Homeಮುಖಪುಟರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ - ಗ್ರೌಂಡ್ ರಿಪೋರ್ಟ್

ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

"ಹರಿಯಾಣದ ಜಿಂದ್ ಜಿಲ್ಲೆಯ ಖಡ್‌ಖಡ್ ಹಳ್ಳಿಯಲ್ಲಿ ಸುಮಾರು 20,000ಕ್ಕೂ ಹೆಚ್ಚಿನ ಜನರು ಸೇರಿದ್ದು, ಈಗಾಗಲೆ ರಾಕೇಶ್ ಟಿಕಾಯತ್ ಮಹಾಪಂಚಾಯತ್‌ನಲ್ಲಿ ಭಾಗಿಯಾಗಿದ್ದಾರೆ. ಖಂಡೇಲಾ ಹಳ್ಳಿಯಲ್ಲಿ ಸುಮಾರು 40,000 ಕ್ಕೂ ಹೆಚ್ಚು ಜನ ಸೇರಿದ್ದಾರೆ"

- Advertisement -
- Advertisement -

ರಾಕೇಶ್ ಟಿಕಾಯತ್ ಕರೆಗೆ ಸ್ಪಂಧಿಸಿ ಹರಿಯಾಣದ ಹಳ್ಳಿ ಹಳ್ಳಿಯಲ್ಲೂ ಮಹಾಪಂಚಾಯತ್ ನಡೆಯುತ್ತಿದೆ. ಪ್ರತಿ ಮಹಾಪಂಚಾಯತ್‌ನಲ್ಲೂ ಕಣ್ಣಿಗೆಟುಕುವಷ್ಟೂ ಜನಸಾಗರ ಕಾಣುತ್ತಿದೆ ಎಂದು ಗೌರಿ ಮೀಡಿಯಾ ತಂಡ ಗ್ರೌಂಡ್ ರಿಪೋರ್ಟ್ ನೀಡಿದೆ.

ರೈತ ಹೋರಾಟವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಹರಿಯಾಣದ ಜಿಂದ್ ಜಿಲ್ಲೆಯ ಖಡ್‌ಖಡ್ ಹಳ್ಳಿಯಲ್ಲಿ ಸುಮಾರು 20,000ಕ್ಕೂ ಹೆಚ್ಚು ಜನರು ಸೇರಿದ್ದು, ಈಗಾಗಲೆ ರಾಕೇಶ್ ಟಿಕಾಯತ್ ಮಹಾಪಂಚಾಯತ್‌ನಲ್ಲಿ ಭಾಗಿಯಾಗಿದ್ದಾರೆ. ಖಂಡೇಲಾ ಹಳ್ಳಿಯಲ್ಲಿ ಸುಮಾರು 40,000 ಕ್ಕೂ ಹೆಚ್ಚು ಜನ ಸೇರಿದ್ದಾರೆ ಎಂದು ನಮ್ಮ ತಂಡದ ಕಾವ್ಯ ಸಮತಳ ಮಾಹಿತಿ ನೀಡಿದರು.

ಈ ಕುರಿತ ಫೋಟೋ ವೀಡಿಯೋಗಳನ್ನು ಕಳುಹಿಸಲು ಇಂಟರ್ನೆಟ್ ಸೌಲಭ್ಯವಿಲ್ಲ ಎಂದು ನಮ್ಮ ತಂಡ ವರದಿ ಮಾಡಿದೆ. ಸರ್ಕಾರ ನೀರನ್ನೇ ಕೊಡುತ್ತಿಲ್ಲ, ಇನ್ನು ಇಂಟರ್ನೆಟ್ ಕೊಡುತ್ತದೆಯೇ?

“ಕರ್ನಾಟಕದ ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿಯವರೂ ಕೂಡ ಈ ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದಾರೆ. ಒಂದು ದೊಡ್ಡ ಮೈದಾನದಲ್ಲಿ ಜನ ಸೇರಿದ್ದು, ಅಲ್ಲಿ ನಿಲ್ಲಲೂ ಸ್ಥಳವಿಲ್ಲದೇ ರಸ್ತೆಯಲ್ಲಿರುವ ಜನರ ಸಂಖ್ಯೆಯೇ ಸುಮಾರು 10,000ಕ್ಕೂ ಹೆಚ್ಚಿದೆ. ಒಂದು ದಿನಕ್ಕೆ ಇಂತಹ 3-4 ಪಂಚಾಯತ್‌ಗಳು ನಡೆಯುತ್ತಿದ್ದು, ಇದರ ಸಂಖ್ಯೆ ಇನ್ನೂ ಹೆಚ್ಚಾಗುತ್ತಲೇ ಇದೆ. ಜೊತೆಗೆ ಹರಿಯಾಣ-ದೆಹಲಿ ಹೆದ್ದಾರಿಯಲ್ಲಿ ಪ್ರತಿ 100 ಮೀಟರ್‌ಗೂ ಜನರು ಟೆಂಟ್ ಹಾಕಿಕೊಂಡು ಕುಳಿತಿದ್ದಾರೆ. ದೆಹಲಿಗೆ ತೆರಳುವವರಿಗೆ ಟೀ-ಕಾಫಿ-ಊಟ ಮುಂತಾದ ಸೌಲಭ್ಯಗಳನ್ನು ನೀಡುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ರೈತ ಹೋರಾಟವನ್ನು ಬೆಂಬಲಿಸಿ ಇದುವರೆಗೂ ಬಾಗ್‌ಪಥ್, ಮಥುರಾ, ಮುಜಪ್ಪರ್ ನಗರ, ರಾಜಸ್ಥಾನ್ ಸೇರಿದಂತೆ ಹಲವು ಕಡೆ ಮಹಾಪಂಚಾಯತ್‌ಗಳು ನಡೆದಿವೆ. ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ದೇಶದಾದ್ಯಂತ ಇಂತಹ ಪಂಚಾಯತ್‌ಗಳನ್ನು ಸಂಘಟಿಸಲಾಗುವುದು ಎಂದು ರಾಕೇಶ್ ಟಿಕಾಯತ್ ಎಚ್ಚರಿಸಿದ್ದಾರೆ.

