Homeಅಂಕಣಗಳುಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ನಂತರದ ದಂತಕಥೆ ನಿಮಗೆ ಗೊತ್ತೇ?

- Advertisement -
- Advertisement -

ಏಪ್ರಿಲ್ 13, 1919. ಅದು ಪಂಜಾಬ್‍ನ ಅಮೃತಸರ ಜಿಲ್ಲೆಯ ಜಲಿಯನ್ ವಾಲಾಬಾಗ್ ವಾಲಾಬಾಗ್ ಉದ್ಯಾನವನ. ಅಲ್ಲಿ ಶಾಂತಿಯುತವಾಗಿ ಮತ್ತು ನಿಶಸ್ತ್ರವಾಗಿ ಸಭೆ ಸೇರಿದ್ದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಬ್ರಿಟೀಷ್ ಸೇನಾಧಿಕಾರಿ ಜನರಲ್ ಡಯರ್‍ನ ಆಜ್ಞಾನುಸಾರ ಗುಂಡಿನ ಮಳೆಗೆರೆಯಲಾಗುತ್ತದೆ. ಮೂರು ಸಾವಿರಕ್ಕೂ ಅಧಿಕ ಮಂದಿ ಹೋರಾಟಗಾರರು ಪ್ರಾಣಾರ್ಪಣೆ ಮಾಡುತ್ತಾರೆ. ಆ ಸುದ್ದಿ ಜಲಿಯನ್ ವಾಲಾಬಾಗ್ ದುರಂತ ಎಂದು ಜಗತ್ತಿನಾದ್ಯಂತ ಪಸರಿಸುತ್ತದೆ.

ಏಪ್ರಿಲ್ 14, 1919. ಅಲ್ಲಿಗೆ ಪುಟ್ಟ ಬಾಲಕನೊಬ್ಬ ಬರುತ್ತಾನೆ. ರಕ್ತಸಿಕ್ತ ಮಣ್ಣ, ಹಳೇ ಬಟ್ಟೆ ಬರೆ ಚಪ್ಪಲಿಗಳನ್ನು ನೋಡಿ ಕ್ರುದ್ಧಗೊಳ್ಳುತ್ತಾನೆ. ಡಬ್ಬಿಯಲ್ಲಿದ್ದ ಊಟವನ್ನು ಚೆಲ್ಲಿ ಅದಕ್ಕೆ ರಕ್ತಸಿಕ್ತವಾದ ಮಣ್ಣನ್ನು ತುಂಬಿ, ನಿಮ್ಮ ಸಾವಿಗೆ ನ್ಯಾಯ ದೊರಕಿಸುತ್ತೇನೆಂದು ಶಪಥ ಮಾಡುತ್ತಾನೆ. ‘ಅಣ್ಣ ಏಕೆ ಸಪ್ಪಗಿದ್ದೀಯಾ, ಊಟ ಮಾಡೋಲ್ಲವೇ?’ ಮನೆಯಲ್ಲಿ ತಂಗಿ ಕೇಳುತ್ತಾಳೆ. ತನ್ನ ತಂಗಿಗೆ ನಿನ್ನೆ ನಡೆದಿದ್ದ ದುರಂತದ ಬಗ್ಗೆ ವಿವರಿಸುತ್ತಾನೆ. ನಮ್ಮ ದೇಶಕ್ಕೆ ನುಗ್ಗಿರುವ ದ್ರೋಹಿ ಬ್ರಿಟೀಷರನ್ನು ಸೆದೆಬಡಿಯಬೇಕೆಂದು ತಿಳಿಸುತ್ತಾನೆ.

