Homeಮುಖಪುಟಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

ಗುಜರಾತ್ ಎಂದೂ ಬಂಗಾಳವನ್ನು ಆಳಲಾಗದು: ಮಮತಾ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಮತ್ತು ಬಂಗಾಳಿ ಅಲ್ಲದವರ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾವು ಬಂಗಾಳದಲ್ಲಿರುವ ಬಿಹಾರಿಗಳು,ಯುಪಿ, ರಾಜಸ್ಥಾನ್ ಸೇರಿದಂತೆ ಎಲ್ಲರೊಂದಿಗೆ ಹೆಜ್ಜೆ ಹಾಕುತ್ತೇವೆ. ಆದರೆ ನಾವು ಒಂದು ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಗುಜರಾತ್ ಎಂದಿಗೂ ಬಂಗಾಳವನ್ನು ಆಳಲಾಗದು. ಬಂಗಾಳದಲ್ಲಿ ವಾಸಿಸುವ ಜನರು ಮಾತ್ರ ಬಂಗಾಳವನ್ನು ಆಳುತ್ತಾರೆ” ಎಂದು ಉತ್ತರ ಬಂಗಾಳದ ಅಲಿಪುರ್ದಾನ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಈ ಮೂಲಕ ಅವರು ಪರೋಕ್ಷವಗಿ ಮೋದಿ ಮತ್ತು ಶಾ ವಿರುದ್ದ ಹರಿಹಾಯ್ದ ಮಮತಾ ಬ್ಯಾನರ್ಜಿ, ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ “ಹೊರಗಿನವರ ವಿರುದ್ಧ ಒಳಗಿನವರು” ಎಂಬ ಚರ್ಚೆಯನ್ನು ಹುಟ್ಟು ಹಾಕಿರುವ ಮಮತಾ ಬ್ಯಾನರ್ಜಿ ಇಂದು ಅದಕ್ಕೆ ಮೇಲಿನಂತೆ ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

“ಅಸ್ಸಾಂ ಮತ್ತು ತ್ರಿಪುರದಲ್ಲಿ ಏನು ನಡೆಯುತ್ತಿದೆ ನೋಡಿ. ಎನ್‌ಆರ್‌ಸಿ ಹೆಸರಿನಲ್ಲಿ ಅವರು ಎಲ್ಲರನ್ನೂ ಹೆದರಿಸಿದ್ದಾರೆ. ಎನ್‌ಪಿಆರ್ (ರಾಷ್ಟ್ರೀಯ ಜನಸಂಖ್ಯಾ ನೋಂದಣಿ) ಕೂಡ ಇದೆ. ಪ್ರತಿ ರಾಜ್ಯವೂ ಇದನ್ನು ಮಾಡುತ್ತಿದೆ, ಆದರೆ ನಾವು ಅದನ್ನು ಮಾಡಿಲ್ಲ. ನಾವು ಅವರನ್ನು ಮಾಡಲು ಬಿಡುವುದೂ ಇಲ್ಲ” ಎಂದು ಅವರು ಹೇಳಿದ್ದಾರೆ.

ನೆರೆಯ ರಾಜ್ಯಗಳ ಜನರನ್ನು ಸ್ವೀಕರಿಸುವುದು ಬಂಗಾಳಿ ಸಂಸ್ಕೃತಿಗೆ ಹೊಸದೇನಲ್ಲ ಎಂದು ಸಾಬೀತುಪಡಿಸುವ ಪ್ರಯತ್ನವನ್ನು ಬಿಜೆಪಿ ಮುಂದುವರಿಸಿದೆ. ಆದರೆ ಮಮತಾ ಎನ್‌ಆರ್‌ಸಿ, ಎನ್‌ಪಿಆರ್ ಉಲ್ಲೇಖಿಸುತ್ತ, ಬಂಗಾಳದಲ್ಲಿರವವರೆಲ್ಲ ಬಂಗಾಳಿಗಳೇ ಎಂದು ಹೇಳುತ್ತ ಬಂದಿದ್ದಾರೆ.

ಸೋಮವಾರ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣವನ್ನು ಬಂಗಾಳದ ಸಾಂಸ್ಕೃತಿಕ ಅಸ್ಮಿತೆ ಎಂದು ಪರಿಗಣಿಸಲಾದ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಉಲ್ಲೇಖದೊಂದಿಗೆ ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕಳೆದ ತಿಂಗಳುಗಳಿನಿಂದ ಬಿಜೆಪಿಯು ರಾಜ್ಯದ ಸಾಂಸ್ಕೃತಿಕ ಐಕಾನ್‌ಗಳ ಮೇಲೆ ವ್ಯಾಪಕವಾಗಿ ಗಮನ ಹರಿಸಿದೆ. ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನಾಚರಣೆಯನ್ನು ಜೋರಾಗಿ ಆಚರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತಾಜಿ ಜನ್ಮದಿನ ಆಚರಣೆಗೆ ಕೊಲ್ಕೊತ್ತಕ್ಕೆ ಬಂದಿದ್ದರು.

ಆದರೆ ಟ್ಯಾಗೋರ್ ಅವರ ಜನ್ಮಸ್ಥಳ ಇತ್ಯಾದಿ ವಿಷಯಗಳನ್ನು ಉಲ್ಲೇಖಿಸುವಾಗ ಬಿಜೆಪಿ ನಾಯಕರು ಹಲವಾರು ತಪ್ಪುಗಳನ್ನು ಮಾಡುತ್ತಾ ಬಂದಿದ್ದಾರೆ. ನೇತಾಜಿಯ ಜನ್ಮದಿನವನ್ನು ಆಚರಿಸುವ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಬೆಂಬಲಿಗರು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗಿದ್ದಕ್ಕೆ, ಸರ್ಕಾರಿ ಕಾರ್ಯಕ್ರಮದಲ್ಲಿ ಧಾರ್ಮಿಕ ಘೋಷಣೆ ಸಲ್ಲದು ಎಂದು ಮುಖ್ಯಮಂತ್ರಿ ಮಮತಾ ಪ್ರಧಾನಿಯಿದ್ದ ವೇದಿಕೆಯಿಂದ ಹೊರ ನಡೆದು ಪ್ರತಿಭಟನೆ ದಾಖಲಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್‌ನಲ್ಲಿ ರಾಜ್ಯ ಚುನಾವಣೆ ನಡೆಯಲಿದ್ದು ಟಿಎಂಸಿ ಮತ್ತು ಬಿಜೆಪಿ ನಡುವೆ ವಿಪರೀತ ಜಿದ್ದಾಜಿದ್ದಿ ನಡೆಯುತ್ತಿದೆ.

ಇದನ್ನೂ ಓದಿ: ಮೋದಿ ಗೋಡ್ಸೆ ದಿನ ಆಚರಿಸಬಹುದು ಅಷ್ಟೆ: ರೈತ ಮುಖಂಡ ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...