Homeಮುಖಪುಟ’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

- Advertisement -
- Advertisement -

ರೈತ ಪ್ರತಿಭಟನೆಯ ವರದಿಯೊಂದನ್ನು ಉಲ್ಲೇಖಿಸಿ, “ನಾವೇಕೆ ರೈತ ಪ್ರತಿಭಟನೆಯ ಬಗ್ಗೆ ಮಾತನಾಡುತ್ತಿಲ್ಲ?” ಎಂದು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದರು. ಇದರ ನಂತರ ಭಾರತದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯವಾಗಿ ಬೆಂಬಲ ಹೆಚ್ಚಾಗಿದ್ದು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು ಭಾರತೀಯ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

ರೈತ ಹೋರಾಟಕ್ಕೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ವಿದೇಶಾಂಗ ಸಚಿವಾಲಯ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೇದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು.

ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದು, ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತು ಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗಬೇಕು ನಿಮಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ಸಂಯುಕ್ತ ಹೋರಾಟ ಕರ್ನಾಟಕ, “ಪ್ರತಿಭಟನೆ ಶುರುವಾದಾಗಿಂದ ನೂರಕ್ಕು ಹೆಚ್ಚು ರೈತರು ಸತ್ತಿದ್ದಾರೆ‌. ಸೆಪ್ಟೆಂಬರ್‌ನಿಂದ ಕರ್ನಾಟಕದ‌ ಹಾಗೂ ಕೇಂದ್ರದ ಕೃಷಿ ಕಾಯಿದೆ ತಿದ್ದುಪಡಿಗಳನ್ನು ಕರ್ನಾಟಕದಲ್ಲಿ‌ ವಿರೋಧಿಸುತಿದ್ದೇವೆ. ಒಮ್ಮೆಯಾದರು ಬಂದು ನಮ್ಮ ರೈತರು ಏಕೆ‌ ಹೊರಾಡುತಿದ್ದಾರೆ ಕೇಳಿದಿರೆ ಕುಂಬ್ಳೆ ಅವರೆ ? ಈಗ ಏನು ಟ್ವೀಟ್‌ ಮಾಡೋದು. ನಿಮ್ಮ ನಿಲುವು ಬಹಳ‌ ನೋವು ತಂದಿದೆ” ಎಂದು ಹೇಳಿದೆ.

ಸಂಯುಕ್ತ ಹೋರಾಟ ಕರ್ನಾಟಕವು ರೈತ, ಕಾರ್ಮಿಕ, ಮಹಿಳಾ ಹಾಗೂ ವಿದ್ಯಾರ್ಥಿಗಳ ಸಂಯುಕ್ತ ಹೋರಾಟದ ಒಕ್ಕೂಟವಾಗಿದೆ.

ಲೇಖಕ ಶ್ರೀನಿವಾಸ ಕಾರ್ಕಾಳ ಅವರು, “ಮಾನವ ಹಕ್ಕುಗಳ ಉಲ್ಲಂಘನೆಯು ಯಾವುದೆ ದೇಶದ ಆಂತಕರಿಕ ವಿಷಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಚೇತನ್ ಕೃಷ್ಣಾ ಅವರು, “ಕನ್ನಡಿಗರಾಗಿ ನೀವು ಇಂತಹ ಮನೆ ಹಾಳು ಸರಕಾರಕ್ಕೆ ಬಕೆಟ್ ಹಿಡಿಯುವುದು ನ್ಯಾಯವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ರೇಖಾ ಶ್ರೀನಿವಾಸ್ ಅವರು, “ಅಮೇರಿಕದ ಮಾಜಿ ಅಧ್ಯಕ್ಷ ಟ್ರಂಪ್ ಭಾರತವನ್ನು ಕೊಳಕು ದೇಶ ಅಂದಾಗ ಯಾರು ಮಾತಾಡಲಿಲ್ಲ. ಆದರೆ ಇಲ್ಲಿನ ರೈತರ ಬಗ್ಗೆ ಅನುಕಂಪ ತೋರಿಸಿದ ವಿದೇಶಿಯರು ಮಾಡಿದ ಒಂದೇ ಒಂದು ಬರಹಕ್ಕೆ ಎಷ್ಟು ಮಾತಾಡುತಿರೋ. ಇಷ್ಟು ದಿನ ರೈತ ಬೆಳೆದ ಅನ್ನ ತಿಂದಿದ್ದಕ್ಕಾದ್ರು ಸ್ವಲ್ಪ ನಿಯತ್ತು ಇರಲಿ” ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ರಿಹಾನ್ನಾ ಟ್ವೀಟ್ ಪರಿಣಾಮ-ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ!