ಏಪ್ರಿಲ್ 15, 1919. ಆ ಬಾಲಕನ ಚಿಕ್ಕಪ್ಪ ಮಾವಿನ ಬೀಜ(ವಾಟೆ)ವನ್ನು ಹಿತ್ತಲಿನಲ್ಲಿ ನೆಡುತ್ತಿರುತ್ತಾರೆ. ಅಲ್ಲಿಗೆ ಬಂದ ಬಾಲಕ ಕೇಳುತ್ತಾನೆ.
ಚಿಕ್ಕಪ್ಪ ಏನು ಮಾಡುತ್ತಿದ್ದೀರಿ?
ಮಾವಿನ ಬೀಜ ನೆಡುತ್ತಿದ್ದೇನೆ ಮಗು
ಏಕೆ ನೆಡುತ್ತಿದ್ದೀರಿ?
ಏಕೆಂದರೆ ಇದು ಮಾವಿನ ಸಸಿಯಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಮಾವಿನ ಹಣ್ಣುಗಳನ್ನು ನಮಗೆ ನೀಡುತ್ತದೆ.
ಇದನ್ನು ಕೇಳಿದ ಕೂಡಲೇ ಆ ಬಾಲಕ ಮನೆಗ ಓಡುತ್ತಾನೆ. ತನಗೆ ಆಡಲೆಂದು ತಂದಿದ್ದ ಪಿಸ್ತೂಲೊಂದನ್ನು ತಂದು ತಾನು ಸಹ ನೆಡಲು ಆರಂಭಿಸುತ್ತಾನೆ. ಆಗ ಪ್ರಶ್ನೆ ಕೇಳುವ ಸರದಿ ಆತನ ಚಿಕ್ಕಪ್ಪನದಾಗಿರುತ್ತದೆ.
ಏನು ಮಾಡುತ್ತಿದ್ದೀಯ ಮಗು?
ಕಾಣುತ್ತಿಲ್ಲವೇ, ಬಂದೂಕು ನೆಡುತ್ತಿದ್ದೇನೆ
ಏಕೆ ನೆಡುತ್ತಿದ್ದೀಯಾ?
ಏಕೆಂದರೆ ಇದು ಬಂದೂಕಿನ ಗಿಡವಾಗುತ್ತದೆ, ನಂತರ ಬೆಳೆದು ಮರವಾಗುತ್ತದೆ.
ಅದರಿಂದ ಏನು ಪ್ರಯೋಜನ?
ಇದು ಸಾವಿರಾರು ಬಂದೂಕೂಗಳನ್ನು ನಮಗೆ ನೀಡುತ್ತದೆ. ಆ ಬಂದೂಕುಗಳಿಂದ ನಮ್ಮನ್ನು ಹಿಂಸಿಸುತ್ತಿರುವ ಬ್ರೀಟಿಷರನ್ನು ಸುಟ್ಟು ಈ ದೇಶದಿಂದ ಓಡಿಸುತ್ತೇನೆ ಎನ್ನುತ್ತಾನೆ ಆ ಪುಟ್ಟ ಬಾಲಕ.
ಎದುರಿಗಿದ್ದ ಆತನ ಚಿಕ್ಕಪ್ಪನ ಬಾಯಲ್ಲಿ ಮಾತೇ ಬರುವುದಿಲ್ಲ. ಆ ಬಾಲಕನ್ನು ಅಪ್ಪಿ ಕಣ್ಣಿರಿಡುತ್ತಾರೆ.
ಆ ಬಾಲಕನ ಹೆಸರು ಭಗತ್ ಸಿಂಗ್. ಆಗ ಆತನ ವಯಸ್ಸು ಕೇವಲ 12 ವರ್ಷ. ಆತನ ಚಿಕ್ಕಪ್ಪನ ಹೆಸರು ಸರ್ದಾರ್ ಅಜಿತ ಸಿಂಗ್.

ಸ್ನೇಹಿತರೇ ಇದು ಸತ್ಯವೋ, ಸುಳ್ಳೋ ಎಂಬುದು ಮುಖ್ಯವಲ್ಲ. ಇಂದು ಬಹಳಷ್ಟು ಕಡೆ ಈ ದಂತಕಥೆ ಹಬ್ಬಿದೆ. ಭಗತ್ ಸಿಂಗ್ ಜೀವನ ಮತ್ತು ಹೋರಾಟ ಕುರಿತ ಸಿನಿಮಾಗಳಲ್ಲಿ ಇದು ಬರುತ್ತದೆ. ಇದರ ಸಾರಂಶ ಮಾತ್ರ ಎಂತವರನ್ನು ಸ್ಫೂರ್ತಿಗೊಳಿಸುತ್ತದೆ. 12 ವರ್ಷದ ಬಾಲಕ ಭಗತ್ ಸಿಂಗ್ ಗಿದ್ದ ದೇಶಪ್ರೇಮ, ಶತ್ರುಗಳ ವಿರುದ್ಧ ಇದ್ದ ಸಿಟ್ಟು, ಆಕ್ರೋಶ, ತಾನು ಹತಾತ್ಮನಾಗುವವರೆಗೂ ಇದ್ದ ಬದ್ಧತೆ, ಭಾರತದ ಭವಿಷ್ಯದ ಬಗ್ಗೆ ಇದ್ದ ಸ್ಪಷ್ಟತೆ ಭಗತ್ ಸಿಂಗ್‍ರನ್ನು ಪ್ರಪಂಪದ ಮೇರು ಹೋರಾಟಗಾರನ ಸ್ಥಾನಕ್ಕೆ ಏರಿಸಿದೆ.

ನೂರು ವರ್ಷಗಳ ಹಿಂದೆ ನಡೆದಿದ್ದ ಜಲಿಯನ್ ವಾಲಾಬಾಗ್ ದುರಂತದ ಹುತಾತ್ಮರಿಗೆ ನಾವು ಗೌರವ ಮತ್ತು ನ್ಯಾಯ ಸಲ್ಲಿಸಬೇಕಿದೆ. ಇಂದಿಗೂ ಕೂಡ ಜನರ ಹಕ್ಕುಗಳು ಅಪಾಯದ ಅಂಚಿನಲ್ಲಿವೆ. ಬಡವರು, ತಳಸಮುದಾಯದವರು, ಮಹಿಳೆಯರು ಆತಂಕದಲ್ಲಿದ್ದಾರೆ. ಅವರ ಪರವಾಗಿ ದಿಟ್ಟವಾಗಿ ದನಿಯೆತ್ತುವ ತುರ್ತು ಹಿಂದಿಗಿಂತಲೂ ಹೆಚ್ಚು ಅನಿವಾರ್ಯವಾಗಿದೆ. ನೂರು ವರ್ಷದ ಹಿಂದೆ ಮಡಿದ ವೀರರ ತ್ಯಾಗ ಬಲಿದಾನಗಳನ್ನು ಸ್ಫೂರ್ತಿಯಾಗಿ ಪಡೆದು ಹೋರಾಟ ಮುಂದುವರೆಸೋಣ. ಅವರಿಗೆ ನಿಜವಾದ ಗೌರವ ಸಲ್ಲಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...