Homeಮುಖಪುಟರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ - ಗ್ರೌಂಡ್ ರಿಪೋರ್ಟ್

ರೈತರಿಗೆ ಬೆಂಬಲ: ಹರಿಯಾಣದ ಪ್ರತಿ ಹಳ್ಳಿಗೂ ಹರಡಿದ ಮಹಾಪಂಚಾಯತ್ – ಗ್ರೌಂಡ್ ರಿಪೋರ್ಟ್

"ಹರಿಯಾಣದ ಜಿಂದ್ ಜಿಲ್ಲೆಯ ಖಡ್‌ಖಡ್ ಹಳ್ಳಿಯಲ್ಲಿ ಸುಮಾರು 20,000ಕ್ಕೂ ಹೆಚ್ಚಿನ ಜನರು ಸೇರಿದ್ದು, ಈಗಾಗಲೆ ರಾಕೇಶ್ ಟಿಕಾಯತ್ ಮಹಾಪಂಚಾಯತ್‌ನಲ್ಲಿ ಭಾಗಿಯಾಗಿದ್ದಾರೆ. ಖಂಡೇಲಾ ಹಳ್ಳಿಯಲ್ಲಿ ಸುಮಾರು 40,000 ಕ್ಕೂ ಹೆಚ್ಚು ಜನ ಸೇರಿದ್ದಾರೆ"

- Advertisement -
- Advertisement -

ರಾಕೇಶ್ ಟಿಕಾಯತ್ ಕರೆಗೆ ಸ್ಪಂಧಿಸಿ ಹರಿಯಾಣದ ಹಳ್ಳಿ ಹಳ್ಳಿಯಲ್ಲೂ ಮಹಾಪಂಚಾಯತ್ ನಡೆಯುತ್ತಿದೆ. ಪ್ರತಿ ಮಹಾಪಂಚಾಯತ್‌ನಲ್ಲೂ ಕಣ್ಣಿಗೆಟುಕುವಷ್ಟೂ ಜನಸಾಗರ ಕಾಣುತ್ತಿದೆ ಎಂದು ಗೌರಿ ಮೀಡಿಯಾ ತಂಡ ಗ್ರೌಂಡ್ ರಿಪೋರ್ಟ್ ನೀಡಿದೆ.

ರೈತ ಹೋರಾಟವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಹರಿಯಾಣದ ಜಿಂದ್ ಜಿಲ್ಲೆಯ ಖಡ್‌ಖಡ್ ಹಳ್ಳಿಯಲ್ಲಿ ಸುಮಾರು 20,000ಕ್ಕೂ ಹೆಚ್ಚು ಜನರು ಸೇರಿದ್ದು, ಈಗಾಗಲೆ ರಾಕೇಶ್ ಟಿಕಾಯತ್ ಮಹಾಪಂಚಾಯತ್‌ನಲ್ಲಿ ಭಾಗಿಯಾಗಿದ್ದಾರೆ. ಖಂಡೇಲಾ ಹಳ್ಳಿಯಲ್ಲಿ ಸುಮಾರು 40,000 ಕ್ಕೂ ಹೆಚ್ಚು ಜನ ಸೇರಿದ್ದಾರೆ ಎಂದು ನಮ್ಮ ತಂಡದ ಕಾವ್ಯ ಸಮತಳ ಮಾಹಿತಿ ನೀಡಿದರು.

ಈ ಕುರಿತ ಫೋಟೋ ವೀಡಿಯೋಗಳನ್ನು ಕಳುಹಿಸಲು ಇಂಟರ್ನೆಟ್ ಸೌಲಭ್ಯವಿಲ್ಲ ಎಂದು ನಮ್ಮ ತಂಡ ವರದಿ ಮಾಡಿದೆ. ಸರ್ಕಾರ ನೀರನ್ನೇ ಕೊಡುತ್ತಿಲ್ಲ, ಇನ್ನು ಇಂಟರ್ನೆಟ್ ಕೊಡುತ್ತದೆಯೇ?