ಕನ್ನಡ ಪರ ಹೋರಾಟಗಾರ ದಿನೇಶ್ ಕುಮಾರ್‌ ಅವರು, “ನೂರಕ್ಕೂ ಹೆಚ್ಚು ರೈತರು ದಿಲ್ಲಿಯ ಕೊರೆಯುವ ಚಳಿಯಲ್ಲಿ ಸತ್ತುಹೋದಾಗ ದೇಶದ ಘನತೆ, ಮರ್ಯಾದೆಯ ಪ್ರಶ್ನೆ ಎದೆಯಲ್ಲಿ ಮೂಡಲಿಲ್ಲವೇ? ರೈತರ ಮೇಲೆ ದಾಳಿಯಾದಾಗ, ಸುಳ್ಳು ಕೇಸು ಹಾಕಿದಾಗ ನಿಮ್ಮ ಆತ್ಮಸಾಕ್ಷಿ ಎಲ್ಲಿತ್ತು ಸರ್? ಆಳುವ ಪಕ್ಷದ ಗುಲಾಮಗಿರಿ ಮಾಡುವುದಕ್ಕಿಂತ ಜನರ ಪರವಾಗಿ ನಿಂತುಕೊಳ್ಳಿ. ಇತಿಹಾಸ ನೆನಪಿಸಿಕೊಳ್ಳುತ್ತದೆ. ನಾಚಿಕೆಯಾಗ ಬೇಕು ನಿಮಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

ಇದನ್ನೂ ಓದಿ: ಭ್ರಷ್ಟ ನಾಯಕರನ್ನು ಖರೀದಿಸಬಹುದು; ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನಲ್ಲ – ಮಮತ ಬ್ಯಾನರ್ಜಿ

ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರಸ್ತೆಯನ್ನು ರಿಪೇರಿ ಮಾಡುವುದು ಬಿಟ್ಟ, ರೈತರ
    ಪರವಾದ ಬೇಡಿಕೆಯನ್ನು ನ್ಯಾಯೋಚಿತ ರೀತಿಯಲ್ಲಿ ಹೋರಾಟದ ಹಾದಿ ಹಿಡಿದವರ ಹಾದಿಗೆ ಮೊಳೆ ಹೊಡೆದವರ ಪರವಾದ ನಿಮ್ಮ ಗೂಗ್ಲಿ ಬೌಲಿಂಗ್ ಇಲ್ಲಿ ಟ್ವಿಸ್ಟ್ ಆಗೋದಿಲ್ಲ ಕುಂಬ್ಳೆ ಅಣ್ಣಾ…
    ನೀವೇನೋ ಕ್ರಿಕೆಟ್ ಆಟದಿಂದ ಗಳಿಸಿದ ಕೀರ್ತಿಗೆ ಬೇರಾರೂ ಕಾರಣರಲ್ಲ…ನಿಮ್ಮ ಯಶಸ್ಸಿನ ಪಾಲುದಾರಿಯಲ್ಲಿ ರೈತ, ಕಾರ್ಮಿಕರು ಕೂಡಾ…
    ಈ ಹೋರಾಟದಲ್ಲಿ ಹತ್ತಾರು ರೈತರ ಜೀವಗಳು ತ್ಯಾಗ
    ಬಲಿದಾನವಾಗಿವೆ.ನೀವೇನು ಅರ್ಪಿಸಬಲ್ಲಿರಿ ..?

  2. ಎಡ ಪಂಥಿಯರ ಯೋಚನೆಗಳು ಯಾವತ್ತೂ ಬಲಗೈಯಿಯವರು ಎಡಗೈಯಿಂದ ಮಾಡುವ ಕೆಲಸಗಳಿಗೆ ಸಮವಾಗಿರುತ್ತೆ.

  3. ಅನಿಲ್ ಕುಂಬ್ಳೆ ಅವರ ಬಗ್ಗೆ‌ ಇದ್ದ ಅದೆಷ್ಟು ಗೌರವದ ಬಂಡಲ್ಗಳು ಇಂದು ಉರುಳಿ ಬಿತ್ತು. ಅವರಿಗೆ ಆಳುವ ಪಕ್ಷದ ಎಂಎಲ್ಸಿ ಏನಾದರೂ ಆಗುವ ಮೊದಲ ಹರಕೆಯ ಉರುಳು ಸೇವೆ ಇದು.
    ರೈತರು ಯಾಕೆ ಚಳುವಳಿ ಮಾಡುತ್ತಿದ್ದಾರೆ ಅನ್ನುವ‌ ಕನಿಷ್ಠ ವಿಚಾರವೇ ಏನಾದರೂ ನಿಮಗೆ ತಿಳಿದಿದೆಯೇ?
    ಹತ್ತಿಕ್ಕಿ ದಿಕ್ಕು ತಪ್ಪಿಸುವ ಕೆಲಸಕ್ಕೆ ಕೈ ಹಾಕ ಬೇಡಿ…..ಪ್ಲೀನ್…

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...