Homeಮುಖಪುಟಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ - ರಾಹುಲ್ ಗಾಂಧಿ

ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

"ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ" ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಗಳಲ್ಲಿ ಸರ್ಕಾರ ಮಾಡಿರುವ ಬ್ಯಾರಿಕೇಡಿಂಗ್ ಕಾರಣದಿಂದ ಭಾರತದ ಜಾಗತಿಕ ಸ್ಥಾನಮಾನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದರು.

ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಯಲ್ಲಿ ಬ್ಯಾರಿಕೇಡಿಂಗ್ ಮತ್ತು ಸರ್ಕಾರ ರೈತರನ್ನು ನಡೆಸಿಕೊಳ್ಳುವ ರೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಹೊಡೆತ ಬೀಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಖಂಡಿತವಾಗಿಯೂ ಹೌದು. ಭಾರತದ ಸ್ಥಾನಮಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾವು ನಮ್ಮ ರೈತರನ್ನು ಹೇಗೆ ಉಪಚರಿಸುತ್ತಿದ್ದೇವೆ ಎಂಬುದರ ಬಗ್ಗೆ ಮಾತ್ರವಲ್ಲ, ನಮ್ಮ ಜನರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ, ಪತ್ರಕರ್ತರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ ಎಂಬುದೂ ಇದಕ್ಕೆ ಕಾರಣ” ಎಂದಿದ್ದಾರೆ.

“ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ರೈತರ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಕಿರಿಯ ಪರಿಸರವಾದಿ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್, ಬ್ರಿಟನ್ ಸಂಸದೆ ಕ್ಲೌಡಿಯಾ ವೆಬ್ಬೆ, ಅಮೆರಿಕ ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ ಡೆಮಾಕ್ರಟ್ ಜಿಮ್ ಕೋಸ್ಟಾ ಕೂಡ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಈ ಬಿಕ್ಕಟ್ಟು ಮುಂದುವರಿದಂತೆ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಎರಡು ವರ್ಷಗಳ ಕಾಲ ಮುಂದೂಡುವ ಮೋದಿ ಸರಕಾರದ ಪ್ರಸ್ತಾಪವನ್ನು ರಾಹುಲ್ ಪ್ರಶ್ನಿಸಿದರು. ಈ ವಿಷಯದಲ್ಲಿ ಕೇಂದ್ರವು ತನ್ನ ನಿಲುವನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

“ಎರಡು ವರ್ಷಗಳವರೆಗೆ ಕಾನೂನುಗಳನ್ನು ಮುಂದೂಡುವ ಪ್ರಸ್ತಾಪವು ಇನ್ನೂ ಮೇಜಿನ ಮೇಲಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಅದರ ಅರ್ಥವೇನು? ಇದು ಗೊಂದಲದ ಹಾದಿಯಾಗಿದೆ” ಎಂದು ಅವರು ಹೇಳಿದರು. ನಾಗರಿಕರಿಗೆ ಆಹಾರವನ್ನು ಒದಗಿಸುವ ರೈತರು ನೆರೆದಿರುವ ರಾಜಧಾನಿಯ ಗಡಿಗಳನ್ನು ಕೋಟೆಯಾಗಿ ಏಕೆ ಪರಿವರ್ತಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಸಮಸ್ಯೆಯನ್ನು ಪರಿಹರಿಸಲು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಏಕೆ ಆಸಕ್ತಿ ಹೊಂದಿಲ್ಲ ಎಂದು ಆಶ್ಚರ್ಯಪಟ್ಟ ಅವರು, ಈ ಪರಿಸ್ಥಿತಿ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕಾಗಿದೆ ಮತ್ತು ಸರ್ಕಾರವು ರೈತರ ಧ್ವನಿಯನ್ನು ಕೇಳಿಸಿಕೊಳ್ಳಬೇಕು. ಅಲ್ಲಿವರೆಗೆ ರೈತರು ಇಲ್ಲಿಯೇ ಇರುತ್ತಾರೆ ಎಂದರು.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹೆಚ್ಚಿನ ರೈತರು ಪ್ರತಿಭಟನಾಕಾರರ ಜೊತೆ ಸೇರುತ್ತಾರೆ ಎಂಬ ಆತಂಕದ ಮಧ್ಯೆ ದೆಹಲಿ ಪೊಲೀಸರು ಮೂರು ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಬಂಡೆಗಳು ಮತ್ತು ಮುಳ್ಳುತಂತಿಗಳನ್ನು ಹಾಕಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hogale hogu Namna deshana soft target madi eega yeno soft power anta bogaltha iddita.Neenu ninna vidyabyasa munduvarisi kanista jnana samoadisuvavaregu matadabeda.Sarina

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...