“ಕರ್ನಾಟಕದ ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿಯವರೂ ಕೂಡ ಈ ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದಾರೆ. ಒಂದು ದೊಡ್ಡ ಮೈದಾನದಲ್ಲಿ ಜನ ಸೇರಿದ್ದು, ಅಲ್ಲಿ ನಿಲ್ಲಲೂ ಸ್ಥಳವಿಲ್ಲದೇ ರಸ್ತೆಯಲ್ಲಿರುವ ಜನರ ಸಂಖ್ಯೆಯೇ ಸುಮಾರು 10,000ಕ್ಕೂ ಹೆಚ್ಚಿದೆ. ಒಂದು ದಿನಕ್ಕೆ ಇಂತಹ 3-4 ಪಂಚಾಯತ್‌ಗಳು ನಡೆಯುತ್ತಿದ್ದು, ಇದರ ಸಂಖ್ಯೆ ಇನ್ನೂ ಹೆಚ್ಚಾಗುತ್ತಲೇ ಇದೆ. ಜೊತೆಗೆ ಹರಿಯಾಣ-ದೆಹಲಿ ಹೆದ್ದಾರಿಯಲ್ಲಿ ಪ್ರತಿ 100 ಮೀಟರ್‌ಗೂ ಜನರು ಟೆಂಟ್ ಹಾಕಿಕೊಂಡು ಕುಳಿತಿದ್ದಾರೆ. ದೆಹಲಿಗೆ ತೆರಳುವವರಿಗೆ ಟೀ-ಕಾಫಿ-ಊಟ ಮುಂತಾದ ಸೌಲಭ್ಯಗಳನ್ನು ನೀಡುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರ ನೀಡುತ್ತಿರುವ ಕಿರುಕುಳ ನಿಲ್ಲಿಸುವವರೆಗೆ ಯಾವುದೇ ಮಾತುಕತೆಯಿಲ್ಲ: ರೈತ ಒಕ್ಕೂಟ

ರೈತ ಹೋರಾಟವನ್ನು ಬೆಂಬಲಿಸಿ ಇದುವರೆಗೂ ಬಾಗ್‌ಪಥ್, ಮಥುರಾ, ಮುಜಪ್ಪರ್ ನಗರ, ರಾಜಸ್ಥಾನ್ ಸೇರಿದಂತೆ ಹಲವು ಕಡೆ ಮಹಾಪಂಚಾಯತ್‌ಗಳು ನಡೆದಿವೆ. ಸರ್ಕಾರವು ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ ದೇಶದಾದ್ಯಂತ ಇಂತಹ ಪಂಚಾಯತ್‌ಗಳನ್ನು ಸಂಘಟಿಸಲಾಗುವುದು ಎಂದು ರಾಕೇಶ್ ಟಿಕಾಯತ್ ಎಚ್ಚರಿಸಿದ್ದಾರೆ.

ಸರ್ಕಾರವು ರೈತರೊಂದಿಗೆ ಹನ್ನೊಂದು ಸುತ್ತಿನ ಮಾತುಕತೆ ನಡೆಸಿದೆಯಾದರೂ ಎಲ್ಲವೂ ವಿಫಲಗೊಂಡಿದೆ. ಇದೀಗ ರೈತರು ಶನಿವಾರದಂದು ದೇಶಾದ್ಯಂತ ‘ಸಂಚಾರ ಸ್ಥಗಿತ ಚಳವಳಿ’ (ಪ್ರಮುಖ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳ ತಡೆ) ನಡೆಸುವಂತೆ ಕರೆ ನೀಡಿದ್ದಾರೆ.

ನಮ್ಮ ಮಕ್ಕಳು ದೇಶದ ಗಡಿಯಲ್ಲಿ ನಿಂತು ಹೋರಾಡುತ್ತಿದ್ದಾರೆ. ನಾವು ರೈತರು; ರೈತ ವಿರೋಧಿ ಮೂರು ಕಾಯ್ದೆಗಳನ್ನು ರದ್ದು ಮಾಡಬೇಕು ಎಂದು ಹೋರಾಡುತ್ತಿದ್ದೇವೆ. ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ರದ್ದು ಮಾಡಲೇಬೇಕು. ಆವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ – ಜಿಂದ್ ಜಿಲ್ಲೆಯ ಮಹಾಪಂಚಾಯತ್‌ನ ಪ್ರಧಾನ್  

