Homeಅಂತರಾಷ್ಟ್ರೀಯಗಂಗಾವತಿಯಲ್ಲಿ ಮೋದಿ ಭಾಷಣ: ಸಾಧನೆಗಳೇ ಇಲ್ಲದ ತರಾವರಿ ಕಾಲಹರಣ!

ಗಂಗಾವತಿಯಲ್ಲಿ ಮೋದಿ ಭಾಷಣ: ಸಾಧನೆಗಳೇ ಇಲ್ಲದ ತರಾವರಿ ಕಾಲಹರಣ!

- Advertisement -
- Advertisement -

| ಮಲ್ಲನಗೌಡರ್ ಪಿ.ಕೆ |

‘ಲೇ ತಮ್ಮಾ, ಈ ಸರೆ ಪರೀಕ್ಸೆ ಹೆಂಗಾಗ್ಯಾವ್ಲೇ….ನೀ ಓದಿದ್ದ ನೋಡಿಲ್ಲಲೇ…ಹ್ಯಂಗ್ ಬರದಿದಿ?’- ಸಂಬಂಧಿಯೊಬ್ಬರು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿರುವ ಹುಡುಗನನ್ನು ಪ್ರಶ್ನಿಸಿದರು.
ಹುಡುಗ: ಅಂವಾ ಅಣ್ಣಾ ನಮ್ ಮನಿ ಮಗ್ಗಲ ಅದಾನಲ್ರಿ. ಅವಾ ಹ್ವಾದ ವರ್ಷ ಫೇಲಾಗಿದ್ದಾರಿ…ಹಹಹಹಾ…
ಸಂಬಂಧಿ: ನೀ ಹ್ಯಾಂಗ ಬರದಿಯೋ?
ಹುಡುಗ: ಅಂವಾ ನಮ್ ಸ್ಕೂಲ್ ಸೆಕ್ಯುರಿಟಿ ಅದಾನಲ್ರಿ, ಬಾಳ ಸ್ಟ್ರಿಕ್ಟ್ ಅದಾನರಿ. ಕಾಪಿ ಚೀಟಿ ಒಯ್ಯಾಕ ಬಿಡದ ಇಲ್ರಿ.
ಸಂಬಂಧಿ: ಹಂಗ ಇರ್ಬೇಕೋ…
(ಹುಡುಗ ಮನಸ್ಸಲ್ಲೇ ನಗುತ್ತ, ಯಪ್ಪಾ, ಪರೀಕ್ಷೆ ವಿಷಯ ಬಿಟ್ರಲ್ಲ ಸಾಕು ಎಂದು ವಿಷಯಾಂತರ ಮಾಡುತ್ತ ಹೋದ)
**

2019ರ ಚುನಾವಣೆಯಲ್ಲಿ ಮೋದಿ ಈ ಹುಡುಗನ ತರಹ ಭಾಷಣ ಕುಟ್ಟುತ್ತಿದ್ದಾರೆ. ಶುಕ್ರವಾರ ಗಂಗಾವತಿಯಲ್ಲಿ ಅವರು ಅಕ್ಷರಶ: ತೌಡು ಕುಟ್ಟಿ ಹೋದರು. ವಿಷಯಗಳೇ ಇಲ್ಲದ, ಸಾಧನೆಗಳೇ ಇಲ್ಲದ ವ್ಯಕ್ತಿ, ‘ಪಕ್ಕದ ಮನೆ ಅಣ್ಣ ಫೇಲಾಗಿದ್ದನ್ನು, ಸ್ಕೂಲ್ ಸೆಕ್ಯರಿಟಿ ಗಾರ್ಡ್ ಸ್ಟ್ರಿಕ್ಟ್ ಇರುವುದನ್ನು’ ಹೇಳುತ್ತ ಕಾಲಹರಣ ಮಾಡಿ ಹೋಗಿದ್ದಾರೆ.