ಸರ್ಕಾರವು ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದೆಯಾದರೂ ಎಲ್ಲವೂ ವಿಫಲಗೊಂಡಿದೆ. ಇದೀಗ ರೈತರು ಶನಿವಾರದಂದು ದೇಶಾದ್ಯಂತ ‘ಸಂಚಾರ ಸ್ಥಗಿತ ಚಳವಳಿ’ (ಪ್ರಮುಖ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳ ತಡೆ) ನಡೆಸುವಂತೆ ಕರೆ ನೀಡಿದ್ದಾರೆ.

ನಮ್ಮ ಮಕ್ಕಳು ದೇಶದ ಗಡಿಯಲ್ಲಿ ನಿಂತು ಹೋರಾಡುತ್ತಿದ್ದಾರೆ. ನಾವು ರೈತರು; ರೈತ ವಿರೋಧಿ ಮೂರು ಕಾಯ್ದೆಗಳನ್ನು ರದ್ದು ಮಾಡಬೇಕು ಎಂದು ಹೋರಾಡುತ್ತಿದ್ದೇವೆ. ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ರದ್ದು ಮಾಡಲೇಬೇಕು. ಆವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ – ಜಿಂದ್ ಜಿಲ್ಲೆಯ ಮಹಾಪಂಚಾಯತ್‌ನ ಪ್ರಧಾನ್  

‘ಸಂಚಾರ ಸ್ಥಗಿತ ಚಳವಳಿ’ ಫೆಬ್ರವರಿ 6ರ ಶನಿವಾರ ಮಧ್ಯಾಹ್ನ 12 ರಿಂದ 3 ಗಂಟೆಯ ತನಕ ಅಂದರೆ ಒಟ್ಟು ಮೂರು ಗಂಟೆಗಳ ಕಾಲ ನಡೆಯಲಿದ್ದು, ಶಾಂತಿಯುವ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾದ ರೈತ ಮುಖಂಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ…

100ಕ್ಕೂ ಹೆಚ್ಚು ರೈತರು ಕಾಣೆಯಾಗಿರುವುದು, ರೈತರು ಮತ್ತು ಪತ್ರಕರ್ತರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು, ರೈತರು ಪ್ರತಿಭಟನೆ ನಡೆಸುತ್ತಿರುವ ಗಡಿಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಹೋರಾಟಗಾರರಿಗೆ ಕಿರುಕುಳ, ಪ್ರತಿಭಟನಾ ಸ್ಥಳಗಳ ವಿದ್ಯುತ್ ಮತ್ತು ನೀರು ಸರಬರಾಜನ್ನು ನಿಲ್ಲಿಸಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಲು ರೈತರು ಈ ‘ಸಂಚಾರ ಸ್ಥಗಿತ ಚಳವಳಿ’ ಕರೆ ನೀಡಿದ್ದಾರೆ.

ಕೇಂದ್ರ ಸರ್ಕಾರ ರೈತರನ್ನು ಬೆದರಿಸಲು ಮಾಡುತ್ತಿರುವ ಎಲ್ಲಾ ಪ್ರಯತ್ನಗಳ ಹೊರತಾಗಿಯು ರೈತರು ಹೋರಾಟದಿಂದ ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ರೈತ ಮುಖಂಡ ರಾಕೇಶ್ ಟಿಕಾಯತ್‌, “ಕೇಂದ್ರ ಸರ್ಕಾರಕ್ಕೆ ನಾವು ಅಕ್ಟೋಬರ್‌ವರೆಗೆ ಸಮಯ ನೀಡಿದ್ದು, ನಮ್ಮ ಮಾತನ್ನು ಆಲಿಸದಿದ್ದರೆ ದೇಶವ್ಯಾಪಿ 40 ಲಕ್ಷ ಟ್ರಾಕ್ಟರ್‌ಗಳ ರ‍್ಯಾಲಿ ನಡೆಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಜನವರಿ 26 ರ ಗಣರಾಜ್ಯೋತ್ಸವಂದು ರೈತರು ನಡೆಸಿದ ಟ್ರಾಕ್ಟರ್ ಪರೇಡ್ ‌ನಂತರ ರೈತ ಹೋರಾಟದ ಸ್ಥಳಗಳಲ್ಲಿ ಅಹಿತಕರ ಘಟನೆ ನಡೆದಿತ್ತು. ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಇದನ್ನು ಬಿಜೆಪಿಯೆ ಮಾಡಿಸಿದೆ ಎಂದು ವರದಿ ಮಾಡಿದೆ. ಅದಾಗಿಯು, ಕೇಂದ್ರ ಸರ್ಕಾರ ದೆಹಲಿಯ ಹೋರಾಟದ ಸ್ಥಳಗಳಲ್ಲಿ ಇಂಟರ್ನೆಟ್ ಸೇವೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಡಿತಗೊಳಿಸಿತ್ತು. ಇದು ಜಗತ್ತಿನಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...