಿಗಳು ಅರಳುವ ವರ್ಷದ ಆಧಾರದ ಮೇಲೆ!

ನಮ್ಮ ಪಶ್ಚಿಮಘಟ್ಟದ ಜೀವ ವೈವಿಧ್ಯತೆಯನ್ನು ಕಾಪಾಡಬೇಕಿದ್ದರೆ, ಆ ವೈವಿಧ್ಯತೆಯ ಅಂಗವಾಗಿರುವ ಕುರಿಂಜಿ ಹೂಗಳು ಹನ್ನೆರಡು ವರ್ಷಗಳ ನಂತರವೂ ಮತ್ತೆ ಕಾಣಿಸಿಕೊಳ್ಳಬೇಕೆಂದಿದ್ದರೆ, ನಮ್ಮ ರಾಜ್ಯದಲ್ಲೂ ಕುರಿಂಜಿ ಅರಳುವ ಪ್ರದೇಶಗಳನ್ನು ರಕ್ಷಿಸಬೇಕಿದೆ.

ಕೊನೆಯದಾಗಿ, ಈ ಹೂಗಳ ಅಂದವನ್ನು ಆನಂದಿಸಲು ಕೊಡೈಕೆನಾಲ್ ಮತ್ತು ಮುನ್ನಾರ್ ಸೂಕ್ತ ಪ್ರದೇಶಗಳು ಎಂಬ ಮಾತಿದೆಯಾದರೂ, ನಮ್ಮದೇ ಬಾಬಾಬುಡನ್ ಗಿರಿಯಲ್ಲಿ ಆನಂದಿಸುವುದು ಒಂದು ವಿಶೇಷ. ಅಂದಹಾಗೆ, ಈ ಹೂಗಳು ಇನ್ನು ಎರಡು ತಿಂಗಳು ಮಾತ್ರ ಇರುತ್ತವೆ. ಹಾಗಾಗಿ, ಗಿರಿಗಳನ್ನೇ ’ನೀಲಿ’ಯಾಗಿಸಿರುವ ಈ ಕುರಿಂಜಿಯ ಅದ್ಭುತ ನೋಡಬೇಕೆಂದಿದ್ದರೆ, ಈಗಲೇ ನೀವೂ ಹೋಗಿ ಬರುತ್ತೀರಾ…

(ಸೆಪ್ಟೆಂಬರ್ 27, 2006ರಂದು ಬರೆದಿದ್ದ ಗೌರಿಯವರ ಕಂಡಹಾಗೆ ಅಂಕಣದ ಆಯ್ದ ಭಾಗ ಇದು)


ಇದನ್ನೂ ಓದಿ: ಗೌರಿ ಕಾರ್ನರ್: ಓರ್ವ ಜನಪರ ನ್ಯಾಯಮೂರ್ತಿಯವರನ್ನು ಕುರಿತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...