ಅವರ ಭಾಷಣ ಆರಂಭವಾಗುವುದೇ ಎಚ್.ಡಿ. ರೇವಣ್ಣರ ಹೇಳಿಕೆ ಪ್ರಸ್ತಾಪಿಸುವ ಮೂಲಕ! ‘2014ರಲ್ಲೂ ದೇವೇಗೌಡರು ಹೀಗೆ ಹೇಳಿದ್ದರು, ಮೋದಿ ಪ್ರಧಾನಿಯಾದರೆ ರಾಜಕೀಯ ಸನ್ಯಾಸ ತಗೊಳ್ತೀನಿ ಅಂತಾ. ಸನ್ಯಾಸ ತಗೊಂಡ್ರಾ? (ಪ್ರೇಕ್ಷಕರಿಂದ ಯಾವುದೇ ಪ್ರತಿಕ್ರಿಯೆ ಇಲ್ಲ!), ಅವರ ಮಗ ತಗಳ್ತಾರಾ?’- ಹೀಗೆ ಶುರುವಾಗಿ, ‘ಇದು ಕುಟುಂಬ ರಾಜಕಾರಣ ಮತ್ತು ರಾಷ್ಟ್ರವಾದಗಳ ನಡುವಿನ ಚುನಾವಣೆ’ ಎಂದು ನೀರು ಕುಡಿಯುತ್ತಾರೆ. ಅಷ್ಟರಲ್ಲಿ ‘ಮೋದಿ ಮೋದಿ’ ಎಂಬ ನಾದ ತೇಲಿ ಬಂದ ಕೂಡಲೇ, ‘ನಿಮ್ಮ ಪ್ರೀತಿಗೆ ಋಣಿ’ ಎನ್ನುತ್ತಾರೆ. ಒಟ್ಟು ಸುಮಾರು 40 ನಿಮಿಷದ ಭಾಷಣದಲ್ಲಿ ಐದು ಸಲ ಹೀಗೆ ‘ಡಿಸ್ಟರ್ಬ್’ ಆಗುತ್ತದೆ. ಮೋದಿ ಸುಧಾರಿಸಿಕೊಳ್ಳಲು ಭಕ್ತರು ಅವಕಾಶ ಮಾಡಿಕೊಡುತ್ತಾರೆ!

ಒಮ್ಮೆ ಬಲಗೈನ ತೋರುಬೆರಳು, ಮರುಕ್ಷಣವೇ ಎಡಗೈನ ತೋರುಬೆರಳನ್ನು ಆಕಾಶಕ್ಕೆ ತೋರಿಸುತ್ತ ಧ್ವನಿಯಲ್ಲಿ ಹಾವಭಾವ ತೋರಿಸಲು ಯತ್ನಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಸೈನಿಕರ ಕುರಿತು ಕಾಳಜಿಯಿಂದ ಮಾತಾಡಿದ್ದು, ಸೈನಿಕರ ಹೆಸರನ್ನು ಬಳಸಿಕೊಳ್ಳುವ ಮೋದಿಯನ್ನು ಟೀಕಿಸಿದ್ದನ್ನು ತಿರುಚಿದ ಮೋದಿ, ‘ಎರಡು ಹೊತ್ತು ಊಟ ಇಲ್ಲದವರು ಸೇನೆ ಸೇರುತ್ತಾರೆ ಎಂದು ಕುಮಾರಸ್ವಾಮಿ ಸೈನಿಕರನ್ನು ಅವಮಾನಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿವ ಅಭಿನಯ ಮಾಡಿದರು.

ಒಟ್ಟೂ ಭಾಷಣದಲ್ಲಿ ಆರು ಸಲ ಸೇನೆಯ ವಿಷಯ, ಎರಡು ಸಲ ಪಾಕ್ ವಿಷಯ ಬರುತ್ತದೆ. ‘ಮಾಸೂಮ್ ಬಚ್ಚೇ’ ಎಂದು ಐದು ಸಲ ಪ್ರಸ್ತಾಪಿಸುವ ಮೋದಿ, ‘ಮಧ್ಯಪ್ರದೇಶ ಸರ್ಕಾರವು ಮುಗ್ಧ ಮಕ್ಕಳ ಮತ್ತು ಗರ್ಭಿಣಿಯರಿಗೆ ಆಹಾರ ನೀಡುವ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿ ಕಾಂಗ್ರೆಸ್‍ಗೆ ದುಡ್ಡು ನೀಡಿದೆ’ ಎಂದು ಅಪಾದಿಸುತ್ತಾರೆ. ಮಾಸೂಮ್ ಬಚ್ಚೇ ಕೆ ಥಾಲಿ’ (ಮುಗ್ಧ ಮಕ್ಕಳ ರೊಟ್ಟಿ) ಕಸಿದಿದ್ದಾರೆ ಎಂಬ ಭಾವನಾತ್ಮಕ ಮಾತನ್ನು ರಿಪೀಟ್ ಮಾಡಿ ಸುಸ್ತಾಗಿ ಮತ್ತೆ ನೀರು ಕುಡಿಯುತ್ತಾರೆ. ಮತ್ತೆ ಮೋದಿ ಮೋದಿ…..

ಉದ್ಯೋಗ ಸೃಷ್ಟಿ, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು –ಇದ್ಯಾವುದರ ಕುರಿತು ಚಕಾರವೇ ಇಲ್ಲ. ‘ಮೇಕ್ ಇನ್ ಇಂಡಿಯಾ’ , ಸ್ಮಾರ್ಟ್ ಸಿಟಿ ಬಗ್ಗೆಯೂ ಮಾತೇ ಇಲ್ಲ. ರಫೇಲ್ ಕುರಿತು ಬಾಯಿ ಬಿಡಲೇ ಇಲ್ಲ!