‘ಸಂಚಾರ ಸ್ಥಗಿತ ಚಳವಳಿ’ ಫೆಬ್ರವರಿ 6ರ ಶನಿವಾರ ಮಧ್ಯಾಹ್ನ 12 ರಿಂದ 3 ಗಂಟೆಯ ತನಕ ಅಂದರೆ ಒಟ್ಟು ಮೂರು ಗಂಟೆಗಳ ಕಾಲ ನಡೆಯಲಿದ್ದು, ಶಾಂತಿಯುವ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾದ ರೈತ ಮುಖಂಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ…

100ಕ್ಕೂ ಹೆಚ್ಚು ರೈತರು ಕಾಣೆಯಾಗಿರುವುದು, ರೈತರು ಮತ್ತು ಪತ್ರಕರ್ತರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು, ರೈತರು ಪ್ರತಿಭಟನೆ ನಡೆಸುತ್ತಿರುವ ಗಡಿಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಹೋರಾಟಗಾರರಿಗೆ ಕಿರುಕುಳ, ಪ್ರತಿಭಟನಾ ಸ್ಥಳಗಳ ವಿದ್ಯುತ್ ಮತ್ತು ನೀರು ಸರಬರಾಜನ್ನು ನಿಲ್ಲಿಸಿರುವುದನ್ನು ವಿರೋಧಿಸಿ ಸರ್ಕಾರದ ವಿರುದ್ದ ಪ್ರತಿಭಟಿಸಲು ರೈತರು ಈ ‘ಸಂಚಾರ ಸ್ಥಗಿತ ಚಳವಳಿ’ ಕರೆ ನೀಡಿದ್ದಾರೆ.

ಕೇಂದ್ರ ಸರ್ಕಾರ ರೈತರನ್ನು ಬೆದರಿಸಲು ಮಾಡುತ್ತಿರುವ ಎಲ್ಲಾ ಪ್ರಯತ್ನಗಳ ಹೊರತಾಗಿಯು ರೈತರು ಹೋರಾಟದಿಂದ ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ರೈತ ಮುಖಂಡ ರಾಕೇಶ್ ಟಿಕಾಯತ್‌, “ಕೇಂದ್ರ ಸರ್ಕಾರಕ್ಕೆ ನಾವು ಅಕ್ಟೋಬರ್‌ವರೆಗೆ ಸಮಯ ನೀಡಿದ್ದು, ನಮ್ಮ ಮಾತನ್ನು ಆಲಿಸದಿದ್ದರೆ ದೇಶವ್ಯಾಪಿ 40 ಲಕ್ಷ ಟ್ರಾಕ್ಟರ್‌ಗಳ ರ‍್ಯಾಲಿ ನಡೆಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಜನವರಿ 26 ರ ಗಣರಾಜ್ಯೋತ್ಸವಂದು ರೈತರು ನಡೆಸಿದ ಟ್ರಾಕ್ಟರ್ ಪರೇಡ್ ‌ನಂತರ ರೈತ ಹೋರಾಟದ ಸ್ಥಳಗಳಲ್ಲಿ ಅಹಿತಕರ ಘಟನೆ ನಡೆದಿತ್ತು. ಹಲವಾರು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ಗಳು ಇದನ್ನು ಬಿಜೆಪಿಯೆ ಮಾಡಿಸಿದೆ ಎಂದು ವರದಿ ಮಾಡಿದೆ. ಅದಾಗಿಯು, ಕೇಂದ್ರ ಸರ್ಕಾರ ದೆಹಲಿಯ ಹೋರಾಟದ ಸ್ಥಳಗಳಲ್ಲಿ ಇಂಟರ್ನೆಟ್ ಸೇವೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಡಿತಗೊಳಿಸಿತ್ತು. ಇದು ಜಗತ್ತಿನಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಹರಿಯಾಣದ ಈ ಹಳ್ಳಿಯಲ್ಲಿ ನಿತ್ಯವೂ ರೈತ ಹೋರಾಟ: ಹೊರರಾಜ್ಯಗಳಿಂದಲೂ ಬರುವ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...