ಮೋದಿಯ ಜೋಶ್ ಇಳಿದು ಹೋಗಿದೆ. ಅದು ವಯಸ್ಸಿನ ಕಾರಣಕ್ಕೆ , ದೇಹದ ಕಾರಣಕ್ಕೆ ಅಲ್ಲ. ಮಾನಸಿಕವಾಗಿ ಮೋದಿ ‘ವೀಕ್’ ಆಗಿದ್ದಾರೆ. ಭಾಷಣಕ್ಕೆ ವಸ್ತುಗಳಿಲ್ಲದೇ ಪಾಕ್, ಸೈನಿಕರ ಮೊರೆ ಹೋಗುತ್ತಿದ್ದಾರೆ. ಕೊಪ್ಪಳ, ಬಳ್ಳಾರಿ, ರಾಯಚೂರು ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಈ ಸಭೆ ಆಯೋಜಿಸಲಾಗಿತ್ತು. ಇಲ್ಲಿ ಮೂರೂ ಕಡೆ ಜೆಡಿಎಸ್ ಅಭ್ಯರ್ಥಿಗಳೇ ಇಲ್ಲ. ಆದರೆ ಭಾಷಣದ ಮೊದಲ ಹತ್ತು ನಿಮಿಷವನ್ನು ಜೆಡಿಎಸ್ ಟೀಕೆಯಲ್ಲೇ ಕಳೆದರು. ಇಡೀ ಭಾಷಣದಲ್ಲಿ ಅವರ ಕುಗ್ಗಿದ ಆತ್ಮವಿಶ್ವಾಸ ಎದ್ದು ಕಾಣುತ್ತಿತ್ತು. ಏನೋ ಮಾತಾಡಬೇಕು ಎಂಬಂತೆ ಕಾಲಹರಣ ಮಾಡಿದ್ದಷ್ಟೇ ಬಂತು. ಹಿಂದಿ ಭಾಷಿಕ ಪ್ರೇಕ್ಷಕರ ಎದುರೇ ಸಪ್ಪೆಯಾಗಿರುವ ಮೋದಿ, ಕನ್ನಡ-ತೆಲುಗು ಭಾಷಿಕ ಪ್ರೇಕ್ಷಕರ ಎದುರು ಫುಲ್ ಡಲ್. ಖಾಲಿ ಡಬ್ಬಿಯನ್ನು ಅಲ್ಲಾಡಿಸಿದಂತೆ ಇತ್ತು ಅವರ ಭಾಷಣ.. ನಡುನಡುವೆ ಮಬ್ಭಕ್ತರ ‘ಮೋದಿ ಮೋದಿ’ ಎಂಬುದಷ್ಟೇ ಮೋದಿಗೆ ಹಿತ ತಂದಿರಬಹುದು.

ರಾಹುಲ್ ಗಾಂಧಿ ಕನ್ನಡದಲ್ಲಿ ತಪ್ಪಾಗಿ ಮಾತಾಡಿದಾಗ ನ್ಯೂಸ್ ಮಾಡುವ ಮಾಧ್ಯಮಗಳು, ಮೋದಿ ಮಾಡಿದ ಅಪಭ್ರಂಶಗಳ ಬಗ್ಗೆ ಸುದ್ದಿನೇ ಮಾಡಿದಂತೆ ಕಾಣ್ತಾ ಇಲ್ಲ. ‘ಹಳ್ಳಿ ಹಳ್ಳಿಗೂ ಮೋದಿ’ ಎನ್ನುವಾಗ ಅವರು ‘ಹಲ್ಲಿ ಹಲ್ಲಿಗೂ ಮೋದಿ’ ಎಂದರು. ಸತ್ಯದ ಮಾತೇ ಎಂದು ಸುಮ್ಮನಿದ್ದು ಬಿಡೋಣವೇ?
***

ಈಗ ಮೊದಲ ಪ್ಯಾರಾಕ್ಕೆ ಬನ್ನಿ. ಈ ಸಲ ಪರೀಕ್ಷೆ ಬರೆದ ಎಸ್‍ಎಸ್‍ಎಲ್‍ಸಿ ಹುಡುಗ ಸಂಬಂಧಿಯನ್ನು ಯಾಮಾರಿಸುವ ರೀತಿಯಲ್ಲಿ ಮೋದಿ ಭಾಷಣವಿತ್ತು.
ಮನೆಗೆ ಹೋದ ಸಂಬಂಧಿ, ಆ ಹುಡುಗ ಫೇಲ್ ಆಗ್ತಾನೆ ಬಿಡು ಎಂದು ಪತ್ನಿಗೆ ಹೇಳಿ ಸುಮ್ಮನಾದರಂತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....